ಉಭಯ ನಾಯಕರು ಪ್ರಗತಿಯ ಪರಿಶೀಲನೆ ಮತ್ತು ದ್ವಿಪಕ್ಷೀಯ ರ್ಯತಂತ್ರದ ಪಾಲುದಾರಿಕೆಯ ಭವಿಷ್ಯದ ಕುರಿತು ಚರ್ಚಿಸಿದರು
ಪಶ್ಚಿಮ ಏಷ್ಯಾದ ಪರಿಸ್ಥಿತಿ, ವಿಶೇಷವಾಗಿ ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕ ಜೀವಹಾನಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು
ಆ ಪ್ರದೇಶದಲ್ಲಿ ಶಾಂತಿ, ಭದ್ರತೆ ಮತ್ತು ಸ್ಥಿರತೆಗಾಗಿ ಒಟ್ಟಾಗಿ ಕೆಲಸ ಮಾಡಲು ಸಹಮತಿ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದರು.

ಸೆಪ್ಟೆಂಬರ್ 2023 ರಲ್ಲಿ ಯುವರಾಜರು ಭಾರತಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಉಭಯ ನಾಯಕರು ಕಾರ್ಯತಂತ್ರದ ದ್ವಿಪಕ್ಷೀಯ ಪಾಲುದಾರಿಕೆಯ ಪ್ರಗತಿಯನ್ನು ಪರಿಶೀಲಿಸಿದರು. ಇಬ್ಬರೂ ಭವಿಷ್ಯದ ದ್ವಿಪಕ್ಷೀಯ ಪಾಲುದಾರಿಕೆ ಬಗ್ಗೆಯೂ ಚರ್ಚಿಸಿದರು.

ಪಶ್ಚಿಮ ಏಷ್ಯಾದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ನಾಯಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ನಾಯಕರು ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕ ಜೀವಹಾನಿಯ ಬಗ್ಗೆ ಆಳವಾದ ಕಳವಳವನ್ನು ವ್ಯಕ್ತಪಡಿಸಿದರು.

ಇಸ್ರೇಲ್ ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲದ ಮತ್ತು ತತ್ವಬದ್ಧ ನಿಲುವನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿಯವರು, ಸಂತ್ರಸ್ತ ಜನರಿಗೆ ನಿರಂತರ ಮಾನವೀಯ ನೆರವು ನೀಡುವಂತೆ ಕರೆ ನೀಡಿದರು. ಆ ಪ್ರದೇಶದಲ್ಲಿ ಶಾಂತಿ, ಭದ್ರತೆ ಮತ್ತು ಸ್ಥಿರತೆಗಾಗಿ ಒಟ್ಟಾಗಿ ಕೆಲಸ ಮಾಡಲು ಉಭಯ ನಾಯಕರು ಸಹಮತಿಯನ್ನು ವ್ಯಕ್ತಪಡಿಸಿದರು. ಕಡಲ ಭದ್ರತೆ ಮತ್ತು ನೌಕಾಯಾನದ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಉಭಯ ನಾಯಕರು ಒತ್ತಿ ಹೇಳಿದರು.

ಎಕ್ಸ್ಪೋ 2030 ಮತ್ತು ಫಿಫಾ  ಫುಟ್ಬಾಲ್ ವಿಶ್ವಕಪ್ 2034 ರ ಆತಿಥೇಯರಾಗಿ ಆಯ್ಕೆಯಾದ ಸೌದಿ ಅರೇಬಿಯಾವನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.

ಉಭಯ ನಾಯಕರು ನಿತ್ಯ ಸಂಪರ್ಕದಲ್ಲಿರವಲು ಒಪ್ಪಿಕೊಂಡರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Wed in India’ Initiative Fuels The Rise Of NRI And Expat Destination Weddings In India

Media Coverage

'Wed in India’ Initiative Fuels The Rise Of NRI And Expat Destination Weddings In India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಡಿಸೆಂಬರ್ 2025
December 15, 2025

Visionary Leadership: PM Modi's Era of Railways, AI, and Cultural Renaissance