ಲಕ್ನೋದಲ್ಲಿ 80,000 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ 1406 ಯೋಜನೆಗಳ ಗುದ್ದಲಿ ಪೂಜೆ ಸಮಾರಂಭ @3.0 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಲಿದ್ದಾರೆ
​​​​​​​ಕಾನ್ಪುರದ ಪರೌಂಖ್ ಗ್ರಾಮದಲ್ಲಿ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಲಿದ್ದಾರೆ

ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿಯವರು ಜೂನ್ 3, 2022 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.  ಸುಮಾರು 11 ಗಂಟೆಗೆ, ಪ್ರಧಾನಮಂತ್ರಿಯವರು ಲಕ್ನೋದ ಇಂದಿರಾಗಾಂಧಿ ಪ್ರತಿಷ್ಠಾನವನ್ನು ತಲುಪಲಿದ್ದಾರೆ, ಅಲ್ಲಿ ಅವರು ಯುಪಿ ಹೂಡಿಕೆದಾರರ ಶೃಂಗಸಭೆಯ ಗುದ್ದಲಿ ಪೂಜೆಯ ಸಮಾರಂಭ @3.0 ಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1:45 ರ ಸುಮಾರಿಗೆ, ಪ್ರಧಾನಮಂತ್ರಿಯವರು ಕಾನ್ಪುರದ ಪರೌಂಕ್ ಗ್ರಾಮವನ್ನು ತಲುಪುತ್ತಾರೆ, ಅಲ್ಲಿ ಅವರು ಗೌರವಾನ್ವಿತ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರೊಂದಿಗೆ ಪಾತ್ರಿ ಮಾತಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 2 ಗಂಟೆಗೆ ಅವರು ಡಾ. ಬಿ ಆರ್ ಅಂಬೇಡ್ಕರ್ ಭವನಕ್ಕೆ, ನಂತರ ಮಧ್ಯಾಹ್ನ 2:15 ಕ್ಕೆ ಮಿಲನ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಕೇಂದ್ರವು ಗೌರವಾನ್ವಿತ ರಾಷ್ಟ್ರಪತಿಯವರ   ಪೂರ್ವಜರ ಮನೆಯಾಗಿದೆ, ಇದನ್ನು ಸಾರ್ವಜನಿಕ ಬಳಕೆಗಾಗಿ ದಾನ ಮಾಡಲಾಗಿದೆ ಮತ್ತು ಸಮುದಾಯ ಕೇಂದ್ರವಾಗಿ (ಮಿಲನ್ ಕೇಂದ್ರ) ಪರಿವರ್ತಿಸಲಾಗಿದೆ. ನಂತರ, ಅವರು ಮಧ್ಯಾಹ್ನ 2:30 ಕ್ಕೆ ಪರೌಂಖ್ ಗ್ರಾಮದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ.

ಗುದ್ದಲಿಪೂಜೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು 80,000 ಕೋಟಿ ರೂ.ಗೂ ಹೆಚ್ಚು ಮೊತ್ತದ 1406 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಯೋಜನೆಗಳು ಕೃಷಿ ಮತ್ತು ಕೃಷಿ ಸಂಬಂಧಿತ, ಐಟಿ ಮತ್ತು ಎಲೆಕ್ಟ್ರಾನಿಕ್ಸ್, ಎಂಎಸ್‌ಎಂಇ, ಉತ್ಪಾದನೆ, ನವೀಕರಿಸಬಹುದಾದ ಇಂಧನ, ಔಷಧ, ಪ್ರವಾಸೋದ್ಯಮ, ರಕ್ಷಣಾ ಮತ್ತು ವೈಮಾನಿಕ, ​​ಕೈಮಗ್ಗ ಮತ್ತು ಜವಳಿ ಮುಂತಾದ ವಿವಿಧ ಕ್ಷೇತ್ರಗಳನ್ನು ಒಳಗೊಂಡಿವೆ. ಈ ಸಮಾರಂಭದಲ್ಲಿ ದೇಶದ ಉದ್ಯಮದ ದಿಗ್ಗಜರು ಭಾಗವಹಿಸಲಿದ್ದಾರೆ.  

ಯುಪಿ ಹೂಡಿಕೆದಾರರ ಶೃಂಗಸಭೆ 2018 ಅನ್ನು 21ನೇ -22ನೇ ಫೆಬ್ರವರಿ 2018 ರಂದು ನಡೆಸಲಾಯಿತು, ಮೊದಲ ಗುದ್ದಲಿ ಪೂಜೆಯ ಸಮಾರಂಭವನ್ನು ಜುಲೈ 29, 2018 ರಂದು ಮತ್ತು ಎರಡನೇ ಗುದ್ದಲಿ ಪೂಜೆಯ ಸಮಾರಂಭವನ್ನು ಜುಲೈ 28, 2019 ರಂದು ನಡೆಸಲಾಯಿತು. ಮೊದಲ ಗ್ರೌಂಡ್ ಬ್ರೇಕಿಂಗ್ (ಗುದ್ದಲಿ ಪೂಜೆಯ ) ಸಮಾರಂಭದಲ್ಲಿ, ಅಡಿಪಾಯ 61,500 ಕೋಟಿ ರೂ.ಗಿಂತ   ಹೆಚ್ಚು ಮೌಲ್ಯದ 81 ಯೋಜನೆಗಳಿಗೆ ಅಡಿಪಾಯ ಹಾಕಲಾಯಿತು, ಮತ್ತು ಎರಡನೇ ಗುದ್ದಲಿ ಪೂಜೆಯ ಸಮಾರಂಭದಲ್ಲಿ ರೂ.67,000 ಕೋಟಿಗಿಂತ ಹೆಚ್ಚಿನ ಹೂಡಿಕೆಯೊಂದಿಗೆ 290 ಯೋಜನೆಗಳಿಗೆ ಅಡಿಪಾಯ ಹಾಕಲಾಯಿತು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Political stability helped India seal major trade deals: PM Narendra Modi

Media Coverage

Political stability helped India seal major trade deals: PM Narendra Modi
NM on the go

Nm on the go

Always be the first to hear from the PM. Get the App Now!
...
Grand Mufti of India Sheikh Abubakr Ahmad meets Prime Minister
February 16, 2026

Sheikh Abubakr Ahmad, Grand Mufti of India met the Prime Minister, Shri Narendra Modi today. During the meeting, they exchanged views on a wide range of issues. The Prime Minister noted the Grand Mufti’s commendable efforts to further social harmony, brotherhood, and improve education across the country.

In a post on X, Shri Modi said:

“Had a very good interaction with Sheikh Abubakr Ahmad Sahab, Grand Mufti of India. We exchanged views on a wide range of issues. His efforts to further social harmony, brotherhood and improve education are noteworthy.

@shkaboobacker”