ಮಂಡ್ಯದ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ.
ಶ್ರೀ ಗುರು ಭೈರವೈಕ್ಯ ಮಂದಿರವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 71 ನೇ ಮಠಾಧೀಶರಾದ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಸ್ಮಾರಕವಾಗಿದೆ.
"ಸೌಂದರ್ಯ ಲಹರಿ ಮತ್ತು ಶಿವ ಮಹಿಮ್ನ ಸ್ತೋತ್ರಂ" ಎಂಬ ಪುಸ್ತಕವನ್ನು ಮಾಜಿ ಪ್ರಧಾನಮಂತ್ರಿ ಶ್ರೀ ಹೆಚ್.ಡಿ. ದೇವೇಗೌಡರೊಂದಿಗೆ ಪ್ರಧಾನಮಂತ್ರಿಯವರು ಜಂಟಿಯಾಗಿ ಬಿಡುಗಡೆ ಮಾಡಲಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 15 ಏಪ್ರಿಲ್ 2026 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಸುಮಾರು 11 ಗಂಟೆಗೆ ಪ್ರಧಾನಮಂತ್ರಿ ಅವರು ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾತನಾಡಲಿದ್ದಾರೆ.


ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಎಚ್.ಡಿ. ದೇವೇಗೌಡರೊಂದಿಗೆ "ಸೌಂದರ್ಯ ಲಹರಿ ಮತ್ತು ಶಿವ ಮಹಿಮ್ನ ಸ್ತೋತ್ರಂ" ಎಂಬ ಪುಸ್ತಕವನ್ನು ಜಂಟಿಯಾಗಿ ಬಿಡುಗಡೆ ಮಾಡಲಿದ್ದಾರೆ.


ಶ್ರೀ ಗುರು ಭೈರವೈಕ್ಯ ಮಂದಿರವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 71 ನೇ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರಿಗೆ ಸಮರ್ಪಿತವಾದ ಸ್ಮಾರಕವಾಗಿದೆ. ಸಾಂಪ್ರದಾಯಿಕ ದ್ರಾವಿಡ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಿಸಲಾದ ಮಂದಿರವು ದಿವಂಗತ ಶ್ರೀಗಳ ಜೀವನ ಮತ್ತು ಪರಂಪರೆಗೆ ಗೌರವವಾಗಿ ನಿಂತಿದೆ. ಮಂದಿರವನ್ನು ಕೇವಲ ಪೂಜ್ಯ ಸ್ಥಳವಾಗಿ ಮಾತ್ರವಲ್ಲದೆ ಭವಿಷ್ಯದ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಿಯೂ ಕಲ್ಪಿಸಲಾಗಿದೆ.


ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರು ಹಲವಾರು ಶಿಕ್ಷಣ ಸಂಸ್ಥೆಗಳು ಮತ್ತು ಆರೋಗ್ಯ ಸೌಲಭ್ಯಗಳನ್ನು ಸ್ಥಾಪಿಸಿದ ನಂತರ, ಸಾಮಾಜಿಕ ಸೇವೆಗೆ ತಮ್ಮ ಜೀವಮಾನದ ಬದ್ಧತೆಗಾಗಿ ವ್ಯಾಪಕವಾಗಿ ಗೌರವಿಸಲ್ಪಟ್ಟರು. ಸಮಾಜಕ್ಕೆ ಸೇವೆಯೇ ಅತ್ಯುನ್ನತ ಆರಾಧನಾ ರೂಪ ಎಂದು ಅವರು ದೃಢವಾಗಿ ನಂಬಿದ್ದರು ಮತ್ತು ಅವರ ಬೋಧನೆಗಳು ಜಾತಿ, ಧರ್ಮ ಮತ್ತು ಪ್ರದೇಶದ ಅಡೆತಡೆಗಳನ್ನು ಮೀರಿ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's Economic Journey: From Licence Raj To Pragmatic Governance

Media Coverage

India's Economic Journey: From Licence Raj To Pragmatic Governance
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಆಗಸ್ಟ್ 2026
August 27, 2026

Make in India Goes Global: Engineering Boom, Rice Triumph & EU FTA Breakthrough Under PM Modi