"ಐಎನ್‌ಎಸ್ ವಿಕ್ರಾಂತ್ ಅನ್ನು ಭಾರತದ ಪ್ರಮುಖ ಕೈಗಾರಿಕಾ ಸಂಸ್ಥೆಗಳು ಮತ್ತು 100 ಕ್ಕೂ ಹೆಚ್ಚು ಎಂಎಸ್‌ಎಂಇಗಳು ಒದಗಿಸಿದ ದೇಶೀಯ ಉಪಕರಣಗಳು ಮತ್ತು ಯಂತ್ರೋಪಕರಣಗಳನ್ನು ಬಳಸಿ ನಿರ್ಮಿಸಲಾಗಿದೆ"
"ಇದು ಭಾರತದ ಕಡಲ ಇತಿಹಾಸದಲ್ಲಿ ನಿರ್ಮಿಸಲಾದ ಅತಿದೊಡ್ಡ ಹಡಗು ಮತ್ತು ಅತ್ಯಾಧುನಿಕ ಯಾಂತ್ರೀಕೃತ ವೈಶಿಷ್ಟ್ಯಗಳನ್ನು ಹೊಂದಿದೆ"
"ಗತಕಾಲದ ವಸಾಹತುಶಾಹಿ ಕುರುಹು ತೊಡೆದುಹಾಕುವ ಹೊಸ ನೌಕಾ ಧ್ವಜವನ್ನು ಪ್ರಧಾನಿಯವರು ಅನಾವರಣಗೊಳಿಸಿದರು, ಈ ಧ್ವಜವನ್ನು ಛತ್ರಪತಿ ಶಿವಾಜಿಯವರಿಗೆ ಸಮರ್ಪಿಸಿದರು"
“ಐಎನ್‌ಎಸ್ ವಿಕ್ರಾಂತ್ ಕೇವಲ ಯುದ್ಧನೌಕೆಯಲ್ಲ. ಇದು 21 ನೇ ಶತಮಾನದ ಭಾರತದ ಕಠಿಣ ಪರಿಶ್ರಮ, ಪ್ರತಿಭೆ, ಪ್ರಭಾವ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ”
"ಐಎನ್‌ಎಸ್ ವಿಕ್ರಾಂತ್ ಸ್ವಾವಲಂಬಿ ಭಾರತದ ಪ್ರತಿಬಿಂಬವಾಗಿದೆ"
" ಐಎನ್‌ಎಸ್ ವಿಕ್ರಾಂತ್ ದೇಶೀಯ ಸಾಮರ್ಥ್ಯ, ದೇಶೀಯ ಸಂಪನ್ಮೂಲಗಳು ಮತ್ತು ದೇಶೀಯ ಕೌಶಲ್ಯಗಳ ಸಂಕೇತವಾಗಿದೆ"
"ಇದುವರೆಗೂ ಭಾರತೀಯ ನೌಕಾಪಡೆಯ ಧ್ವಜದಲ್ಲಿ ಗುಲಾಮಗಿರಿಯ ಗುರುತು ಉಳಿದಿತ್ತು. ಆದರೆ ಇಂದಿನಿಂದ ಛತ್ರಪತಿ ಶಿವಾಜಿಯಿಂದ ಪ್ರೇರಿತವಾಗಿರುವ ಹೊಸ ನೌಕಾ ಧ್ವಜವು ಸಮುದ್ರದಲ್ಲಿ ಮತ್ತು ಆಕಾಶದಲ್ಲಿ ಹಾರಾಡಲಿದೆ”
“ನೌಕಾಪಡೆಯ ಅನೇಕ ಮಹಿಳಾ ಸೈನಿಕರು ವಿಕ್ರಾಂತ್‌ನಲ್ಲಿ ಕೆಲಸ ನಿರ್ವಹಿಸಲಿದ್ದಾರೆ".

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್  ಕಾರ್ಯಾರಂಭಕ್ಕೆ  ಚಾಲನೆ ನೀಡಿದರು. ಈ ಸಂದರ್ಭದಲ್ಲಿ, ಗತಕಾಲದ ವಸಾಹತುಶಾಹಿ ಕುರುಹನ್ನು ತೊಡೆದುಹಾಕುವ ಮತ್ತು ಶ್ರೀಮಂತ ಭಾರತೀಯ ಕಡಲ ಪರಂಪರೆಗೆ ಸರಿಹೊಂದುವ ನೂತನ ನೌಕಾ ಧ್ವಜವನ್ನು (ನಿಶಾನ್) ಪ್ರಧಾನ ಮಂತ್ರಿಯವರು ಅನಾವರಣಗೊಳಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಇಂದು, ಕೇರಳದ ಕರಾವಳಿಯಲ್ಲಿ, ಪ್ರತಿಯೊಬ್ಬ ಭಾರತೀಯನೂ ಹೊಸ ಭವಿಷ್ಯದ ಸೂರ್ಯೋದಯಕ್ಕೆ ಸಾಕ್ಷಿಯಾಗುತ್ತಿದ್ದಾನೆ. ಐಎನ್‌ಎಸ್ ವಿಕ್ರಾಂತ್‌ನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ವಿಶ್ವದ ದಿಗಂತದಲ್ಲಿ ಭಾರತದ ಉದಯೋನ್ಮುಖ ಶಕ್ತಿಯ ದ್ಯೋತಕವಾಗಿದೆ. ಸ್ವಾತಂತ್ರ್ಯ ಹೋರಾಟಗಾರರು ಕನಸು ಕಂಡಿದ್ದ ಸಮರ್ಥ ಮತ್ತು ಬಲಿಷ್ಠ ಭಾರತವನ್ನು ಇಂದು ನಾವು ಕಾಣುತ್ತಿದ್ದೇವೆ ಎಂದು ಹೇಳಿದರು. “ವಿಕ್ರಾಂತ್ ಬೃಹತ್ತಾಗಿದೆ, ಅಗಾಧವಾಗಿದೆ ಮತ್ತು ವಿಶಾಲವಾಗಿದೆ. ವಿಕ್ರಾಂತ್ ವಿಶಿಷ್ಟವಾಗಿದೆ ಮತ್ತು ವಿಶೇಷವಾಗಿದೆ. ವಿಕ್ರಾಂತ್ ಕೇವಲ ಯುದ್ಧನೌಕೆಯಲ್ಲ. ಇದು 21ನೇ ಶತಮಾನದಲ್ಲಿ ಭಾರತದ ಕಠಿಣ ಪರಿಶ್ರಮ, ಪ್ರತಿಭೆ, ಪ್ರಭಾವ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ. ಗುರಿಗಳು ದೂರವಾಗಿದ್ದರೆ, ಪ್ರಯಾಣಗಳು ಸುದೀರ್ಘವಾಗಿರುತ್ತವೆ, ಸಾಗರ ಮತ್ತು ಸವಾಲುಗಳಿಗೆ ಅಂತ್ಯವೆಂಬುದು ಇರುವುದಿಲ್ಲ – ಇದಕ್ಕೆ ಭಾರತದ ಉತ್ತರ ವಿಕ್ರಾಂತ್. ಆಜಾದಿ ಕಾ ಅಮೃತ ಮಹೋತ್ಸವದ ಅನುಪಮ ಅಮೃತವೆಂದರೆ ವಿಕ್ರಾಂತ್. ವಿಕ್ರಾಂತ್ ಸ್ವಾವಲಂಬಿ ಭಾರತದ ವಿಶಿಷ್ಟ ಪ್ರತಿಬಿಂಬವಾಗಿದೆ.” ಎಂದು ಪ್ರಧಾನಿ ಹೇಳಿದರು.

ರಾಷ್ಟ್ರದ ಹೊಸ ಮನಸ್ಥಿತಿಯ ಕುರಿತು ಮಾತನಾಡಿದ ಪ್ರಧಾನಮಂತ್ರಿಯವರು, ಇಂದಿನ ಭಾರತಕ್ಕೆ ಯಾವುದೇ ಸವಾಲು ಸಹ ತುಂಬಾ ಕಷ್ಟಕರವಲ್ಲ. ಇಂದು, ಭಾರತವು ದೇಶೀಯ ತಂತ್ರಜ್ಞಾನದೊಂದಿಗೆ ಇಂತಹ ಬೃಹತ್ ವಿಮಾನವಾಹಕ ನೌಕೆಯನ್ನು ನಿರ್ಮಿಸುವ ವಿಶ್ವದ ರಾಷ್ಟ್ರಗಳ ಸಾಲಿಗೆ ಸೇರಿಕೊಂಡಿದೆ. ಇಂದು ಐಎನ್‌ಎಸ್ ವಿಕ್ರಾಂತ್ ದೇಶದಲ್ಲಿ ಹೊಸ ಆತ್ಮವಿಶ್ವಾಸವನ್ನು ತುಂಬಿದೆ ಮತ್ತು ದೇಶದಲ್ಲಿ ಹೊಸ ವಿಶ್ವಾಸವನ್ನು ಮೂಡಿಸಿದೆ ಎಂದರು. ನೌಕಾಪಡೆ, ಕೊಚ್ಚಿನ್ ಶಿಪ್‌ಯಾರ್ಡ್‌ನ ಎಂಜಿನಿಯರ್‌ಗಳು, ವಿಜ್ಞಾನಿಗಳು ಮತ್ತು ವಿಶೇಷವಾಗಿ ಈ ಯೋಜನೆಯಲ್ಲಿ ಕೆಲಸ ಮಾಡಿದ ಕಾರ್ಮಿಕರ ಕೊಡುಗೆಯನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು. ಓಣಂನ ಶುಭ ಸಂದರ್ಭದಲ್ಲಿ ಇದು ಇನ್ನಷ್ಟು ಸಂತೋಷವನ್ನು ಹೆಚ್ಚಿಸಿದೆ ಎಂದು ಅವರು ಹೇಳಿದರು.

ಐಎನ್‌ಎಸ್ ವಿಕ್ರಾಂತ್‌ನ ಪ್ರತಿಯೊಂದು ಭಾಗವೂ ತನ್ನದೇ ಆದ ಅರ್ಹತೆ, ಶಕ್ತಿ, ಮತ್ತು ಅಭಿವೃದ್ಧಿ ಪಯಣವನ್ನು ಹೊಂದಿದೆ. ಇದು ದೇಶೀಯ ಸಾಮರ್ಥ್ಯ, ದೇಶೀಯ ಸಂಪನ್ಮೂಲಗಳು ಮತ್ತು ದೇಶೀಯ ಕೌಶಲ್ಯಗಳ ಸಂಕೇತವಾಗಿದೆ. ಇದರ ವಾಯುನೆಲೆಯಲ್ಲಿ ಸ್ಥಾಪಿಸಲಾದ ಉಕ್ಕು ಸಹ ದೇಶೀಯವಾದುದು, ಇದನ್ನು ಡಿ ಆರ್ ಡಿ ಒ  ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ ಮತ್ತು ಭಾರತೀಯ ಕಂಪನಿಗಳು ನಿರ್ಮಿಸಿವೆ ಎಂದು ಅವರು ಹೇಳಿದರು. ನೌಕೆಯ ಅಗಾಧತೆಯ ಬಗ್ಗೆ ವಿವರಿಸಿದ ಪ್ರಧಾನಿ, ಇದೊಂದು ತೇಲುವ ನಗರವಿದ್ದಂತೆ ಎಂದರು. ಇದು 5000 ಮನೆಗಳಿಗೆ ಸಾಕಾಗುವಷ್ಟು ವಿದ್ಯುತ್ ಉತ್ಪಾದಿಸುತ್ತದೆ ಮತ್ತು ಇದರಲ್ಲಿ ಬಳಸಿರುವ ವೈರಿಂಗ್ ಕೊಚ್ಚಿಯಿಂದ ಕಾಶಿಯವರೆಗೆ ತಲುಪುತ್ತದೆ ಎಂದು ಅವರು ಹೇಳಿದರು. ಐಎನ್‌ಎಸ್ ವಿಕ್ರಾಂತ್ ತಾವು ಕೆಂಪು ಕೋಟೆಯಿಂದ ಘೋಷಿಸಿದ ಪಂಚಪ್ರಾಣಗಳ ಜೀವಂತ ಸಾಕಾರವಾಗಿದೆ ಎಂದು ಪ್ರಧಾನಿ ಹೇಳಿದರು.

ಭಾರತದ ಕಡಲ ಪರಂಪರೆ ಮತ್ತು ನೌಕಾ ಸಾಮರ್ಥ್ಯಗಳ ಬಗ್ಗೆ ಮಾತನಾಡಿದ ಪ್ರಧಾನಿಯವರು, ಛತ್ರಪತಿ ಶಿವಾಜಿ ಮಹಾರಾಜರು ಈ ಸಮುದ್ರ ಶಕ್ತಿಯ ಬಲದ ಮೇಲೆ ನೌಕಾಪಡೆಯನ್ನು ನಿರ್ಮಿಸಿದರು, ಇದರಿಂದ ಅವರು ತಮ್ಮ ಶತ್ರುಗಳನ್ನು ಹಿಮ್ಮೆಟ್ಟಿಸಿದರು. ಬ್ರಿಟಿಷರು ಭಾರತಕ್ಕೆ ಬಂದಾಗ, ಅವರು ಭಾರತೀಯ ಹಡಗುಗಳ ಬಲ ಮತ್ತು ಅವುಗಳ ಮೂಲಕ ನಡೆಯುತ್ತಿದ್ದ ವ್ಯಾಪರವನ್ನು ಕಂಡು ಹೆದರಿದರು. ಆದ್ದರಿಂದ ಅವರು ಭಾರತದ ಸಮುದ್ರ ಶಕ್ತಿಯ ಬಲವನ್ನು ಮುರಿಯಲು ನಿರ್ಧರಿಸಿದರು. ಆ ಸಮಯದಲ್ಲಿ ಬ್ರಿಟಿಷ್ ಸಂಸತ್ತಿನಲ್ಲಿ ಕಾನೂನನ್ನು ಜಾರಿಗೊಳಿಸುವ ಮೂಲಕ ಭಾರತೀಯ ಹಡಗುಗಳು ಮತ್ತು ವ್ಯಾಪಾರಿಗಳ ಮೇಲೆ ಹೇಗೆ ಕಠಿಣ ನಿರ್ಬಂಧಗಳನ್ನು ವಿಧಿಸಲಾಯಿತು ಎಂಬುದಕ್ಕೆ ಇತಿಹಾಸವು ಸಾಕ್ಷಿಯಾಗಿದೆ ಎಂದು ಪ್ರಧಾನಿ ಹೇಳಿದರು.

ಇಂದು ಸೆಪ್ಟೆಂಬರ್ 2, 2022 ರ ಐತಿಹಾಸಿಕ ದಿನವಾಗಿದೆ. ಭಾರತವು ಗುಲಾಮಗಿರಿಯ ಕುರುಹನ್ನು, ಗುಲಾಮಗಿರಿಯ ಹೊರೆಯನ್ನು ತೆಗೆದುಹಾಕಿದೆ ಎಂದು ಪ್ರಧಾನಿ ಹೇಳಿದರು. ಭಾರತೀಯ ನೌಕಾಪಡೆಗೆ ಇಂದಿನಿಂದ ಹೊಸ ಧ್ವಜ ಸಿಕ್ಕಿದೆ. ಇಲ್ಲಿಯವರೆಗೆ ಭಾರತೀಯ ನೌಕಾಪಡೆಯ ಧ್ವಜದಲ್ಲಿ ಗುಲಾಮಗಿರಿಯ ಗುರುತು ಉಳಿದಿತ್ತು. ಆದರೆ ಇಂದಿನಿಂದ ಛತ್ರಪತಿ ಶಿವಾಜಿಯಿಂದ ಪ್ರೇರಿತವಾದ ನೌಕಾಪಡೆಯ ನೂತನ ಧ್ವಜವು ಸಮುದ್ರದಲ್ಲಿ ಹಾಗೂ ಆಕಾಶದಲ್ಲಿ ಹಾರಾಡಲಿದೆ ಎಂದು ಅವರು ಹೇಳಿದರು.

ವಿಕ್ರಾಂತ್ ನಮ್ಮ ಕಡಲ ವಲಯವನ್ನು ರಕ್ಷಿಸಲು ಇಳಿದಾಗ, ನೌಕಾಪಡೆಯ ಅನೇಕ ಮಹಿಳಾ ಸೈನಿಕರು ಸಹ ಇಲ್ಲಿ ನೆಲೆಸುತ್ತಾರೆ ಎಂದು ಪ್ರಧಾನಿ ಹೇಳಿದರು.  ಸಾಗರದ ಅಗಾಧ ಶಕ್ತಿ, ಅಪರಿಮಿತ ಸ್ತ್ರೀ ಶಕ್ತಿಯು ನವ ಭಾರತದ ಅತ್ಯುನ್ನತ ಗುರುತಾಗುತ್ತಿದೆ. ಇದೀಗ ಭಾರತೀಯ ನೌಕಾಪಡೆಯು ತನ್ನ ಎಲ್ಲಾ ಶಾಖೆಗಳನ್ನು ಮಹಿಳೆಯರಿಗಾಗಿ ಮುಕ್ತಗೊಳಿಸಲು ನಿರ್ಧರಿಸಿದೆ. ನಿರ್ಬಂಧಗಳನ್ನು ಈಗ ತೆಗೆದುಹಾಕಲಾಗುತ್ತಿದೆ. ದೈತ್ಯ ಅಲೆಗಳಿಗೆ ಯಾವುದೇ ಗಡಿಗಳಿಲ್ಲದಂತೆಯೇ, ಭಾರತದ ಹೆಣ್ಣುಮಕ್ಕಳಿಗೂ ಸಹ ಯಾವುದೇ ಗಡಿ ಅಥವಾ ನಿರ್ಬಂಧಗಳಿರುವುದಿಲ್ಲ ಎಂದು ಅವರು ಹೇಳಿದರು.

ಹನಿ ಹನಿ ನೀರು ಸೇರಿ ವಿಶಾಲ ಸಾಗರವಾಗುವಂತೆ ಭಾರತದ ಪ್ರತಿಯೊಬ್ಬ ಪ್ರಜೆಯೂ 'ಲೋಕಲ್ ಫಾರ್ ವೋಕಲ್' ಎಂಬ ಮಂತ್ರವನ್ನು ಪಾಲಿಸಿದರೆ, ದೇಶವು ಸ್ವಾವಲಂಬಿಯಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದ ಪ್ರಧಾನಿಯವರು, ಈ ಸ್ವಾತಂತ್ರ್ಯ ದಿನದಂದು ದೇಶೀಯ ಫಿರಂಗಿಗಳ  ಮೂಲಕ ನೀಡಿದ ಗೌರವ ವಂದನೆಯನ್ನು ಉಲ್ಲೇಖಿಸಿದರು. 

ಬದಲಾಗುತ್ತಿರುವ ಭೌಗೋಳಿಕ-ಕಾರ್ಯತಂತ್ರದ ಪರಿಸ್ಥಿತಿಯ ಕುರಿತು ಮಾತನಾಡಿದ ಪ್ರಧಾನಿಯವರು, ಈ ಹಿಂದೆ ಇಂಡೋ-ಪೆಸಿಫಿಕ್ ಪ್ರದೇಶ ಮತ್ತು ಹಿಂದೂ ಮಹಾಸಾಗರದಲ್ಲಿ ಭದ್ರತಾ ಕಾಳಜಿಗಳನ್ನು ನಿರ್ಲಕ್ಷಿಸಲಾಗಿತ್ತು ಎಂದು ಹೇಳಿದರು. ಆದರೆ, ಇಂದು ಈ ಪ್ರದೇಶವು ನಮಗೆ ದೇಶದ ಪ್ರಮುಖ ರಕ್ಷಣಾ ಆದ್ಯತೆಯಾಗಿದೆ. ಅದಕ್ಕಾಗಿಯೇ ನಾವು ನೌಕಾಪಡೆಗೆ ಬಜೆಟ್ ಅನ್ನು ಹೆಚ್ಚಿಸುವುದರಿಂದ ಅದರ ಸಾಮರ್ಥ್ಯವನ್ನು ಹೆಚ್ಚಿಸುವವರೆಗೆ ಪ್ರತಿಯೊಂದು ದಿಕ್ಕಿನಲ್ಲೂ ಕೆಲಸ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು. ಬಲಿಷ್ಠ ಭಾರತ ಶಾಂತಿಯುತ ಮತ್ತು ಸುರಕ್ಷಿತ ಜಗತ್ತಿಗೆ ದಾರಿ ಮಾಡಿಕೊಡಲಿದೆ ಎಂದು ಪ್ರಧಾನಿ ಹೇಳಿದರು.

ಕೇರಳ ರಾಜ್ಯಪಾಲ ಶ್ರೀ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್. ಕೇಂದ್ರ ಸಚಿವರಾದ ಶ್ರೀ ರಾಜನಾಥ್ ಸಿಂಗ್, ಶ್ರೀ ಸರ್ಬಾನಂದ ಸೋನೋವಾಲ್, ಶ್ರೀ ವಿ ಮುರಳೀಧರನ್, ಶ್ರೀ ಅಜಯ್ ಭಟ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಶ್ರೀ ಅಜಿತ್ ದೋವಲ್, ನೌಕಾಪಡೆಯ ಮುಖ್ಯಸ್ಥ ಶ್ರೀ ಆರ್ ಹರಿ ಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಐಎನ್‌ಎಸ್ ವಿಕ್ರಾಂತ್

ಐಎನ್‌ಎಸ್ ವಿಕ್ರಾಂತ್ ಅನ್ನು ಭಾರತೀಯ ನೌಕಾಪಡೆಯ ಯುದ್ಧನೌಕೆ ವಿನ್ಯಾಸ ಬ್ಯೂರೋ (ಡಬ್ಲ್ಯುಡಿಬಿ) ವಿನ್ಯಾಸಗೊಳಿಸಿದೆ ಮತ್ತು ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯದ ಸಾರ್ವಜನಿಕ ವಲಯದ  ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನಿರ್ಮಿಸಿದೆ, ವಿಕ್ರಾಂತ್ ಅನ್ನು ಅತ್ಯಾಧುನಿಕ ಯಾಂತ್ರೀಕೃತ ವೈಶಿಷ್ಟ್ಯಗಳೊಂದಿಗೆ ನಿರ್ಮಿಸಲಾಗಿದೆ ಮತ್ತು ಭಾರತದ ಕಡಲ ಇತಿಹಾಸದಲ್ಲಿ ನಿರ್ಮಿಸಲಾದ ಅತಿದೊಡ್ಡ ಹಡಗು ಎನಿಸಿಕೊಂಡಿದೆ.

1971 ರ ಯುದ್ಧದಲ್ಲಿ ಪ್ರಮುಖ ಪಾತ್ರ ವಹಿಸಿದ ಭಾರತದ ಮೊದಲ ವಿಮಾನವಾಹಕ ನೌಕೆಯ ಹೆಸರನ್ನು ಈ ಸ್ವದೇಶಿ ವಿಮಾನವಾಹಕ ನೌಕೆಗೆ ಇಡಲಾಗಿದೆ. ಇದು ದೇಶದ ಪ್ರಮುಖ ಕೈಗಾರಿಕಾ ಸಂಸ್ಥೆಗಳು ಮತ್ತು 100 ಕ್ಕೂ ಹೆಚ್ಚು ಎಂ ಎಸ್ ಎಂ ಇ ಗಳು ಒದಗಿಸಿರುವ ದೊಡ್ಡ ಸಂಖ್ಯೆಯ ದೇಶೀಯ ಉಪಕರಣಗಳು ಮತ್ತು ಯಂತ್ರೋಪಕರಣಗಳನ್ನು ಹೊಂದಿದೆ, ವಿಕ್ರಾಂತ್ ಕಾರ್ಯಾರಂಭದೊಂದಿಗೆ, ಭಾರತವು ಎರಡು ಕಾರ್ಯಾಚರಣೆಯ ವಿಮಾನವಾಹಕ ನೌಕೆಗಳನ್ನು ಹೊಂದಿರುತ್ತದೆ, ಇದು ರಾಷ್ಟ್ರದ ಕಡಲ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ.

ಈ ಸಂದರ್ಭದಲ್ಲಿ, ವಸಾಹತುಶಾಹಿ ಕುರುಹನ್ನು ತೊಡೆದುಹಾಕುವ ಮತ್ತು ಶ್ರೀಮಂತ ಭಾರತೀಯ ಕಡಲ ಪರಂಪರೆಗೆ ಸರಿಹೊಂದುವ ಹೊಸ ನೌಕಾ ಧ್ವಜವನ್ನು (ನಿಶಾನ್) ಪ್ರಧಾನ ಮಂತ್ರಿಯವರು ಅನಾವರಣಗೊಳಿಸಿದರು.

 

 

 

 

 

 

 

 

 

 

 

 

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Jo khelega woh khilega, always cheer for Bharat: PM Modi meets India's CWG medallists

Media Coverage

Jo khelega woh khilega, always cheer for Bharat: PM Modi meets India's CWG medallists
NM on the go

Nm on the go

Always be the first to hear from the PM. Get the App Now!
...
You have not just increased the number of medals, you have prepared an entire generation: PM Modi to CWG Champions
August 10, 2026

प्रधानमंत्री – मेरे यहां, मुझे यहां लगभग 12-13 साल हो गए इसी मकान में, अगर मैंने regularly और हर बार किसी को रिसिव किया है, किसी को मैं मिला हूं, तो खिलाड़ी हैं। पिछले 10-12 साल हो गए, आप लोगों के पुरुषार्थ के कारण, भारत को लगातार विजय दिलाने के आपके प्रयासों के कारण और उत्तरोत्तर सफलता में नई ऊंचाईयां पार करने की परंपरा के कारण, जो काम शायद हम स्कूलों में जाकर कहें कि नहीं नहीं भई खेलना चाहिए, ये करना चाहिए, वो काम स्कूलों में जाकर के हम कर सकते थे, उससे ज्यादा आपका मेडल उनको inspire करता है।

प्रधानमंत्री – तुमने मुझे वादा किया था पिछली बार कि तुम्हारी दोनों बेटियां खिलाड़ी बन जाएंगी?

खिलाड़ी - हाँ जी अभी वे उमर की छोटी हैं, अगले कॉमनवेल्थ में एक घर में तीन मेडल लाकर दिखाएंगी।

प्रधानमंत्री – पक्का।

खिलाड़ी – हाँ जी।

खिलाड़ी – जब मैं दौड़ रहा था, जब मेरा इवेंट था 29 को, तो उस दिन गुरुपूर्णिमा थी, तो उस दिन मेरे गुरू को मैंने एक गिफ्ट दे दिया।

प्रधानमंत्री – बड़ी शान बढ़ाई आपने। इतनी आंसू टपक रहे थे, मुझे लगता है कि आंसू के हर बूंद से जैसे गोल्ड मेडल टपक रहा है।

खिलाड़ी – मैं बहुत ज्यादा खुशी थी, इमोशनल भी थे उसी दिन, खुशी ज्यादा था और मैं इसलिए रोई थी कि मेरा पेरिस आलंपिक में मेरा 1 Kg में मेडल रह गई थी और एक प्लेयर्स की लाइफ में क्या क्या हमको फेस करना पड़ता है। तो ये 4 साल के अंदर में कितना क्या क्या कुछ मैंने फेस किया था, हर टाइम injury ही चल रहे थे और family problem, वो सब हो रहा था। तो बहुत मुश्किल से मैं ये 4 साल फेस किया था। तो वो सब जब पोडियम में जब मैं खड़ी थी सर और हमारी जो फ्लैग ऊपर जाते हैं और हमारे नेशनल एंथम जब बजते हैं तो सर हम रुक नहीं सकते सर, अपना आप आंसू निकलते हैं।

प्रधानमंत्री – बहुत बहुत बढ़िया

प्रधानमंत्री – आपके इस अचीवमेंट को सिर्फ आपका अचीवमेंट मानता हूं, ऐसा नहीं है, ये आपका विजय आने वाली पीढ़ियों के लिए बहुत बड़ी प्रेरणा बन जाता है।

खिलाड़ी – सब डर रहे थे हमसे कि इंडिया के साथ फाइट आ गई, अब तो हम पहली फाइट ही हार जायेंगे, हमारा मेडल भी नहीं आयेगा।

प्रधानमंत्री – यानी मान के चलते हैं।

खिलाड़ी – हाँ सर।

प्रधानमंत्री – क्या हुआ, वो restaurant वालों से झगड़ा कर रही थी?

खिलाड़ी – हम लोगों का जो इतना अच्छा परफॉर्मेंस था, लास्ट डे था और सब जीत के गए थे और पूरा इंडिया के लोग थे। तो थोड़ा सा मुझे बुरा लग रहा। तो मैंने उनको अच्छे से बोला रिक्वेस्ट किया था सर, फिर उन्होंने मान भी लिया, अभी चेंज भी हो गया सर।

प्रधानमंत्री – इस विजय की परिस्थिति खुशी, आनंद, अपने साथियों के साथ और गेम पूरे हो चुके हैं। तो हसी मजाक मस्ती का मूड ऐसे समय उस मैप पर नजर जाना और उसको रजिस्टर करना और तुरंत सिर्फ मेडल लेते समय देश खड़ा हो जाता है ऐसा नहीं, भीतर से देश का भाव मैं सच बताता हूँ ये वीडियो सामान्य नहीं है आपका, लंबे समय तक लोगों को याद रहेगा। ये बॉक्सिंग वालों से भी दुनिया के खिलाड़ी अब डरने लगे हैं।

खिलाड़ी – जरूर सर, पुरे सभी डरे हुए थे। एक के बाद एक गोल्ड मेडल गोल्ड मेडल आ रहे थे और मतलब पूरा लास्ट में ऐसे धमाका जैसा हो गया बिल्कुल। जिस तरीके से हम लोगों को सपोर्ट मिल रहा है, हमें बैक टू बैक कंपटीशन मिल रहा है वो एक बहुत बड़ी बात है और हमारे जितने भी यंग एथलीट है वो लोग सभी जैसे खेलो इंडिया स्कीम से आए हुए हैं और ये एक बहुत बड़ा changes ला रहा है पूरे स्पोर्ट्स में ही।

प्रधानमंत्री – अगर आप लोग खेलो इंडिया की प्रतिष्ठा बढ़ाते हैं और प्रतिष्ठा सिर्फ वहां जाकर के रिबिन काटने से नहीं होगी। आप वैसे ही खेलेंगे जैसे एक छोटा विद्यार्थी, एक छोटा नौजवान, छोटा खिलाड़ी खेलता है। यह बहुत बड़ा कंट्रीब्यूशन करेगा। क्योंकि अभी तो हमें बहुत आगे जाना है, बहुत मेडल लाना है। कारगिल विजय दिवस पर किसकी विजय हुई थी?

खिलाड़ी – उस दिन कारगिल डे था वैसे और जिस दिन मैंने पाकिस्तान के साथ फाइट किया था सर, वो उसी दिन का था। तो मैं एक इंडियन आर्मी से हूं, तो मैंने उस दिन मैं पहले से बहुत वो था कि सर पाकिस्तान को हराना है। तो मैंने वो पाकिस्तान एक तरफ मैंने 5-0 से हराया, तो मैंने हमारा इंडियन आर्मी का कारगिल हीरोज़ को मैंने डेडिकेट किया किया था सर।

प्रधानमंत्री – आपको यह याद रहना और आप स्वयं फौज से हैं तो, मैं जरूर मानता हूं कि देश के वीर जवानों को आपने जो भाव प्रकट किया ना कि, मैं कारगिल के विजेताओं को मेरा मेडल समर्पित करता हूं। उसने उस विजय पर चार चांद लगा दिए और जिसको पराजित करना था उसी को किया आपने।

खिलाड़ी – वो पाकिस्तान की बात चल रही है, मुझे किस्सा याद आ गया सर। 2015 वर्ल्ड मिलिट्री गेम थे और मेरी पाकिस्तान के साथ पहली फाइट आ गई थी और वर्ल्ड मिलिट्री गेम थे तो मिलिट्री वाले के फोन आए कि भई पाकिस्तान से नहीं हारना है। तो फिर मैं फर्स्ट राउंड 4-1 से जीत गया। सेकंड राउंड 3-2 से जीत गया, पर दोनों के सर लग गए आपस में, तो दोनों के लग गए कट और फाइट तो मैं जीत गया।

प्रधानमंत्री – हाँ

खिलाड़ी – उसके बाद फिर दोनों चले गए हॉस्पिटल में टांके लगवाने के लिए। फिर 2014 में आप फर्स्ट टाइम प्रधानमंत्री जी बने थे और जो हमारे साथ आर्मी का कोच गया हुआ था उसका नाम नरेंद्र राणा था और फिर वो कई देर तक सोच के मेरे को बोला कि भाईजान एक बात बोलूं, मैं हां बोलो, बोला भाईजान आपका नाम नरेंद्र है। आपके कोच का नाम नरेंद्र है, आपके प्रधानमंत्री का नाम नरेंद्र है, तो मुझे नरेंद्र नाम से नफरत हो गई है।

प्रधानमंत्री – सिर्फ आपने मेडल की संख्या बढ़ाई ऐसा नहीं है। आपने एक पीढ़ी को तैयार किया।

खिलाड़ी – मेरे मन में भी धक-धक धक-धक हो रहा है सर।

प्रधानमंत्री – आप चिंता मत कीजिए।

खिलाड़ी – पर..

प्रधानमंत्री – आप चाहें तो आपको बोलने में भी मेडल मिलने वाला है।

खिलाड़ी – मेरे फ्रेंड सर्कल में किसी ने बोला था कि मैं उनको कुछ बोलती थी भई तुम्हारे अच्छे के लिए तुम करो। तो अक्सर मुझे वो बोलते थे कि तू के मोदी ते मिल रही है?

प्रधानमंत्री – हाँ

खिलाड़ी – हरियाणवी में बोल देते हैं सर कि क्या तू मोदी से मिली हुई है, कि तेरी बात माने। तो आज मैं आपसे मिली हूं सर। मैं उनको बोल पाऊंगी कि हां मैं मोदी जी से मिली हूं।

खिलाड़ी – कॉमनवेंल्थ गेम्स में मैंने सिल्वर मेडल जीता, फिर मैंने क्रेडिट साहब को दिया, सपना तो था एक बार मेडल जीत के लेके आने के लिए, बट ट्रेनिंग का सेंटर नहीं था, मैंने SAI आने के बाद मैं बहुत ट्रेनिंग करके मेडल जीत पा रहा, इसलिए बहुत खुशी से मैंने सर को क्रेडिट दिया था क्योंकि बहुत इंप्रूव हुआ।

प्रधानमंत्री – मेरे लिए बहुत बड़ा सम्मान का विषय है, मेहनत आपने की और मुझे याद किया, मैं आपका बहुत आभारी हूं दोस्त।

प्रधानमंत्री – वाराणसी में खेल तुम प्रैक्टिस कर रही थी ना?

खिलाड़ी – जी सर।

प्रधानमंत्री – कैसा बना है स्टेडियम?

खिलाड़ी – सर अच्छा बना है, वहां पर मैं 10-12 दिन के लिए ट्रेनिंग करने गई थी, क्योंकि मैं मंदिर गई थी तो वहां पर ही ट्रेनिंग करके आई थी। और मैं वहां पे मतलब सेटल भी होना चाहती हूं क्योंकि मुझे काशी विश्वनाथ बहुत अच्छा लगता है सर।

प्रधानमंत्री – भोपाल में ट्रेनिंग कर रही थी ना?

खिलाड़ी – जी सर।

प्रधानमंत्री – तो उज्जैन जाते थे कि नहीं?

खिलाड़ी – जी सर उज्जैन भी गई थी सर।

प्रधानमंत्री – अच्छा महाकाल के पास भी गई।

खिलाड़ी – जी सर।

प्रधानमंत्री – काशी विश्वनाथ के पास हो आई एक बार।

खिलाड़ी – जी सर।

प्रधानमंत्री – सावन महीना तो अभी है।

खिलाड़ी – वहां घर जाके फिर उसके बाद जाऊंगी सर।

प्रधानमंत्री – ठीक है।

खिलाड़ी – साई ने भी सर बहुत सपोर्ट किया है मुझे। इसके कारण ही मैं यहां तक पहुंची हूं सर। और मैं खेलो इंडिया स्कीम में भी थी 2018 में जो फर्स्ट खेलो इंडिया हुआ था, उसमें मेरा सिल्वर मेडल था, वहां पे भी मैंने आपको देखा था ओपनिंग सेरेमनी में, तो उसमें मेरा मेडल था, तो मेरे को स्कीम भी मिल गया और मैं यहां तक पहुंची हूं सर।

प्रधानमंत्री – स्पोर्ट्स व्यवस्था एक बात है, लेकिन देश मेडल तब प्राप्त करता है जब देश में स्पोर्ट्स कल्चर बनता है। दोस्तों आपने बहुत बड़ा काम किया है। देश का नाम रोशन किया है। आपको मैं बहुत बधाई देता हूं और आप विश्वास कीजिए आगे भी आप विजयी होंगे और फिर से एक बार यहीं पर हम मिलेंगे। बहुत-बहुत धन्यवाद। बहुत-बहुत शुभकामनाएं।

प्रधानमंत्री – ये लगातार तीसरी बार देश को मेडल दिलवाया है।

खिलाड़ी – थैंक यू सर।

प्रधानमंत्री – बहुत आशीर्वाद बेटा।

खिलाड़ी – और थैंक यू सो मच मैं सर के हाथ से लड्डू खा रही मेरा कल बर्थडे था तो आज सर के हाथ से…

प्रधानमंत्री – बहुत बधाई वाह।

प्रधानमंत्री – मुस्कुराओ यार ।

प्रधानमंत्री – जो खेलेगा वो खिलेगा।