ವಾರಣಾಸಿಯಲ್ಲಿ 3,880 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
ಯೋಜನೆಗಳ ವಿಶೇಷ ಗಮನ: ರಸ್ತೆ, ವಿದ್ಯುತ್, ಶಿಕ್ಷಣ, ಪ್ರವಾಸೋದ್ಯಮ
ಹೊಸದಾಗಿ ನೋಂದಾಯಿತ ಸ್ಥಳೀಯ ವಸ್ತುಗಳು ಮತ್ತು ಉತ್ಪನ್ನಗಳಿಗೆ ಭೌಗೋಳಿಕ ಸೂಚಕ (ಜಿಐ) ಪ್ರಮಾಣಪತ್ರಗಳನ್ನು ನೀಡಲಿರುವ ಪ್ರಧಾನಮಂತ್ರಿ
ಮಧ್ಯಪ್ರದೇಶದ ಇಸಾಗರ್ ನಲ್ಲಿರುವ ಗುರು ಜೀ ಮಹಾರಾಜ್ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆ ನೆರವೇರಿಸಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 11ರಂದು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ವಾರಣಾಸಿಗೆ ಪ್ರಯಾಣಿಸಲಿದ್ದು, ಬೆಳಗ್ಗೆ 11 ಗಂಟೆಗೆ ಅವರು 3,880 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಇದೇ ವೇಳೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ನಂತರ ಮಧ್ಯಪ್ರದೇಶಕ್ಕೆ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 3:15 ರ ಸುಮಾರಿಗೆ ಇಸಾಗರ್ ನ ಗುರು ಜೀ ಮಹಾರಾಜ್ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆ ಸಲ್ಲಿಸಲಿದ್ದಾರೆ. ಇದಲ್ಲದೆ, ಸಂಜೆ 4:15 ರ ಸುಮಾರಿಗೆ ಅವರು ಆನಂದಪುರ ಧಾಮದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಉತ್ತರ ಪ್ರದೇಶದಲ್ಲಿ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಅವರು ವಾರಣಾಸಿಯಲ್ಲಿ 3,880 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಉದ್ಘಾಟಿಸಲಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿಗೆ, ವಿಶೇಷವಾಗಿ ವಾರಣಾಸಿಯಲ್ಲಿ ರಸ್ತೆ ಸಂಪರ್ಕವನ್ನು ಹೆಚ್ಚಿಸುವ ಅವರ ಬದ್ಧತೆಗೆ ಅನುಗುಣವಾಗಿ, ಅವರು ಈ ಪ್ರದೇಶದ ವಿವಿಧ ರಸ್ತೆ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದಲ್ಲದೆ, ವಾರಣಾಸಿ ರಿಂಗ್ ರಸ್ತೆ ಮತ್ತು ಸಾರನಾಥ್ ನಡುವಿನ ರಸ್ತೆ ಸೇತುವೆ, ನಗರದ ಭಿಖಾರಿಪುರ ಮತ್ತು ಮಂಡುವಾಡಿಹ್ ಕ್ರಾಸಿಂಗ್ ಗಳಲ್ಲಿ ಫ್ಲೈಓವರ್ ಗಳು ಮತ್ತು ವಾರಣಾಸಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಹೆದ್ದಾರಿ -31 ರಲ್ಲಿ ಹೆದ್ದಾರಿ ಅಂಡರ್ ಪಾಸ್ ರಸ್ತೆ ಸುರಂಗಕ್ಕೆ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ವಿದ್ಯುತ್ ಮೂಲಸೌಕರ್ಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಅವರು ವಾರಣಾಸಿ ವಿಭಾಗದ ಜೌನ್ ಪುರ, ಚಂದೌಲಿ ಮತ್ತು ಗಾಜಿಪುರ ಜಿಲ್ಲೆಗಳಲ್ಲಿ 1,045 ಕೋಟಿ ರೂಪಾಯಿ ಮೌಲ್ಯದ ಎರಡು 400 ಕೆವಿ ಮತ್ತು ಒಂದು 220 ಕೆವಿ ಪ್ರಸರಣ ಉಪಕೇಂದ್ರಗಳು ಮತ್ತು ಸಂಬಂಧಿತ ಪ್ರಸರಣ ಮಾರ್ಗಗಳನ್ನು ಉದ್ಘಾಟಿಸಲಿದ್ದಾರೆ. ವಾರಣಾಸಿಯ ಚೌಕಘಾಟ್ ನಲ್ಲಿ 220 ಕೆವಿ ಪ್ರಸರಣ ಉಪಕೇಂದ್ರ, ಗಾಜಿಪುರದಲ್ಲಿ 132 ಕೆವಿ ಪ್ರಸರಣ ಉಪಕೇಂದ್ರ ಮತ್ತು ವಾರಣಾಸಿ ನಗರ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು 775 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿಸ್ತರಣೆಗೆ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಭದ್ರತಾ ಸಿಬ್ಬಂದಿಗೆ ಸೌಲಭ್ಯಗಳನ್ನು ಸುಧಾರಿಸಲು ಪೊಲೀಸ್ ಲೈನ್ ನಲ್ಲಿ ಟ್ರಾನ್ಸಿಟ್ ಹಾಸ್ಟೆಲ್ ಮತ್ತು ಪಿಎಸಿ ರಾಮನಗರ ಕ್ಯಾಂಪಸ್ ನಲ್ಲಿ ಬ್ಯಾರಕ್ ಗಳನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ಹೊಸ ಆಡಳಿತಾತ್ಮಕ ಕಟ್ಟಡಗಳು ಮತ್ತು ಪೊಲೀಸ್ ಲೈನ್ ನಲ್ಲಿ ವಸತಿ ನಿಲಯಕ್ಕೆ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಎಲ್ಲರಿಗೂ ಶಿಕ್ಷಣವನ್ನು ಖಾತ್ರಿಪಡಿಸುವ ತಮ್ಮ ದೃಷ್ಟಿಕೋನಕ್ಕೆ ಅನುಗುಣವಾಗಿ, ಪಿಂಡ್ರಾದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಬಾರ್ಕಿ ಗ್ರಾಮದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಕಾಲೇಜು, 356 ಗ್ರಾಮೀಣ ಗ್ರಂಥಾಲಯಗಳು ಮತ್ತು 100 ಅಂಗನವಾಡಿ ಕೇಂದ್ರಗಳು ಸೇರಿದಂತೆ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ 77 ಪ್ರಾಥಮಿಕ ಶಾಲಾ ಕಟ್ಟಡಗಳ ನವೀಕರಣ ಮತ್ತು ವಾರಣಾಸಿಯ ಚೋಳಾಪುರದಲ್ಲಿ ಕಸ್ತೂರ್ಬಾ ಗಾಂಧಿ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಗರದಲ್ಲಿ ಕ್ರೀಡಾ ಮೂಲಸೌಕರ್ಯವನ್ನು ಉತ್ತೇಜಿಸಲು, ಉದಯ್ ಪ್ರತಾಪ್ ಕಾಲೇಜಿನಲ್ಲಿ ಫ್ಲಡ್ ಲೈಟ್ ಗಳು ಮತ್ತು ಪ್ರೇಕ್ಷಕರ ಗ್ಯಾಲರಿಯೊಂದಿಗೆ ಸಿಂಥೆಟಿಕ್ ಹಾಕಿ ಟರ್ಫ್ ಮತ್ತು ಶಿವಪುರದಲ್ಲಿ ಮಿನಿ ಕ್ರೀಡಾಂಗಣಕ್ಕೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಗಂಗಾ ನದಿಯಲ್ಲಿ ಸಾಮ್ನೆ ಘಾಟ್ ಮತ್ತು ಶಾಸ್ತ್ರಿ ಘಾಟ್ ಪುನರಾಭಿವೃದ್ಧಿ, ಜಲ ಜೀವನ್ ಮಿಷನ್ ಅಡಿಯಲ್ಲಿ 345 ಕೋಟಿ ರೂ.ಗೂ ಹೆಚ್ಚು ಮೌಲ್ಯದ 130 ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳು, ವಾರಣಾಸಿಯ ಆರು ಪುರಸಭೆಯ ವಾರ್ಡ್ ಗಳ ಸುಧಾರಣೆ ಮತ್ತು ವಾರಣಾಸಿಯ ವಿವಿಧ ಸ್ಥಳಗಳಲ್ಲಿ ಭೂದೃಶ್ಯ ಮತ್ತು ಶಿಲ್ಪ ಸ್ಥಾಪನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ.

ಕುಶಲಕರ್ಮಿಗಳಿಗಾಗಿ ಎಂಎಸ್ಎಂಇ ಯುನಿಟಿ ಮಾಲ್, ಮೋಹನ್ಸರಾಯ್ ನಲ್ಲಿ ಸಾರಿಗೆ ನಗರ ಯೋಜನೆಯ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳು, ಡಬ್ಲ್ಯುಟಿಪಿ ಭೇಲುಪುರದಲ್ಲಿ 1 ಮೆಗಾವ್ಯಾಟ್ ಸೌರ ವಿದ್ಯುತ್ ಸ್ಥಾವರ, 40 ಗ್ರಾಮ ಪಂಚಾಯಿತಿಗಳಲ್ಲಿ ಸಮುದಾಯ ಭವನಗಳು ಮತ್ತು ವಾರಣಾಸಿಯ ವಿವಿಧ ಉದ್ಯಾನವನಗಳ ಸೌಂದರ್ಯೀಕರಣಕ್ಕೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪ್ರಧಾನಮಂತ್ರಿ ಅವರು 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಅನುಕೂಲವಾಗುವಂತೆ ಆಯುಷ್ಮಾನ್ ವೇ ವಂದನಾ ಕಾರ್ಡ್ ಗಳನ್ನು ಮೊದಲ ಬಾರಿಗೆ ಹಸ್ತಾಂತರಿಸಲಿದ್ದಾರೆ. ತಬಲಾ, ಚಿತ್ರಕಲೆ, ಥಂಡೈ, ತಿರಂಗಾ ಬರ್ಫಿ ಸೇರಿದಂತೆ ವಿವಿಧ ಸ್ಥಳೀಯ ವಸ್ತುಗಳು ಮತ್ತು ಉತ್ಪನ್ನಗಳಿಗೆ ಭೌಗೋಳಿಕ ಸೂಚಕ (ಜಿಐ) ಪ್ರಮಾಣಪತ್ರಗಳನ್ನು ಅವರು ಪ್ರದಾನ ಮಾಡಲಿದ್ದಾರೆ. ಬನಾಸ್ ಡೈರಿಗೆ ಸಂಬಂಧಿಸಿದ ಉತ್ತರ ಪ್ರದೇಶದ ಹಾಲು ಪೂರೈಕೆದಾರರಿಗೆ 105 ಕೋಟಿ ರೂ.ಗಳ ಬೋನಸ್ ಅನ್ನು ಅವರು ವರ್ಗಾಯಿಸಲಿದ್ದಾರೆ.

ಮಧ್ಯಪ್ರದೇಶದಲ್ಲಿ ಪ್ರಧಾನಮಂತ್ರಿ

ಭಾರತದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಮುಂದುವರಿಸುವ ಬದ್ಧತೆಗೆ ಅನುಗುಣವಾಗಿ ಪ್ರಧಾನಮಂತ್ರಿ ಅವರು ಮಧ್ಯಪ್ರದೇಶದ ಅಶೋಕನಗರ ಜಿಲ್ಲೆಯ ಇಸಾಗರ್ ತಹಸಿಲ್ ನ ಆನಂದಪುರ ಧಾಮ್ ಗೆ ಭೇಟಿ ನೀಡಲಿದ್ದಾರೆ. ಅವರು ಗುರು ಜೀ ಮಹಾರಾಜ್ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆ ಸಲ್ಲಿಸಲಿದ್ದಾರೆ. ಅವರು ಆನಂದಪುರ ಧಾಮದ ದೇವಾಲಯ ಸಂಕೀರ್ಣಕ್ಕೂ ಭೇಟಿ ನೀಡಲಿದ್ದಾರೆ.

ಆನಂದಪುರ ಧಾಮವನ್ನು ಆಧ್ಯಾತ್ಮಿಕ ಮತ್ತು ಲೋಕೋಪಕಾರಿ ಉದ್ದೇಶಗಳಿಗಾಗಿ ಸ್ಥಾಪಿಸಲಾಗಿದೆ. 315 ಹೆಕ್ಟೇರ್ ಪ್ರದೇಶದಲ್ಲಿ ವ್ಯಾಪಿಸಿರುವ ಇದು 500ಕ್ಕೂ ಹೆಚ್ಚು ಹಸುಗಳನ್ನು ಹೊಂದಿರುವ ಆಧುನಿಕ ಗೋಶಾಲೆಯನ್ನು ಹೊಂದಿದೆ ಮತ್ತು ಶ್ರೀ ಆನಂದಪುರ ಟ್ರಸ್ಟ್ ಕ್ಯಾಂಪಸ್ ಅಡಿಯಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದೆ. ಟ್ರಸ್ಟ್ ಸುಖ್ಪುರ ಗ್ರಾಮದಲ್ಲಿ ಚಾರಿಟಬಲ್ ಆಸ್ಪತ್ರೆ, ಸುಖಪುರ ಮತ್ತು ಆನಂದಪುರದ ಶಾಲೆಗಳು ಮತ್ತು ದೇಶಾದ್ಯಂತ ವಿವಿಧ ಸತ್ಸಂಗ ಕೇಂದ್ರಗಳನ್ನು ನಡೆಸುತ್ತಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
New farm-sector scheme gives thrust to 100 laggard districts

Media Coverage

New farm-sector scheme gives thrust to 100 laggard districts
NM on the go

Nm on the go

Always be the first to hear from the PM. Get the App Now!
...
Prime Minister pays tributes to Shri Biju Patnaik Ji on his birth anniversary
March 05, 2026

The Prime Minister, Shri Narendra Modi paid tributes to former Chief Minister of Odisha, Shri Biju Patnaik on his birth anniversary and remembered him for his passion towards furthering the progress of Odisha.

The Prime Minister wrote on X;

“On his birth anniversary today, I pay tributes to Shri Biju Patnaik Ji and remember his passion towards furthering the progress of Odisha.”