ರಾಜ್ಯ ಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾರ್ಪಣೆ ಸಲ್ಲಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಕಳೆದ 5 ವರ್ಷಗಳಲ್ಲಿ ಸರ್ಕಾರ, ಉತ್ತಮ ಆಡಳಿತಕ್ಕೆ ಹೊಸ ಚಿಂತನೆಗಳು ಮತ್ತು ಕ್ರಮಗಳನ್ನು ಜಾರಿಗೆ ತಂದಿದೆ ಎಂದರು. ಡಿಜಿಟಲ್ ಇಂಡಿಯಾ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಮಂತ್ರಿಗಳು ಇದು ಆಡಳಿತದಲ್ಲಿ ಹೊಸ ವಿಧಾನಗಳು ಮತ್ತು ಹೊಸ ಆಲೋಚನೆಗಳಿಗೆ ಉತ್ತಮ ಉದಾಹರಣೆಯಾಗಿದೆ, 2014 ಕ್ಕೂ ಮೊದಲು ಕೇವಲ 59 ಗ್ರಾಮ ಪಂಚಾಯತ್ ಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ ಇತ್ತು ಆದರೆ ಕಳೆದ 5 ವರ್ಷಗಳಲ್ಲಿ 1.25 ಲಕ್ಷ ಪಂಚಾಯತ್ ಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ ಒದಗಿಸಲಾಗಿದೆ ಎಂದು ಹೇಳಿದರು.   

2014 ರಲ್ಲಿ ದೇಶದಲ್ಲಿ 80 ಸಾವಿರ ಸಾಮಾನ್ಯ ಸೇವಾ ಕೇಂದ್ರಗಳಿದ್ದವು ಆದರೆ ಇಂದು ಇವುಗಳ ಸಂಖ್ಯೆ 3 ಲಕ್ಷ 6 ಸಾವಿರಕ್ಕೇರಿದೆ ಎಂದೂ ಹೇಳಿದರು. ಈ ಕೇಂದ್ರಗಳಲ್ಲಿ ಸುಮಾರು 12 ಲಕ್ಷ ಗ್ರಾಮೀಣ ಯುವಜನತೆಗೆ ಎಲ್ಲ ಸರ್ಕಾರಿ ಸೇವೆಗಳ ಆನ್ ಲೈನ್ ಸಲ್ಲಿಕೆಯಾಗುತ್ತಿದೆ. 

ಭೀಮ್ ಆಪ್ ಜಾಗತಿಕವಾಗಿ ಒಂದು ಸುರಕ್ಷಿತ ಡಿಜಿಟಲ್ ವ್ಯವಹಾರದ ವೇದಿಕೆಯೆಂದು ಪರಿಗಣಿಸಲಾಗುತ್ತಿದೆ ಎಂದು ಪ್ರಧಾನ ಮಂತ್ರಿಗಳು ಹೇಳಿದರು. ಜನವರಿ ತಿಂಗಳಲ್ಲಿ ಭೀಮ್ ಆಪ್ ಮೂಲಕ ರೂ 2 ಲಕ್ಷ 16 ಸಾವಿರ ಕೋಟಿಗೂ ಹೆಚ್ಚು  ದಾಖಲೆಯ ವ್ಯವಹಾರವಾಗಿದೆ ಎಂದು ಅವರು ಹೇಳಿದರು. ರುಪೆ ಕಾರ್ಡ್ ಕೂಡಾ ಬಹಳಷ್ಟು ರಾಷ್ಟ್ರಗಳಲ್ಲಿ ಮಾನ್ಯತೆಯನ್ನು ಪಡೆಯುತ್ತಿದೆ ಎಂದು ಅವರು ತಿಳಿಸಿದರು.

ಜಲ್ ಜೀವನ್ ಮಿಷನ್

ಸರ್ಕಾರಿ ವಿಧಾನದ ಮತ್ತೊಂದು ನಿದರ್ಶನವೆಂದರೆ ಜಲ್ ಜೀವನ್ ಯೋಜನೆ ಎಂದು ಪ್ರಧಾನ ಮಂತ್ರಿ ಹೇಳಿದರು. ಪ್ರತಿ ಮನೆಗೂ ನೀರು ಸರಬರಾಜು ಪೈಪ್ ಅಳವಡಿಸುವುದೇ ಈ ಯೋಜನೆಯ ಗುರಿಯಾಗಿದೆ, ಜೊತೆಗೆ ಇದು ಸ್ಥಳೀಯ ಆಡಳಿತದ ಉತ್ತಮ ಉದಾಹರಣೆಯಾಗಿದೆ ಎಂದು ಅವರು ತಿಳಿಸಿದರು. 

ಈ ಯೋಜನೆಯನ್ನು ಕೇಂದ್ರ ಸರ್ಕಾರ ಆರಂಭಿಸಿದ್ದರೂ ಇದರ ನಿರ್ವಹಣೆ ಗ್ರಾಮ ಮಟ್ಟದಲ್ಲಿರುತ್ತದೆ. ಗ್ರಾಮ ಪಂಚಾಯ್ತಿಗಳು ಇದನ್ನು ಕಾರ್ಯರೂಪಕ್ಕೆ ತರುತ್ತವೆ, ಹಣಕಾಸು ನಿರ್ವಹಣೆ ಮಾಡುತ್ತವೆ ಮತ್ತು ಪೈಪ್ ಲೈನ್ ಅಳವಡಿಕೆ, ಟ್ಯಾಂಕ್ ಗಳ ನಿರ್ಮಾಣ ಇತ್ಯಾದಿಗಳಿಗೆ ಸಂಬಂಧಿಸಿದ ನಿರ್ಣಯಗಳನ್ನು ತೆಗೆದುಕೊಳ್ಳುತ್ತವೆ ಎಂದು ಅವರು ಹೇಳಿದರು.

 

ಸಹಕಾರಿ ಸಂಯುಕ್ತತೆಯ ಉತ್ತಮ ಉದಾಹರಣೆ : ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮ

ದೇಶದ ಸುಮಾರು 100 ಕ್ಕೂ  ಹೆಚ್ಚು ಮಹತ್ವಾಕಾಂಕ್ಷೆಯ ಜಿಲ್ಲೆಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಗಳು ಹುರುಪಿನಿಂದ ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಳಿದರು.  ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮಗಳು ಜಿಲ್ಲೆಯನ್ನೇ ತಮ್ಮ ಕಾರ್ಯಕ್ಷೇತ್ರವಾಗಿಟ್ಟುಕೊಂಡು ಹೊರಹೊಮ್ಮುತ್ತಿರುವುದು ಸಹಕಾರಿ ಸಂಯುಕ್ತತೆಯ ಉತ್ತಮ ಉದಾಹರಣೆಯಾಗಿದೆ ಎಂದು ಅವರು ತಿಳಿಸಿದರು. ಈ ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಬಡವರು, ಬುಡಕಟ್ಟು ಜನಾಂಗದವರ ಅಭಿವೃದ್ಧಿಗಾಗಿ ಸರ್ಕಾರ ಸರ್ವ ಪ್ರಯತ್ನ ಮಾಡುತ್ತಿದೆ ಎಂದು ಅವರು ಹೇಳಿದರು.

ಸಮಾಜದ ಎಲ್ಲ ವರ್ಗಗಳಿಗಾಗಿ ಸೂಕ್ಷ್ಮವಾಗಿ ಕಾರ್ಯ ನಿರ್ವಹಣೆ 

ಕಳೆದ 5 ವರ್ಷಗಳಲ್ಲಿ ದೇಶದ ಎಲ್ಲ ಬುಡಕಟ್ಟು ಯೋಧರನ್ನು ಗೌರವಿಸುವ ಕೆಲಸ ಮಾಡಲಾಗಿದೆ ಎಂದು ಪ್ರಧಾನ ಮಂತ್ರಿಗಳು ಹೇಳಿದರು. ದೇಶದೆಲ್ಲೆಡೆ ಸಂಗ್ರಹಾಲಯಗಳನ್ನು ನಿರ್ಮಿಸಲಾಗುತ್ತಿದೆ, ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಮತ್ತು ಬುಡಕಟ್ಟು ಕಲೆ ಹಾಗೂ ಸಾಹಿತ್ಯವನ್ನು ಡಿಜಿಟಲ್ ರೂಪಕ್ಕೆ ಬದಲಾಯಿಸಲಾಗುತ್ತಿದೆ. ಬುಡಕಟ್ಟು ಪ್ರದೇಶಗಳಲ್ಲಿರುವ ಕೌಶಲ್ಯಯುತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಏಕಲವ್ಯ ಮಾದರಿಯ ವಸತಿ ಶಾಲೆಗಳ ಸ್ಥಾಪನೆ ಮಾಡಲಾಗುತ್ತಿದೆ.

“ಇಷ್ಟೇ ಅಲ್ಲದೆ, ಅರಣ್ಯದಿಂದ ಹೆಚ್ಚಿನ ಆದಾಯ ಸಂಗ್ರಹಣೆಗೆ ಬುಡಕಟ್ಟು ಪ್ರದೇಶಗಳಲ್ಲಿ 3 ಸಾವಿರಕ್ಕೂ ಹೆಚ್ಚು ಅರಣ್ಯ ಸಂಪತ್ತು ಕೇಂದ್ರಗಳನ್ನು ತೆರೆಯಲಾಗಿದೆ. ಇದು 30 ಸಾವಿರ ಸ್ವಸಹಾಯ ಗುಂಪುಗಳನ್ನು ಒಳಗೊಳ್ಳಲಿದೆ. ಇವುಗಳಲ್ಲಿ 900 ಕೇಂದ್ರಗಳನ್ನು ಈಗಾಗಲೇ ಆರಂಭಿಸಲಾಗಿದ್ದು 2,5 ಲಕ್ಷಕ್ಕೂ ಹೆಚ್ಚು ಬುಡಕಟ್ಟು ಜನರು ಅವುಗಳೊಂದಿಗೆ ಜೊತೆಗೂಡಿದ್ದಾರೆ” ಎಂದು ಪ್ರಧಾನ ಮಂತ್ರಿಗಳು ಹೇಳಿದರು.  

ಮಹಿಳಾ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ

ಈ ಸರ್ಕಾರ  ಮಹಿಳಾ ಸಬಲೀಕರಣಕ್ಕಾಗಿ ಬಹಳಷ್ಟು ಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಧಾನಮಂತ್ರಿಗಳು ಹೇಳಿದರು. “ದೇಶದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಮಿಲಿಟರಿ ಶಾಲೆಯಲ್ಲಿ ಹೆಣ್ಣು ಮಕ್ಕಳ ಪ್ರವೇಶಾತಿಗೆ ಮಾನ್ಯತೆ ನೀಡಲಾಗಿದೆ. ಮಿಲಿಟರಿ ಪೋಲಿಸ್ ಪಡೆಯಲ್ಲಿ ಮಹಿಳಾ ಸಿಬ್ಬಂದಿ ನೇಮಕಾತಿ ಕೂಡಾ ಜಾರಿಯಲ್ಲಿದೆ” ಎಂದು ಪ್ರಧಾನ ಮಂತ್ರಿಗಳು ಹೇಳಿದರು.

ದೇಶದ ಮಹಿಳೆಯರ ಸುರಕ್ಷತೆಗಾಗಿ 600 ಕ್ಕೂ ಹೆಚ್ಚು ಒನ್ ಸ್ಟಾಪ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 6 ನೇ ತರಗತಿಯಿಂದ 12 ನೇ ತರಗತಿಯ ಮಕ್ಕಳಿಗೆ ಪ್ರತಿ ಶಾಲೆಯಲ್ಲೂ ಸ್ವಯಂ ರಕ್ಷಣಾ ತರಬೇತಿಯನ್ನು ನೀಡಲಾಗುತ್ತಿದೆ. ಲೈಂಗಿಕ ಕಿರುಕುಳ ನೀಡುವವರನ್ನು ಪತ್ತೆ ಹಚ್ಚಲು ಮತ್ತು ಅವರ ಮೇಲೆ ನಿಗಾವಹಿಸಲು ಒಂದು ರಾಷ್ಟ್ರೀಯ ದತ್ತಾಂಶ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಇದರ ಜೊತೆಗೆ ದೇಶದ ಪ್ರತಿ ಜಿಲ್ಲೆಯಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ಕೇಂದ್ರಗಳ ಸ್ಥಾಪನೆಯ ಯೋಜನೆ ಹಮ್ಮಿಕೊಳ್ಳಲಾಗಿದೆ. ಮಕ್ಕಳಲ್ಲಿ ಲೈಂಗಿಕ ಕಿರುಕುಳದ ಗಂಭೀರ ಪ್ರಕರಣಗಳನ್ನು ನಿಭಾಯಿಸಲು ಪೊಸ್ಕೊ ಕಾಯ್ದೆಗೆ ತಿದ್ದುಪಡಿ ಮಾಡಿ ಕಾಯ್ದೆಯ ವ್ಯಾಪ್ತಿಯನ್ನು ವಿಶಾಲಗೊಳಿಸಲಾಗಿದೆ. ಸೂಕ್ತ ಸಮಯಕ್ಕೆ ನ್ಯಾಯ ಒದಗಿಸಲೆಂದು ದೇಶಾದ್ಯಂತ ಸಾವಿರಕ್ಕೂ ಹೆಚ್ಚು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ.   

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s data centre boom: Mumbai cracks global top 15, Hyderabad pipeline set to surge 15x

Media Coverage

India’s data centre boom: Mumbai cracks global top 15, Hyderabad pipeline set to surge 15x
NM on the go

Nm on the go

Always be the first to hear from the PM. Get the App Now!
...
ಆಗಸ್ಟ್ 27ರಂದು 'ಖೇಲೋ ಇಂಡಿಯಾ' ಸಂವಾದದಲ್ಲಿ ಯುವಜನರನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ
August 26, 2026
'ಖೇಲೋ ಇಂಡಿಯಾ' ಸಂವಾದವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂಸೇವೆ, ಫಿಟ್‌ನೆಸ್‌ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ
'ಖೇಲೋ ಇಂಡಿಯಾ' ಸಂವಾದದ ಅಡಿಯಲ್ಲಿ ನಡೆಯುವ 'ಯುವ ಸಂವಾದ'ವು ಐದು ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸಲಿದೆ: ಕ್ರೀಡೆ, ಒಲಿಂಪಿಕ್ ಆಕಾಂಕ್ಷೆಗಳು, ಯುವ ನಾಯಕತ್ವ, 'ವಿಕಸಿತ ಭಾರತ' ಮತ್ತು 'ನಶಾ ಮುಕ್ತ ಯುವ' ಅಭಿಯಾನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 27ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಖೇಲೋ ಇಂಡಿಯಾ' ಸಂವಾದವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಯುವಕರಿಗೆ ಭಾರತದ ಕ್ರೀಡಾ ಪ್ರಯಾಣದಲ್ಲಿ ತೊಡಗಿಸಿಕೊಳ್ಳಲು, ಅವರ ಆಕಾಂಕ್ಷೆಗಳನ್ನು ಹಂಚಿಕೊಳ್ಳಲು ಮತ್ತು ಬಲವಾದ ಯುವಕರ ನೇತೃತ್ವದ 'ವಿಕಸಿತ ಭಾರತ'ಕ್ಕಾಗಿ ತಮ್ಮ ವಿಚಾರಗಳನ್ನು ನೀಡಲು ಸಹಾಯ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ.

2026ರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ 'ಮೇರಾ ಯುವ ಭಾರತ್' (ಮೈ ಭಾರತ್‌) ಆಯೋಜಿಸಿರುವ ಈ ಕಾರ್ಯಕ್ರಮವು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಪ್ರತಿಯೊಂದು ಜಿಲ್ಲೆಯ ಎರಡು ಕಾಲೇಜುಗಳಲ್ಲಿ ಯುವಕರ ಭಾಗವಹಿಸುವಿಕೆಯೊಂದಿಗೆ ದೇಶಾದ್ಯಂತ ನಡೆಯಲಿದೆ. ಯುವಕರ ಆಕಾಂಕ್ಷೆಗಳನ್ನು ರಾಷ್ಟ್ರೀಯ ಅಭಿವೃದ್ಧಿ ಕಾರ್ಯಸೂಚಿಯ ಕೇಂದ್ರಭಾಗದಲ್ಲಿ ಇರಿಸಿಕೊಂಡು ಸದೃಢ, ಶಿಸ್ತುಬದ್ಧ ಮತ್ತು ಕ್ರೀಡಾ ರಾಷ್ಟ್ರವನ್ನು ನಿರ್ಮಿಸುವ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ರಾಷ್ಟ್ರವ್ಯಾಪಿ ನಡೆಯುವ 'ಖೇಲೋ ಇಂಡಿಯಾ ಸಂವಾದ'ವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂ ಸೇವೆ, ಫಿಟ್ನೆಸ್ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ. ಭಾರತದ ಯುವ ಮತ್ತು ಕ್ರೀಡಾ ಪರಿಸರ ವ್ಯವಸ್ಥೆಯ ಕುರಿತಾದ ನಿರಂತರ ಸಂವಾದದಲ್ಲಿ ಯುವಕರ ಆಲೋಚನೆಗಳು ಮತ್ತು ದೃಷ್ಟಿಕೋನಗಳಿಗೆ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಜೊತೆಗೆ, ದೇಶದ ಕ್ರೀಡಾ ಮಹತ್ವಾಕಾಂಕ್ಷೆಗಳೊಂದಿಗೆ ಯುವಕರು ತೊಡಗಿಸಿಕೊಳ್ಳಲು ಇದು ನೇರ ಮಾರ್ಗವನ್ನು ಒದಗಿಸುತ್ತದೆ.

ರಾಷ್ಟ್ರೀಯ ಕಾರ್ಯಕ್ರಮದ ನಂತರ ಯುವ ಭಾಗಿದಾರರು, 'ಮೈ ಭಾರತ್' ಸ್ವಯಂಸೇವಕರು, ಸ್ಥಳೀಯ ಕ್ರೀಡಾಪಟುಗಳು ಮತ್ತು ಜನಪ್ರತಿನಿಧಿಗಳನ್ನು ಒಳಗೊಂಡ ಸ್ಥಳೀಯ ಸಂವಾದಗಳು ನಡೆಯಲಿವೆ. ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಯುವಕರು ಮತ್ತು ಪ್ರಮುಖ ಭಾರತೀಯ ಅಥ್ಲೀಟ್‌ಗಳು ಹಾಗೂ ಪದಕ ವಿಜೇತರ ನಡುವಿನ ನೇರ ಸಂವಾದವು ಈ ಉಪಕ್ರಮದ ಪ್ರಮುಖ ಲಕ್ಷಣವಾಗಿದೆ. 'ಯುವ ಸಂವಾದ'ವು ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದು, ಇದರಲ್ಲಿ ಯುವ ಭಾಗಿದಾರರನ್ನು ತಮ್ಮ ಸ್ವಂತ ಆಲೋಚನೆಗಳು, ದೃಷ್ಟಿಕೋನಗಳು ಮತ್ತು ಆಕಾಂಕ್ಷೆಗಳನ್ನು ವ್ಯಕ್ತಪಡಿಸಲು ಆಹ್ವಾನಿಸಲಾಗುತ್ತದೆ. ಈ ಸಂವಾದವನ್ನು ಐದು ವಿಷಯಗಳ ಸುತ್ತ ರಚಿಸಲಾಗಿದೆ:

  • ಉತ್ತಮ ಸೌಲಭ್ಯಗಳು, ತರಬೇತಿ, ಕ್ರೀಡಾ ವಿಜ್ಞಾನ ಮತ್ತು ಎಲ್ಲರನ್ನೂ ಒಳಗೊಂ ಭಾಗವಹಿಸುವಿಕೆಯ ಮೂಲಕ ಭಾರತದ ಕ್ರೀಡಾ ಪರಿಸರ ವ್ಯವಸ್ಥೆಯನ್ನು ಸುಧಾರಿಸುವುದು;
  • ವೈಜ್ಞಾನಿಕ ಪ್ರತಿಭಾ ಶೋಧನೆ, ಪಾರದರ್ಶಕ ಆಯ್ಕೆ ಮತ್ತು ದೀರ್ಘಕಾಲೀನ ಕ್ರೀಡಾಪಟು ಅಭಿವೃದ್ಧಿಯ ಮೂಲಕ 2036ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಗೆ ಪ್ರತಿಭೆಗಳನ್ನು ಪೋಷಿಸುವುದು;
  • ಆಡಳಿತ ವೇದಿಕೆಗಳು ಮತ್ತು 'ಮೈ ಭಾರತ್' ನೇತೃತ್ವದ ಸ್ವಯಂಸೇವಕ ಸೇವೆಯ ಮೂಲಕ ಯುವ ನಾಯಕರನ್ನು ಸೃಷ್ಟಿಸುವುದು;
  • ನಾಗರಿಕ ಪ್ರಜ್ಞೆ, ಭವಿಷ್ಯಕ್ಕೆ ಸಿದ್ಧವಾದ ಕೌಶಲ್ಯಗಳು ಮತ್ತು ರಚನಾತ್ಮಕ ಸ್ವಯಂಸೇವಕ ಸೇವೆಯನ್ನು ಬೆಳೆಸುವ ಮೂಲಕ ವಿಕಸಿತ ಭಾರತಕ್ಕಾಗಿ ಯುವಕರನ್ನು ಸಬಲೀಕರಣಗೊಳಿಸುವುದು;
  • ಮಾದಕ ವ್ಯಸನದ ವಿರುದ್ಧ ಹೋರಾಡಲು ಕ್ರೀಡೆ ಮತ್ತು ಸಮಾನಮನಸ್ಕ ಜಾಲಗಳನ್ನು ಬಳಸಿಕೊಳ್ಳುವ 'ನಶಾ ಮುಕ್ತ ಯುವ ಆಂದೋಲ'ನವನ್ನು ಉತ್ತೇಜಿಸುವುದು. ಇದು 2026ರ ಆಗಸ್ಟ್ 2ರಂದು ಪ್ರಾರಂಭಿಸಲಾದ ಪ್ರಧಾನಮಂತ್ರಿಯವರ 100 ವಾರಗಳ ರಾಷ್ಟ್ರವ್ಯಾಪಿ ಅಭಿಯಾನದ ಅಡಿಯಲ್ಲಿ ಸಾಪ್ತಾಹಿಕ 'ಜನ ಭಾಗೀದಾರಿ' ಚಟುವಟಿಕೆಗಳಿಂದ ಬೆಂಬಲಿತವಾಗಿದೆ.