ಇಂದು ನಡೆಯುವ ನೇಮಕಾತಿಗಳು ಕೇವಲ ಸರ್ಕಾರಿ ಉದ್ಯೋಗಗಳಾಗದೆ, ಬದಲಾಗಿ ರಾಷ್ಟ್ರ ನಿರ್ಮಾಣಕ್ಕೆ ಸಕ್ರಿಯವಾಗಿ ಕೊಡುಗೆ ನೀಡುವ ನಿಜವಾದ ಅವಕಾಶಗಳಾಗಿವೆ: ಪ್ರಧಾನಮಂತ್ರಿ
ಯುವಕರು ಯಶಸ್ವಿಯಾದಾಗ, ರಾಷ್ಟ್ರ ಯಶಸ್ವಿಯಾಗುತ್ತದೆ: ಪ್ರಧಾನಮಂತ್ರಿ
ನಮ್ಮ ಸರ್ಕಾರವು ರೋಜ್‌ಗಾರ್ ಮೇಳಗಳ ಮೂಲಕ ಮಾತ್ರ 11 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ನೀಡಿದೆ: ಪ್ರಧಾನಮಂತ್ರಿ
ದಾಖಲೆ ಮಟ್ಟದ ದೀಪಾವಳಿ ಮಾರಾಟವು ಜಿಎಸ್‌ಟಿ ಬಚತ್ ಉತ್ಸವದ ಬೇಡಿಕೆ, ಉತ್ಪಾದನೆ ಮತ್ತು ಉದ್ಯೋಗಗಳನ್ನು ಹೇಗೆ ಉತ್ತೇಜಿಸಿದೆ ಎಂಬುದನ್ನು ತೋರಿಸುತ್ತಿದೆ: ಪ್ರಧಾನಮಂತ್ರಿ
ಪ್ರತಿಭಾ ಸೇತು ಪೋರ್ಟಲ್ ಯುಪಿಎಸ್‌ಸಿ ಪ್ರತಿಭೆಗಳನ್ನು ಕಳೆದುಹೋಗದಂತೆ ನೋಡಿಕೊಳ್ಳುತ್ತದೆ; ಅದು ರಾಷ್ಟ್ರ ನಿರ್ಮಾಣಕ್ಕೆ ಮರುನಿರ್ದೇಶನ ನೀಡುತ್ತದೆ: ಪ್ರಧಾನಮಂತ್ರಿ
ಯುವ ಕರ್ಮಯೋಗಿಗಳು ಅಭಿವೃದ್ಧಿ ಹೊಂದಿದ ಭಾರತದತ್ತ ಪಯಣವನ್ನು ಮುನ್ನಡೆಸುತ್ತಾರೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ರೋಜ್‌ಗಾರ್ ಮೇಳ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಈ ವರ್ಷದ ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಗಳ ನಡುವೆ, ಕಾಯಂ ಉದ್ಯೋಗಗಳ ನೇಮಕಾತಿ ಪತ್ರಗಳನ್ನು ಸ್ವೀಕರಿಸುವುದು ಹಬ್ಬದ ಮೆರಗು ಮತ್ತು ಉದ್ಯೋಗದ ಯಶಸ್ಸು ಎರಡರಲ್ಲೂ ದುಪ್ಪಟ್ಟು ಸಂತೋಷ ನೀಡುತ್ತದೆ. ಈ ಸಂತೋಷವು ಇಂದು ದೇಶಾದ್ಯಂತ 51,000ಕ್ಕೂ ಹೆಚ್ಚು ಯುವಕರನ್ನು ತಲುಪಿದೆ. ಇದು ಅವರ ಕುಟುಂಬಗಳಿಗೆ ಅಪಾರ ಸಂತೋಷ ತಂದಿದೆ. ಉದ್ಯೋಗ ನೇಮಕಾತಿ ಪತ್ರ ಪಡೆದ ಎಲ್ಲಾ ಯುವಕರು ಮತ್ತು ಅವರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ಅಭಿನಂದನೆಗಳನ್ನು ಸಲ್ಲಿಸಿದರು. ಅವರ ಜೀವನದ ಈ ಹೊಸ ಆರಂಭಕ್ಕಾಗಿ ಅವರು ಶುಭಾಶಯಗಳನ್ನು ತಿಳಿಸಿದರು.

ಹೊಸದಾಗಿ ನೇಮಕವಾದ ಯುವಕರಲ್ಲಿ ಉತ್ಸಾಹ, ಕಠಿಣ ಪರಿಶ್ರಮದ ಸಾಮರ್ಥ್ಯ ಮತ್ತು ಈಡೇರಿದ ಕನಸುಗಳಿಂದ ಹೊಸ ಆತ್ಮವಿಶ್ವಾಸ ಹುಟ್ಟಿದೆ. ಈ ಮನೋಭಾವವು ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ಉತ್ಸಾಹದೊಂದಿಗೆ ಸೇರಿಕೊಂಡಾಗ, ಅವರ ಯಶಸ್ಸು ವೈಯಕ್ತಿಕ ಸಾಧನೆಯನ್ನು ಮೀರುತ್ತದೆ, ಅದು ದೇಶಕ್ಕೆ ವಿಜಯೋತ್ಸವವಾಗುತ್ತದೆ ಎಂದು ಹೇಳಿದರು. ಇಂದಿನ ನೇಮಕಾತಿಗಳು ಕೇವಲ ಸರ್ಕಾರಿ ಉದ್ಯೋಗಗಳಾಗದೆ, ಬದಲಾಗಿ ರಾಷ್ಟ್ರ ನಿರ್ಮಾಣಕ್ಕೆ ಸಕ್ರಿಯವಾಗಿ ಕೊಡುಗೆ ನೀಡುವ ನಿಜವಾದ ಅವಕಾಶಗಳಾಗಿವೆ. ನೇಮಕವಾದ ಯುವ ಸಮುದಾಯ ಸಮಗ್ರತೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಾರೆ, ಭವಿಷ್ಯದ ಭಾರತಕ್ಕೆ ಉತ್ತಮ ವ್ಯವಸ್ಥೆಗಳನ್ನು ಸೃಷ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. 'ನಾಗರಿಕ್ ದೇವೋ ಭವ' ಎಂಬ ಮಂತ್ರವನ್ನು ಮರೆಯಬಾರದು. ಸೇವೆ ಮತ್ತು ಸಮರ್ಪಣಾ ಮನೋಭಾವವನ್ನು ಎತ್ತಿಹಿಡಿಯುವ ಮೂಲಕ ಕೆಲಸ ಮಾಡಬೇಕೆಂದು ಪ್ರಧಾನ ಮಂತ್ರಿ ಹೊಸ ನೇಮಕಾತಿ ಪತ್ರ ಪಡೆದ ಯುವಕರಿಗೆ ಮನವಿ ಮಾಡಿದರು.

 

"ಕಳೆದ 11 ವರ್ಷಗಳಿಂದ, ದೇಶವು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದೆ, ಈ ಪ್ರಯಾಣದಲ್ಲಿ ಯುವಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ". ಯುವ ಸಮುದಾಯದ ಸಬಲೀಕರಣವು ತಮ್ಮ ಸರ್ಕಾರಕ್ಕೆ ಪ್ರಮುಖ ಆದ್ಯತೆಯಾಗಿ ಉಳಿದಿದೆ. ಇತ್ತೀಚಿನ ದಿನಗಳಲ್ಲಿ ಈ ಮೇಳಗಳ ಮೂಲಕ 11 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ನೀಡಲಾಗಿದೆ, ಯುವ ಭಾರತೀಯರ ಆಕಾಂಕ್ಷೆಗಳನ್ನು ಪೂರೈಸಲು ರೋಜ್‌ಗಾರ್ ಮೇಳಗಳು ಪ್ರಬಲ ಮಾಧ್ಯಮವಾಗಿ ಮಾರ್ಪಟ್ಟಿವೆ. ಈ ಪ್ರಯತ್ನಗಳು ಸರ್ಕಾರಿ ಉದ್ಯೋಗಗಳಿಗೆ ಮಾತ್ರ ಸೀಮಿತವಾಗಿಲ್ಲ. 3.5 ಕೋಟಿ ಯುವಕರಿಗೆ ಉದ್ಯೋಗ ಒದಗಿಸುವ ಗುರಿಯೊಂದಿಗೆ ಸರ್ಕಾರ 'ಪಿಎಂ ವಿಕಸಿತ ಭಾರತ್ ರೋಜ್‌ಗಾರ್ ಯೋಜನೆ' ಪ್ರಾರಂಭಿಸಿದೆ. ಕೌಶಲ್ಯ ಭಾರತ ಮಿಷನ್‌ನಂತಹ ಉಪಕ್ರಮಗಳು ಯುವಕರನ್ನು ಅಗತ್ಯ ತರಬೇತಿಯೊಂದಿಗೆ ಸಜ್ಜುಗೊಳಿಸುತ್ತಿವೆ, ರಾಷ್ಟ್ರೀಯ ವೃತ್ತಿ ಸೇವೆಯಂತಹ ವೇದಿಕೆಗಳು ಅವರನ್ನು ಹೊಸ ಅವಕಾಶಗಳೊಂದಿಗೆ ಸಂಪರ್ಕಿಸುತ್ತಿವೆ. ಈ ವೇದಿಕೆಯ ಮೂಲಕ, 7 ಕೋಟಿಗೂ ಹೆಚ್ಚು ಖಾಲಿ ಹುದ್ದೆಗಳ ಮಾಹಿತಿಯನ್ನು ಈಗಾಗಲೇ ಯುವಕರೊಂದಿಗೆ ಹಂಚಿಕೊಳ್ಳಲಾಗಿದೆ ಎಂದರು.

ಯುವ ಜನರಿಗಾಗಿ ಒಂದು ಪ್ರಮುಖ ಉಪಕ್ರಮವನ್ನು ಪ್ರಧಾನ ಮಂತ್ರಿ ಇದೇ ಸಂದರ್ಭದಲ್ಲಿ  ಘೋಷಿಸಿದರು - ಇದು ಯುಪಿಎಸ್‌ಸಿಯ ಅಂತಿಮ ಪಟ್ಟಿಗೆ ತಲುಪಿದ ಆದರೆ ಆಯ್ಕೆಯಾಗದ ಅಭ್ಯರ್ಥಿಗಳಿಗೆ ಅವಕಾಶಗಳನ್ನು ನೀಡುತ್ತದೆ. ಖಾಸಗಿ ಮತ್ತು ಸಾರ್ವಜನಿಕ ಸಂಸ್ಥೆಗಳು ಈಗ ಈ ಪ್ರತಿಭಾನ್ವಿತ ವ್ಯಕ್ತಿಗಳೊಂದಿಗೆ ಪೋರ್ಟಲ್ ಮೂಲಕ ತೊಡಗಿಸಿಕೊಂಡಿರುವುದರಿಂದ ಅವರ ಪ್ರಯತ್ನಗಳು ವ್ಯರ್ಥವಾಗುವುದಿಲ್ಲ. ಹಾಗಾಗಿ, ಯುವ ಪ್ರತಿಭೆಯ ಈ ಅತ್ಯುತ್ತಮ ಬಳಕೆಯು ಭಾರತದ ಯುವ ಸಾಮರ್ಥ್ಯವನ್ನು ಜಗತ್ತಿಗೆ ಪ್ರದರ್ಶಿಸುತ್ತದೆ ಎಂದು ಶ್ರೀ ಮೋದಿ ತಿಳಿಸಿದರು.

 

ಜಿಎಸ್‌ಟಿ ಬಚತ್ ಉತ್ಸವದಿಂದ ಹಬ್ಬದ ಋತುವು ಚೈತನ್ಯಪೂರ್ಣವಾಗಿದೆ. ದೇಶಾದ್ಯಂತ  ಜಿಎಸ್‌ಟಿ ದರಗಳಲ್ಲಿ ಗಮನಾರ್ಹ ಕಡಿತವಾಗಿದೆ. ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳು ಉದ್ಯೋಗಾವಕಾಶಗಳನ್ನು ವಿಸ್ತರಿಸುತ್ತಿರುವುದರಿಂದ, ಈ ಸುಧಾರಣೆಗಳ ಪರಿಣಾಮವು ಗ್ರಾಹಕರ ಉಳಿತಾಯವನ್ನು ಮೀರಿದೆ. ದಿನನಿತ್ಯದ ವಸ್ತುಗಳು ಅಗ್ಗವಾದಾಗ, ಬೇಡಿಕೆ ಹೆಚ್ಚಾಗುತ್ತದೆ. ಹೆಚ್ಚಿದ ಬೇಡಿಕೆ ಉತ್ಪಾದನೆ ಮತ್ತು ಪೂರೈಕೆ ಸರಪಳಿಗಳನ್ನು ವೇಗಗೊಳಿಸುತ್ತದೆ.  ಹೆಚ್ಚಿನ ಕಾರ್ಖಾನೆ ಉತ್ಪಾದನೆಯು ಹೊಸ ಉದ್ಯೋಗಗಳ ಸೃಷ್ಟಿಗೆ ಕಾರಣವಾಗುತ್ತದೆ. ಆದ್ದರಿಂದ, ಜಿಎಸ್‌ಟಿ ಬಚತ್ ಉತ್ಸವವು ಉದ್ಯೋಗ ಉತ್ಸವವಾಗಿಯೂ ರೂಪಾಂತರಗೊಳ್ಳುತ್ತಿದೆ. ಧನ್ ತೇರಸ್ ಮತ್ತು ದೀಪಾವಳಿಯ ಸಮಯದಲ್ಲಿ ದಾಖಲೆಯ ಮಾರಾಟ ಕಂಡುಬಂದಿದೆ. ಈ ಹಿಂದಿನ ಎಲ್ಲಾ ಹೊಸ ದಾಖಲೆಗಳು ಮತ್ತು ಹಳೆಯ ದಾಖಲೆಗಳನ್ನು ಮೀರಿದೆ, ಇದು ಜಿಎಸ್‌ಟಿ ಸುಧಾರಣೆಗಳು ದೇಶದ ಆರ್ಥಿಕತೆಗೆ ಹೇಗೆ ಹೊಸ ಆವೇಗ ನೀಡಿವೆ ಎಂಬುದನ್ನು ತೋರಿಸುತ್ತಿದೆ. ಉತ್ಪಾದನೆ, ಸರಕು ಸಾಗಣೆ, ಪ್ಯಾಕೇಜಿಂಗ್ ಮತ್ತು ವಿತರಣೆಯಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿರುವ ಎಂಎಸ್‌ಎಂಇ ವಲಯ ಮತ್ತು ಚಿಲ್ಲರೆ ಅಥವಾ ಬಿಡಿ ವ್ಯಾಪಾರದ ಮೇಲೆ ಈ ಸುಧಾರಣೆಗಳಿ ಸಕಾರಾತ್ಮಕ ಪರಿಣಾಮಗಳನ್ನು ಬೀರುತ್ತಿವೆ ಎಂದರು.

"ಭಾರತವು ಪ್ರಸ್ತುತ ಹೆಚ್ಚಿನ ಯುವ ಸಮುದಾಯವನ್ನು ಹೊಂದಿರುವ ವಿಶ್ವದ ಅತ್ಯಂತ ಚಿರಯೌವ್ವನ ದೇಶವಾಗಿದೆ. ಭಾರತದ ಯುವಕರ ಬಲವು ದೇಶದ ಶ್ರೇಷ್ಠ ಆಸ್ತಿಗಳಲ್ಲಿ ಒಂದಾಗಿದೆ". ಈ ನಂಬಿಕೆ ಮತ್ತು ವಿಶ್ವಾಸವು ಯುವ ಭಾರತೀಯರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗುತ್ತಿರುವ ವಿದೇಶಾಂಗ ನೀತಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ರಾಷ್ಟ್ರದ ಪ್ರಗತಿಗೆ ಮಾರ್ಗದರ್ಶನ ನೀಡುತ್ತದೆ. ಭಾರತದ ರಾಜತಾಂತ್ರಿಕ ಮಾರ್ಗಗಳು ಮತ್ತು ಜಾಗತಿಕ ಒಪ್ಪಂದಗಳು ಯುವಜನರ ತರಬೇತಿ, ಕೌಶಲ್ಯವರ್ಧನೆ ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಅವಕಾಶಗಳನ್ನು ಸೇರಿಸಿದೆ. ಯುನೈಟೆಡ್ ಕಿಂಗ್‌ಡಮ್‌ ಪ್ರಧಾನ ಮಂತ್ರಿ ಅವರ ಇತ್ತೀಚಿನ ಭೇಟಿಯ ಸಮಯದಲ್ಲಿ, ಎರಡೂ ರಾಷ್ಟ್ರಗಳು ಕೃತಕ ಬುದ್ಧಿಮತ್ತೆ, ಹಣಕಾಸು ತಂತ್ರಜ್ಞಾನ ಮತ್ತು ಸ್ವಚ್ಛ ಇಂಧನದಂತಹ ಕ್ಷೇತ್ರಗಳಲ್ಲಿ ಹೂಡಿಕೆಗಳನ್ನು ಹೆಚ್ಚಿಸಲು ಒಪ್ಪಿಕೊಂಡಿವೆ. ಕೆಲವು ತಿಂಗಳ ಹಿಂದೆ ಭಾರತ ಮತ್ತು ಯುಕೆ ನಡುವೆ ಸಹಿ ಹಾಕಲಾದ ಮುಕ್ತ ವ್ಯಾಪಾರ ಒಪ್ಪಂದವು ಹೊಸ ಅವಕಾಶಗಳನ್ನು ತೆರೆಯುತ್ತದೆ. ಅದೇ ರೀತಿ, ಹಲವಾರು ಐರೋಪ್ಯ ರಾಷ್ಟ್ರಗಳೊಂದಿಗೆ ಹೂಡಿಕೆ ಪಾಲುದಾರಿಕೆಗಳು ಸಾವಿರಾರು ಹೊಸ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಬ್ರೆಜಿಲ್, ಸಿಂಗಾಪುರ, ಕೊರಿಯಾ ಮತ್ತು ಕೆನಡಾದಂತಹ ದೇಶಗಳೊಂದಿಗಿನ ಒಪ್ಪಂದಗಳು ಹೂಡಿಕೆಯನ್ನು ಹೆಚ್ಚಿಸುತ್ತವೆ, ನವೋದ್ಯಮಗಳು ಮತ್ತು ಎಂಎಸ್ಎಂಇಗಳನ್ನು ಬೆಂಬಲಿಸುತ್ತವೆ, ರಫ್ತುಗಳನ್ನು ಹೆಚ್ಚಿಸುತ್ತವೆ ಮತ್ತು ಜಾಗತಿಕ ಯೋಜನೆಗಳಲ್ಲಿ ಕೆಲಸ ಮಾಡಲು ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಮೋದಿ ತಿಳಿಸಿದರು.

 

ಇಂದು ಚರ್ಚಿಸಲಾಗುತ್ತಿರುವ ಯಶಸ್ಸುಗಳು ಮತ್ತು ದೃಷ್ಟಿಕೋನಗಳು ಮುಂಬರುವ ದಿನಗಳಲ್ಲಿ ಹೊಸದಾಗಿ ನೇಮಕವಾದ ಯುವಕರಿಂದ ಗಮನಾರ್ಹ ಕೊಡುಗೆಗಳನ್ನು ಪಡೆಯುತ್ತವೆ. ಅಭಿವೃದ್ಧಿ ಹೊಂದಿದ ಭಾರತದ ಗುರಿಯತ್ತ ನಿರಂತರ ಪ್ರಯತ್ನಗಳು ಅಗತ್ಯವಿವೆ. ಯುವ ಕರ್ಮಯೋಗಿಗಳು ಈ ಸಂಕಲ್ಪವನ್ನು ಫಲಪ್ರದವಾಗಿಸುವತ್ತ ಕೊಂಡೊಯ್ಯುತ್ತಾರೆ. ಈ ಪ್ರಯಾಣದಲ್ಲಿ 'ಐ-ಗಾಟ್ ಕರ್ಮಯೋಗಿ ಭಾರತ್ ವೇದಿಕೆ'ಯ ಉಪಯುಕ್ತತೆ ಹೆಚ್ಚಿದೆ. ಸುಮಾರು 1.5 ಕೋಟಿ ಸರ್ಕಾರಿ ನೌಕರರು ಈಗಾಗಲೇ ಅದರ ಮೂಲಕ ಕಲಿಯುತ್ತಿದ್ದಾರೆ. ಹೊಸ ನೇಮಕಾತಿ ಬಯಸುವವರು ಈ ವೇದಿಕೆಗೆ ಸೇರಬೇಕು. ಇದು ಹೊಸ ಕೆಲಸದ ಸಂಸ್ಕೃತಿ ಮತ್ತು ಉತ್ತಮ ಆಡಳಿತದ ಮನೋಭಾವವನ್ನು ತುಂಬುತ್ತದೆ. ಭಾರತದ ಭವಿಷ್ಯವೂ ರೂಪುಗೊಳ್ಳುತ್ತದೆ, ದೇಶದ ನಾಗರಿಕರ ಕನಸುಗಳು ನನಸಾಗುತ್ತವೆ ಎಂದು ಹೇಳಿದ ಪ್ರಧಾನ ಮಂತ್ರಿ, ಮತ್ತೊಮ್ಮೆ ಎಲ್ಲಾ ನೇಮಕಾತಿ ಪತ್ರ ಪಡೆದ ಯುವ ಸಮುದಾಯಕ್ಕೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
IRCTC disables 3cr user IDs, flags 6cr; scales up AI-based kitchen monitoring

Media Coverage

IRCTC disables 3cr user IDs, flags 6cr; scales up AI-based kitchen monitoring
NM on the go

Nm on the go

Always be the first to hear from the PM. Get the App Now!
...
Prime Minister lauds designation of Jai Prakash Narayan Bird Sanctuary as India's 100th Ramsar site
June 05, 2026

Prime Minister Shri Narendra Modi today expressed great happiness over India achieving a century of Ramsar sites, following the designation of the Jai Prakash Narayan Bird Sanctuary (Surha Tal) in Ballia, Uttar Pradesh, as the nation's 100th Ramsar site.

The Prime Minister noted that this wetland is exceptionally rich in avifaunal biodiversity, attracting numerous migratory and resident birds.
Shri Modi emphasized that this remarkable milestone clearly reflects India’s unwavering commitment to protecting its natural surroundings, particularly its vital wetlands.

The Prime Minister observed that over the years, efforts to conserve and rejuvenate wetlands have been significantly strengthened through greater community participation, science, innovation, and active awareness initiatives. He affirmed that these collective endeavours are instrumental in preserving biodiversity, securing ecological balance, and creating a greener future for coming generations.

The Prime Minister posted on X:

"A century as far as Ramsar sites are concerned!

Glad that the Jai Prakash Narayan Bird Sanctuary (Surha Tal) in Ballia, Uttar Pradesh has been designated as India’s 100th Ramsar site. This wetland is rich in avifaunal biodiversity, attracting several migratory and resident birds.

India’s unwavering commitment to protecting our natural surroundings and wetlands in particular is clearly reflected in this feat.

Over the years, efforts to conserve and rejuvenate wetlands have been strengthened through greater community participation, science, innovation and awareness initiatives. These endeavours are helping preserve biodiversity, secure ecological balance and create a greener future for coming generations."