ವಂದೇ ಭಾರತವು ಗುವಾಹಟಿಯಿಂದ ನ್ಯೂ ಜಲ್ಪೈಗುರಿಗೆ 5 ಗಂಟೆ 30 ನಿಮಿಷಗಳಲ್ಲಿ ಸಂಚರಿಸಲಿದೆ, ಹಾಗೂ ಪ್ರಸ್ತುತ ರೈಲು ಅದೇ ದೂರ ಕ್ರಮಿಸಲು 6 ಗಂಟೆ 30 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ.
ಹೊಸದಾಗಿ ವಿದ್ಯುದ್ದೀಕರಣಗೊಂಡ ವಿಭಾಗಗಳನ್ನು ಪ್ರಧಾನಮಂತ್ರಿಯವರು ಸಮರ್ಪಿಸಿದ್ದಾರೆ ಮತ್ತು ಹೊಸದಾಗಿ ನಿರ್ಮಿಸಲಾದ ಡೆಮು/ಮೆಮು ರೈಲು ಶೆಡ್ ಅನ್ನು ಪ್ರಧಾನಮಂತ್ರಿ ಅವರು ಉದ್ಘಾಟಿಸಲಿದ್ದಾರೆ

ಅಸ್ಸಾಂನ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 29 ರಂದು ಮಧ್ಯಾಹ್ನ 12 ಗಂಟೆಗೆ ವಿಡಿಯೊ ಸಮಾವೇಶ ಮೂಲಕ ಚಾಲನೆ ನೀಡಲಿದ್ದಾರೆ.

ಅತ್ಯಾಧುನಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ಈ ಪ್ರದೇಶದ ಜನರಿಗೆ ವೇಗ ಮತ್ತು ಉತ್ತಮ ಸೌಕರ್ಯದೊಂದಿಗೆ ಸಂಚರಿಸಲು ರೈಲು ಮಾರ್ಗವನ್ನು ಒದಗಿಸುತ್ತದೆ.  ಇದು ಈ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ.  ನ್ಯೂ ಜಲ್ಪೈಗುರಿ ಹಾಗು ಗುವಾಹಟಿಯ ನಡುವೆ ಸಂಪರ್ಕ ಕಲ್ಪಿಸುವ ರೈಲು , ಈ ಎರಡು ಸ್ಥಳಗಳನ್ನು ಸಂಪರ್ಕಿಸುವ ಪ್ರಸ್ತುತ ವೇಗದ ರೈಲಿಗೆ ಹೋಲಿಸಿದರೆ ಸುಮಾರು ಒಂದು ಗಂಟೆ ಪ್ರಯಾಣದ ಸಮಯವನ್ನು ಉಳಿಸುತ್ತದೆ. ವಂದೇ ಭಾರತ್ ರೈಲು 5 ಗಂಟೆ 30 ನಿಮಿಷಗಳಲ್ಲಿ ಪ್ರಯಾಣವನ್ನು ಪೂರ್ತಿಗೊಳಿಸುತ್ತದೆ, ಆದರೆ ಪ್ರಸ್ತುತ ಇರುವ ವೇಗದ ರೈಲು ಅದೇ ಸಂಚಾರಕ್ಕಾಗಿ 6 ಗಂಟೆ 30 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ.

 ಪ್ರಧಾನಮಂತ್ರಿಯವರು ಹೊಸದಾಗಿ ವಿದ್ಯುದ್ದೀಕರಣಗೊಂಡ ವಿಭಾಗಗಳ 182 ರೂಟ್ ಕಿಲೋಮೀಟರ್‌ಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ.  ಇದು ಹೆಚ್ಚಿನ ವೇಗದಲ್ಲಿ ಚಲಿಸುವ ರೈಲುಗಳೊಂದಿಗೆ ಮಾಲಿನ್ಯ ಮುಕ್ತ ಸಾರಿಗೆಯನ್ನು ಒದಗಿಸಲು ಮತ್ತು ರೈಲುಗಳ ಸಂಚಾರದ ಸಮಯವನ್ನು ಕಡಿಮೆ ಮಾಡಲು ಸಹಾಯ ಮಾಡಲಿವೆ. ಇದು ವಿದ್ಯುತ್ ಮೂಲಕ ಚಲಿಸುವ ರೈಲುಗಳಿಗೆ  ಮೇಘಾಲಯದೊಂದಿಗೆ ಸಂಪರ್ಕ ಕಲ್ಪಿಸುವ ಅವಕಾಶವನ್ನು ಕೂಡ ಒದಗಿಸುತ್ತದೆ.

 ಪ್ರಧಾನಮಂತ್ರಿಯವರು ಅಸ್ಸಾಂನ ಲುಮ್‌ಡಿಂಗ್‌ನಲ್ಲಿ ಹೊಸದಾಗಿ ನಿರ್ಮಿಸಲಾದ  ಡೆಮು/ ಮೆಮು ಶೆಡ್ ಅನ್ನು ಕೂಡ ಉದ್ಘಾಟಿಸಲಿದ್ದಾರೆ.  ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಡೆಮು ಬೋಗಿಗಳನ್ನು ನಿರ್ವಹಿಸಲು ಈ ಹೊಸ ಸೌಲಭ್ಯವು ಸಹಾಯಕವಾಗಲಿದೆ, ಇದು ಈ ಪ್ರದೇಶದ ರೈಲಿನ ಉತ್ತಮ ಸಂಚಾರ ಕಾರ್ಯಾಚರಣೆಯ ಕಾರ್ಯಸಾಧ್ಯತೆಗೆ ಕಾರಣವಾಗುತ್ತದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

Media Coverage

"The World has much to learn from India": Norway eyes closer digital health partnership
NM on the go

Nm on the go

Always be the first to hear from the PM. Get the App Now!
...
Prime Minister Highlights Sanskrit Wisdom in Doordarshan’s Suprabhatam
December 09, 2025

Prime Minister Shri Narendra Modi today underscored the enduring relevance of Sanskrit in India’s cultural and spiritual life, noting its daily presence in Doordarshan’s Suprabhatam program.

The Prime Minister observed that each morning, the program features a Sanskrit subhāṣita (wise saying), seamlessly weaving together values and culture.

In a post on X, Shri Modi said:

“दूरदर्शनस्य सुप्रभातम् कार्यक्रमे प्रतिदिनं संस्कृतस्य एकं सुभाषितम् अपि भवति। एतस्मिन् संस्कारतः संस्कृतिपर्यन्तम् अन्यान्य-विषयाणां समावेशः क्रियते। एतद् अस्ति अद्यतनं सुभाषितम्....”