ಪ್ರತಿಷ್ಠಿತ ಪದ್ಮ ಪ್ರಶಸ್ತಿಗಾಗಿ ನಾಮನಿರ್ದೇಶನ ಪ್ರಕ್ರಿಯೆಯಲ್ಲಿ ಭಾರತದ ಜನರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ.

ಸಮಾಜಕ್ಕೆ ಗಣನೀಯ ಕೊಡುಗೆ ನೀಡಿದ ತಳಮಟ್ಟದ ಸಾಧಕರನ್ನು ಗುರುತಿಸುವ ಅಗತ್ಯದ ಬಗ್ಗೆ ಶ್ರೀ ಮೋದಿ ಅವರು ಒತ್ತಿ ಹೇಳಿದ್ದಾರೆ. ನಾಮನಿರ್ದೇಶನ ಪ್ರಕ್ರಿಯೆಯ ಪಾರದರ್ಶಕ ಮತ್ತು ಪಾಲ್ಗೊಳ್ಳುವಿಕೆ ವಿಧಾನದ ಬಗ್ಗೆ ಒತ್ತಿ ಹೇಳಿರುವ ಶ್ರೀ ಮೋದಿ ಅವರು, ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ನಾಮನಿರ್ದೇಶನಗಳು ಸ್ವೀಕೃತವಾಗಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಮತ್ತು ಅರ್ಹ ಅಭ್ಯರ್ಥಿಗಳನ್ನು ಅಧಿಕೃತ ಜಾಲತಾಣ https://awards.gov.in ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡುವಂತೆ ಮನವಿ ಮಾಡಿದ್ದಾರೆ. 

ಪ್ರಧಾನಮಂತ್ರಿಗಳ ಎಕ್ಸ್‌ ಪೋಸ್ಟ್‌ ಹೀಗಿದೆ:

“ನಾವು ಕಳೆದ ದಶಕದಲ್ಲಿ ಅಸಂಖ್ಯಾತ ತಳಮಟ್ಟದ ಸಾಧಕರಿಗೆ #PeoplesPadma ನೀಡಿ ಗೌರವಿಸಿದ್ದೇವೆ. ಈ ಪ್ರಶಸ್ತಿ ಪುರಸ್ಕೃತರ ಜೀವನ ಪಯಣ ಅಸಂಖ್ಯಾತ ಜನರಿಗೆ ಪ್ರೇರಣೆಯಾಗಿದೆ. ಅವರ ಸ್ಥೈರ್ಯ ಮತ್ತು ಗುರಿ ಸಾಧನೆಯ ಛಲ ಅವರ ಸಮೃದ್ಧ ಕಾರ್ಯದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ.  ಹೆಚ್ಚು ಪಾರದರ್ಶಕ ಮತ್ತು ಪಾಲ್ಗೊಳ್ಳುವಿಕೆಯ ವ್ಯವಸ್ಥೆಯನ್ನು ರೂಪಿಸುವ ಉತ್ಸಾಹದಲ್ಲಿ, ನಮ್ಮ ಸರ್ಕಾರವು ವಿವಿಧ ಪದ್ಮ ಪ್ರಶಸ್ತಿಗಳಿಗೆ ಇತರರನ್ನು ನಾಮನಿರ್ದೇಶನ ಮಾಡುವಂತೆ ನಾಗರಿಕರನ್ನು ಆಹ್ವಾನಿಸುತ್ತಿದೆ. 

ಅನೇಕ ನಾಮಪತ್ರಗಳು ಸ್ವೀಕೃತವಾಗಿದೆ ಎಂಬುದು ನನಗೆ  ಸಂತಸ ತಂದಿದೆ.  ನಾಮನಿರ್ದೇಶನಗಳನ್ನು  ಸಲ್ಲಿಸಲು ಈ ತಿಂಗಳ 15 ಕೊನೆಯ ದಿನವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಪದ್ಮ ಪ್ರಶಸ್ತಿಗಳಿಗೆ ಸ್ಪೂರ್ತಿದಾಯಕ ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡುವಂತೆ ನಾನು ಕೋರುತ್ತೇನೆ.  ನಾಮನಿರ್ದೇಶನ ಮಾಡಲು ಲಿಂಕ್ ಹೀಗಿದೆ: - https://awards.gov.in”.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Why India's ₹37,500 cr coal gasification push matters for its energy future

Media Coverage

Why India's ₹37,500 cr coal gasification push matters for its energy future
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಮೇ 2026
May 14, 2026

Kisan Kalyan to Viksit Bharat: PM Modi Delivers Jobs, Markets & Dignity Across Rural and Industrial India