ನವದೆಹಲಿಯ ಭಾರತ್ ಮಂಟಪದಲ್ಲಿ 26ನೇ ಸೆಪ್ಟೆಂಬರ್ 2023 ರಂದು ನಡೆಯಲಿರುವ ಜಿ20 ಯೂನಿವರ್ಸಿಟಿ ಕನೆಕ್ಟ್ ಫಿನಾಲೆ ಕಾರ್ಯಕ್ರಮವನ್ನು ಉದ್ದೇಶಿಸಿ ಸಂಜೆ ಸುಮಾರು 4 ಗಂಟೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ.


ಜಿ20 ಜನ ಭಾಗಿದರಿ ಆಂದೋಲನವು ದೇಶಾದ್ಯಂತದ ದಾಖಲೆಯ ಮಟ್ಟದಲ್ಲಿ ವಿವಿಧ ಶಾಲೆಗಳು, ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಕೌಶಲ್ಯ ಅಭಿವೃದ್ಧಿ ಸಂಸ್ಥೆಗಳಿಂದ 5 ಕೋಟಿಗೂ ಹೆಚ್ಚು ಯುವಜನತೆಯ ಭಾಗವಹಿಸುವಿಕೆಯನ್ನು ಕಂಡಿತು. ಭಾರತದ ಯುವಜನರಲ್ಲಿ ಭಾರತದ ಜಿ20  ಅಧ್ಯಕ್ಷತೆಯ ತಿಳುವಳಿಕೆಯನ್ನು ನಿರ್ಮಿಸುವ ಮತ್ತು ವಿವಿಧ ಜಿ20 ಕಾರ್ಯಕ್ರಮಗಳಲ್ಲಿ ಅವರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಜಿ20 ಯೂನಿವರ್ಸಿಟಿ ಕನೆಕ್ಟ್ ಉಪಕ್ರಮವನ್ನು ಕೈಗೊಳ್ಳಲಾಗಿದೆ. ಈ ಕಾರ್ಯಕ್ರಮವು ಭಾರತದಾದ್ಯಂತ ವಿಶ್ವವಿದ್ಯಾನಿಲಯಗಳಿಂದ 1 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡಿದೆ. ಭಾರತದ 75 ವರ್ಷಗಳ ಸ್ವಾತಂತ್ರ್ಯದ ಸ್ಮರಣಾರ್ಥವಾಗಿ 75 ವಿಶ್ವವಿದ್ಯಾಲಯಗಳಿಗೆ ಆರಂಭದಲ್ಲಿ ಯೋಜಿಸಲಾಗಿತ್ತು, ಈ ಉಪಕ್ರಮವು ಅಂತಿಮವಾಗಿ ಭಾರತದಾದ್ಯಂತ 101 ವಿಶ್ವವಿದ್ಯಾಲಯಗಳಿಗೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿತು.


ಜಿ-20 ಯೂನಿವರ್ಸಿಟಿ ಕನೆಕ್ಟ್ ಉಪಕ್ರಮದ ಅಡಿಯಲ್ಲಿ ದೇಶಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಯಿತು. ಉನ್ನತ ಶಿಕ್ಷಣ ಸಂಸ್ಥೆಗಳ ವ್ಯಾಪಕ ಭಾಗವಹಿಸುವಿಕೆಯನ್ನು ಹಾಗೂ, ಆರಂಭದಲ್ಲಿ ವಿಶ್ವವಿದ್ಯಾನಿಲಯಗಳ ಕಾರ್ಯಕ್ರಮವಾಗಿ ಪ್ರಾರಂಭವಾದ ಕಾರ್ಯಕ್ರಮವು ಶೀಘ್ರವಾಗಿ ಮತ್ತಷ್ಟು ಶಾಲೆಗಳು ಮತ್ತು ಕಾಲೇಜುಗಳನ್ನು ಒಳಗೊಂಡಂತೆ ಬೆಳೆಯಿತು, ಇನ್ನೂ ಹೆಚ್ಚಿನ ಭಾಗವಹಿಸುವಿಕೆಯನ್ನುಂತ್ತು  ಪ್ರೇಕ್ಷಕರನ್ನು ತಲುಪಿತು.

 

ಜಿ20 ಯೂನಿವರ್ಸಿಟಿ ಕನೆಕ್ಟ್ ಫಿನಾಲೆಯ ಕಾರ್ಯಕ್ರಮದಲ್ಲಿ ಸುಮಾರು 3000 ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಭಾಗವಹಿಸುವ ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಭಾಗವಹಿಸುತ್ತಾರೆ. ಇದಲ್ಲದೆ, ದೇಶಾದ್ಯಂತದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಜಾಲತಾಣ ಮೂಲಕ ನೇರವಾಗಿ ( ಲೈವ್ ಆಗಿ) ಸೇರಲಿದ್ದಾರೆ. 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
New farm-sector scheme gives thrust to 100 laggard districts

Media Coverage

New farm-sector scheme gives thrust to 100 laggard districts
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam highlighting the power of enthusiasm
March 05, 2026

The Prime Minister, Shri Narendra Modi has shared a Sanskrit Subhashitam highlighting the importance of enthusiasm and determination in achieving success.

The Prime Minister shared the following verse-

“उत्साहो बलवानार्य नास्त्युत्साहात् परं बलम्। सोत्साहस्यास्ति लोकेऽस्मिन् न किञ्चिदपि दुर्लभम्॥”

The Subhashitam conveys that enthusiasm is the greatest strength. For an enthusiastic person, indeed nothing is unattainable.

The Prime Minister wrote on X;

“उत्साहो बलवानार्य नास्त्युत्साहात् परं बलम्।

सोत्साहस्यास्ति लोकेऽस्मिन् न किञ्चिदपि दुर्लभम्॥”