ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 9 ರ ಭಾರತೀಯ ಕಾಲಮಾನ ಸಂಜೆ 5.30 ಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆಯಲಿರುವ ಕಡಲ ಭದ್ರತೆ ಹೆಚ್ಚಿಸುವ: ಅಂತಾರಾಷ್ಟ್ರೀಯ ಸಹಕಾರ ಕುರಿತ ಯು.ಎನ್.ಎಸ್.ಸಿಯ ಉನ್ನತ ಮಟ್ಟದ ಮುಕ್ತ ಚರ್ಚೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳು ಹಾಗೂ ಹಲವು ದೇಶಗಳ ಮುಖ್ಯಸ್ಥರು, ಪ್ರಮುಖ ಪ್ರಾದೇಶಿಕ ಸಂಘಟನೆಗಳು, ವಿಶ್ವಸಂಸ್ಥೆಯ ಉನ್ನತ ಮಟ್ಟದ ಮಾಹಿತಿದಾರರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕಡಲ ವಲಯದ ಅಪರಾಧಗಳನ್ನು ಪರಿಣಾಮಕಾರಿಯಾಗಿ ನಿಗ್ರಹಿಸುವ ಹಾಗೂ ಕಡಲ ಭಾಗದಲ್ಲಿ ಅಭದ್ರತೆಯನ್ನು ನಿವಾರಿಸುವ ಮತ್ತು ಸಹಕಾರವನ್ನು ಬಲಗೊಳಿಸುವ ಬಗ್ಗೆ ಮುಕ್ತ ಚರ್ಚೆಯನ್ನು ಕೇಂದ್ರೀಕರಿಸಲಾಗಿದೆ.

ಸಾಗರ ವಲಯದ ಭದ್ರತೆ ಮತ್ತು ಕಡಲ ಭಾಗದ ಅಪರಾಧ ನಿಯಂತ್ರಣ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಚರ್ಚೆ ನಡೆಸಿದೆ ಮತ್ತು ವಿವಿಧ ಆಯಾಮಗಳ ಬಗ್ಗೆ ಈಗಾಗಲೇ ನಿರ್ಣಯಗಳನ್ನು ಅನುಮೋದಿಸಿದೆ. ಆದಾಗ್ಯೂ ಬಾಹ್ಯ ಕಾರ್ಯಸೂಚಿ ಮೂಲಕ ಸಾಗರ ವಲಯದ ಭದ್ರತೆ ಕುರಿತಂತೆ ಸಮಗ್ರವಾಗಿ ಉನ್ನತ ಮಟ್ಟದ ಮುಕ್ತ ಚರ್ಚೆ ನಡೆಯುತ್ತಿರುವುದು ಇದೇ ಮೊದಲ ಬಾರಿಯಾಗಿದೆ.

ಯಾವುದೇ ರಾಷ್ಟ್ರ ಏಕಾಂಗಿಯಾಗಿ ಸಾಗರ ವಲಯದ ಭದ್ರತೆಯನ್ನು ವೈವಿಧ್ಯಮಯ ಆಯಾಮಗಳ ಮೂಲಕ ಬಗೆಹರಿಸಲು ಸಾಧ್ಯವಿಲ್ಲ. ಹಾಗಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಈ ವಿಷಯವನ್ನು ಸಮಗ್ರವಾಗಿ ಮಹತ್ವದ ಸ್ವರೂಪದಲ್ಲಿ ಚರ್ಚಿಸಲಾಗುತ್ತಿದೆ. ಸಾಗರ ಕ್ಷೇತ್ರದ ಸಾಂಪ್ರದಾಯಿಕ ಮತ್ತು ಅಸಾಂಪ್ರದಾಯಿಕ ಬೆದರಿಕೆಗಳು ಹಾಗೂ ಕಾನೂನುಬದ್ಧ ಸಾಗರ ಚಟುವಟಿಕೆಗಳನ್ನು ಬೆಂಬಲಿಸುವ ಜೊತೆಗೆ ಸಮಗ್ರ ಭದ್ರತೆಯ ದೃಷ್ಟಿಯನ್ನು ಈ ಸಭೆ ಹೊಂದಿದೆ.

ಸಿಂಧೂ ನದಿ ಕಣಿವೆಯ ನಾಗರೀಕತೆಯಿಂದ ಈವರೆಗೆ ಭಾರತದ ಇತಿಹಾಸದಲ್ಲಿ ಸಾಗರ ಪ್ರದೇಶ ಮಹತ್ವದ ಭಾಗವಾಗಿದೆ. ನಮ್ಮ ನಾಗರಿಕತೆಯು ನೈತಿಕತೆಯ ಪರಸ್ಪರ ಶಾಂತಿ ಮತ್ತು ಸಮೃದ್ಧತೆಯ ತಳಹದಿ ಮೇಲಿದೆ. ಈ ಹಿನ್ನೆಲೆಯಲ್ಲಿ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2015 ರಲ್ಲಿ ಸಾಗರ್ ದೃಷ್ಟಿಕೋನ ಮಂಡಿಸಿದ್ದು, ಈ ಪ್ರದೇಶದಲ್ಲಿ ಎಲ್ಲರಿಗೂ ಭದ್ರತೆ ಮತ್ತು ಬೆಳವಣಿಗೆ ಎಂಬುದು ಇದರ ಸಂಕ್ಷಿಪ್ತ ರೂಪವಾಗಿದೆ. ಕಡಲು ಭಾಗವನ್ನು ಸುಸ್ಥಿರ ಕ್ರಮಗಳ ಮೂಲಕ ಬಳಸಿಕೊಳ್ಳುವ ನಿಟ್ಟಿನಲ್ಲಿ ಸಹಕಾರ ದೃಷ್ಟಿಕೋನವನ್ನು ಇದು ಒಳಗೊಂಡಿದೆ ಮತ್ತು ಈ ಭಾಗದಲ್ಲಿ ಸುರಕ್ಷಿತ, ಸುಭದ್ರ ಮತ್ತು ಸ್ಥಿರ ಕಡಲು ವಲಯದ ಚೌಕಟ್ಟನ್ನು ಒದಗಿಸುತ್ತದೆ. 2019 ರಲ್ಲಿ ಪೂರ್ವ ಏಷ್ಯಾ ಶೃಂಗ ಸಭೆಯಲ್ಲಿ ಈ ಉಪಕ್ರಮವನ್ನು ಭಾರತ - ಫೆಸಿಫಿಕ್ ಸಾಗರ [ಐ.ಪಿ.ಒ.ಪಿ] ಕ್ರಮಗಳ ಮೂಲಕ ಮತ್ತಷ್ಟು ವಿವರಿಸಲಾಗಿದ್ದು, ಇದು ಕಡಲಿನ ಪರಿಸರ, ಕಡಲಿನ ಸಂಪನ್ಮೂಲಗಳು, ಸಾಮರ್ಥ್ಯ ನಿರ್ಮಾಣ ಮತ್ತು ಸಂಪನ್ಮೂಲ ಹಂಚಿಕೆ, ವಿಪತ್ತು ಅಪಾಯ ತಗ್ಗಿಸುವ ಹಾಗೂ ನಿರ್ವಹಣೆ, ವಿಜ್ಞಾನ - ತಂತ್ರಜ್ಞಾನ ಮತ್ತು ಶೈಕ್ಷಣಿಕ ಸಹಕಾರ, ವ್ಯಾಪಾರ ಸಂಪರ್ಕ ಮತ್ತು ಕಡಲ ಸಾರಿಗೆ ವ್ಯವಸ್ಥೆಯಂತಹ ಏಳು ಆಧಾರ ಸ್ಥಂಭಗಳನ್ನು ಇದು ಕೇಂದ್ರೀಕರಿಸಿದೆ.

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯ ಅಧ್ಯಕ್ಷತೆ ವಹಿಸುತ್ತಿರುವ ಮೊದಲ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಾಗಿದ್ದಾರೆ. ಈ ಕಾರ್ಯಕ್ರಮ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ವೆಬ್ ಸೈಟ್ ನಲ್ಲಿ ನೇರ ಪ್ರಸಾರವಾಗಲಿದೆ ಮತ್ತು ಕಾರ್ಯಕ್ರಮವನ್ನು 1730 ಐ.ಎಸ್.ಟಿ/0800 ಎನ್.ವೈ.ಟಿ ಸಮಯದಿಂದ ವೀಕ್ಷಿಸಬಹುದಾಗಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
The first day of school, the start of a shared responsibility

Media Coverage

The first day of school, the start of a shared responsibility
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam, pays tributes to revered Dr. Sree Sree Sree Sivakumara Swamigalu
April 01, 2026

The Prime Minister, Shri Narendra Modi paid tributes to the revered Dr. Sree Sree Sree Sivakumara Swamigalu, on his birth anniversary today. Shri Modi added that his incomparable contributions in the fields of education, social welfare, and spirituality will continue to inspire every generation of the nation towards selfless service.

The Prime Minister shared a Sanskrit verse-

“पिबन्ति नद्यः स्वयमेव नाम्भः
स्वयं न खादन्ति फलानि वृक्षाः।

नादन्ति सस्यं खलु वारिवाहाः
परोपकाराय सतां विभूतयः॥”

The Prime Minister wrote on X;

“मानवता के अनन्य उपासक परम पूज्य डॉ. श्री श्री श्री शिवकुमार स्वामीजी को उनकी जन्म-जयंती पर कोटि-कोटि नमन! शिक्षा, समाज कल्याण और अध्यात्म के क्षेत्र में उनका अतुलनीय योगदान देश की हर पीढ़ी को निस्वार्थ सेवा के लिए प्रेरित करता रहेगा।

पिबन्ति नद्यः स्वयमेव नाम्भः
स्वयं न खादन्ति फलानि वृक्षाः।

नादन्ति सस्यं खलु वारिवाहाः
परोपकाराय सतां विभूतयः॥”