ಸಾಂಕ್ರಾಮಿಕದಲ್ಲಿ ಜೀವ ಕಳೆದುಕೊಂಡ ಜನರಿಗೆ ಸಂತಾಪ ಸೂಚಿಸಿದರು. ಕಳೆದ ನೂರು ವರ್ಷಗಳಲ್ಲೇ ಅತ್ಯಂತ ದೊಡ್ಡ ವಿಪತ್ತು ಈ ಸಾಂಕ್ರಾಮಿಕ ಎಂದು ಬಣ್ಣಿಸಿದ ಪ್ರಧಾನಮಂತ್ರಿಯವರು, ಕಣ್ಣಿಗೆ ಕಾಣದ ಈ ಸಾಂಕ್ರಾಮಿಕವನ್ನು ಆಧುನಿಕ ಜಗತ್ತು ಹಿಂದೆಂದೂ ಕಂಡಿರಲಿಲ್ಲ, ಭಾರತ ಇದರ ವಿರುದ್ಧ ಹಲವು ರಂಗದಲ್ಲಿ ಹೋರಾಡುತ್ತಿದೆ ಎಂದು ತಿಳಿಸಿದರು. ಶ್ರೀ ಮೋದಿಯವರು ಹಲವು ಪ್ರಮುಖ ಪ್ರಕಟಣೆಗಳನ್ನೂ ಮಾಡಿದರು.
ಹಲವು ರಾಜ್ಯಗಳು ಲಸಿಕೆಯ ಕಾರ್ಯತಂತ್ರ ಮರು ಪರಿಶೀಲಿಸುವಂತೆ ಮುಂದೆ ಬಂದಿದ್ದವು, ಮತ್ತು ಮೇ 1ರ ಮೊದಲು ಇದ್ದ ವ್ಯವಸ್ಥೆಯನ್ನು ಮರಳಿ ತರಲು ಕೋರಿದರು ಎಂದು ತಿಳಿಸಿದ ಪ್ರಧಾನಮಂತ್ರಿ, ಈಗ ರಾಜ್ಯಗಳ ಬಳಿ ಇರುವ ಶೇ.25ರಷ್ಟು ಲಸಿಕೆಯ ಕಾರ್ಯವನ್ನು ಭಾರತ ಸರ್ಕಾರವೇ ಮರಳಿ ಪಡೆದುಕೊಳ್ಳಲಿದೆ ಎಂದು ಪ್ರಕಟಿಸಿದರು. ಇದನ್ನು ಇನ್ನು ಎರಡು ವಾರಗಳಲ್ಲಿ ಜಾರಿಗೊಳಿಸಲಾಗುವುದು. ಈ ಎರಡು ವಾರಗಳಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಹೊಸ ಮಾರ್ಗಸೂಚಿ ರೂಪಿಸಲಿವೆ ಎಂದರು. ಪ್ರಧಾನಮಂತ್ರಿಯವರು ಜೂನ್ 21ರ ತರುವಾಯ ಭಾರತ ಸರ್ಕಾರ, 18 ವರ್ಷ ಮೇಲ್ಪಟ್ಟ ಎಲ್ಲ ಭಾರತೀಯ ಪ್ರಜೆಗಳಿಗೂ ಉಚಿತವಾಗಿ ಲಸಿಕೆ ಹಾಕುವುದು ಎಂದು ಪ್ರಕಟಿಸಿದರು. ಭಾರತ ಸರ್ಕಾರ ಲಸಿಕಾ ಕಂಪನಿಗಳು ಉತ್ಪಾದಿಸುವ ಶೇ.75ರಷ್ಟು ಲಸಿಕೆಯನ್ನು ತಾನೇ ಖರೀದಿಸಿ, ರಾಜ್ಯಗಳಿಗೆ ಉಚಿತವಾಗಿ ಪೂರೈಸಲಿದೆ ಎಂದು ತಿಳಿಸಿದರು. ಲಸಿಕೆಗಾಗಿ ಯಾವುದೇ ರಾಜ್ಯ ಸರ್ಕಾರ ಒಂದು ರೂಪಾಯಿಯನ್ನೂ ವೆಚ್ಚ ಮಾಡುವುದಿಲ್ಲ ಎಂದು ತಿಳಿಸಿದರು. ಈವರೆಗೆ ಕೋಟ್ಯಂತರ ಜನರು ಉಚಿತ ಲಸಿಕೆ ಪಡೆದುಕೊಂಡಿದ್ದಾರೆ. ಈಗ 18 ವರ್ಷದ ವಯೋಮಾನದವರನ್ನೂ ಇದಕ್ಕೆ ಸೇರ್ಪಡೆ ಮಾಡಲಾಗಿದೆ. ಭಾರತ ಸರ್ಕಾರ ಎಲ್ಲ ನಾಗರಿಕರಿಗೂ ಉಚಿತ ಲಸಿಕೆ ಪೂರೈಸಲಿದೆ ಎಂದು ಪ್ರಧಾನಮಂತ್ರಿಯವರು ಪುನರುಚ್ಚರಿಸಿದರು.
ಶ್ರೀ ಮೋದಿ ಈ ವ್ಯವಸ್ಥೆಯಲ್ಲಿ ಶೇ.25ರಷ್ಟು ಲಸಿಕೆಗಳನ್ನು ನೇರವಾಗಿ ಖಾಸಗಿ ಆಸ್ಪತ್ರೆಗಳು ಖರೀದಿಸುವುದು ಮುಂದುವರಿಯಲಿದೆ. ಖಾಸಗಿ ಆಸ್ಪತ್ರೆಗಳು ಲಸಿಕೆಯ ವಾಸ್ತವ ದರದ ಮೇಲೆ ಕೇವಲ 150 ರೂ. ಸೇವಾ ಶುಲ್ಕವನ್ನು ಮಾತ್ರವೇ ವಿಧಿಸುವುದರ ಬಗ್ಗೆ ರಾಜ್ಯ ಸರ್ಕಾರಗಳು ನಿಗಾ ಇಡಬೇಕು ಎಂದು ಹೇಳಿದರು.

ಮತ್ತೊಂದು ಪ್ರಮುಖ ಪ್ರಕಟಣೆ ಹೊರಡಿಸಿದ ಪ್ರಧಾನಮಂತ್ರಿಯವರು, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ದೀಪಾವಳಿವರೆಗೆ ವಿಸ್ತರಿಸಿರುವುದಾಗಿ ಪ್ರಕಟಿಸಿದರು. ಅಂದರೆ ನವೆಂಬರ್ ವರೆಗೆ 80 ಕೋಟಿ ಜನರು ಪ್ರತಿ ತಿಂಗಳೂ ಉಚಿತ ಆಹಾರ ಧಾನ್ಯ ಪಡೆಯಲಿದ್ದಾರೆ. ಈ ಸಾಂಕ್ರಾಮಿಕದ ವೇಳೆ, ಸರ್ಕಾರ ಬಡ ಜನರೊಂದಿಗೆ ಗೆಳೆಯನಂತೆ ಅವರ ಅವಶ್ಯಕತೆಗಳನ್ನು ಪೂರೈಸಲು ನಿಂತಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು.
ಎರಡನೇ ಅಲೆಯ ವೇಳೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ವೈದ್ಯಕೀಯ ಆಮ್ಲಜನಕದ ಬೇಡಿಕೆ ಹಿಂದೆಂದೂ ಕಾಣದ ರೀತಿಯಲ್ಲಿ ಹೆಚ್ಚಾಗಿದ್ದನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಈ ಸವಾಲನ್ನು ಸರ್ಕಾರ ಎಲ್ಲ ವ್ಯವಸ್ಥೆಯನ್ನೂ ಸಮರೋಪಾದಿಯಲ್ಲಿ ನಿಯೋಜಿಸುವ ಮೂಲಕ ಎದಿರಿಸಿತು. ಭಾರತದ ಇತಿಹಾಸದಲ್ಲೇ ಇಷ್ಟು ಮಟ್ಟದ ವೈದ್ಯಕೀಯ ಆಮ್ಲಜನಕದ ಬೇಡಿಕೆಯ ಅನುಭವ ಭಾರತಕ್ಕೆ ಆಗಿರಲಿಲ್ಲ ಎಂದು ಶ್ರೀಮೋದಿ ಹೇಳಿದರು.
ಲಸಿಕೆಗೆ ಇರುವ ಬೇಡಿಕೆಗೆ ಹೋಲಿಸಿದರೆ, ಲಸಿಕೆ ಉತ್ಪಾದಿಸುತ್ತಿರುವ ರಾಷ್ಟ್ರ ಮತ್ತು ಕಂಪನಿಗಳು ಅತ್ಯಂತ ಕಡಿಮೆ. ಇಂತಹ ಸನ್ನಿವೇಶದಲ್ಲಿ, ಮೇಡ್ ಇನ್ ಇಂಡಿಯಾ ಲಸಿಕೆ ಭಾರತಕ್ಕೆ ಅತ್ಯಂತ ಅಗತ್ಯವಾಗಿತ್ತು ಎಂದರು. ಈ ಹಿಂದೆ ಭಾರತಕ್ಕೆ ವಿದೇಶದಲ್ಲಿ ಅಭಿವೃದ್ಧಿಯಾದ ಲಸಿಕೆಗಳು ದೊರಕಲು ದಶಕಗಳೇ ಹಿಡಿಯುತ್ತಿದ್ದವು. ಇದರ ಫಲಿತಾಂಶ ಹೇಗಿರುತ್ತಿತ್ತೆಂದರೆ, ಈ ಹಿಂದೆ ವಿದೇಶಗಳಲ್ಲಿ ಲಸಿಕೆ ಹಾಕುವ ಕಾರ್ಯ ಪೂರ್ಣಗೊಂಡರೂ, ಭಾರತದಲ್ಲಿ ಅದು ಆರಂಭವೇ ಆಗುತ್ತಿರಲಿಲ್ಲ ಎಂದರು. ಅಭಿಯಾನದೋಪಾದಿಯಲ್ಲಿ, ನಾವು ಲಸಿಕಾ ವ್ಯಾಪ್ತಿಯನ್ನು ಶೇಕಡ 60ರಿಂದ ಕಳೆದ 5-6 ವರ್ಷಗಳಲ್ಲಿ ಶೇ.90ಕ್ಕೆ ಹೆಚ್ಚಿಸಲಾಗಿದೆ ಎಂದು ಶ್ರೀ ಮೋದಿ ತಿಳಿಸಿದರು. ನಾವು ಲಸಿಕೆಯ ವೇಗವನ್ನಷ್ಟೇ ಹೆಚ್ಚಿಸಿಲ್ಲ. ಜೊತೆಗೆ ಲಸಿಕೆಯ ವ್ಯಾಪ್ತಿಯನ್ನೂ ಹೆಚ್ಚಿಸಿದ್ದೇವೆ ಎಂದು ಪ್ರಧಾನಮಂತ್ರಿ ತಿಳಿಸಿದರು.
ಈ ಬಾರಿ, ಭಾರತವು ಎಲ್ಲಾ ಆತಂಕಗಳನ್ನು ನಿವಾರಿಸಿದೆ ಮತ್ತು ಉದ್ದೇಶಗಳು ಪ್ರಾಮಾಣಿಕವಾಗಿದ್ದಾಗ, ಸ್ಪಷ್ಟ ನೀತಿ ಇದ್ದಾಗ ಮತ್ತು ನಿರಂತರ ಕಠಿಣ ಪರಿಶ್ರಮದ ಮೂಲಕ ಕೋವಿಡ್ ಗಾಗಿ ಕೇವಲ ಒಂದಲ್ಲ, ಎರಡು ಮೇಕ್ ಇನ್ ಇಂಡಿಯಾ ಲಸಿಕೆಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು. ನಮ್ಮ ವಿಜ್ಞಾನಿಗಳು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಈವರೆಗೂ ದೇಶದಲ್ಲಿ 23 ಕೋಟಿಗೂ ಹೆಚ್ಚು ಲಸಿಕೆ ಡೋಸ್ ಗಳನ್ನು ನೀಡಲಾಗಿದೆ.
ಕೇವಲ ಕೆಲವೇ ಸಾವಿರ ಪ್ರಕರಣಗಳು ಇದ್ದಾಗ, ಲಸಿಕಾ ಕಾರ್ಯ ಪಡೆಯನ್ನು ರಚಿಸಿದ್ದನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಲಸಿಕಾ ಕಂಪನಿಗಳಿಗೆ ಚಿಕಿತ್ಸಾಲಯ ಪ್ರಯೋಗ ನಡೆಸಲು ಸರ್ಕಾರ ಎಲ್ಲ ಸಾಧ್ಯ ಬೆಂಬಲ ನೀಡಿತು, ಸಂಶೋಧನೆ ಮತ್ತು ಅಭಿವೃದ್ಧಿಗೆ ನಿಧಿ ನೀಡಿತು ಎಂದರು. ಶ್ರೇಷ್ಠ ಪ್ರಯತ್ನ ಮತ್ತು ಕಠಿಣ ಪರಿಶ್ರಮದ ಫಲವಾಗಿ, ಮುಂಬರುವ ದಿನಗಳಲ್ಲಿ ಲಸಿಕೆಯ ಪೂರೈಕೆ ಹೆಚ್ಚಳವಾಗಲಿದೆ ಎಂದು ಪ್ರಧಾನಮಂತ್ರಿಯವರು ತಿಳಿಸಿದರು. ಇಂದು, ಏಳು ಕಂಪನಿಗಳು ವಿವಿಧ ಬಗೆಯ ಲಸಿಕೆಯನ್ನು ತಯಾರಿಸುತ್ತಿವೆ. ಮತ್ತೆ ಮೂರು ಲಸಿಕೆಗಳ ಚಿಕಿತ್ಸಾಲಯ ಪ್ರಯೋಗ ಮುಂದುವರಿದಿದೆ ಎಂದೂ ಪ್ರಧಾನಮಂತ್ರಿಯವರು ತಿಳಿಸಿದರು. ಮಕ್ಕಳಿಗಾಗಿ ಮತ್ತು ನೇಸಲ್ ಲಸಿಕೆಯ ಪ್ರಯೋಗದ ಬಗ್ಗೆಯೂ ಮಾಹಿತಿ ನೀಡಿದರು.
ಲಸಿಕಾ ಅಭಿಯಾನದ ಬಗ್ಗೆ ವಿವಿಧ ಮೂಲೆಗಳಿಂದ ಬಂದ ವಿಭಿನ್ನ ಅಭಿಪ್ರಾಯಗಳ ಬಗ್ಗೆ, ಪ್ರಧಾನಮಂತ್ರಿಯವರು ಪ್ರಸ್ತಾಪಿಸಿದರು. ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಿದ್ದ ಸಂದರ್ಭದಲ್ಲಿ, ರಾಜ್ಯಗಳಿಗೆ ಹೆಚ್ಚಿನ ಆಯ್ಕೆ ಇಲ್ಲದ ಬಗ್ಗೆ ಪ್ರಶ್ನೆಗಳು ಎದ್ದವು. ಕೆಲವು ಜನರು ಲಾಕ್ ಡೌನ್ ವೇಳೆ ನಮ್ಯತೆಯ ಬಗ್ಗೆ ಏಕೆ ಕೇಂದ್ರ ಸರ್ಕಾರವೇ ಎಲ್ಲವನ್ನೂ ನಿರ್ಧರಿಸುತ್ತಿದೆ ಎಂದು ಪ್ರಶ್ನಿಸುತ್ತಿದ್ದರು ಮತ್ತು ಎಲ್ಲದಕ್ಕೂ ಒಂದೇ ಅಳತೆ ಹೊಂದಿಕೆ ಆಗುವುದಿಲ್ಲ ಎಂದು ವಾದ ಮುಂದಿಡುತ್ತಿದ್ದರು. ಜನವರಿ 16ರಿಂದ ಆರಂಭವಾಗಿ ಏಪ್ರಿಲ್ ಅಂತ್ಯದವರೆಗೆ ನಡೆದ ಲಸಿಕೆ ಕಾರ್ಯಕ್ರಮ ಕೇಂದ್ರ ಸರ್ಕಾರದ ಉಸ್ತುವಾರಿಯಲ್ಲೇ ನಡೆಯಿತು. ಎಲ್ಲರಿಗೂ ಉಚಿತ ಲಸಿಕೆ ನೀಡಿಕೆ ಮುಂದುವರಿದಿತ್ತು ಮತ್ತು ಜನರು ಶಿಸ್ತುಬದ್ಧವಾಗಿ ತಮ್ಮ ಸರದಿ ಬಂದಾಗ ಲಸಿಕೆ ಪಡೆಯುತ್ತಿದ್ದರು. ಈ ನಡುವೆ, ವಿಕೇಂದ್ರೀಕರಣ ಮಾಡಬೇಕು ಎಂಬ ಬೇಡಿಕೆಯೂ ಎದ್ದಿತು. ಕೆಲವು ವಯೋಮಾನದ ಗುಂಪುಗಳಿಗೆ ಆದ್ಯತೆ ನೀಡುವ ವಿಚಾರವೂ ಚರ್ಚೆಯಾಗುತ್ತಿತ್ತು. ಹಲವು ರೀತಿಯ ಒತ್ತಡಗಳು ಕೇಳಿಬಂದವು ಮತ್ತು ಕೆಲವು ವರ್ಗದ ಮಾಧ್ಯಮಗಳು ಇದನ್ನು ಚಳವಳಿಯ ರೂಪದಲ್ಲಿ ನಡೆಸಿದವು ಎಂದು ಪ್ರಧಾನಮಂತ್ರಿ ತಿಳಿಸಿದರು.
बीते सौ वर्षों में आई ये सबसे बड़ी महामारी है, त्रासदी है।
— PMO India (@PMOIndia) June 7, 2021
इस तरह की महामारी आधुनिक विश्व ने न देखी थी, न अनुभव की थी।
इतनी बड़ी वैश्विक महामारी से हमारा देश कई मोर्चों पर एक साथ लड़ा है: PM @narendramodi
सेकेंड वेव के दौरान अप्रैल और मई के महीने में भारत में मेडिकल ऑक्सीजन की डिमांड अकल्पनीय रूप से बढ़ गई थी।
— PMO India (@PMOIndia) June 7, 2021
भारत के इतिहास में कभी भी इतनी मात्रा में मेडिकल ऑक्सीजन की जरूरत महसूस नहीं की गई।
इस जरूरत को पूरा करने के लिए युद्धस्तर पर काम किया गया। सरकार के सभी तंत्र लगे: PM
आप पिछले 50-60 साल का इतिहास देखेंगे तो पता चलेगा कि भारत को विदेशों से वैक्सीन प्राप्त करने में दशकों लग जाते थे।
— PMO India (@PMOIndia) June 7, 2021
विदेशों में वैक्सीन का काम पूरा हो जाता था तब भी हमारे देश में वैक्सीनेशन का काम शुरू नहीं हो पाता था: PM @narendramodi
हर आशंका को दरकिनार करके भारत ने 1 साल के भीतर ही एक नहीं बल्कि दो मेड इन इंडिया वैक्सीन्स लॉन्च कर दी।
— PMO India (@PMOIndia) June 7, 2021
हमारे देश ने, वैज्ञानिकों ने ये दिखा दिया कि भारत बड़े-बड़े देशों से पीछे नही है। आज जब मैं आपसे बात कर रहा हूं तो देश में 23 करोड़ से ज्यादा वैक्सीन की डोज़ दी जा चुकी है: PM
पिछले काफी समय से देश लगातार जो प्रयास और परिश्रम कर रहा है, उससे आने वाले दिनों में वैक्सीन की सप्लाई और भी ज्यादा बढ़ने वाली है।
— PMO India (@PMOIndia) June 7, 2021
आज देश में 7 कंपनियाँ, विभिन्न प्रकार की वैक्सीन्स का प्रॉडक्शन कर रही हैं।
तीन और वैक्सीन्स का ट्रायल भी एडवांस स्टेज में चल रहा है: PM
राज्य सरकारों को लॉकडाउन की छूट क्यों नहीं मिल रही?
— PMO India (@PMOIndia) June 7, 2021
One Size Does Not Fit All जैसी बातें भी कही गईं: PM @narendramodi
दूसरी तरफ किसी ने कहा कि उम्र की सीमा आखिर केंद्र सरकार ही क्यों तय करे?
— PMO India (@PMOIndia) June 7, 2021
कुछ आवाजें तो ऐसी भी उठीं कि बुजुर्गों का वैक्सीनेशन पहले क्यों हो रहा है?
भांति-भांति के दबाव भी बनाए गए, देश के मीडिया के एक वर्ग ने इसे कैंपेन के रूप में भी चलाया: PM @narendramodi
इस साल 16 जनवरी से शुरू होकर अप्रैल महीने के अंत तक, भारत का वैक्सीनेशन कार्यक्रम मुख्यत: केंद्र सरकार की देखरेख में ही चला।
— PMO India (@PMOIndia) June 7, 2021
सभी को मुफ्त वैक्सीन लगाने के मार्ग पर देश आगे बढ़ रहा था।
देश के नागरिक भी, अनुशासन का पालन करते हुए, अपनी बारी आने पर वैक्सीन लगवा रहे थे: PM
आज ये निर्णय़ लिया गया है कि राज्यों के पास वैक्सीनेशन से जुड़ा जो 25 प्रतिशत काम था, उसकी जिम्मेदारी भी भारत सरकार उठाएगी।
— PMO India (@PMOIndia) June 7, 2021
ये व्यवस्था आने वाले 2 सप्ताह में लागू की जाएगी।
इन दो सप्ताह में केंद्र और राज्य सरकारें मिलकर नई गाइडलाइंस के अनुसार आवश्यक तैयारी कर लेंगी: PM
21 जून, सोमवार से देश के हर राज्य में, 18 वर्ष से ऊपर की उम्र के सभी नागरिकों के लिए, भारत सरकार राज्यों को मुफ्त वैक्सीन मुहैया कराएगी।
— PMO India (@PMOIndia) June 7, 2021
वैक्सीन निर्माताओं से कुल वैक्सीन उत्पादन का 75 प्रतिशत हिस्सा भारत सरकार खुद ही खरीदकर राज्य सरकारों को मुफ्त देगी: PM @narendramodi
देश की किसी भी राज्य सरकार को वैक्सीन पर कुछ भी खर्च नहीं करना होगा।
— PMO India (@PMOIndia) June 7, 2021
अब तक देश के करोड़ों लोगों को मुफ्त वैक्सीन मिली है। अब 18 वर्ष की आयु के लोग भी इसमें जुड़ जाएंगे।
सभी देशवासियों के लिए भारत सरकार ही मुफ्त वैक्सीन उपलब्ध करवाएगी: PM @narendramodi
देश में बन रही वैक्सीन में से 25 प्रतिशत, प्राइवेट सेक्टर के अस्पताल सीधे ले पाएं, ये व्यवस्था जारी रहेगी।
— PMO India (@PMOIndia) June 7, 2021
प्राइवेट अस्पताल, वैक्सीन की निर्धारित कीमत के उपरांत एक डोज पर अधिकतम 150 रुपए ही सर्विस चार्ज ले सकेंगे।
इसकी निगरानी करने का काम राज्य सरकारों के ही पास रहेगा: PM
आज सरकार ने फैसला लिया है कि प्रधानमंत्री गरीब कल्याण अन्न योजना को अब दीपावली तक आगे बढ़ाया जाएगा।
— PMO India (@PMOIndia) June 7, 2021
महामारी के इस समय में, सरकार गरीब की हर जरूरत के साथ, उसका साथी बनकर खड़ी है।
यानि नवंबर तक 80 करोड़ से अधिक देशवासियों को, हर महीने तय मात्रा में मुफ्त अनाज उपलब्ध होगा: PM
जो लोग भी वैक्सीन को लेकर आशंका पैदा कर रहे हैं, अफवाहें फैला रहे हैं, वो भोले-भाले भाई-बहनों के जीवन के साथ बहुत बड़ा खिलवाड़ कर रहे हैं।
— PMO India (@PMOIndia) June 7, 2021
ऐसी अफवाहों से सतर्क रहने की जरूरत है: PM @narendramodi


