ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಏಪ್ರಿಲ್ 14ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾರತೀಯ ವಿಶ್ವವಿದ್ಯಾಲಯಗಳ ಒಕ್ಕೂಟದ 95ನೇ ವಾರ್ಷಿಕ ಸಭೆ ಮತ್ತು ಕುಲಪತಿಗಳ ರಾಷ್ಟ್ರೀಯ ವಿಚಾರಸಂಕಿರಣ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಅಲ್ಲದೆ, ಪ್ರಧಾನಮಂತ್ರಿ ಅವರು ಶ್ರೀ ಕಿಶೋರ್ ಮಕ್ವಾನಾ ಅವರು ಸಂಪಾದಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತ ನಾಲ್ಕು ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಗುಜರಾತ್ ನ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಹಾಗೂ ಕೇಂದ್ರ ಶಿಕ್ಷಣ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಅಹಮದಾಬಾದ್ ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯ ಆಯೋಜಿಸಿದೆ. 

ಎಐಯು ಸಭೆ ಮತ್ತು ಕುಲಪತಿಗಳ ರಾಷ್ಟ್ರೀಯ ವಿಚಾರ ಸಂಕಿರಣ

ಭಾರತೀಯ ವಿಶ್ವವಿದ್ಯಾಲಯಗಳ ಒಕ್ಕೂಟ (ಎಐಯು), ದೇಶದ ಉನ್ನತ ಶಿಕ್ಷಣ ಸಂಸ್ಥೆಗಳ ಅತ್ಯಂತ ಪ್ರಮುಖ ಸಂಸ್ಥೆಯಾಗಿದೆ, ಇದು 2021ರ ಏಪ್ರಿಲ್ 14- 15ರಂದು  ತನ್ನ 95ನೇ ವಾರ್ಷಿಕ ಸಭೆಯನ್ನು ಆಯೋಜಿಸಿದೆ. ಎಐಯು ತನ್ನ ಹಿಂದಿನ ವರ್ಷದ ಸಾಧನೆಯನ್ನು ಪ್ರದರ್ಶಿಸಲು, ಹಣಕಾಸು ಸ್ಥಿತಿಗತಿಯನ್ನು ಮಂಡಿಸಲು ಮತ್ತು ಮುಂಬರುವ ವರ್ಷಕ್ಕೆ ಯೋಜನಾ ಚಟುವಟಿಕೆಗಳನ್ನು ನಿಯೋಜಿಸುವ ಉದ್ದೇಶದಿಂದ ಸಭೆಯನ್ನು ಆಯೋಜಿಸಿದೆ. ಅಲ್ಲದೆ, ಕಳೆದ ಒಂದು ವರ್ಷದಿಂದ ನಡೆಸಿದ ವಲಯವಾರು ಕುಲಪತಿಗಳ ಸಭೆ ಮತ್ತು ಮತ್ತಿತರ ಸಮಾಲೋಚನೆಗಳ ಮೂಲಕ ವ್ಯಕ್ತವಾದ ಶಿಫಾರಸುಗಳನ್ನು ಸದಸ್ಯರಿಗೆ ತಿಳಿಸಲು ಈ ಸಭೆ ಒಂದು ವೇದಿಕೆಯಾಗಿದೆ.

ಈ ಸಭೆ, ಎಐಯುನ  96ನೇ ಸಂಸ್ಥಾಪನಾ ದಿನದ ಆಚರಣೆ ಮತ್ತು ಸ್ಮರಣೆ ಕೂಡ ಆಗಲಿದೆ, 1925ರಲ್ಲಿ ಹಿರಿಯ ದಿಗ್ಗಜರಾದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರಂತಹ ನಾಯಕರ ಆಶ್ರಯದಲ್ಲಿ ಈ ಸಂಸ್ಥೆಯು ಸ್ಥಾಪನೆಯಾಯಿತು.

ಕುಲಪತಿಗಳ ರಾಷ್ಟ್ರೀಯ ವಿಚಾರ ಸಂಕಿರಣದ ವಿಷಯ “ ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾರಿಯಿಂದ ಭಾರತದ ಉನ್ನತ ಶಿಕ್ಷಣ ಪರಿವರ್ತನೆ’’ ಎಂಬುದಾಗಿದೆ.  ಇತ್ತೀಚೆಗೆ ಬಿಡುಗಡೆ ಮಾಡಿರುವ ನೂತನ ಶಿಕ್ಷಣ ನೀತಿ 2020ಯ ಜಾರಿ ಕಾರ್ಯತಂತ್ರಗಳನ್ನು ಸಿದ್ಧಪಡಿಸುವುದು ಇದರ ಗುರಿಯಾಗಿದೆ, ನೀತಿಯ ಪ್ರಮುಖ ಪಾಲುದಾರರಾದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಪರಿಣಾಮಕಾರಿಯಾಗಿ ನೀತಿಯನ್ನು ಜಾರಿಗೊಳಿಸಲು ಸ್ಪಷ್ಟ ಕಾರ್ಯಯೋಜನೆ ಸಿದ್ಧಪಡಿಸಲಾಗುವುದು. 

ಬಿಡುಗಡೆಯಾಗಲಿರುವ ಪುಸ್ತಕಗಳು

ಪ್ರಧಾನಮಂತ್ರಿ ಅವರು ಇದೇ ವೇಳೆ ಶ್ರೀ ಕಿಶೋರ್ ಮಕ್ವಾನಾ ಅವರು ಬಾಬಾ ಸಾಹೇಬ ಭೀಮರಾವ್ ಅಂಬೇಡ್ಕರ್ ಅವರ ಜೀವನವನ್ನು ಆಧರಿಸಿ ರಚಿಸಿರುವ ನಾಲ್ಕು ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ.

1.     ಡಾ.ಅಂಬೇಡ್ಕರ್  ಜೀವನ ದರ್ಶನ

2.     ಡಾ.ಅಂಬೇಡ್ಕರ್ ವ್ಯಕ್ತಿ ದರ್ಶನ

3.     ಡಾ.ಅಂಬೇಡ್ಕರ್ ರಾಷ್ಟ್ರದರ್ಶನ ಮತ್ತು

4.     ಡಾ.ಅಂಬೇಡ್ಕರ್ ಆಯಾಮ ದರ್ಶನ

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India vehicle retail sales seen steady in December as tax cuts spur demand: FADA

Media Coverage

India vehicle retail sales seen steady in December as tax cuts spur demand: FADA
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 9 ಡಿಸೆಂಬರ್ 2025
December 09, 2025

Aatmanirbhar Bharat in Action: Innovation, Energy, Defence, Digital & Infrastructure, India Rising Under PM Modi