ಏಪ್ರಿಲ್ 26ರಂದು ಸೌರಾಷ್ಟ್ರ ತಮಿಳು ಸಂಗಮಂ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿಯವರು
​​​​​​​ಏಕ್ ಭಾರತ್ ಶ್ರೇಷ್ಠ ಭಾರತ್ ನ ಸ್ಫೂರ್ತಿಯನ್ನು ಉತ್ತೇಜಿಸಲು ಈ ಕಾರ್ಯಕ್ರಮವು ಪ್ರಧಾನ ಮಂತ್ರಿಯವರ ದೂರದೃಷ್ಟಿಯನ್ನು ಮುಂದಕ್ಕೆ ಕೊಂಡೊಯ್ಯುಲಿದೆ
ಸೌರಾಷ್ಟ್ರ ತಮಿಳರಿಗೆ ತಮ್ಮ ಮೂಲದೊಂದಿಗೆ ಮರುಸಂಪರ್ಕ ಪಡೆಯಲು ಇದು ಸದವಕಾಶವನ್ನು ಒದಗಿಸಲಿದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಏಪ್ರಿಲ್ 26ರಂದು ಬೆಳಿಗ್ಗೆ 10:30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸೌರಾಷ್ಟ್ರ ತಮಿಳು ಸಂಗಮಂ ಸಮಾರೋಪ ಸಮಾರಂಭವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿನ ಜನರ ನಡುವಿನ ಹಳೆಯ ಸಂಬಂಧಗಳನ್ನು ಪುನಃ ಸ್ಥಾಪಿಸಲು ಸಹಾಯ ಮಾಡುವ ಉಪಕ್ರಮಗಳ ಮೂಲಕ ಏಕ್ ಭಾರತ್ ಶ್ರೇಷ್ಠ ಭಾರತ್ ನ ಸ್ಫೂರ್ತಿಯನ್ನು ಉತ್ತೇಜಿಸುವ ಪ್ರಧಾನಮಂತ್ರಿಯವರ ದೃಷ್ಟಿಕೋನದಲ್ಲಿ ಈ ಕಾರ್ಯಕ್ರಮವನ್ನು ನಿಯೋಜಿಸಲಾಗಿದೆ. ಇದೇ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು, ಕಾಶಿ ತಮಿಳು ಸಂಗಮವನ್ನು ಈ ಹಿಂದೆ ಆಯೋಜಿಸಲಾಗಿತ್ತು. ಸೌರಾಷ್ಟ್ರ ತಮಿಳು ಸಂಗಮವು ಗುಜರಾತ್ ಮತ್ತು ತಮಿಳುನಾಡಿನ ನಡುವಿನ ಹಂಚಿಕೆಯ ಸಂಸ್ಕೃತಿ ಮತ್ತು ಪರಂಪರೆಯನ್ನು ಆಚರಿಸುವ ಮೂಲಕ ಈ ದೃಷ್ಟಿಕೋನವನ್ನು ಮುಂದಕ್ಕೆ ಕೊಂಡೊಯ್ಯುತ್ತದೆ.

ಶತಮಾನಗಳ ಹಿಂದೆ, ಸೌರಾಷ್ಟ್ರ ಪ್ರದೇಶದಿಂದ ಅನೇಕ ಜನರು ತಮಿಳುನಾಡಿಗೆ ವಲಸೆ ಬಂದು ನೆಲೆಸಿದ್ದರು. ಸೌರಾಷ್ಟ್ರ ತಮಿಳು ಸಂಗಮವು ಸೌರಾಷ್ಟ್ರ ತಮಿಳರಿಗೆ ತಮ್ಮ ಮೂಲ ಬೇರುಗಳೊಂದಿಗೆ ಮರುಸಂಪರ್ಕಿಸಲು ಅವಕಾಶವನ್ನು ಒದಗಿಸಿದೆ. 10 ದಿನಗಳ ಈ ಸಂಗಮದಲ್ಲಿ 3000 ಕ್ಕೂ ಹೆಚ್ಚು ಸೌರಾಷ್ಟ್ರ ತಮಿಳರು ವಿಶೇಷ ರೈಲಿನಲ್ಲಿ ಸೋಮನಾಥಕ್ಕೆ ಬಂದಿದ್ದರು. ಕಾರ್ಯಕ್ರಮವು ಏಪ್ರಿಲ್ 17ರಂದು ಪ್ರಾರಂಭವಾಯಿತು, ಅದರ ಸಮಾರೋಪ ಸಮಾರಂಭವು ಈಗ ಏಪ್ರಿಲ್ 26ರಂದು ಸೋಮನಾಥದಲ್ಲಿ ನಡೆಯಿತು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How GST 2.0 changed India’s car market and boosted small car sales

Media Coverage

How GST 2.0 changed India’s car market and boosted small car sales
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 19 ಮೇ 2026
May 19, 2026

Exports Up, Economy Strong, World Collaborating: PM Modi's Reforms Delivering Jobs, Growth & Green Future