ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ರಾಷ್ಟಪತಿ ಅಧಿಕಾರಾವಧಿ ಫಲಪ್ರದವಾಗಿರಲಿ ಎಂದು ಪ್ರಧಾನಮಂತ್ರಿ ಶುಭ ಕೋರಿದ್ದಾರೆ.  ಅವರು ಅಧಿಕಾರವಹಿಸಿಕೊಂಡಿರುವುದು ಭಾರತಕ್ಕೆ ವಿಶೇಷವಾಗಿ ಬಡವರು, ಶೋಷಿತರು ಮತ್ತು ದುರ್ಬಲರಿಗೆ ಆನಂದ ಭಾಷ್ಪದ ಕ್ಷಣಗಳಾಗಿವೆ. ರಾಷ್ಟ್ರಪತಿ ಅವರು ತಮ್ಮ ಅಧಿಕಾರ ಸ್ವೀಕಾರ ಭಾಷಣದಲ್ಲಿ ಭಾರತದ ಸಾಧನೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ ಮತ್ತು ಭಾರತ ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ಸಮಯದಲ್ಲಿ ಮುಂದಿನ ಹಾದಿಯ ಭವಿಷ್ಯದ ಮುನ್ನೋಟವನ್ನು ಪ್ರಸ್ತುತಪಡಿಸಿದ್ದಾರೆ. 

ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.

“ದ್ರೌಪದಿ ಮುರ್ಮು ಜಿ ಅವರು ಭಾರತದ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದನ್ನು ಇಡೀ ರಾಷ್ಟ್ರವು ಹೆಮ್ಮೆಯಿಂದ ವೀಕ್ಷಿಸಿದೆ.ಅವರು ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ್ದು, ಭಾರತಕ್ಕೆ ವಿಶೇಷವಾಗಿ ಬಡವರು, ಶೋಷಿತರು ಮತ್ತು ದುರ್ಬಲರಿಗೆ ಅತೀವ ಸಂತಸದ ಕ್ಷಣವಾಗಿದೆ. ಅವರ ರಾಷ್ಟ್ರಪತಿ ಅಧಿಕಾರಾವಧಿ ಫಲಪ್ರದವಾಗಿರಲಿ ನಾನು ಅವರಿಗೆ ಶುಭ ಕೋರುತ್ತೇನೆ’’ 

“ಪ್ರಮಾಣವಚನ ಸ್ವೀಕರಿಸಿದ ನಂತರ ಮಾಡಿದ ಭಾಷಣದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಜಿ ಭರವಸೆ ಮತ್ತು ಸಹಾನುಭೂತಿಯ ಸಂದೇಶವನ್ನು ನೀಡಿದರು. ಅವರು ಭಾರತದ ಸಾಧನೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು ಮತ್ತು ಭಾರತವು ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ಸಮಯದಲ್ಲಿ ಮುಂದಿನ ಹಾದಿಯ ಭವಿಷ್ಯದ ಮುನ್ನೋಟವನ್ನು ಪ್ರಸ್ತುತಪಡಿಸಿದರು’’

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
A chance for India’s creative ecosystem to make waves

Media Coverage

A chance for India’s creative ecosystem to make waves
NM on the go

Nm on the go

Always be the first to hear from the PM. Get the App Now!
...
The world will always remember Pope Francis's service to society: PM Modi
April 26, 2025

Prime Minister, Shri Narendra Modi, said that Rashtrapati Ji has paid homage to His Holiness, Pope Francis on behalf of the people of India. "The world will always remember Pope Francis's service to society" Shri Modi added.

The Prime Minister posted on X :

"Rashtrapati Ji pays homage to His Holiness, Pope Francis on behalf of the people of India. The world will always remember his service to society."