ಛತ್ತೀಸ್ ಗಢ ರಾಜ್ಯ ರಚನೆಯ 25ನೇ ವರ್ಷಾಚರಣೆಯ ಅಂಗವಾಗಿ ಛತ್ತೀಸ್ ಗಢ ರಜತ್ ಮಹೋತ್ಸವದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
ರಸ್ತೆಗಳು, ಕೈಗಾರಿಕೆ, ಆರೋಗ್ಯ ರಕ್ಷಣೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳಲ್ಲಿ 14,260 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸರಣಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಮಾರಕ ಮತ್ತು ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
ದಿಲ್ ಕಿ ಬಾತ್: ಜನ್ಮಜಾತ ಹೃದ್ರೋಗಗಳಿಗೆ ಚಿಕಿತ್ಸೆ ಪಡೆದ ಮಕ್ಕಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ
ಛತ್ತೀಸ್ ಗಢ ವಿಧಾನಸಭೆಯ ಹೊಸ ಕಟ್ಟಡ ಉದ್ಘಾಟನೆ ಮತ್ತು ಭಾರತ ರತ್ನ ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಿರುವ ಪ್ರಧಾನಮಂತ್ರಿ
ಆಧ್ಯಾತ್ಮಿಕ ಕಲಿಕೆ ಮತ್ತು ಧ್ಯಾನದ ಆಧುನಿಕ ಕೇಂದ್ರವಾದ ಬ್ರಹ್ಮಕುಮಾರಿಗಳ 'ಶಾಂತಿ ಶಿಖರ 'ವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 1ರಂದು ಛತ್ತೀಸ್ ಗಢಕ್ಕೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 10 ಗಂಟೆಗೆ 'ದಿಲ್ ಕಿ ಬಾತ್' ಕಾರ್ಯಕ್ರಮದ ಭಾಗವಾಗಿ ಅಟಲ್ ನಗರದ ನವ ರಾಯ್ಪುರದ ಶ್ರೀ ಸತ್ಯ ಸಾಯಿ ಸಂಜೀವನಿ ಆಸ್ಪತ್ರೆಯಲ್ಲಿ ನಡೆಯಲಿರುವ 'ಗಿಫ್ಟ್ ಆಫ್ ಲೈಫ್ ' ಸಮಾರಂಭದಲ್ಲಿ ಜನ್ಮಜಾತ ಹೃದ್ರೋಗಗಳಿಂದ ಯಶಸ್ವಿಯಾಗಿ ಚಿಕಿತ್ಸೆ ಪಡೆದ 2500 ಮಕ್ಕಳೊಂದಿಗೆ ಸಂವಾದ ನಡೆಸಲಿದ್ದಾರೆ.

ನಂತರ, ಬೆಳಗ್ಗೆ 10:45 ರ ಸುಮಾರಿಗೆ ಪ್ರಧಾನಮಂತ್ರಿ ಅವರು ಆಧ್ಯಾತ್ಮಿಕ ಕಲಿಕೆ, ಶಾಂತಿ ಮತ್ತು ಧ್ಯಾನದ ಆಧುನಿಕ ಕೇಂದ್ರವಾದ ಬ್ರಹ್ಮಕುಮಾರಿಗಳ "ಶಾಂತಿ ಶಿಖರ"ವನ್ನು ಉದ್ಘಾಟಿಸಲಿದ್ದಾರೆ.

ಅದರ ನಂತರ, ಬೆಳಗ್ಗೆ 11:45 ರ ಸುಮಾರಿಗೆ, ನವರಾಯ್ಪುರ ಅಟಲ್ ನಗರದಲ್ಲಿರುವ ಛತ್ತೀಸ್ ಗಢ ವಿಧಾನಸಭೆಯ ಹೊಸ ಕಟ್ಟಡದಲ್ಲಿ ಭಾರತ ರತ್ನ ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪ್ರತಿಮೆಯನ್ನು ಪ್ರಧಾನಮಂತ್ರಿ ಅವರು ಅನಾವರಣಗೊಳಿಸಲಿದ್ದಾರೆ. ನಂತರ ಅವರು ಛತ್ತೀಸ್ ಗಢ ವಿಧಾನಸಭೆಯ ಹೊಸ ಕಟ್ಟಡಕ್ಕೆ ಭೇಟಿ ನೀಡಿ ಉದ್ಘಾಟಿಸಲಿದ್ದಾರೆ, ಇದನ್ನು ಹಸಿರು ಕಟ್ಟಡ ಪರಿಕಲ್ಪನೆಯ ಮೇಲೆ ನಿರ್ಮಿಸಲಾಗಿದೆ, ಇದು ಸಂಪೂರ್ಣವಾಗಿ ಸೌರಶಕ್ತಿಯಿಂದ ಚಾಲಿತ ಮತ್ತು ಮಳೆನೀರು ಕೊಯ್ಲು ವ್ಯವಸ್ಥೆಯನ್ನು ಹೊಂದಿದೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಮಧ್ಯಾಹ್ನ 1:30ರ ಸುಮಾರಿಗೆ ಪ್ರಧಾನಮಂತ್ರಿ ಅವರು ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಮಾರಕ ಮತ್ತು ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಲಿದ್ದಾರೆ ಮತ್ತು ಭೇಟಿ ನೀಡಲಿದ್ದಾರೆ. ಈ ವಸ್ತುಸಂಗ್ರಹಾಲಯವು ರಾಜ್ಯದ ಬುಡಕಟ್ಟು ಸಮುದಾಯಗಳ ಧೈರ್ಯ, ತ್ಯಾಗ ಮತ್ತು ದೇಶಭಕ್ತಿಯ ಪರಂಪರೆಯನ್ನು ಸಂರಕ್ಷಿಸುತ್ತದೆ ಮತ್ತು ಪ್ರದರ್ಶಿಸುತ್ತದೆ. ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸುವ ವಸ್ತುಸಂಗ್ರಹಾಲಯ ಪೋರ್ಟಲ್ ಮತ್ತು ಇ-ಪುಸ್ತಕ "ಆದಿ ಶೌರ್ಯ" ಅನ್ನು ಪ್ರಧಾನಮಂತ್ರಿ ಅವರು ಬಿಡುಗಡೆ ಮಾಡಲಿದ್ದಾರೆ ಮತ್ತು ಸ್ಮಾರಕ ಸ್ಥಳದಲ್ಲಿ ಕುದುರೆ ಸವಾರಿ ಮಾಡಿದ ಶಹೀದ್ ವೀರ್ ನಾರಾಯಣ್ ಸಿಂಗ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ನಂತರ, ಮಧ್ಯಾಹ್ನ 2:30 ರ ಸುಮಾರಿಗೆ, ಛತ್ತೀಸ್ ಗಢ ರಾಜ್ಯ ರಚನೆಯ 25ನೇ ವರ್ಷಾಚರಣೆಯ ಅಂಗವಾಗಿ ಛತ್ತೀಸ್ ಗಢ ರಜತ್ ಮಹೋತ್ಸವದಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಲಿದ್ದಾರೆ. ರಸ್ತೆಗಳು, ಕೈಗಾರಿಕೆ, ಆರೋಗ್ಯ ರಕ್ಷಣೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡ 14,260 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಮತ್ತು ಪರಿವರ್ತಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಗ್ರಾಮೀಣ ಜೀವನೋಪಾಯವನ್ನು ಬಲಪಡಿಸಲು, ಪ್ರಧಾನಮಂತ್ರಿ ಅವರು ಛತ್ತೀಸ್ ಗಢದ ಒಂಬತ್ತು ಜಿಲ್ಲೆಗಳಲ್ಲಿ 12 ಹೊಸ ಸ್ಟಾರ್ಟ್-ಅಪ್ ಗ್ರಾಮ ಉದ್ಯಮಶೀಲತಾ ಕಾರ್ಯಕ್ರಮ (ಎಸ್ ವಿಇಪಿ) ಬ್ಲಾಕ್ ಗಳನ್ನು ಉದ್ಘಾಟಿಸಲಿದ್ದಾರೆ. ಪೂರ್ಣಗೊಂಡ 3.51 ಲಕ್ಷ ಮನೆಗಳ ಗೃಹಪ್ರವೇಶದಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಲಿದ್ದಾರೆ ಮತ್ತು ರಾಜ್ಯದಾದ್ಯಂತ ಗ್ರಾಮೀಣ ಕುಟುಂಬಗಳಿಗೆ ಗೌರವಯುತ ವಸತಿ ಮತ್ತು ಭದ್ರತೆಯನ್ನು ಖಾತ್ರಿಪಡಿಸುವ ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ 3 ಲಕ್ಷ ಫಲಾನುಭವಿಗಳಿಗೆ 1200 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಿದ್ದಾರೆ.

ಪಥಲ್ಗಾಂವ್-ಕುಂಕುರಿಯಿಂದ ಛತ್ತೀಸ್ ಗಢ-ಜಾರ್ಖಂಡ್ ಗಡಿಯವರೆಗಿನ ಚತುಷ್ಪಥ ಗ್ರೀನ್ ಫೀಲ್ಡ್ ಹೆದ್ದಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಸುಮಾರು 3,150 ಕೋಟಿ ರೂ.ಗಳ ವೆಚ್ಚದಲ್ಲಿ ಭಾರತಮಾಲಾ ಪರಿಯೋಜನೆಯಡಿ ಅಭಿವೃದ್ಧಿಪಡಿಸುತ್ತಿದೆ. ಈ ಕಾರ್ಯತಂತ್ರದ ಕಾರಿಡಾರ್ ಕೊರ್ಬಾ, ರಾಯಗಢ, ಜಶ್ಪುರ್, ರಾಂಚಿ ಮತ್ತು ಜೆಮ್ ಶೆಡ್ ಪುರದಾದ್ಯಂತ ಪ್ರಮುಖ ಕಲ್ಲಿದ್ದಲು ಗಣಿಗಳು, ಕೈಗಾರಿಕಾ ವಲಯಗಳು ಮತ್ತು ಉಕ್ಕಿನ ಸ್ಥಾವರಗಳನ್ನು ಸಂಪರ್ಕಿಸುತ್ತದೆ, ಪ್ರಾದೇಶಿಕ ವ್ಯಾಪಾರ ಸಂಪರ್ಕಗಳನ್ನು ಬಲಪಡಿಸುವ ಮತ್ತು ಮಧ್ಯ ಭಾರತವನ್ನು ಪೂರ್ವ ಪ್ರದೇಶದೊಂದಿಗೆ ಸಂಯೋಜಿಸುವ ಪ್ರಮುಖ ಆರ್ಥಿಕ ಅಪಧಮನಿಯಾಗಿ ಕಾರ್ಯನಿರ್ವಹಿಸುತ್ತದೆ.

ಇದರ ಜೊತೆಗೆ, ಬಸ್ತಾರ್ ಮತ್ತು ನಾರಾಯಣಪುರ ಜಿಲ್ಲೆಗಳಾದ್ಯಂತ ಬಹು ವಿಭಾಗಗಳನ್ನು ವ್ಯಾಪಿಸಿರುವ ರಾಷ್ಟ್ರೀಯ ಹೆದ್ದಾರಿ 130ಡಿ (ನಾರಾಯಣಪುರ-ಕಸ್ತೂರಮೆಟಾ-ಕುತುಲ್-ನಿಲಂಗೂರ್-ಮಹಾರಾಷ್ಟ್ರ ಗಡಿ) ನಿರ್ಮಾಣ ಮತ್ತು ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ರಾಷ್ಟ್ರೀಯ ಹೆದ್ದಾರಿ 130 ಸಿ (ಮದಂಗ್ಮುಡಾ-ದೇವ್ಭೋಗ್-ಒಡಿಶಾ ಗಡಿ) ಮೇಲ್ದರ್ಜೆಗೇರಿಸುವ ದ್ವಿಪಥ ಹೆದ್ದಾರಿಯನ್ನು ಸುಸಜ್ಜಿತ ಹೆದ್ದಾರಿಯನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ. ಇವು ಬುಡಕಟ್ಟು ಮತ್ತು ಒಳನಾಡು ಪ್ರದೇಶಗಳಲ್ಲಿ ರಸ್ತೆ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ, ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಮಾರುಕಟ್ಟೆಗಳ ಲಭ್ಯತೆಯನ್ನು ಸುಧಾರಿಸುತ್ತವೆ ಮತ್ತು ದೂರದ ಪ್ರದೇಶಗಳಲ್ಲಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತವೆ.

ವಿದ್ಯುತ್ ವಲಯದಲ್ಲಿ, ಪ್ರಧಾನಮಂತ್ರಿ ಅವರು ಅಂತರ-ಪ್ರಾದೇಶಿಕ ಇಆರ್-ಡಬ್ಲ್ಯುಆರ್ ಇಂಟರ್ ಕನೆಕ್ಷನ್ ಯೋಜನೆಯನ್ನು ಉದ್ಘಾಟಿಸಲಿದ್ದಾರೆ, ಇದು ಪೂರ್ವ ಮತ್ತು ಪಶ್ಚಿಮ ಗ್ರಿಡ್ ಗಳ ನಡುವೆ ಅಂತರ-ಪ್ರಾದೇಶಿಕ ವಿದ್ಯುತ್ ವರ್ಗಾವಣೆ ಸಾಮರ್ಥ್ಯವನ್ನು 1,600 ಮೆಗಾವ್ಯಾಟ್ ಹೆಚ್ಚಿಸುತ್ತದೆ, ಗ್ರಿಡ್ ವಿಶ್ವಾಸಾರ್ಹತೆಯನ್ನು ಸುಧಾರಿಸುತ್ತದೆ ಮತ್ತು ಪ್ರದೇಶದಾದ್ಯಂತ ಸ್ಥಿರವಾದ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸುತ್ತದೆ.

ಇದರೊಂದಿಗೆ, ಛತ್ತೀಸ್ ಗಢದ ವಿದ್ಯುತ್ ಮೂಲಸೌಕರ್ಯವನ್ನು ಬಲಪಡಿಸುವ, ಪೂರೈಕೆ ವಿಶ್ವಾಸಾರ್ಹತೆಯನ್ನು ಸುಧಾರಿಸುವ ಮತ್ತು ಪ್ರಸರಣ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ 3,750 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಇಂಧನ ವಲಯದ ಯೋಜನೆಗಳ ಲೋಕಾರ್ಪಣೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪರಿಷ್ಕೃತ ವಿತರಣಾ ವಲಯ ಯೋಜನೆ (ಆರ್ ಎಎಸ್ಎಸ್) ಅಡಿಯಲ್ಲಿ, ಹೊಸ ವಿದ್ಯುತ್ ಮಾರ್ಗಗಳ ನಿರ್ಮಾಣ, ಫೀಡರ್ ವಿಭಜನೆ, ಟ್ರಾನ್ಸ್ ಫಾರ್ಮರ್ ಗಳ ಅಳವಡಿಕೆ, ಕಂಡಕ್ಟರ್ ಗಳ ಪರಿವರ್ತನೆ ಮತ್ತು ಗ್ರಾಮೀಣ ಮತ್ತು ಕೃಷಿ ವಿದ್ಯುತ್ ಪೂರೈಕೆಯನ್ನು ಸುಧಾರಿಸಲು ಕಡಿಮೆ ಒತ್ತಡದ ಜಾಲಗಳನ್ನು ಬಲಪಡಿಸುವುದು ಸೇರಿದಂತೆ ಸುಮಾರು 1,860 ಕೋಟಿ ರೂ.ಗಳ ಕಾಮಗಾರಿಗಳನ್ನು ಪ್ರಧಾನಿ ಸಮರ್ಪಿಸಲಿದ್ದಾರೆ. ರಾಯ್ಪುರ, ಬಿಲಾಸ್ಪುರ, ದುರ್ಗ್, ಬೆಮೆತಾರಾ, ಗರಿಯಾಬಂದ್ ಮತ್ತು ಬಸ್ತಾರ್ ನಂತಹ ಜಿಲ್ಲೆಗಳಲ್ಲಿ ಸುಮಾರು 480 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾದ ಒಂಬತ್ತು ಹೊಸ ವಿದ್ಯುತ್ ಉಪಕೇಂದ್ರಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಸ್ಥಿರವಾದ ವೋಲ್ಟೇಜ್ ಅನ್ನು ಖಾತ್ರಿಪಡಿಸುವ ಮೂಲಕ, ನಿಲುಗಡೆಗಳನ್ನು ಕಡಿಮೆ ಮಾಡುವ ಮೂಲಕ ಮತ್ತು ದೂರದ ಮತ್ತು ಬುಡಕಟ್ಟು ಪ್ರದೇಶಗಳಲ್ಲಿಯೂ ವಿಶ್ವಾಸಾರ್ಹ ವಿದ್ಯುತ್ ಒದಗಿಸುವ ಮೂಲಕ 15 ಲಕ್ಷಕ್ಕೂ ಹೆಚ್ಚು ಜನರಿಗೆ ಇದು ಪ್ರಯೋಜನವನ್ನು ನೀಡುತ್ತದೆ. ಹೆಚ್ಚುವರಿಯಾಗಿ, ಕಂಕೇರ್ ಮತ್ತು ಬಲೋದಬಜಾರ್-ಭಾಟಪಾರಾದಲ್ಲಿ ಪ್ರಮುಖ ಸೌಲಭ್ಯಗಳು ಸೇರಿದಂತೆ 1,415 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹೊಸ ಉಪಕೇಂದ್ರಗಳು ಮತ್ತು ಪ್ರಸರಣ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು, ಜೊತೆಗೆ ರಾಜ್ಯದಲ್ಲಿ ವಿದ್ಯುತ್ ವ್ಯಾಪ್ತಿ ಮತ್ತು ಗುಣಮಟ್ಟವನ್ನು ಮತ್ತಷ್ಟು ವಿಸ್ತರಿಸಲು ಹಲವಾರು ಜಿಲ್ಲೆಗಳಲ್ಲಿ ಹೊಸ ಆರ್ ಡಿಎಸ್ಎಸ್ ಕಾಮಗಾರಿಗಳು ಸೇರಿವೆ.
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ವಲಯದಲ್ಲಿ, ಪೆಟ್ರೋಲ್, ಡೀಸೆಲ್ ಮತ್ತು ಎಥೆನಾಲ್ ಗಾಗಿ 54,000 ಕಿಲೋಲೀಟರ್ (ಕೆಎಲ್) ಶೇಖರಣಾ ಸಾಮರ್ಥ್ಯದೊಂದಿಗೆ 460 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ ಎಚ್ ಪಿಸಿಎಲ್ ನ ಅತ್ಯಾಧುನಿಕ ಪೆಟ್ರೋಲಿಯಂ ತೈಲ ಡಿಪೋವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಈ ಸೌಲಭ್ಯವು ಪ್ರಮುಖ ಇಂಧನ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ, ಛತ್ತೀಸ್ ಗಢ ಮತ್ತು ನೆರೆಯ ರಾಜ್ಯಗಳಾದ್ಯಂತ ನಿರಂತರ ಪೂರೈಕೆಯನ್ನು ಖಚಿತಪಡಿಸುತ್ತದೆ. 10,000 ಕೆಎಲ್ ಎಥೆನಾಲ್ ಸಂಗ್ರಹಣೆಯೊಂದಿಗೆ, ಡಿಪೋ ಎಥೆನಾಲ್ ಮಿಶ್ರಣ ಕಾರ್ಯಕ್ರಮವನ್ನು ಸಹ ಬೆಂಬಲಿಸುತ್ತದೆ, ಪಳೆಯುಳಿಕೆ ಇಂಧನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ ಮತ್ತು ಶುದ್ಧ ಇಂಧನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.

ಸುಮಾರು 1,950 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾದ 489 ಕಿ.ಮೀ ಉದ್ದದ ನಾಗ್ಪುರ-ಜಾರ್ಸುಗುಡ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಮಂತ್ರಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಈ ಯೋಜನೆಯು ಭಾರತದ ಇಂಧನ ಮಿಶ್ರಣದಲ್ಲಿ ನೈಸರ್ಗಿಕ ಅನಿಲದ ಪಾಲನ್ನು ಶೇ.15ಕ್ಕೆ ಹೆಚ್ಚಿಸುವ ಮತ್ತು "ಒಂದು ರಾಷ್ಟ್ರ, ಒಂದು ಅನಿಲ ಗ್ರಿಡ್" ದೃಷ್ಟಿಕೋನವನ್ನು ಸಾಧಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಈ ಪೈಪ್ ಲೈನ್ ಛತ್ತೀಸ್ ಗಢದ 11 ಜಿಲ್ಲೆಗಳನ್ನು ರಾಷ್ಟ್ರೀಯ ಅನಿಲ ಗ್ರಿಡ್ ಗೆ ಸಂಪರ್ಕಿಸುತ್ತದೆ, ಕೈಗಾರಿಕಾ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ ಮತ್ತು ಈ ಪ್ರದೇಶಕ್ಕೆ ಶುದ್ಧ ಮತ್ತು ಕೈಗೆಟುಕುವ ಇಂಧನವನ್ನು ಒದಗಿಸುತ್ತದೆ.

ಕೈಗಾರಿಕಾ ಬೆಳವಣಿಗೆ ಮತ್ತು ಉದ್ಯೋಗವನ್ನು ಉತ್ತೇಜಿಸಲು, ಪ್ರಧಾನಮಂತ್ರಿ ಅವರು ಎರಡು ಸ್ಮಾರ್ಟ್ ಕೈಗಾರಿಕಾ ಪ್ರದೇಶಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಒಂದು ಜಂಜ್ ಗಿರ್-ಚಂಪಾ ಜಿಲ್ಲೆಯ ಸಿಲಡೆಹಿ-ಗಟ್ವಾ-ಬಿರ್ರಾದಲ್ಲಿ ಮತ್ತು ಇನ್ನೊಂದು ರಾಜನಂದಗಾಂವ್ ಜಿಲ್ಲೆಯ ಬಿಜ್ಲೆಟಾಲಾದಲ್ಲಿ. ಹೆಚ್ಚುವರಿಯಾಗಿ, ಪ್ರಧಾನಮಂತ್ರಿ ಅವರು ಅಟಲ್ ನಗರದ ನವ ರಾಯ್ಪುರದ ಸೆಕ್ಟರ್ -22 ರಲ್ಲಿ ಔಷಧೀಯ ಪಾರ್ಕ್ ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಪಾರ್ಕ್ ಔಷಧ ಮತ್ತು ಆರೋಗ್ಯ ಉತ್ಪಾದನೆಗೆ ಮೀಸಲಾದ ವಲಯವಾಗಿ ಕಾರ್ಯನಿರ್ವಹಿಸುತ್ತದೆ.

ಆರೋಗ್ಯ ಕ್ಷೇತ್ರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಅವರು ಐದು ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳಾದ ಮಾನೇಂದ್ರಗಢ, ಕಬೀರ್ ಧಾಮ್, ಜಂಜ್ ಗಿರ್-ಚಂಪಾ ಮತ್ತು ಗೀಡಮ್ (ದಾಂತೇವಾಡ), ಬಿಲಾಸ್ಪುರದ ಸರ್ಕಾರಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳು ವೈದ್ಯಕೀಯ ಶಿಕ್ಷಣವನ್ನು ಬಲಪಡಿಸುತ್ತವೆ, ಆರೋಗ್ಯ ಲಭ್ಯತೆಯನ್ನು ವಿಸ್ತರಿಸುತ್ತವೆ ಮತ್ತು ಛತ್ತೀಸ್ಗಢದಾದ್ಯಂತ ಸಾಂಪ್ರದಾಯಿಕ ವೈದ್ಯವನ್ನು ಉತ್ತೇಜಿಸುತ್ತವೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Cabinet approves Rs 4,415 crore upgrade of 233 km NH-347B in Madhya Pradesh

Media Coverage

Cabinet approves Rs 4,415 crore upgrade of 233 km NH-347B in Madhya Pradesh
NM on the go

Nm on the go

Always be the first to hear from the PM. Get the App Now!
...
UK Foreign Secretary meets Prime Minister
June 04, 2026

UK Foreign Secretary Yvette Cooper today met Prime Minister Shri Narendra Modi.

The Prime Minister expressed his pleasure upon the meeting and appreciated the deepening of the India-UK partnership in recent times which has unlocked unprecedented growth opportunities for both countries.

The Prime Minister affirmed that the India-UK Vision 2035 will continue to guide the partnership and strengthen joint efforts for the global good.

The Prime Minister posted on X:

"Pleased to meet UK Foreign Secretary Yvette Cooper. Appreciated the deepening of the India-UK partnership in recent times that has unlocked unprecedented growth opportunities for both our countries.

India-UK Vision 2035 will continue to guide our partnership and strengthen our joint efforts for global good.@YvetteCooperMP"