ಕೊಯಮತ್ತೂರಿನಲ್ಲಿ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
9 ಕೋಟಿ ರೈತರಿಗೆ 18,000 ಕೋಟಿ ರೂ.ಗಳ 21ನೇ ಕಂತಿನ ಪಿಎಂ-ಕಿಸಾನ್ ಬಿಡುಗಡೆ ಮಾಡಲಿರುವ ಪ್ರಧಾನಮಂತ್ರಿ
ಪುಟ್ಟಪರ್ತಿಯಲ್ಲಿ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರ ಜೀವನ, ಬೋಧನೆಗಳು ಮತ್ತು ಶಾಶ್ವತ ಪರಂಪರೆಯನ್ನು ಗೌರವಿಸುವ ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿಗಳ ಗುಂಪನ್ನು ಬಿಡುಗಡೆ ಮಾಡಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಅವರು ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿರುವ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರ ಪವಿತ್ರ ದೇವಾಲಯ ಮತ್ತು ಮಹಾಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಬೆಳಗ್ಗೆ 10:30ರ ಸುಮಾರಿಗೆ ಪ್ರಧಾನಮಂತ್ರಿ ಅವರು ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರ ಜೀವನ, ಬೋಧನೆಗಳು ಮತ್ತು ಶಾಶ್ವತ ಪರಂಪರೆಯನ್ನು ಗೌರವಿಸುವ ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿಗಳ ಗುಂಪನ್ನು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ನಂತರ, ಪ್ರಧಾನಮಂತ್ರಿ ಅವರು ತಮಿಳುನಾಡಿನ ಕೊಯಮತ್ತೂರಿಗೆ ಪ್ರಯಾಣಿಸಲಿದ್ದಾರೆ. ಅಲ್ಲಿ ಅವರು ಮಧ್ಯಾಹ್ನ 1:30ರ ಸುಮಾರಿಗೆ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ದೇಶಾದ್ಯಂತ 9 ಕೋಟಿ ರೈತರನ್ನು ಬೆಂಬಲಿಸಲು 18,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಪಿಎಂ-ಕಿಸಾನ್ ನ 21ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

2025ರ ನವೆಂಬರ್ 19 ರಿಂದ 21 ರವರೆಗೆ ನಡೆಯುತ್ತಿರುವ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ತಮಿಳುನಾಡು ನೈಸರ್ಗಿಕ ಕೃಷಿ ಮಧ್ಯಸ್ಥಗಾರರ ವೇದಿಕೆ ಆಯೋಜಿಸಿದೆ. ಶೃಂಗಸಭೆಯು ಸುಸ್ಥಿರ, ಪರಿಸರ ಸ್ನೇಹಿ ಮತ್ತು ರಾಸಾಯನಿಕ ಮುಕ್ತ ಕೃಷಿ ಪದ್ಧತಿಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಮತ್ತು ಭಾರತದ ಕೃಷಿ ಭವಿಷ್ಯಕ್ಕೆ ಕಾರ್ಯಸಾಧ್ಯವಾದ, ಹವಾಮಾನ-ಸ್ಮಾರ್ಟ್ ಮತ್ತು ಆರ್ಥಿಕವಾಗಿ ಸುಸ್ಥಿರ ಮಾದರಿಯಾಗಿ ನೈಸರ್ಗಿಕ ಮತ್ತು ಪುನರುತ್ಪಾದಕ ಕೃಷಿಯತ್ತ ಬದಲಾವಣೆಯನ್ನು ವೇಗಗೊಳಿಸುವ ಗುರಿಯನ್ನು ಹೊಂದಿದೆ.

ಸಾವಯವ ಒಳಹರಿವುಗಳು, ಕೃಷಿ ಸಂಸ್ಕರಣೆ, ಪರಿಸರ ಸ್ನೇಹಿ ಪ್ಯಾಕೇಜಿಂಗ್ ಮತ್ತು ದೇಶೀಯ ತಂತ್ರಜ್ಞಾನಗಳಲ್ಲಿನ ನಾವೀನ್ಯತೆಗಳನ್ನು ಪ್ರದರ್ಶಿಸುವಾಗ ರೈತ-ಉತ್ಪಾದಕ ಸಂಸ್ಥೆಗಳು ಮತ್ತು ಗ್ರಾಮೀಣ ಉದ್ಯಮಿಗಳಿಗೆ ಮಾರುಕಟ್ಟೆ ಸಂಪರ್ಕಗಳನ್ನು ಸೃಷ್ಟಿಸುವತ್ತ ಶೃಂಗಸಭೆಯು ಗಮನ ಹರಿಸುತ್ತದೆ. ಈ ಕಾರ್ಯಕ್ರಮದಲ್ಲಿ ತಮಿಳುನಾಡು, ಪುದುಚೇರಿ, ಕೇರಳ, ತೆಲಂಗಾಣ, ಕರ್ನಾಟಕ ಮತ್ತು ಆಂಧ್ರಪ್ರದೇಶದ 50,000ಕ್ಕೂ ಹೆಚ್ಚು ರೈತರು, ನೈಸರ್ಗಿಕ ಕೃಷಿ ವೃತ್ತಿಪರರು, ವಿಜ್ಞಾನಿಗಳು, ಸಾವಯವ ಕೃಷಿ ಪೂರೈಕೆದಾರರು, ಮಾರಾಟಗಾರರು ಮತ್ತು ಮಧ್ಯಸ್ಥಗಾರರು ಭಾಗವಹಿಸಲಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Proud Moment For Every Indian: PM Modi On Sarnath Being Inscribed On UNESCO World Heritage List

Media Coverage

Proud Moment For Every Indian: PM Modi On Sarnath Being Inscribed On UNESCO World Heritage List
NM on the go

Nm on the go

Always be the first to hear from the PM. Get the App Now!
...
Prime Minister praises historic feat at the 2026 World Junior Squash Championship
July 26, 2026

Prime Minister Shri Narendra Modi today hailed a historic feat at the 2026 World Junior Squash Championship. He expressed his pride in Anahat Singh for winning the Gold Medal and becoming the first Indian squash player ever to win the World Junior Championship title.

The Prime Minister noted that this accomplishment will further popularise squash among the youth.

In a post on X, the Prime Minister shared:

"A historic feat at the 2026 World Junior Squash Championship.

Proud of Anahat Singh for winning the Gold Medal and becoming the first Indian squash player ever to win the World Junior Championship title. This accomplishment will further popularise squash among the youth.

@Anahat_Singh13"