ಪ್ರಧಾನಿಯವರು ರಾಜ್ಯಸಭೆಯಲ್ಲಿ ಸಂವಿಧಾನ (ನೂರಾ ಇಪ್ಪತ್ತೆಂಟನೇ ತಿದ್ದುಪಡಿ) ಮಸೂದೆ, 2023 ರ ಮೇಲಿನ ಚರ್ಚೆಗಳಿಗೆ ಅಂತ್ಯ ಹಾಡಿದರು. ಕಳೆದ ಎರಡು ದಿನಗಳಿಂದ ಉಭಯ ಸದನಗಳಲ್ಲಿ ಫಲಪ್ರದ ಚರ್ಚೆಗಳು ಮತ್ತು ಸಮಾಲೋಚನೆಗಳು ನಡೆಯುತ್ತಿವೆ ಎಂದು ಹೇಳಿದರು. ಆತ್ಮೀಯ ಸದಸ್ಯರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈ ಚರ್ಚೆಯಲ್ಲಿನ ಪ್ರತಿಯೊಂದು ಪದಕ್ಕೂ ತನ್ನದೇ ಆದ ಮಹತ್ವ ಮತ್ತು ಅರ್ಥವಿದೆ, ಈ ಅರ್ಥಪೂರ್ಣ ಚರ್ಚೆಗಳು ರಾಷ್ಟ್ರದ ಮುಂಬರುವ ಸಂಸತ್ತಿನ ಪ್ರಯಾಣದಲ್ಲಿ ಅತ್ಯಂತ ಉಪಯುಕ್ತವಾಗುತ್ತವೆ ಎಂದು ಪ್ರಧಾನಮಂತ್ರಿ ಹೇಳಿದರು.
ಮಸೂದೆಗೆ ಸದನದ ಸದಸ್ಯರ ಬೆಂಬಲ ನೀಡಬೇಕೆಂದು ಪುನರುಚ್ಚರಿಸಿದ ಪ್ರಧಾನಮಂತ್ರಿ, ಪ್ರತಿಯೊಬ್ಬ ಸದಸ್ಯರಿಗೂ ಧನ್ಯವಾದಗಳನ್ನು ಅರ್ಪಿಸಿದರು.
ಇದು ದೇಶದ ಜನರಲ್ಲಿ ಹೊಸ ಆತ್ಮವಿಶ್ವಾಸವನ್ನು ಪುನರುಜ್ಜೀವನಗೊಳಿಸುತ್ತದೆ ಮತ್ತು ಎಲ್ಲಾ ಸದಸ್ಯರು ಮತ್ತು ಎಲ್ಲಾ ರಾಜಕೀಯ ಪಕ್ಷಗಳು ಪ್ರಮುಖ ಪಾತ್ರವಹಿಸಿವೆ. ಮಸೂದೆ ಅಂಗೀಕಾರದಿಂದ ಮಹಿಳಾ ಶಕ್ತಿಗೆ ವಿಶೇಷ ಗೌರವ ಸಿಗುತ್ತಿದೆ. ಈ ಮಸೂದೆಯತ್ತ ಎಲ್ಲಾ ರಾಜಕೀಯ ಪಕ್ಷಗಳ ಸಕಾರಾತ್ಮಕ ಚಿಂತನೆಯ ಮೂಲಕ ನಮ್ಮ ದೇಶದ ಮಹಿಳಾ ಶಕ್ತಿಗೆ ಹೊಸ ಶಕ್ತಿ ತುಂಬುತ್ತಿದೆ. ಈ ಮಸೂದೆಯು ಭಾರತದ ಉಜ್ವಲ ಭವಿಷ್ಯದ ಭರವಸೆಯಾಗಲಿದೆ, ಏಕೆಂದರೆ ಅದು ನಾಯಕತ್ವದೊಂದಿಗೆ ಮುನ್ನಡೆಯುತ್ತದೆ ಮತ್ತು ಹೊಸ ಆತ್ಮವಿಶ್ವಾಸದೊಂದಿಗೆ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡುತ್ತದೆ ಎಂದು ಅವರು ಹೇಳಿದರು.
ಸರ್ವಾನುಮತದಿಂದ ಮಸೂದೆಯನ್ನು ಅಂಗೀಕರಿಸುವಂತೆ ಮೇಲ್ಮನೆ ಸದಸ್ಯರಿಗೆ ಮನವಿ ಮಾಡಿದರಲ್ಲದೇ, ಚಿಂತನ ಶೀಲ ಚರ್ಚೆಗಳಲ್ಲಿ ವ್ಯಕ್ತಪಡಿಸಿದ ಭಾವನೆಗಳಿಗೆ ಕೃತಜ್ಞತೆಗಳನ್ನು ವ್ಯಕ್ತಪಡಿಸಿ ಪ್ರಧಾನಮಂತ್ರಿಗಳು ಭಾಷಣವನ್ನು ಮುಕ್ತಾಯಗೊಳಿಸಿದರು


