ಪಶ್ಚಿಮ ಏಷ್ಯಾದಲ್ಲಿನ ಸಂದಿಗ್ಧ ಪರಿಸ್ಥಿತಿ ಹಾಗೂ ಇಸ್ರೇಲ್‌- ಹಮಾಸ್‌ ನಡುವಿನ ಸಂಘರ್ಷ ಕುರಿತಂತೆ ವಿಚಾರ ವಿನಿಮಯ ನಡೆಸಿದ ಉಭಯ ನಾಯಕರು
ಹಿಂಸಾಚಾರವನ್ನು ತಡೆಗಟ್ಟುವ ಜತೆಗೆ ಮಾನವೀಯ ನೆಲೆಯಲ್ಲಿ ನೆರವು, ಶಾಂತಿ ಮತ್ತು ಸುವ್ಯವಸ್ಥೆಯ ಮರುಸ್ಥಾಪನೆಯ ಮುಂದುವರಿಕೆಯ ಅಗತ್ಯವನ್ನು ಒತ್ತಿ ಹೇಳಿದ ನಾಯಕರು
ಚಬಹಾರ್ ಬಂದರು ವಿಚಾರ ಸೇರಿದಂತೆ ದ್ವಿಪಕ್ಷೀಯ ಸಹಕಾರದಲ್ಲಿ ಪ್ರಗತಿಯನ್ನು ಸ್ವಾಗತಿಸಿದ ನಾಯಕರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಸೆಯ್ಯದ್ ಇಬ್ರಾಹಿಂ ರೈಸಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.

ಪಶ್ಚಿಮ ಏಷ್ಯಾದಲ್ಲಿನ ಸಂದಿಗ್ಧ ಪರಿಸ್ಥಿತಿ ಹಾಗೂ ಇಸ್ರೇಲ್‌- ಹಮಾಸ್‌ ನಡುವಿನ ಸಂಘರ್ಷ ಕುರಿತಂತೆ ಉಭಯ ನಾಯಕರು ವಿಚಾರ ವಿನಿಮಯ ನಡೆಸಿದರು. 

ಭಯೋತ್ಪಾದಕ ಕೃತ್ಯಗಳು, ಹಿಂಸಾಚಾರ ಹಾಗೂ ನಾಗರಿಕರ ಮಾರಣ ಹೋಮದ ಬಗ್ಗೆ ಪ್ರಧಾನ ಮಂತ್ರಿಗಳು ತೀವ್ರ ಕಳವಳ ವ್ಯಕ್ತಪಡಿಸಿದರು. ಹಾಗೆಯೇ  ಇಸ್ರೇಲ್-ಪ್ಯಾಲೆಸ್ಟೈನ್‌ ವಿಷಯದಲ್ಲಿ ಭಾರತದ ದೀರ್ಘಕಾಲಿಕ ಮತ್ತು ಸ್ಥಿರವಾದ ನಿಲುವನ್ನು ಅವರು ಪುನರುಚ್ಚರಿಸಿದರು.

ಇದೇ ವೇಳೆ ಅಧ್ಯಕ್ಷ ರೈಸಿ ಅವರು ಸಹ ಪರಿಸ್ಥಿತಿಯನ್ನು ತಮ್ಮದೇ ಆದ ರೀತಿಯಲ್ಲಿ ವಿಶ್ಲೇಷಿಸಿದರು.
ಉಭಯ ನಾಯಕರು ಹಿಂಸಾಚಾರ ಇನ್ನಷ್ಟು ಉಲ್ಬಣವಾಗುವುದನ್ನು ತಡೆಗಟ್ಟುವ ಅಗತ್ಯತೆ, ಮಾನವೀಯ ನೆಲೆಯಲ್ಲಿ ನೆರವು ಹಾಗೂ ಶಾಂತಿ ಮತ್ತು ಸುವ್ಯವಸ್ಥೆಯ ಮರುಸ್ಥಾಪನೆ ಖಾತರಿಯ ಅಗತ್ಯವನ್ನು ಒತ್ತಿ ಹೇಳಿದರು.

ಹಾಗೆಯೇ ಉಭಯ ನಾಯಕರು ಬಹುಮುಖಿ ದ್ವಿಪಕ್ಷೀಯ ಸಹಕಾರದಲ್ಲಿ ಪ್ರಗತಿ ಪರಿಶೀಲನೆ ಜತೆಗೆ ಧನಾತ್ಮಕ ಬೆಳವಣಿಗೆ ಬಗ್ಗೆಯೂ ಮೌಲ್ಯಮಾಪನ ನಡೆಸಿದರು. ಜತೆಗೆ ಪ್ರಾದೇಶಿಕ ಸಂಪರ್ಕ ವೃದ್ಧಿ ದೃಷ್ಟಿಯಿಂದ ಇರಾನ್‌ನ ಚಬಹಾರ್ ಬಂದರಿನ ವಿಚಾರಕ್ಕೆ ನೀಡಲಾಗಿರುವ ಆದ್ಯತೆಯನ್ನು ಅವರು ಸ್ವಾಗತಿಸಿದರು.

ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸುಸ್ಥಿರತೆಯನ್ನು ಕಾಯ್ದುಕೊಳ್ಳುವಲ್ಲಿ ಪರಸ್ಪರ ಗಮನ ನೀಡಿ ಸಂಪರ್ಕದಲ್ಲಿರಲು ಉಭಯ ನಾಯಕರು ಸಹಮತ ವ್ಯಕ್ತಪಡಿಸಿದರು

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Why Abrogation Of Article 370 Was A Strategic Necessity For India

Media Coverage

Why Abrogation Of Article 370 Was A Strategic Necessity For India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 05 ಆಗಸ್ಟ್ 2026
August 05, 2026

Viksit Bharat in Action: Inclusive, Green, and Globally Competitive Under PM Modi