ಭಾರತ ಮತ್ತು ರಷ್ಯಾ ನಡುವಿನ ಸ್ನೇಹವು ಕಾಲದ ಪರೀಕ್ಷೆಯಾಗಿದೆ: ಪ್ರಧಾನಿ ಮೋದಿ
ಸಾಂಕ್ರಾಮಿಕ ರೋಗವು ನಮ್ಮ ದ್ವಿಪಕ್ಷೀಯ ಸಹಕಾರದಲ್ಲಿ ಆರೋಗ್ಯ ಮತ್ತು ಫಾರ್ಮಾ ಕ್ಷೇತ್ರಗಳ ಮಹತ್ವವನ್ನು ಎತ್ತಿ ತೋರಿಸಿದೆ: ವ್ಲಾಡಿವೋಸ್ಟಾಕ್‌ನಲ್ಲಿನ ಪೂರ್ವ ಆರ್ಥಿಕ ವೇದಿಕೆಯಲ್ಲಿ ಪ್ರಧಾನಿ
ಭಾರತ - ರಷ್ಯಾ ಇಂಧನ ಪಾಲುದಾರಿಕೆಯು ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಸ್ಥಿರತೆಯನ್ನು ತರಲು ಸಹಾಯ ಮಾಡುತ್ತದೆ: ಪ್ರಧಾನಿ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವ್ಲಾಡಿವೋಸ್ಟಾಕ್‌ನಲ್ಲಿ 2021ರ ಸೆಪ್ಟೆಂಬರ್ 3ರಂದು ನಡೆದ 6ನೇ ʻಪೂರ್ವ ಆರ್ಥಿಕ ವೇದಿಕೆʼಯ (ಇಇಎಫ್) ಸರ್ವಸದಸ್ಯರ ಸಭೆಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದರು. 2019ರಲ್ಲಿ 5ನೇ ʻಇಇಎಫ್ʼಗೆ ಪ್ರಧಾನ ಮಂತ್ರಿ ಮೋದಿ ಅವರು ಮುಖ್ಯ ಅತಿಥಿಯಾಗಿದ್ದರು ಮತ್ತು ಇಂತಹ ಅವಕಾಶ ಪಡೆದ ಭಾರತದ ಮೊದಲ ಪ್ರಧಾನಿ ಅವರಾಗಿದ್ದಾರೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.

ರಷ್ಯಾದ ದೂರ ಪ್ರಾಚ್ಯದ ಅಭಿವೃದ್ಧಿಗಾಗಿ ಅಧ್ಯಕ್ಷ ಪುಟಿನ್ ಅವರ ದೃಷ್ಟಿಕೋನವನ್ನು ಪ್ರಧಾನಿ ಶ್ಲಾಘಿಸಿದರು. ಈ ನಿಟ್ಟಿನಲ್ಲಿ ಭಾರತ ತನ್ನ "ಆಕ್ಟ್‌ ಈಸ್ಟ್‌ ಪಾಲಿಸಿʼʼಯ ಭಾಗವಾಗಿ ರಷ್ಯಾದ ವಿಶ್ವಾಸಾರ್ಹ ಪಾಲುದಾರನಾಗಿ ಉಳಿಯುವ ಬದ್ಧತೆಯನ್ನು ಪುನರುಚ್ಚರಿಸಿದರು. ರಷ್ಯಾದ ದೂರಪ್ರಾಚ್ಯದ ಅಭಿವೃದ್ಧಿಯಲ್ಲಿ ಭಾರತ ಮತ್ತು ರಷ್ಯಾದ ನೈಸರ್ಗಿಕ ಪೂರಕತೆಗಳನ್ನು ಅವರು ಒತ್ತಿ ಹೇಳಿದರು. 

'ವಿಶೇಷ ಮತ್ತು ಆದ್ಯತೆಯ ವ್ಯೂಹಾತ್ಮಕ ಪಾಲುದಾರಿಕೆ'ಗೆ ಅನುಗುಣವಾಗಿ ಎರಡೂ ದೇಶಗಳ ನಡುವೆ ಹೆಚ್ಚಿನ ಆರ್ಥಿಕ ಮತ್ತು ವಾಣಿಜ್ಯ ಒಪ್ಪಂದಗಳ ಮಹತ್ವವನ್ನು ಪ್ರಧಾನಿ ಒತ್ತಿ ಹೇಳಿದರು. ಸಾಂಕ್ರಾಮಿಕದ ಸಮಯದಲ್ಲಿ ಸಹಕಾರದ ಪ್ರಮುಖ ಕ್ಷೇತ್ರಗಳಾಗಿ ಹೊರಹೊಮ್ಮಿರುವ ಆರೋಗ್ಯ ಮತ್ತು ಔಷಧ ವಲಯಗಳ ಮಹತ್ವವನ್ನು ಅವರು ಒತ್ತಿ ಹೇಳಿದರು. ವಜ್ರ, ಕೋಕಿಂಗ್ ಕಲ್ಲಿದ್ದಲು, ಉಕ್ಕು, ಮರಮಟ್ಟು ಸೇರಿದಂತೆ ಆರ್ಥಿಕ ಸಹಕಾರದ ಇತರ ಸಂಭಾವ್ಯ ಕ್ಷೇತ್ರಗಳನ್ನು ಅವರು ಉಲ್ಲೇಖಿಸಿದರು. ʻಇಇಎಫ್-2019ʼಕ್ಕೆ ಭಾರತೀಯ ರಾಜ್ಯಗಳ ಮುಖ್ಯಮಂತ್ರಿಗಳು ಭೇಟಿ ನೀಡಿದ್ದನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ರಷ್ಯಾದ ದೂರ ಪ್ರಾಚ್ಯದ 11 ಪ್ರದೇಶಗಳ ರಾಜ್ಯಪಾಲರಿಗೆ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದರು. 

ಕೋವಿಡ್-19 ಸಾಂಕ್ರಾಮಿಕದ ಸವಾಲುಗಳ ಹೊರತಾಗಿಯೂ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ನೇತೃತ್ವದಲ್ಲಿ ಪ್ರಮುಖ ಭಾರತೀಯ ತೈಲ ಮತ್ತು ಅನಿಲ ಕಂಪನಿಗಳನ್ನು ಒಳಗೊಂಡ ಭಾರತೀಯ ನಿಯೋಗವು ʻಇಇಎಫ್ʼ ಅಡಿಯಲ್ಲಿ ಭಾರತ-ರಷ್ಯಾ ವ್ಯಾಪಾರ ಮಾತುಕತೆಗೆ ಹಾಜರಾಗುತ್ತಿದೆ. ʻಇಇಎಫ್ʼ ನೇಪಥ್ಯದಲ್ಲಿ ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಮತ್ತು ರಷ್ಯಾದ ಸಖಾ-ಯಾಕುಟಿಯಾ ಪ್ರಾಂತ್ಯದ ರಾಜ್ಯಪಾಲರ ನಡುವೆ ಸೆಪ್ಟೆಂಬರ್ 2 ರಂದು ಆನ್‌ಲೈನ್ ಸಭೆ ನಡೆಯಿತು. ವಿವಿಧ ವಲಯಗಳ ಹೆಸರಾಂತ ಭಾರತೀಯ ಕಂಪನಿಗಳ 50ಕ್ಕೂ ಹೆಚ್ಚು ಪ್ರತಿನಿಧಿಗಳು ಆನ್‌ಲೈನ್ ಮೂಲಕ ಭಾಗವಹಿಸಲಿದ್ದಾರೆ.

 

 

 

 

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How ODOP is helping Pratapgarh turn its amla into a bigger business

Media Coverage

How ODOP is helping Pratapgarh turn its amla into a bigger business
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 1 ಸೆಪ್ಟೆಂಬರ್ 2026
September 01, 2026

#ModiHaiTohMumkinHai: Economy, Diplomacy and Atmanirbhar Milestones in One Social-Media Sweep