ಕಾಮನ್‌ವೆಲ್ತ್ ಗೇಮ್ಸ್ (ಸಿಡಬ್ಲ್ಯುಜಿ)-2022ರಲ್ಲಿ ಭಾಗವಹಿಸುವ ಭಾರತೀಯ ಕ್ರೀಡಾ ತಂಡದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 20ರಂದು ಬೆಳಗ್ಗೆ 10 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಸಂವಾದ ನಡೆಸಲಿದ್ದಾರೆ. ಸಂವಾದದಲ್ಲಿ ಇಬ್ಬರು ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಪಾಲ್ಗೊಳ್ಳಲಿದ್ದಾರೆ.

ಪ್ರಮುಖ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೊದಲು ಕ್ರೀಡಾಪಟುಗಳನ್ನು ಪ್ರೇರೇಪಿಸುವ ಅವರ ನಿರಂತರ ಪ್ರಯತ್ನದ ಒಂದು ಭಾಗವಾಗಿ ಪ್ರಧಾನಮಂತ್ರಿಯವರ ಸಂವಾದ ಆಯೋಜಿಸಲಾಗಿದೆ. ಕಳೆದ ವರ್ಷ ಪ್ರಧಾನಿ ಮೋದಿ ಅವರು ಟೋಕಿಯೊ ಒಲಿಂಪಿಕ್ಸ್-2020 ಮತ್ತು ಟೋಕಿಯೊ ಪ್ಯಾರಾಲಿಂಪಿಕ್-2020 ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಭಾರತೀಯ ಅಥ್ಲೀಟ್‌ಗಳ ತಂಡದೊಂದಿಗೆ ಸಂವಾದ ನಡೆಸಿದ್ದರು.

ಕ್ರೀಡಾಕೂಟ ನಡೆಯುತ್ತಿದ್ದಾಗಲೂ, ಪ್ರಧಾನ ಮಂತ್ರಿ ಅವರು ಕ್ರೀಡಾಪಟುಗಳ ಪ್ರದರ್ಶನದ ಬಗ್ಗೆ ತೀವ್ರ ಆಸಕ್ತಿ ವಹಿಸಿದ್ದರು. ಅನೇಕ ಸಂದರ್ಭಗಳಲ್ಲಿ, ಅವರು ವೈಯಕ್ತಿಕವಾಗಿ ಕ್ರೀಡಾಪಟುಗಳಿಗೆ ಕರೆ ಮಾಡಿ ಅವರ ಯಶಸ್ಸು ಮತ್ತು ಪ್ರಾಮಾಣಿಕ ಪ್ರಯತ್ನಗಳನ್ನು ಅಭಿನಂದಿಸಿದ್ದರು. ಅವರನ್ನು ಉತ್ತಮವಾಗಿ ಆಡುವಂತೆ ಪ್ರೇರೇಪಿಸಿದ್ದರು. ಇದಲ್ಲದೆ, ಕ್ರೀಡಾಪಟುಗಳು ದೇಶಕ್ಕೆ ಹಿಂದಿರುಗಿದ ನಂತರ, ಪ್ರಧಾನ ಮಂತ್ರಿ ಅವರು ಕ್ರೀಡಾ ತಂಡವನ್ನು ಭೇಟಿ ಮಾಡಿ, ಎಲ್ಲರೊಂದಿಗೆ ಸಂವಾದ ನಡೆಸಿದ್ದರು.

ಬರ್ಮಿಂಗ್‌ಹ್ಯಾಮ್‌ನಲ್ಲಿ ಜುಲೈ 28ರಿಂದ ಆಗಸ್ಟ್ 08ರ ವರೆಗೆ ಕಾಮನ್ ವೆಲ್ತ್ ಕ್ರೀಡಾಕೂಟ-2022 ಆಯೋಜಿಸಲಾಗಿದೆ. 19 ಕ್ರೀಡಾ ವಿಭಾಗಗಳಲ್ಲಿ ನಡೆಯುವ 141 ಸ್ಪರ್ಧೆಗಳಲ್ಲಿ ಭಾಗವಹಿಸುವ ಒಟ್ಟು 215 ಕ್ರೀಡಾಪಟುಗಳು ಭಾರತವನ್ನು ಪ್ರತಿನಿಧಿಸಲಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Vikas Bhi, Virasat Bhi: How JATAN, AI and Digital Archives are revolutionising India’s cultural heritage preservation

Media Coverage

Vikas Bhi, Virasat Bhi: How JATAN, AI and Digital Archives are revolutionising India’s cultural heritage preservation
NM on the go

Nm on the go

Always be the first to hear from the PM. Get the App Now!
...
ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಶೂರರಿಗೆ ಪ್ರಧಾನಮಂತ್ರಿ ಗೌರವ ನಮನ
August 09, 2026

ಭಾರತ ಬಿಟ್ಟು ತೊಲಗಿ ಐತಿಹಾಸಿಕ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರನ್ನೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಶೌರ್ಯ ಮತ್ತು ದೃಢಸಂಕಲ್ಪಕ್ಕೆ ಗೌರವ ಸಮರ್ಪಿಸಿದ್ದಾರೆ. ಮಹಾತ್ಮಾ ಗಾಂಧಿಯವರ ನಾಯಕತ್ವದಿಂದ ಪ್ರೇರಿತವಾದ ಭಾರತ ಬಿಟ್ಟು ತೊಲಗಿ ಚಳವಳಿಯ ಕರೆಯು ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಚೈತನ್ಯ ತುಂಬಿತು ಮತ್ತು ವಸಾಹತುಶಾಹಿ ಆಳ್ವಿಕೆಯನ್ನು ತೊಡೆದು ಹಾಕಲು ಭಾರತದ ಜನರ ಅಚಲ ಸಂಕಲ್ಪವನ್ನು ಪ್ರತಿಬಿಂಬಿಸಿತ್ತು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಐತಿಹಾಸಿಕ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರನ್ನು ಸ್ಮರಿಸುತ್ತಿದ್ದೇನೆ. ಅವರ ಸ್ಥೈರ್ಯ ಪ್ರತಿಯೊಬ್ಬ ಭಾರತೀಯನಿಗೂ ಸದಾ ಸ್ಫೂರ್ತಿಯ ಸೆಲೆಯಾಗಿರಲಿದೆ. ಮಹಾತ್ಮಾ ಗಾಂಧಿಯವರ ನಾಯಕತ್ವದಿಂದ ಪ್ರೇರಿತವಾದ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆಯು ನಮ್ಮ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಚೈತನ್ಯವನ್ನು ತುಂಬಿತು ಮತ್ತು ವಸಾಹತುಶಾಹಿ ಆಳ್ವಿಕೆಯಿಂದ ಮುಕ್ತರಾಗಲು ನಮ್ಮ ಜನರ ಅಚಲ ದೃಢಸಂಕಲ್ಪವನ್ನು ಪ್ರತಿಬಿಂಬಿಸಿತು.