ಈ ಉಪಕ್ರಮದಡಿ ಗುಜರಾತ್ ನಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ವ್ಯವಸ್ಥೆಗಳನ್ನು ನಿರ್ಮಾಣ ಮಾಡುವ ಗುರಿ
ಜಲ ಸಂರಕ್ಷಣೆ ರಾಷ್ಟ್ರೀಯ ಆದ್ಯತೆಯಾಗಬೇಕೆಂಬ ಪ್ರಧಾನಮಂತ್ರಿ ಅವರ ಸಂಕಲ್ಪವನ್ನು ಈಡೇರಿಸುವ ಗುರಿಯನ್ನು ಇದು ಹೊಂದಿದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಸೆಪ್ಟಂಬರ್ 6ರಂದು ಮಧ್ಯಾಹ್ನ 12.30ಕ್ಕೆ ಗುಜರಾತ್ ನ ಸೂರತ್‌ ನಲ್ಲಿ  ‘ಜಲಸಂಚಯ ಜನ ಭಾಗಿದಾರಿ’ ಉಪಕ್ರಮದಡಿ ನಡೆಯಲಿರುವ ಕಾರ್ಯಕ್ರಮವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆ. 

ಪ್ರಧಾನಮಂತ್ರಿ ಅವರ ಜಲ ಭದ್ರತೆಯ ದೂರದೃಷ್ಟಿಗೆ ಪೂರಕವಾಗಿ, ಈ ಉಪಕ್ರಮವು ಸಮುದಾಯದ ಪಾಲುದಾರಿಕೆ ಮತ್ತು ಮಾಲೀಕತ್ವಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ನೀರನ್ನು ಸಂರಕ್ಷಿಸಲು ಪ್ರಯತ್ನಿಸುತ್ತದೆ ಮತ್ತು ಇಡೀ ಸಮಾಜ ಮತ್ತು ಇಡೀ ಸರ್ಕಾರದ ಪರಿಕಲ್ಪನೆಯೊಂದಿಗೆ ನಡೆಸಲಾಗುತ್ತದೆ. ಗುಜರಾತ್ ಸರ್ಕಾರದ ನೇತೃತ್ವದ ಜಲ ಸಂಚಯ ಉಪಕ್ರಮದ ಯಶಸ್ಸಿನ ಆಧಾರದ ಮೇಲೆ ಜಲ ಶಕ್ತಿ ಸಚಿವಾಲಯವು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಗುಜರಾತ್‌ನಲ್ಲಿ "ಜಲ ಸಂಚಯ ಜನ ಭಾಗಿದರಿ" ಉಪಕ್ರಮವನ್ನು ಆರಂಭಿಸುತ್ತಿದೆ. ಗುಜರಾತ್ ಸರ್ಕಾರವು ನಾಗರಿಕರು, ಸ್ಥಳೀಯ ಸಂಸ್ಥೆಗಳು, ಕೈಗಾರಿಕೆಗಳು ಮತ್ತು ಇತರ ಪಾಲುದಾರರು ನೀರಿನ ಸುರಕ್ಷಿತ ಭವಿಷ್ಯ ಖಾತ್ರಿಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ.

ಈ ಕಾರ್ಯಕ್ರಮದಡಿಯಲ್ಲಿ ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ವ್ಯವಸ್ಥೆಗಳನ್ನು ಸಮುದಾಯ ಸಹಭಾಗಿತ್ವದಲ್ಲಿ ನಿರ್ಮಿಸಲಾಗುತ್ತಿದೆ. ಈ ಮರು ಪೂರಣ ವ್ಯವಸ್ಥೆಗಳು ಮಳೆನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯಲ್ಲಿ ನೀರಿನ ಸುಸ್ಥಿರತೆಯನ್ನು ಖಾತ್ರಿಪಡಿಸಿಕೊಳ್ಳಲು ಸಹಕಾರಿಯಾಗುತ್ತವೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Why global AI leaders are flocking to the India AI Impact Summit in New Delhi

Media Coverage

Why global AI leaders are flocking to the India AI Impact Summit in New Delhi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಫೆಬ್ರವರಿ 2026
February 13, 2026

Self-Reliance to Global Leadership – How PM Modi's Policies Are Powering India's Defence, AI, and Inclusive Growth