ಭರ್ವಾಡ್ ಸಮುದಾಯದ ಸೇವಾ ಸಮರ್ಪಣೆ, ಪ್ರಕೃತಿಯ ಮೇಲಿನ ಪ್ರೀತಿ ಮತ್ತು ಗೋ ರಕ್ಷಣೆಯ ಬದ್ಧತೆಗೆ ಪ್ರಧಾನಮಂತ್ರಿ ಶ್ಲಾಘನೆ
ಗ್ರಾಮಗಳನ್ನು ಅಭಿವೃದ್ಧಿಪಡಿಸುವುದು ವಿಕಸಿತ ಭಾರತ ಕಟ್ಟುವತ್ತ ಮೊದಲ ಹೆಜ್ಜೆಯಾಗಲಿದೆ: ಪ್ರಧಾನಮಂತ್ರಿ
ಆಧುನಿಕತೆಯ ಮೂಲಕ ಸಮುದಾಯವನ್ನು ಸಬಲೀಕರಣಗೊಳಿಸಲು ಶಿಕ್ಷಣವೇ ಪ್ರಬಲ ಅಸ್ತ್ರ: ಪ್ರಧಾನಮಂತ್ರಿ
"ಸಬ್ ಕಾ ಪ್ರಾಯಸ್" ದೇಶದ ಬಹುದೊಡ್ಡ ಶಕ್ತಿ: ಪ್ರಧಾನಮಂತ್ರಿ

ಗುಜರಾತ್‌ನ ಭರ್ವಾಡ್ ಸಮುದಾಯದ ಬವಲಿಯಾಲಿ ಧಾಮ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಅವರು ಮಹಾಂತ ಶ್ರೀ ರಾಮ್ ಬಾಪು ಜಿ, ಸಮುದಾಯದ ಮುಖಂಡರು ಮತ್ತು ಸಾವಿರಾರು ಭಕ್ತರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು. ಭರ್ವಾಡ್ ಸಮುದಾಯದ ಸಂಪ್ರದಾಯಗಳಿಗೆ ಮತ್ತು ಈ ಸಂಪ್ರದಾಯಗಳನ್ನು ಎತ್ತಿಹಿಡಿಯಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಪೂಜ್ಯ ಸಂತರು ಮತ್ತು ಮಹಾಂತರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ, ಐತಿಹಾಸಿಕ ಮಹಾಕುಂಭದ ಅಪಾರ ಸಂತೋಷ ಮತ್ತು ಹೆಮ್ಮೆಯನ್ನು ಪ್ರಸ್ತಾಪಿಸಿದರು. ಈ ಪವಿತ್ರ ಕಾರ್ಯಕ್ರಮದ ಸಮಯದಲ್ಲಿ ಮಹಾಂತ ಶ್ರೀ ರಾಮ್ ಬಾಪು ಜಿ ಅವರಿಗೆ ಮಹಾಮಂಡಲೇಶ್ವರ ಎಂಬ ಬಿರುದು ನೀಡಿ ಗೌರವಿಸಿದ ಮಹತ್ವದ ಸಂದರ್ಭವನ್ನು ಪ್ರಸ್ತಾಪಿಸಿದರು. ಇದು ಒಂದು ಸ್ಮರಣೀಯ ಸಾಧನೆ ಮತ್ತು ಎಲ್ಲರಿಗೂ ಅಪಾರ ಸಂತೋಷದ ಕ್ಷಣವಾಗಿದೆ. ಸಮುದಾಯದ ಕುಟುಂಬಗಳಿಗೆ ಮಹಾಂತ ಶ್ರೀ ರಾಮ್ ಬಾಪು ಜಿ ಅವರ ಕೊಡುಗೆಗಳು ಮತ್ತು ಸಾಧನೆಗಳನ್ನು ಆಚರಿಸುವ ಸಂದರ್ಭದಲ್ಲಿ ಅವರು ಶುಭಾಶಯಗಳನ್ನು ತಿಳಿಸಿದರು.

ಕಳೆದ ವಾರದಿಂದ ಭಾವನಗರದ ಭೂಮಿಯು ಶ್ರೀಕೃಷ್ಣನ ವೃಂದಾವನವಾಗಿ ರೂಪಾಂತರವಾಗಿರುವಂತೆ ಗೋಚರಿಸುತ್ತಿದೆ. ಸಮುದಾಯವು ನಡೆಸಿದ ಭಾಗವತ ಕಥಾಹಂದರವನ್ನು ಪ್ರಸ್ತಾಪಿಸಿದ ಅವರು, ಜನರು ಕೃಷ್ಣನ ಸಾರದಲ್ಲಿ ಮುಳುಗಿರುವ ವಾತಾವರಣವು ಭಕ್ತಿಯಿಂದ ತುಂಬಿದೆ. "ಬವಲಿಯಾಲಿ ಕೇವಲ ಧಾರ್ಮಿಕ ತಾಣವಲ್ಲ, ಬದಲಾಗಿ ಭರ್ವಾಡ್ ಸಮುದಾಯ ಮತ್ತು ಇತರ ಅನೇಕರಿಗೆ ನಂಬಿಕೆ, ಸಂಸ್ಕೃತಿ ಮತ್ತು ಏಕತೆಯ ಸಂಕೇತವಾಗಿದೆ" ಎಂದರು.

 

ನಾಗಾ ಲಖಾ ಠಾಕೂರ್ ಅವರ ಆಶೀರ್ವಾದದೊಂದಿಗೆ, ಬವಾಲಿಯಾಲಿಯ ಪವಿತ್ರ ಸ್ಥಳವು ಯಾವಾಗಲೂ ಭರ್ವಾಡ ಸಮುದಾಯಕ್ಕೆ ನಿಜವಾದ ನಿರ್ದೇಶನ ಮತ್ತು ಅಪರಿಮಿತ ಸ್ಫೂರ್ತಿಯನ್ನು ನೀಡಿದೆ. ಶ್ರೀ ನಾಗಾ ಲಖಾ ಠಾಕೂರ್ ದೇವಾಲಯದ ಪುನರ್ ಪ್ರತಿಷ್ಠಾಪನೆಯ ಸುವರ್ಣಾವಕಾಶವು ಒಂದು ಸ್ಮರಣೀಯ ಸಂದರ್ಭವಾಗಿದೆ.  ಕಳೆದ ವಾರದಲ್ಲಿ ನಡೆದ ರೋಮಾಂಚಕ ಆಚರಣೆಗಳಿಂದ ಸಮುದಾಯದ ಉತ್ಸಾಹ ಮತ್ತು ಶಕ್ತಿ ಇಮ್ಮಡಿಯಾಗಿದೆ ಎಂದು ಶ್ಲಾಘಿಸಿದರು. ಸಾವಿರಾರು ಮಹಿಳೆಯರ “ರಸ”  ಪ್ರದರ್ಶನವು ವೃಂದಾವನದ ಜೀವಂತ ಸಾಕಾರ ಮತ್ತು ನಂಬಿಕೆ, ಸಂಸ್ಕೃತಿ ಮತ್ತು ಸಂಪ್ರದಾಯದ ಸಾಮರಸ್ಯದ ಮಿಶ್ರಣ ಎಂದು ಬಣ್ಣಿಸಿದರು, ಇದು ಅಪಾರ ಸಂತೋಷ ಮತ್ತು ತೃಪ್ತಿಯ ಮೂಲವಾಗಿದೆ. ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಕಲಾವಿದರ ಕೊಡುಗೆಗಳನ್ನು ಅವರು ಶ್ಲಾಘಿಸಿದರು. ಕಲಾವಿದರು ಕಾರ್ಯಕ್ರಮಗಳಿಗೆ ಜೀವ ತುಂಬಿದರು ಮತ್ತು ಸಮಾಜಕ್ಕೆ ಸಕಾಲಿಕ ಸಂದೇಶಗಳನ್ನು ತಲುಪಿಸಿದರು. ಭಾಗವತ ಕಥೆಯ ಮೂಲಕ ಸಮುದಾಯವು ಅಮೂಲ್ಯ ಸಂದೇಶಗಳನ್ನು ಪಡೆಯುವುದನ್ನು ಮುಂದುವರಿಸುತ್ತದೆ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು, ಅವರ ಪ್ರಯತ್ನಗಳು ಅಪಾರ ಪ್ರಶಂಸೆಗೆ ಅರ್ಹವಾಗಿವೆ ಎಂದು ಹೇಳಿದರು.

ಈ ಶುಭ ಸಂದರ್ಭದಲ್ಲಿ ಭಾಗವಹಿಸಲು ಆಹ್ವಾನಿಸಿದ್ದಕ್ಕಾಗಿ ಮಹಾಂತ ಶ್ರೀ ರಾಮ್ ಬಾಪು ಜಿ ಮತ್ತು ಬವಲಿಯಾಲಿ ಧಾಮ್ ಕಾರ್ಯಕ್ರಮದ ಆಯೋಜಕರಿಗೆ ಕೃತಜ್ಞತೆಗಳನ್ನು ವ್ಯಕ್ತಪಡಿಸಿದ ಪ್ರಧಾನಿ, ಸಂಸತ್ತಿನ ಕಾರ್ಯಯೋಜನೆಗಳಿಂದಾಗಿ ತಾವು ಖುದ್ದಾಗಿ ಹಾಜರಾಗಲು ಸಾಧ್ಯವಾಗಲಿಲ್ಲ, ಭವಿಷ್ಯದಲ್ಲಿ ತಾವು ಭೇಟಿ ನೀಡಿ ಗೌರವ ಸಲ್ಲಿಸುವುದಾಗಿ ಅವರು ಭರವಸೆ ನೀಡಿದರು.

ಭರ್ವಾಡ ಸಮುದಾಯ ಮತ್ತು ಬವಲಿಯಾಲಿ ಧಾಮ್ ಜೊತೆಗಿನ ತಮ್ಮ ದೀರ್ಘಕಾಲದ ಸಂಪರ್ಕವನ್ನು ಪ್ರಸ್ತಾಪಿಸಿದ ಶ್ರೀ ಮೋದಿ, ಸಮುದಾಯದ ಸೇವಾ ಸಮರ್ಪಣೆ, ಪ್ರಕೃತಿಯ ಮೇಲಿನ ಅವರ ಪ್ರೀತಿ ಮತ್ತು ಗೋರಕ್ಷಣೆಗೆ ಅವರ ಬದ್ಧತೆಯನ್ನು ಶ್ಲಾಘಿಸಿದರು. ಈ ಮೌಲ್ಯಗಳು ಪದಗಳಿಗೆ ಮೀರಿವೆ,  ಸಮುದಾಯದೊಳಗೆ ಆಳವಾಗಿ ಪ್ರತಿಧ್ವನಿಸುವ ಹಂಚಿಕೆಯ ಭಾವನೆ ಎದ್ದುಕಾಣುತ್ತಿದೆ ಎಂದರು.

ನಾಗಾ ಲಖಾ ಠಾಕೂರ್ ಅವರ ಆಳವಾದ ಪರಂಪರೆಗೆ ಒತ್ತು ನೀಡಿದ ಶ್ರೀ ಮೋದಿ, ಅವರ ಕೊಡುಗೆಗಳನ್ನು ಸೇವೆ ಮತ್ತು ಸ್ಫೂರ್ತಿಯ ದಾರಿದೀಪವೆಂದು ಶ್ಲಾಘಿಸಿದರು. ಶತಮಾನಗಳ ನಂತರವೂ ಸ್ಮರಣೀಯವಾಗಿರುವ ಮತ್ತು ಆಚರಿಸಲ್ಪಡುತ್ತಿರುವ ಠಾಕೂರ್ ಅವರ ಪ್ರಯತ್ನಗಳ ಶಾಶ್ವತ ಪರಿಣಾಮವನ್ನು ಅವರು ಎತ್ತಿ ತೋರಿಸಿದರು. ಗುಜರಾತ್‌ನಲ್ಲಿ ಸವಾಲಿನ ಸಮಯದಲ್ಲಿ, ವಿಶೇಷವಾಗಿ ತೀವ್ರ ಬರಗಾಲದ ಅವಧಿಯಲ್ಲಿ ಪೂಜ್ಯ ಇಸು ಬಾಪು ಅವರು ನೀಡಿದ ಗಮನಾರ್ಹ ಸೇವೆಗಳ ಬಗ್ಗೆ ಪ್ರಧಾನಿ ತಮ್ಮ ವೈಯಕ್ತಿಕ ಸಾಕ್ಷಿಗಳನ್ನು ಹಂಚಿಕೊಂಡರು. ನೀರಿನ ಕೊರತೆಯು ನಿರಂತರ ಸಮಸ್ಯೆಯಾಗಿದ್ದ ಧಂಧುಕಾ ಮತ್ತು ರಾಂಪುರ್‌ನಂತಹ ಪ್ರದೇಶಗಳಲ್ಲಿ ಜನರು ಎದುರಿಸುತ್ತಿರುವ ಅಪಾರ ಕಷ್ಟಗಳಿಗೆ ಪೂಜ್ಯ ಇಸು ಬಾಪು ಅವರು ನೀಡಿದ ನಿಸ್ವಾರ್ಥ ಸೇವೆಯನ್ನು ಅವರು ಶ್ಲಾಘಿಸಿದರು, ಇದನ್ನು ಗುಜರಾತ್‌ನಾದ್ಯಂತ ಗುರುತಿಸಲ್ಪಟ್ಟ ಮತ್ತು ಪೂಜಿಸಲ್ಪಟ್ಟ ದೈವಿಕ ಕಾರ್ಯ ಎಂದು ಬಣ್ಣಿಸಿದರು. ಸ್ಥಳಾಂತರಗೊಂಡ ಸಮುದಾಯಗಳ ಕಲ್ಯಾಣ, ಅವರ ಮಕ್ಕಳ ಶಿಕ್ಷಣ, ಪರಿಸರ ಸಂರಕ್ಷಣೆ ಮತ್ತು ಗಿರ್ ಹಸುಗಳ ಸಂರಕ್ಷಣೆಗಾಗಿ ಇಸು ಬಾಪು ಅವರ ಸಮರ್ಪಣೆಯನ್ನು ಪ್ರಧಾನಿ ಪ್ರಸ್ತಾಪಿಸಿ, ಇಸು ಬಾಪು ಅವರ ಕೆಲಸದ ಪ್ರತಿಯೊಂದು ಅಂಶವು ಸೇವೆ ಮತ್ತು ಸಹಾನುಭೂತಿಯ ಆಳವಾದ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಎಂದರು.

 

ಭರ್ವಾಡ ಸಮುದಾಯದ ಕಠಿಣ ಪರಿಶ್ರಮ ಮತ್ತು ತ್ಯಾಗದ ಅಚಲ ಬದ್ಧತೆಗಾಗಿ, ಅವರ ಸ್ಥಿರ ಪ್ರಗತಿ ಮತ್ತು ಚೇತರಿಕೆ ಕಾಣುತ್ತಿದ್ದಾರೆ. ಸಮುದಾಯದೊಂದಿಗಿನ ತಮ್ಮ ಹಿಂದಿನ ಸಂಪರ್ಕವನ್ನು ಸ್ಮರಿಸಿದ ಪ್ರಧಾನಿ, ಅಲ್ಲಿ ಅವರು ಕೋಲು ಹಿಡಿಯುವುದರಿಂದ ಹಿಡಿದು ಪೆನ್ನುಗಳನ್ನು ಅಪ್ಪಿಕೊಳ್ಳುವ ತನಕ ಪರಿವರ್ತನೆಗೊಳ್ಳಲು ಅವರನ್ನು ಪ್ರೋತ್ಸಾಹಿಸಲಾಗಿದೆ, ಇದು ಶಿಕ್ಷಣದ ಮಹತ್ವವನ್ನು ಸಂಕೇತಿಸುತ್ತದೆ. ಶಿಕ್ಷಣದ ಮೂಲಕ ಮುಂದುವರಿಯುತ್ತಿರುವ ಮಕ್ಕಳೊಂದಿಗೆ ಈ ದೃಷ್ಟಿಕೋನವನ್ನು ಅಳವಡಿಸಿಕೊಂಡ ಭರ್ವಾಡ ಸಮುದಾಯದ ಹೊಸ ಪೀಳಿಗೆಯ ಬಗ್ಗೆ ಅವರು ಹೆಮ್ಮೆ ವ್ಯಕ್ತಪಡಿಸಿದರು. ಈಗ ಸಮುದಾಯದ ಹೆಣ್ಣುಮಕ್ಕಳು ಸಹ ತಮ್ಮ ಕೈಯಲ್ಲಿ ಕಂಪ್ಯೂಟರ್‌ಗಳನ್ನು ಹಿಡಿದಿದ್ದಾರೆ. ಪ್ರಕೃತಿ ಮತ್ತು ಸಂಸ್ಕೃತಿಯ ರಕ್ಷಕರಾಗಿ ಸಮುದಾಯವು ಬಹುದೊಡ್ಡ ಪಾತ್ರ ವಹಿಸಿದೆ. "ಅತಿಥಿ ದೇವೋ ಭವ" ಸಂಪ್ರದಾಯದ ಅವರ ಸಾಕಾರ ಶ್ಲಾಘನೀಯವಾಗಿದೆ. ಜಂಟಿ ಕುಟುಂಬಗಳಲ್ಲಿ ಹಿರಿಯರನ್ನು ನೋಡಿಕೊಳ್ಳುವ, ದೈವಿಕ ಸೇವೆಗೆ ಸಮಾನವಾದ ಸೇವಾ ಮನೋಭಾವವನ್ನು ಪ್ರತಿಬಿಂಬಿಸುವ ಭರ್ವಾಡ ಸಮುದಾಯ ವಿಶಿಷ್ಟ ಮೌಲ್ಯಗಳನ್ನು ಹೊಂದಿದೆ. ಆಧುನಿಕತೆಯನ್ನು ಅಳವಡಿಸಿಕೊಳ್ಳುವಾಗ ಸಂಪ್ರದಾಯಗಳನ್ನು ಸಂರಕ್ಷಿಸುವಲ್ಲಿ ಸಮುದಾಯದ ಪ್ರಯತ್ನಗಳನ್ನು ಗುರುತಿಸಿದ ಶ್ರೀ ಮೋದಿ, ಸ್ಥಳಾಂತರಗೊಂಡ ಕುಟುಂಬಗಳ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸುವುದು ಮತ್ತು ಜಾಗತಿಕವಾಗಿ ಹೊಸ ಅವಕಾಶಗಳೊಂದಿಗೆ ಸಮುದಾಯವನ್ನು ಸಂಪರ್ಕಿಸುವಂತಹ ಉಪಕ್ರಮಗಳು ಶ್ಲಾಘನೀಯ ಎಂದರು. ಸಮುದಾಯದ ಹೆಣ್ಣು ಮಕ್ಕಳು ಕ್ರೀಡೆಯಲ್ಲಿ ಸಾಧನೆ ಮಾಡಬೇಕೆಂಬ ತಮ್ಮ ಬಯಕೆಯನ್ನು ಅವರು ವ್ಯಕ್ತಪಡಿಸಿದರು.  ಗುಜರಾತ್‌ನ ಖೇಲ್ ಮಹಾಕುಂಭದ ಸಮಯದಲ್ಲಿ ಅವರು ಕಂಡ ಸಾಮರ್ಥ್ಯವನ್ನು ಶ್ಲಾಘಿಸಿದರು. ಗೋವುಗಳ ಸಾಕಣೆಯಲ್ಲಿ ಸಮುದಾಯದ ಸಮರ್ಪಣೆಯನ್ನು, ವಿಶೇಷವಾಗಿ ರಾಷ್ಟ್ರಕ್ಕೆ ಹೆಮ್ಮೆ ತಂದಿರುವ ಗಿರ್ ಹಸು ತಳಿಯನ್ನು ಸಂರಕ್ಷಿಸುವಲ್ಲಿ ಅವರ ಪ್ರಯತ್ನಗಳು ಜಾಗತಿಕ ಮನ್ನಣೆ ತಂದುಕೊಟ್ಟಿವೆ. ಸಮುದಾಯವು ತಮ್ಮ ಜಾನುವಾರುಗಳಿಗೆ ನೀಡುವಂತೆಯೇ ತಮ್ಮ ಮಕ್ಕಳಿಗೂ ಅದೇ ಕಾಳಜಿ ವಿಸ್ತರಿಸಬೇಕೆಂದು ಸಲಹೆ ನೀಡಿದರು.

ಭರ್ವಾಡ ಸಮುದಾಯದೊಂದಿಗಿನ ತಮ್ಮ ಸುದೀರ್ಘ ಸಂಪರ್ಕವನ್ನು ಪ್ರಸ್ತಾಪಿಸಿದ ಅವರು, ಅವರೆಲ್ಲರೂ ತಮ್ಮ ಕುಟುಂಬ ಮತ್ತು ಪಾಲುದಾರರು ಇದ್ದಂತೆ.  ಮುಂದಿನ 25 ವರ್ಷಗಳಲ್ಲಿ ತಮ್ಮ ವಿಕಸಿತ ಭಾರತದ ದೃಷ್ಟಿಕೋನವನ್ನು ಸಮುದಾಯವು ಬೆಂಬಲಿಸುತ್ತದೆ ಎಂಬ ನಂಬಿಕೆ ವ್ಯಕ್ತಪಡಿಸಿದರು. "ಸಬ್ಕಾ ಪ್ರಾಯಸ್" ದೇಶದ ದೊಡ್ಡ ಶಕ್ತಿ ಎಂಬ ಕೆಂಪುಕೋಟೆಯಿಂದ ನೀಡಿದ ಹೇಳಿಕೆಯನ್ನು ಪುನರುಚ್ಚರಿಸಿ, ಸಾಮೂಹಿಕ ಪ್ರಯತ್ನಗಳ ಮಹತ್ವಕ್ಕೆ ಒತ್ತು ನೀಡಿದರು. ವಿಕಸಿತ ಭಾರತ ಕಟ್ಟುವ ಮೊದಲ ಹೆಜ್ಜೆಯಾಗಿ ಗ್ರಾಮಗಳನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ. ಕಾಲು ಮತ್ತು ಬಾಯಿ ರೋಗವನ್ನು ಎದುರಿಸಲು ಜಾನುವಾರುಗಳಿಗೆ ಸರ್ಕಾರದ ಉಚಿತ ಲಸಿಕೆ ಕಾರ್ಯಕ್ರಮ ರೂಪಿಸಿದೆ. ಸಮುದಾಯವು ತಮ್ಮ ಜಾನುವಾರುಗಳಿಗೆ ನಿಯಮಿತವಾಗಿ ಲಸಿಕೆಗಳನ್ನು ಖಚಿತಪಡಿಸಿಕೊಳ್ಳಬೇಕು. ಈ ಉಪಕ್ರಮವು ಕರುಣೆಯ ಕ್ರಿಯೆ ಮತ್ತು ದೈವಿಕ ಆಶೀರ್ವಾದವನ್ನು ಪಡೆಯುವ ಮಾರ್ಗವಾಗಿದೆ. ಜಾನುವಾರು ಸಾಕಣೆದಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ಪರಿಚಯಿಸುವ ಬಗ್ಗೆಯೂ ಶ್ರೀ ಮೋದಿ ಪ್ರಸ್ತಾಪಿಸಿದರು, ಇದು ಅವರ ವ್ಯವಹಾರಗಳನ್ನು ವಿಸ್ತರಿಸಲು ಕಡಿಮೆ ಬಡ್ಡಿದರದ ಸಾಲಗಳನ್ನು ಪಡೆಯಲು ಅನುವು ಮಾಡಿಕೊಡುತ್ತದೆ. ಸ್ಥಳೀಯ ಜಾನುವಾರು ತಳಿಗಳನ್ನು ಸಂರಕ್ಷಿಸಬೇಕು, ಅವುಗಳ ಸಂರಕ್ಷಣೆ ಮತ್ತು ಬೆಳವಣಿಗೆಗೆ ರಾಷ್ಟ್ರೀಯ ಗೋಕುಲ್ ಮಿಷನ್ ಪ್ರಮುಖ ಉಪಕ್ರಮವಾಗಿದೆ. ಈ ಕಾರ್ಯಕ್ರಮಗಳ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳುವಂತೆ ಅವರು ಸಮುದಾಯವನ್ನು ಒತ್ತಾಯಿಸಿದರು.

 

ಪ್ರಧಾನಮಂತ್ರಿ ಅವರು ಸಸಿಗಳನ್ನು ನೆಡುವ ಮಹತ್ವವನ್ನು ಪುನರುಚ್ಚರಿಸಿದರು, ಸಮುದಾಯವು ತಮ್ಮ ತಾಯಂದಿರ ಗೌರವಾರ್ಥವಾಗಿ ಸಸಿಗಳನ್ನು ನೆಡುವಂತೆ ಪ್ರೋತ್ಸಾಹಿಸಿದರು. ಅತಿಯಾದ ಶೋಷಣೆ ಮತ್ತು ರಾಸಾಯನಿಕ ಬಳಕೆಯಿಂದ ಹಾನಿಗೊಳಗಾದ ಭೂಮಿ ತಾಯಿಯ ಆರೋಗ್ಯ ಮರುಸ್ಥಾಪಿಸಲು ಇದು ಒಂದು ಮಾರ್ಗವಾಗಿದೆ. ನೈಸರ್ಗಿಕ ಕೃಷಿಯ ಮೌಲ್ಯವನ್ನು ಪ್ರಸ್ತಾಪಿಸಿದ ಅವರು, ಭೂಮಿಯನ್ನು ಪುನರುಜ್ಜೀವನಗೊಳಿಸಲು ಈ ಪದ್ಧತಿಯನ್ನು ಅಳವಡಿಸಿಕೊಳ್ಳುವಂತೆ ಸಮುದಾಯವನ್ನು ಒತ್ತಾಯಿಸಿದರು. ಮಣ್ಣನ್ನು ಬಲಪಡಿಸಲು ಸಂಪನ್ಮೂಲವಾಗಿ ಗೋವಿನ ಸಗಣಿ ಅಪಾರ ಸಾಮರ್ಥ್ಯ ಹೊಂದಿದೆ. ಈ ವಿಷಯದಲ್ಲಿ ಭರ್ವಾಡ್ ಸಮುದಾಯದ ಸೇವಾ ಸಮರ್ಪಣೆಯನ್ನು ಮೋದಿ ಶ್ಲಾಘಿಸಿದರು. ನೈಸರ್ಗಿಕ ಕೃಷಿ ಉತ್ತೇಜಿಸುವಲ್ಲಿ ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್ ಅವರ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು, ಈ ಉದ್ದೇಶಕ್ಕಾಗಿ ಕೊಡುಗೆ ನೀಡುವಂತೆ ಸಮುದಾಯಕ್ಕೆ ಕರೆ ನೀಡಿದರು.

ಪ್ರಧಾನಮಂತ್ರಿ ಅವರು ಭರ್ವಾಡ ಸಮುದಾಯಕ್ಕೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು, ನಾಗ ಲಖಾ ಠಾಕೂರ್ ಅವರ ಆಶೀರ್ವಾದ ಎಲ್ಲರಿಗೂ ನಿರಂತರವಾಗಿ ಸಿಗಲಿ ಎಂದು ಪ್ರಾರ್ಥಿಸಿದರು. ಬವಲಿಯಾಲಿ ಧಾಮದೊಂದಿಗೆ ಸಂಬಂಧ ಹೊಂದಿರುವ ಎಲ್ಲಾ ವ್ಯಕ್ತಿಗಳ ಯೋಗಕ್ಷೇಮ ಮತ್ತು ಪ್ರಗತಿಗಾಗಿ ಅವರು ತಮ್ಮ ಆಶಯವನ್ನು ವ್ಯಕ್ತಪಡಿಸಿದರು. ಶ್ರೀ ಮೋದಿ ಅವರು ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದರು, ಸಮುದಾಯದ ಮಕ್ಕಳು, ವಿಶೇಷವಾಗಿ ಹೆಣ್ಣು ಮಕ್ಕಳು, ಶೈಕ್ಷಣಿಕವಾಗಿ ಶ್ರೇಷ್ಠತೆ ಸಾಧಿಸಿ ಬಲವಾದ ಸಮಾಜಕ್ಕೆ ಕೊಡುಗೆ ನೀಡಬೇಕೆಂದು ಒತ್ತಾಯಿಸಿದರು. ಆಧುನಿಕತೆ ಮತ್ತು ಶಕ್ತಿಯ ಮೂಲಕ ಸಮುದಾಯವನ್ನು ಸಬಲೀಕರಣಗೊಳಿಸುವುದು ಮುಂದಿನ ದಾರಿಯಾಗಿದೆ. ಈ ಶುಭ ಸಂದರ್ಭದಲ್ಲಿ ಭಾಗವಹಿಸಿದ್ದಕ್ಕಾಗಿ ಸಂತೋಷ ಮತ್ತು ಕೃತಜ್ಞತೆ ವ್ಯಕ್ತಪಡಿಸುವ ಮೂಲಕ ಅವರು ತಮ್ಮ ವೈಯಕ್ತಿಕ ಉಪಸ್ಥಿತಿಯು ಅವರಿಗೆ ಇನ್ನೂ ಹೆಚ್ಚಿನ ಸಂತೋಷವನ್ನು ತರುತ್ತಿತ್ತು ಎಂದು ಒಪ್ಪಿಕೊಂಡರು.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
'Operation Sindoor on, if they fire, we fire': India's big message to Pakistan

Media Coverage

'Operation Sindoor on, if they fire, we fire': India's big message to Pakistan
NM on the go

Nm on the go

Always be the first to hear from the PM. Get the App Now!
...
PM Modi's address to the nation
May 12, 2025
Today, every terrorist knows the consequences of wiping Sindoor from the foreheads of our sisters and daughters: PM
Operation Sindoor is an unwavering pledge for justice: PM
Terrorists dared to wipe the Sindoor from the foreheads of our sisters; that's why India destroyed the very headquarters of terror: PM
Pakistan had prepared to strike at our borders,but India hit them right at their core: PM
Operation Sindoor has redefined the fight against terror, setting a new benchmark, a new normal: PM
This is not an era of war, but it is not an era of terrorism either: PM
Zero tolerance against terrorism is the guarantee of a better world: PM
Any talks with Pakistan will focus on terrorism and PoK: PM

ಪ್ರಿಯ ದೇಶವಾಸಿಗಳೇ,

ನಮಸ್ಕಾರ !...

ಕಳೆದ ಕೆಲ ದಿನಗಳಲ್ಲಿ ದೇಶದ ಶಕ್ತಿ ಮತ್ತು ಸಂಯಮ ಎರಡನ್ನೂ ನಾವೆಲ್ಲರೂ ನೋಡಿದ್ದೇವೆ. ಮೊದಲನೆಯದಾಗಿ, ಪ್ರತಿಯೊಬ್ಬ ಭಾರತೀಯನ ಪರವಾಗಿ ನಾನು ಭಾರತದ ಬಲಿಷ್ಠ ಪಡೆಗಳಿಗೆ, ನಮ್ಮ ಸಶಸ್ತ್ರ ಪಡೆಗಳಿಗೆ, ನಮ್ಮ ಗುಪ್ತಚರ ಸಂಸ್ಥೆಗಳಿಗೆ ಮತ್ತು ನಮ್ಮ ವಿಜ್ಞಾನಿಗಳಿಗೆ ನಮಸ್ಕರಿಸುತ್ತೇನೆ.

ಆಪರೇಷನ್ ಸಿಂಧೂರದ ಉದ್ದೇಶಗಳನ್ನು ಸಾಧಿಸಲು ನಮ್ಮ ವೀರ ಸೈನಿಕರು ಅಪಾರ ಧೈರ್ಯವನ್ನು ಪ್ರದರ್ಶಿಸಿದರು.

ಇಂದು ನಾನು ಅವರ ಧೈರ್ಯಕ್ಕೆ, ಅವರ ಪರಾಕ್ರಮಕ್ಕೆ, ಅವರ ಶೌರ್ಯಕ್ಕೆ... ನಮ್ಮ ದೇಶದ ಪ್ರತಿಯೊಬ್ಬ ತಾಯಿಗೆ, ದೇಶದ ಪ್ರತಿಯೊಬ್ಬ ಸಹೋದರಿಗೆ ನನ್ನನ್ನು ಅರ್ಪಿಸಿಕೊಳ್ಳುತ್ತೇನೆ ಮತ್ತು ನಾನು ಈ ಶೌರ್ಯವನ್ನು ದೇಶದ ಪ್ರತಿಯೊಬ್ಬ ಮಗಳಿಗೂ ಅರ್ಪಿಸುತ್ತೇನೆ.

ಸ್ನೇಹಿತರೇ,

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ತೋರಿಸಿದ ಬರ್ಬರತೆ ದೇಶ ಮತ್ತು ಜಗತ್ತನ್ನು ಬೆಚ್ಚಿಬೀಳಿಸಿತ್ತು. ಮುಗ್ಧ ನಾಗರಿಕರು ರಜಾದಿನಗಳನ್ನು ಆಚರಿಸುತ್ತಾ ಅವರ ಕುಟುಂಬಗಳ ಮುಂದಿದ್ದರು. ಆದರೆ, ಮಕ್ಕಳ ಮುಂದೆ ಕ್ರೂರವಾಗಿ ಕೊಲ್ಲುವುದರೊಂದಿಗೆ ಧರ್ಮದ ಬಗ್ಗೆ ಕೇಳುವುದು ಭಯೋತ್ಪಾದನೆಯ ಅತ್ಯಂತ ಭೀಕರ ಮುಖವಾಗಿತ್ತು. ಅದು ಕ್ರೌರ್ಯ. ಇದು ದೇಶದ ಸಾಮರಸ್ಯವನ್ನು ಮುರಿಯುವ ಪ್ರಯತ್ನವೂ ಆಗಿತ್ತು.

ನನಗೆ ವೈಯಕ್ತಿಕವಾಗಿ, ಈ ನೋವು ಅಪಾರವಾಗಿತ್ತು. ಈ ಭಯೋತ್ಪಾದಕ ದಾಳಿಯ ನಂತರ, ಇಡೀ ರಾಷ್ಟ್ರ, ಪ್ರತಿಯೊಬ್ಬ ನಾಗರಿಕ, ಪ್ರತಿಯೊಂದು ಸಮಾಜ, ಪ್ರತಿಯೊಂದು ವರ್ಗ, ಪ್ರತಿಯೊಂದು ರಾಜಕೀಯ ಪಕ್ಷ ಭಯೋತ್ಪಾದನೆಯ ವಿರುದ್ಧ ಕಠಿಣ ಕ್ರಮಕ್ಕಾಗಿ ಒಂದೇ ಧ್ವನಿಯಲ್ಲಿ ನಿಂತವು. ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ನಾವು ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ.

ಇಂದು ಪ್ರತಿಯೊಬ್ಬ ಭಯೋತ್ಪಾದಕನಿಗೂ, ಪ್ರತಿಯೊಂದು ಭಯೋತ್ಪಾದಕ ಸಂಘಟನೆಗೂ ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಹಣೆಯಿಂದ ಸಿಂಧೂರವನ್ನು ತೆಗೆದುಹಾಕುವುದರಿಂದ ಉಂಟಾಗುವ ಪರಿಣಾಮವೇನೆಂದು ತಿಳಿದಿದೆ.

ಸ್ನೇಹಿತರೇ,

ಆಪರೇಷನ್ ಸಿಂಧೂರ... ಇದು ಕೇವಲ ಹೆಸರಲ್ಲ, ಇದು ದೇಶದ ಕೋಟ್ಯಂತರ ಜನರ ಭಾವನೆಗಳ ಪ್ರತಿಬಿಂಬವಾಗಿದೆ.

'ಸಿಂಧೂರ' ಕಾರ್ಯಾಚರಣೆ... ನ್ಯಾಯದ ಅವಿಚ್ಛಿನ್ನ ಪ್ರತಿಜ್ಞೆಯಾಗಿದೆ. ಮೇ 6ರ ತಡರಾತ್ರಿ ಮತ್ತು ಮೇ 7ರ ಬೆಳಿಗ್ಗೆ ಈ ಪ್ರತಿಜ್ಞೆಯು ಫಲಿತಾಂಶವಾಗಿ ಬದಲಾಗುವುದನ್ನು ಇಡೀ ಜಗತ್ತು ನೋಡಿದೆ. ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಅಡಗುತಾಣಗಳು ಮತ್ತು ಅವರ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ಪಡೆಗಳು ನಿಖರವಾದ ದಾಳಿ ನಡೆಸಿವೆ.

ಭಾರತ ಇಷ್ಟೊಂದು ದೊಡ್ಡ ನಿರ್ಧಾರ ತೆಗೆದುಕೊಳ್ಳಬಹುದೆಂದು ಭಯೋತ್ಪಾದಕರು ಕನಸಿನಲ್ಲಿಯೂ ಊಹಿಸಿರಲಿಲ್ಲ. ಆದರೆ, ದೇಶವು ಒಗ್ಗಟ್ಟಾದಾಗ ದೇಶ ಮೊದಲು ಎಂಬ ಮನೋಭಾವದಿಂದ ತುಂಬಿದಾಗ ರಾಷ್ಟ್ರವು ಸರ್ವೋಚ್ಚವಾಗಿರುತ್ತದೆ, ನಂತರ ಬಲವಾದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ, ಫಲಿತಾಂಶಗಳನ್ನು ಸಾಧಿಸಲಾಗುತ್ತದೆ.

ಭಾರತದ ಕ್ಷಿಪಣಿಗಳು ಮತ್ತು ಡ್ರೋನ್‌ಗಳು ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿದಾಗ, ಭಯೋತ್ಪಾದಕ ಸಂಘಟನೆಗಳ ಕಟ್ಟಡಗಳು ನಾಶವಾದವು. ಅಷ್ಟೇ ಅಲ್ಲದೆ, ಅವುಗಳ ನೈತಿಕ ಸ್ಥೈರ್ಯವೂ ಕಂಪನವಾಯಿತು.

ಬಹಾವಲ್ಪುರ್ ಮತ್ತು ಮುರಿಡ್ಕೆಯಂತಹ ಭಯೋತ್ಪಾದಕ ಅಡಗುತಾಣಗಳು ಒಂದು ರೀತಿಯಲ್ಲಿ ಜಾಗತಿಕ ಭಯೋತ್ಪಾದನೆಯ ವಿಶ್ವವಿದ್ಯಾಲಯಗಳಾಗಿವೆ. ಜಗತ್ತಿನ ಎಲ್ಲೆಡೆ ನಡೆದ ಯಾವುದೇ ಪ್ರಮುಖ ಭಯೋತ್ಪಾದಕ ದಾಳಿ... ಅದು ಸೆಪ್ಟೆಂಬರ್ 11 ಆಗಿರಲಿ ಅಥವಾ ಲಂಡನ್ ಟ್ಯೂಬ್ ಬಾಂಬ್ ದಾಳಿಯಾಗಿರಲಿ ಅಥವಾ ದಶಕಗಳಲ್ಲಿ ಭಾರತದಲ್ಲಿ ನಡೆದಿರುವ ಪ್ರಮುಖ ಭಯೋತ್ಪಾದಕ ದಾಳಿಗಳಾಗಿರಲಿ ಅಥವಾ ಎಲ್ಲೋ, ಮತ್ತೊಂದರಲ್ಲೋ , ಈ ಭಯೋತ್ಪಾದಕ ಅಡಗುತಾಣಗಳೊಂದಿಗೆ ಸಂಬಂಧ ಹೊಂದಿವೆ. ಭಯೋತ್ಪಾದಕರು ನಮ್ಮ ಸಹೋದರಿಯರ ಸಿಂಧೂರವನ್ನು ನಾಶಪಡಿಸಿದ್ದರು. ಅದಕ್ಕಾಗಿಯೇ ಭಾರತವು ಈ ಭಯೋತ್ಪಾದನೆಯ ಪ್ರಧಾನ ಕಚೇರಿಗಳನ್ನು ನಾಶಪಡಿಸಿತು.

ಭಾರತ ನಡೆಸಿದ ಈ ದಾಳಿಗಳಲ್ಲಿ 100 ಕ್ಕೂ ಹೆಚ್ಚು ಭೀಕರ ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ. ಕಳೆದ ಎರಡೂವರೆ ಮೂರು ದಶಕಗಳಿಂದ ಪಾಕಿಸ್ತಾನದಲ್ಲಿ ಮುಕ್ತವಾಗಿ ಸುತ್ತಾಡುತ್ತಿದ್ದ ಮತ್ತು ಭಾರತದ ವಿರುದ್ಧ ಪಿತೂರಿ ನಡೆಸುತ್ತಿದ್ದ ಅನೇಕ ಭಯೋತ್ಪಾದಕ ನಾಯಕರನ್ನು ಭಾರತ ಒಂದೇ ಏಟಿನಲ್ಲಿ ನಿರ್ಮೂಲನೆ ಮಾಡಿತು.

ಸ್ನೇಹಿತರೇ,

ಭಾರತದ ಈ ಕ್ರಮದಿಂದ ಪಾಕಿಸ್ತಾನ ತೀವ್ರ ನಿರಾಶೆಗೊಂಡಿದೆ.

ಅವರು ಹತಾಶೆಯಿಂದ ಸುತ್ತುವರೆದಿದ್ದಾರೆ ಮತ್ತು ಕೋಪಗೊಂಡಿದ್ದಾರೆ ಮತ್ತು ಈ ಹತಾಶೆಯಲ್ಲಿ ಅವರು ಮತ್ತೊಂದು ಧೈರ್ಯಶಾಲಿ ಕೃತ್ಯವನ್ನು ಮಾಡಿದ್ದಾರೆ. ಭಯೋತ್ಪಾದನೆ ವಿರುದ್ಧ ಭಾರತದ ಕ್ರಮವನ್ನು ಬೆಂಬಲಿಸುವ ಬದಲು, ಪಾಕಿಸ್ತಾನ ಭಾರತದ ಮೇಲೆಯೇ ದಾಳಿ ಮಾಡಲು ಪ್ರಾರಂಭಿಸಿತು.

ಪಾಕಿಸ್ತಾನ ನಮ್ಮ ಶಾಲೆಗಳು ಮತ್ತು ಕಾಲೇಜುಗಳನ್ನು ಗುರಿಯಾಗಿಸಿಕೊಂಡಿತು. ಗುರುದ್ವಾರಗಳು, ದೇವಾಲಯಗಳು, ಸಾಮಾನ್ಯ ನಾಗರಿಕರ ಮನೆಗಳು. ಪಾಕಿಸ್ತಾನ ನಮ್ಮ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡಿತು. ಆದರೆ ಇದರಲ್ಲಿ ಪಾಕಿಸ್ತಾನದ ಮನಸ್ಥಿತಿ ಬಹಿರಂಗವಾಯಿತು. ಪಾಕಿಸ್ತಾನದ ಡ್ರೋನ್‌ಗಳು ಮತ್ತು ಕ್ಷಿಪಣಿಗಳು ಭಾರತದ ಮುಂದೆ ಹೇಗೆ ಒಣಹುಲ್ಲಿನಂತೆ ಬಿದ್ದವು ಎಂಬುದನ್ನು ಜಗತ್ತು ನೋಡಿತು.

ಭಾರತದ ಬಲಿಷ್ಠ ವಾಯು ರಕ್ಷಣಾ ವ್ಯವಸ್ಥೆಯು ಅವುಗಳನ್ನು ಆಕಾಶದಲ್ಲಿಯೇ ನಾಶಪಡಿಸಿತು. ಪಾಕಿಸ್ತಾನ ಗಡಿಯಲ್ಲಿ ದಾಳಿ ಮಾಡಲು ಸಿದ್ಧತೆ ನಡೆಸುತ್ತಿತ್ತು. ಆದರೆ ಭಾರತ ಪಾಕಿಸ್ತಾನದ ಎದೆಗೆ ಹೊಡೆದಿದೆ. ಭಾರತೀಯ ಡ್ರೋನ್‌ಗಳು... ಭಾರತೀಯ ಕ್ಷಿಪಣಿಗಳು ನಿಖರವಾಗಿ ದಾಳಿ ಮಾಡಿದವು. ಪಾಕಿಸ್ತಾನಿ ವಾಯುಪಡೆಯ ಆ ವಾಯುನೆಲೆಗಳು ಹಾನಿಗೊಳಗಾದವು.

ಅದರ ಬಗ್ಗೆ ಪಾಕಿಸ್ತಾನ ತುಂಬಾ ಹೆಮ್ಮೆಪಡುತ್ತಿತ್ತು. ಮೊದಲ ಮೂರು ದಿನಗಳಲ್ಲಿ ಭಾರತ ಪಾಕಿಸ್ತಾನವನ್ನು ಊಹಿಸಿಯೂ ಇಲ್ಲದಷ್ಟು ನಾಶಮಾಡಿತು.

ಭಾರತದ ಆಕ್ರಮಣಕಾರಿ ಕ್ರಮದ ನಂತರ ಪಾಕಿಸ್ತಾನ ತಪ್ಪಿಸಿಕೊಳ್ಳಲು ದಾರಿಗಳನ್ನು ಹುಡುಕಲು ಪ್ರಾರಂಭಿಸಿತು. ಪಾಕಿಸ್ತಾನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಜಗತ್ತನ್ನು ಬೇಡಿಕೊಳ್ಳುತ್ತಿತ್ತು ಮತ್ತು ಈ ಬಲವಂತದ ಮೇರೆಗೆ, ತೀವ್ರವಾಗಿ ಥಳಿಸಿದ ನಂತರ, ಮೇ 10 ರ ಮಧ್ಯಾಹ್ನ, ಪಾಕಿಸ್ತಾನಿ ಸೇನೆಯು ನಮ್ಮ ಡಿಜಿಎಂಒಗಳು ಅವರನ್ನು ಸಂಪರ್ಕಿಸಿತು.

ಆ ಹೊತ್ತಿಗೆ ನಾವು ಭಯೋತ್ಪಾದನೆಯ ಮೂಲಸೌಕರ್ಯವನ್ನು ದೊಡ್ಡ ಪ್ರಮಾಣದಲ್ಲಿ ನಾಶಪಡಿಸಿದ್ದೆವು. ಭಯೋತ್ಪಾದಕರು ಕೊಲ್ಲಲ್ಪಟ್ಟರು. ನಾವು ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಗಳನ್ನು ನಾಶಮಾಡಿದ್ದೆವು. ಹಾಗಾಗಿ, ಪಾಕಿಸ್ತಾನದಿಂದ ಮನವಿ ಬಂದಾಗ, ಇದನ್ನು ಪಾಕಿಸ್ತಾನದಿಂದ ಹೇಳಿದಾಗ, ಅವರ ಕಡೆಯಿಂದ ಇನ್ನು ಮುಂದೆ ಯಾವುದೇ ಭಯೋತ್ಪಾದಕ ಚಟುವಟಿಕೆ ಮತ್ತು ಮಿಲಿಟರಿ ಸಾಹಸ ಇರುವುದಿಲ್ಲ ಎಂದು ಹೇಳಿದ್ದರಿಂದ ಭಾರತವೂ ಅದನ್ನು ಪರಿಗಣಿಸಿತು.

ಮತ್ತು ನಾನು ಮತ್ತೊಮ್ಮೆ ಪುನರಾವರ್ತಿಸುತ್ತೇನೆ. ಪಾಕಿಸ್ತಾನದಲ್ಲಿರುವ ಭಯೋತ್ಪಾದಕರು ಮತ್ತು ಸೇನಾ ನೆಲೆಗಳ ವಿರುದ್ಧದ ನಮ್ಮ ಪ್ರತೀಕಾರದ ಕ್ರಮವನ್ನು ನಾವು ಮುಂದೂಡಿದ್ದೇವೆ.

ಮುಂದಿನ ದಿನಗಳಲ್ಲಿ ಈ ಮಾನದಂಡದ ಆಧಾರದ ಮೇಲೆ ನಾವು ಪಾಕಿಸ್ತಾನದ ಪ್ರತಿಯೊಂದು ಹೆಜ್ಜೆಯನ್ನೂ ಅಳೆಯುತ್ತೇವೆ.

ದೇಶವಾಸಿಗಳೇ,

ಭಾರತದ ಮೂರೂ ಸೇನೆಗಳು, ನಮ್ಮ ವಾಯುಪಡೆ, ನಮ್ಮ ಸೇನೆ ಮತ್ತು ನಮ್ಮ ನೌಕಾಪಡೆ, ನಮ್ಮ ಗಡಿ ಭದ್ರತಾ ಪಡೆ-ಬಿಎಸ್‌ ಎಫ್‌, ಭಾರತದ ಅರೆ ಸೇನಾ ಪಡೆ ಸತತವಾಗಿ ನಿಗಾ ವಹಿಸಿವೆ. ಸರ್ಜಿಕಲ್‌ ಸ್ಟ್ರೈಕ್‌ ಮತ್ತು ವಾಯು ದಾಳಿಯ ಬಳಿಕ ಈಗ ಆಪರೇಷನ್‌ ಸಿಂಧೂರ್ ಭಯೋತ್ಪಾದನೆಯ ವಿರುದ್ಧ ಭಾರತದ ನೀತಿಯಾಗಿದೆ. ಆಪರೇಷನ್ ಸಿಂಧೂರವು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಹೊಸ ಆರಂಭವನ್ನು ಮಾಡಿದೆ. ಹೊಸ ಮಾನದಂಡವನ್ನು ಹೊಸ ಅಧ್ಯಾಯವನ್ನು ಸ್ಥಾಪಿಸಿದೆ. ಮೊದಲನೆಯದು , ಭಾರತದ ಮೇಲೆ ಭಯೋತ್ಪಾದಕ ದಾಳಿಯಾದರೆ ದಿಟ್ಟ ಉತ್ತರವನ್ನು ನೀಡಲಾಗುವುದು. ನಾವು ನಮ್ಮ ರೀತಿಯಲ್ಲಿ ನಮ್ಮ ಷರತ್ತುಗಳ ಮೇಲೆ ಉತ್ತರಗಳನ್ನು ನೀಡುತ್ತೇವೆ. ಭಯೋತ್ಪಾದನೆಯ ಮೂಲವನ್ನು ಬುಡ ಸಮೇತವಾಗಿ ನಿಗ್ರಹಗೊಳಿಸಲು ಕಠಿಣ ಕಾರ್ಯಾಚರಣೆಯನ್ನು ಕೈಗೊಳ್ಳುತ್ತೇವೆ. ಎರಡನೇಯದು ಯಾವುದೇ ಪರಮಾಣು ಬೆದರಿಕೆಯನ್ನು ಭಾರತ ಸಹಿಸುವುದಿಲ್ಲ. ಪರಮಾಣು ಬೆದರಿಕೆಯ ಅಡಿಯಲ್ಲಿ ಬೆಳೆಯುತ್ತಿರುವ ಭಯೋತ್ಪಾದಕ ತಾಣಗಳ ಮೇಲೆ ಭಾರತವು, ನಿಖರವಾದ ಮತ್ತು ನಿರ್ಣಾಯಕವಾದ ದಾಳಿಗಳನ್ನು ಕೈಗೊಳ್ಳಲಿದೆ. ಮೂರನೇಯದು , ಭಯೋತ್ಪಾದನೆ ಹಾಗೂ ಭಯೋತ್ಪಾದನೆಗೆ ಸಹಕರಿಸುವ ಎಲ್ಲ ಶಕ್ತಿಗಳನ್ನು ಸಹ ಒಂದೇ ದೃಷ್ಟಿಯಲ್ಲಿ ನೋಡಲಾಗುವುದು. ಅವರು ಸಹ ದೇಶದ ಆತಂಕವಾದಿಗಳಾಗಿದ್ದಾರೆ .

ಇಡೀ ವಿಶ್ವ, ಪಾಕಿಸ್ತಾನದ ಹೇಯ ಕೃತ್ಯವನ್ನು ಮತ್ತೊಮ್ಮೆ ನೋಡಿದೆ. ಆಪರೇಷನ್‌ ಸಿಂಧೂರ್‌ ದಾಳಿಯಲ್ಲಿ ಸಾವಿಗೀಡಾದ ಭಯೋತ್ಪಾದಕರಿಗೆ ವಿದಾಯ ನೀಡುವಲ್ಲಿ ಪಾಕಿಸ್ತಾನ ಸೇನೆಯ ಉನ್ನತ ಅಧಿಕಾರಿಗಳು ನಿರತರಾಗಿದ್ದರು. ಪಾಕ್‌ ನ ಪ್ರಾಯೋಜಿತ ಭಯೋತ್ಪಾದನೆಗೆ ಇದೊಂದು ಬಹುದೊಡ್ಡ ಸಾಕ್ಷಿಯಾಗಿದೆ.

ನಾವು ಭಾರತ ಮತ್ತು ನಮ್ಮ ನಾಗರಿಕರನ್ನು ಯಾವುದೇ ರೀತಿಯ ಅಪಾಯದಿಂದ ರಕ್ಷಿಸುವುದಕ್ಕೋಸ್ಕರ ನಿರಂತರವಾಗಿ ನಿರ್ಣಾಯಕ ಹೆಜ್ಜೆಗಳನ್ನು ಇಡುತ್ತೇವೆ.

ಸ್ನೇಹಿತರೆ,

ಯುದ್ಧದ ಮೈದಾನದಲ್ಲಿ ನಾವು ಪ್ರತಿ ಬಾರಿ ಪಾಕಿಸ್ತಾನವನ್ನು ದೂಳೀಪಟ ಮಾಡಿದ್ದೇವೆ ಮತ್ತು ಈ ಬಾರಿ ಆಪರೇಷನ್‌ ಸಿಂಧೂರ್‌, ಹೊಸ ಆಯಾಮಕ್ಕೆ ಸೇರ್ಪಡೆಯಾಗಿದೆ.

ನಾವು ಮರುಭೂಮಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ನಮ್ಮ ಸಾಮರ್ಥ್ಯದ ಅತ್ಯುತ್ತಮ ಪ್ರದರ್ಶನಕ್ಕೆ ಸಾಕ್ಷಿಯಾಗಿದ್ದೇವೆ ಮತ್ತು ಜತೆಗೇ, ಹೊಸ ತಲೆಮಾರಿನ ಯುದ್ಧಕ್ರಮದಲ್ಲೂ ನಮ್ಮ ಶ್ರೇಷ್ಠತೆಯನ್ನು ಸಾಬೀತುಪಡಿಸಿದ್ದೇವೆ.

ಈ ಆಪರೇಷನ್‌ ಮೂಲಕ, ನಮ್ಮ ಮೇಡ್‌ ಇನ್‌ ಇಂಡಿಯಾ ಶಸ್ತ್ರಾಸ್ತ್ರಗಳ ದಕ್ಷತೆಯೂ ಸಾಬೀತಾಗಿದೆ.

21ನೇ ಶತಮಾನದ ಯುದ್ಧದಲ್ಲಿ ಮೇಡ್‌ ಇನ್‌ ಇಂಡಿಯಾ ರಕ್ಷಣಾ ಸಲಕರಣೆಗಳ ಸಮಯ ಈಗ ಬಂದಿದೆ ಎನ್ನುವುದನ್ನು ಇಂದು ವಿಶ್ವ ನೋಡುತ್ತಿದೆ.

ಸ್ನೇಹಿತರೇ,

ಎಲ್ಲ ರೀತಿಯ ಭಯೋತ್ಪಾದನೆಯ ವಿರುದ್ಧ ನಾವೆಲ್ಲರೂ ಒಗ್ಗೂಡಿರುವುದು ನಮ್ಮ ಅತ್ಯಂತ ದೊಡ್ಡ ಶಕ್ತಿಯಾಗಿದೆ.

ನಿಶ್ಚಿತವಾಗಿ ಈ ಸಮಯ ಯುದ್ಧದ ಕಾಲವಲ್ಲ,

ಆದರೆ ಈ ಕಾಲ ಭಯೋತ್ಪಾದನೆಯ ಸಮಯವೂ ಅಲ್ಲ.

ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆ ಹೊಂದಿರುವುದು ಉತ್ತಮ ಜಗತ್ತನ್ನು ಸುನಿಶ್ಚಿತಗೊಳಿಸುತ್ತದೆ.

ದೇಶವಾಸಿಗಳೇ,

ಪಾಕಿಸ್ತಾನಿ ಯೋಧರು, ಪಾಕಿಸ್ತಾನದ ಸರ್ಕಾರ ಯಾವ ರೀತಿಯಲ್ಲಿ ಭಯೋತ್ಪಾದನೆಗೆ ಪುಷ್ಟಿ ನೀಡುತ್ತಿವೆ ಎಂದರೆ, ಒಂದು ದಿನ ಅದು ಪಾಕಿಸ್ತಾನವನ್ನೇ ಅಂತ್ಯಗೊಳಿಸುತ್ತದೆ.

ಪಾಕಿಸ್ತಾನಕ್ಕೆ ಇದರಿಂದ ರಕ್ಷಿಸಿಕೊಳ್ಳಬೇಕು ಎಂದಾದರೆ ಅದು ತನ್ನ ಭಯೋತ್ಪಾದನೆಗೆ ಮೂಲಸೌಕರ್ಯ ಒದಗಿಸುವ ವ್ಯವಸ್ಥೆಯನ್ನು ನಿರ್ಮೂಲನೆಗೊಳಿಸಬೇಕು. ಇದನ್ನು ಬಿಟ್ಟು ಶಾಂತಿಯ ಬೇರೆ ಯಾವುದೇ ಮಾರ್ಗವಿಲ್ಲ.

ಭಯೋತ್ಪಾದನೆ ಮತ್ತು ಮಾತುಕತೆ ಜತೆಯಾಗಿ ನಡೆಯಲು ಸಾಧ್ಯವಿಲ್ಲ ಎನ್ನುವುದು ಭಾರತದ ಅತ್ಯಂತ ಸ್ಪಷ್ಟ ನಿಲುವಾಗಿದೆ.

ಭಯೋತ್ಪಾದನೆ ಮತ್ತು ವ್ಯಾಪಾರ ಜತೆಯಾಗಿ ನಡೆಯಲು ಸಾಧ್ಯವಿಲ್ಲ ಮತ್ತು,

ನೀರು ಮತ್ತು ರಕ್ತ ಒಟ್ಟಿಗೇ ಹರಿಯಲು ಸಾಧ್ಯವಿಲ್ಲ.

ನಮ್ಮ ಪ್ರಕಟಿತ ನೀತಿಯೆಂದರೆ, ಪಾಕಿಸ್ತಾನದೊಂದಿಗೆ ಮಾತುಕತೆ ನಡೆಯುತ್ತದೆ ಎಂದಾದರೆ, ಅದು ಭಯೋತ್ಪಾದನೆಯ ಕುರಿತಾಗಿಯೇ ಆಗಿರುತ್ತದೆ. ಪಾಕಿಸ್ತಾನದೊಂದಿಗೆ ಮಾತುಕತೆಯಾಗುವುದಾದರೆ ಪಾಕ್‌ ಆಕ್ರಮಿತ ಕಾಶ್ಮೀರ-ಪಿಓಕೆಯ ಕುರಿತಾಗಿಯೇ ಇರುತ್ತದೆ ಎನ್ನುವುದನ್ನು ನಾನು ಇಂದು ಜಾಗತಿಕ ಸಮುದಾಯಕ್ಕೂ ತಿಳಿಸುತ್ತೇನೆ.

ಪ್ರೀತಿಯ ದೇಶವಾಸಿಗಳೇ,

ಇಂದು ಬುದ್ಧ ಪೂರ್ಣಿಮೆಯಾಗಿದೆ. ಭಗವಾನ್‌ ಬುದ್ಧ ನಮಗೆ ಶಾಂತಿಯ ಮಾರ್ಗವನ್ನು ತೋರಿಸಿಕೊಟ್ಟಿದ್ದಾನೆ. ಶಾಂತಿಯ ಮಾರ್ಗ ಸಹ ಶಕ್ತಿಯಿಂದ ಕೂಡಿದ್ದು ಸಾಗುತ್ತದೆ. ಮಾನವೀಯತೆ, ಶಾಂತಿ ಮತ್ತು ಸಮೃದ್ಧಿಯೆಡೆಗೆ ಮುನ್ನಡೆಯುತ್ತದೆ.

ಪ್ರತಿ ಭಾರತೀಯನು ಶಾಂತಿಯಿಂದ ಬದುಕಬೇಕು, ವಿಕಸಿತ ಭಾರತದ ಕನಸುಗಳನ್ನು ಪೂರ್ಣಗೊಳಿಸಬೇಕು.

ಇದರಿಂದಾಗಿ, ಭಾರತ ಶಕ್ತಿಶಾಲಿಯಾಗುವುದು ಅಗತ್ಯವಾಗಿದೆ.

ಮತ್ತು ಅವಶ್ಯಕತೆಯಿರುವಾಗ ಈ ಶಕ್ತಿಯ ಬಳಕೆ ಮಾಡುವುದು ಕೂಡ ಅಗತ್ಯ.

ಕೆಲವು ದಿನಗಳಿಂದ ಭಾರತವು ಇದನ್ನೇ ಮಾಡಿದೆ.

ನಾನು ಮತ್ತೊಮ್ಮೆ ಭಾರತದ ಸೇನೆ ಮತ್ತು ಸಶಸ್ತ್ರ ಪಡೆಗಳಿಗೆ ನಮನ ಸಲ್ಲಿಸುತ್ತೇನೆ. ನಮ್ಮ ದೇಶವಾಸಿಗಳ ಧೈರ್ಯ ಮತ್ತು ಏಕತೆಗೆ ವಂದಿಸುತ್ತೇನೆ.

ಧನ್ಯವಾದ,

ಭಾರತ ಮಾತಾ ಕೀ ಜೈ!!!

ಭಾರತ ಮಾತಾ ಕೀ ಜೈ!!!

ಭಾರತ ಮಾತಾ ಕೀ ಜೈ!!!