PM to inaugurate Pune Metro section of District Court to Swargate
PM to dedicate to nation Bidkin Industrial Area
PM to inaugurate Solapur Airport

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 29 ರಂದು ಅಪರಾಹ್ನ ಸುಮಾರು 12.30 ಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 11,200 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಸಮರ್ಪಣೆ, ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಜಿಲ್ಲಾ ನ್ಯಾಯಾಲಯದಿಂದ ಸ್ವರ್ಗತೆ ವರೆಗಿನ ಮೆಟ್ರೋ ವಿಭಾಗವನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದು, ಈ ಮೂಲಕ ಪುಣೆ – ಮೆಟ್ರೋ ರೈಲು ಯೋಜನೆ [ಹಂತ -1] ಪೂರ್ಣಗೊಳ್ಳಲಿದೆ. ಜಿಲ್ಲಾ ನ್ಯಾಯಾಲಯದಿಂದ ಸ್ವರ್ಗತೆ ವರೆಗೆ ಸುರಂಗ ಮಾರ್ಗವಿದ್ದು, ಇದರ ಯೋಜನಾ ಮೊತ್ತ 1,810 ಕೋಟಿ ರೂಪಾಯಿ ಆಗಿದೆ.

ಬಳಿಕ ಪ್ರಧಾನಮಂತ್ರಿಯವರು ಪುಣೆ ಹಂತ – 1 ಅಭಿವೃದ್ಧಿ ಯೋಜನೆಯಾದ  ಸ್ವರ್ಗೆ – ಕತ್ರಾ ನಡುವಿನ ವಿಸ್ತರಿತ ಮಾರ್ಗದ 2,955 ಕೋಟಿ ರೂಪಾಯಿ ಮೊತ್ತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ದಕ್ಷಿಣ ವಲಯದ ವಿಸ್ತರಿತ 5.46 ಕಿಲೋಮೀಟರ್ ಸುರಂಗ ಮಾರ್ಗವನ್ನು ಇದು ಒಳಗೊಂಡಿದ್ದು, ಮಾರ್ಕೆಟ್ ಯಾರ್ಡ್, ಪದ್ಮಾವತಿ ಮತ್ತು ಕತ್ರಾಜ್ ಎಂಬ ಮೂರು ನಿಲ್ದಾಣಗಳನ್ನು ಇದು ಒಳಗೊಂಡಿದೆ. 

ಪ್ರಧಾನಮಂತ್ರಿಯವರು 7,855 ಕೋಟಿ ರೂಪಾಯಿ ಮೊತ್ತದ ಪರಿವರ್ತನೆಯ ಭಾರತ ಸರ್ಕಾರದ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯಡಿ ನಿರ್ಮಿಸಿರುವ ಬಿದ್ಕಿನ್ ಕೈಗಾರಿಕಾ ಪ್ರದೇಶವನ್ನು ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಸರ್ಮಪಿಸಲಿದ್ದಾರೆ. ಮಹಾರಾಷ್ಟ್ರದ ಸಂಭಾಜಿನಗರ್ ನ ದಕ್ಷಿಣ ಭಾಗದ 20 ಕಿಲೋಮೀಟರ್ ದೂರದಲ್ಲಿ ಈ ಪ್ರದೇಶವಿದೆ.  ದೆಹಲಿ ಮುಂಬೈ ಕೈಗಾರಿಕಾ ಕಾರಿಡಾರ್ ಅಡಿಯಲ್ಲಿ ಅಭಿವೃದ್ಧಿಪಡಿಸಲಾದ ಯೋಜನೆಯು ಮರಾಠವಾಡ ಪ್ರದೇಶದಲ್ಲಿ ಉಜ್ವಲ ಆರ್ಥಿಕ ಕೇಂದ್ರವಾಗಿ ಅಪಾರ ಸಾಮರ್ಥ್ಯವನ್ನು ಹೊಂದಿದೆ. ಒಟ್ಟಾರೆ 6,400 ಕೋಟಿ ರೂಪಾಯಿ ಯೋಜನಾ ವೆಚ್ಚದ ಈ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. 3 ಹಂತಗಳಲ್ಲಿ ಇದನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ.  

ಪ್ರಧಾನಮಂತ್ರಿಯವರು ಸೊಲ್ಲಾಪುರ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದು, ಇದು ಗಣನೀಯವಾಗಿ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸಲಿದೆ. ಇದರಿಂದ ವಿಶೇಷವಾಗಿ ವ್ಯಾಪಾರಿಗಳು, ವ್ಯಾಪಾರ ಪ್ರವಾಸಿಗರು ಮತ್ತು ಹೂಡಿಕೆದಾರರಿಗೆ ಅನುಕೂಲವಾಗಲಿದೆ. ಸೊಲ್ಲಾಪುರದ ಅಸ್ತಿತ್ವದಲ್ಲಿರುವ ಟರ್ಮಿನಲ್ ನಲ್ಲಿ ವಾರ್ಷಿಕವಾಗಿ ಸುಮಾರು 4.1 ಲಕ್ಷ ಪ್ರಯಾಣಿಕರಿಗೆ ಸೇವೆ ಸಲ್ಲಿಸುವಂತೆ ಇದನ್ನು ನವೀಕರಿಸಲಾಗಿದೆ.

ಭಿಡೆವಾಡದಲ್ಲಿ ಕ್ರಾಂತಿಜ್ಯೋತಿ ಸಾವಿತ್ರಿಭಾಯಿ ಫುಲೆ ಮೊದಲ ಬಾಲಕಿಯರ ಶಾಲೆಗೆ ಪ್ರಧಾನಮಂತ್ರಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s data centre boom: Rising demand for power and water

Media Coverage

India’s data centre boom: Rising demand for power and water
NM on the go

Nm on the go

Always be the first to hear from the PM. Get the App Now!
...
Prime Minister wishes for the speedy recovery of Shri Ajay Rai
May 02, 2026

Prime Minister Shri Narendra Modi has wished for the speedy recovery of Shri Ajay Rai.

The Prime Minister stated that he received the news of Shri Ajay Rai being unwell and wished for him to get well at the earliest.

The Prime Minister posted on X:

"उत्तर प्रदेश कांग्रेस अध्यक्ष अजय राय जी के अस्वस्थ होने का समाचार प्राप्त हुआ है। मैं उनके जल्द से जल्द स्वस्थ होने की कामना करता हूं।"