"ಈ ಸಂದರ್ಭವು 75 ನೇ ಗಣರಾಜ್ಯೋತ್ಸವ ಆಚರಣೆ ಮತ್ತು ಭಾರತದ ನಾರಿ ಶಕ್ತಿಗೆ ಸಮರ್ಪಣೆ ಎನ್ನುವ ಎರಡು ಕಾರಣಗಳಿಂದ ವಿಶೇಷವಾಗಿದೆ."
"ರಾಷ್ಟ್ರೀಯ ಹೆಣ್ಣುಮಕ್ಕಳ ದಿವಸ, ಭಾರತದ ಹೆಣ್ಣುಮಕ್ಕಳ ಧೈರ್ಯ, ದೃಢತೆ ಮತ್ತು ಸಾಧನೆಗಳ ಆಚರಣೆಯಯಾಗಿದೆ"
"ಜನ ನಾಯಕ ಕರ್ಪೂರಿ ಠಾಕೂರ್ ಅವರ ಸಂಪೂರ್ಣ ಜೀವನವು ಸಾಮಾಜಿಕ ನ್ಯಾಯ ಮತ್ತು ಹಿಂದುಳಿದ ವರ್ಗಗಳ ಉನ್ನತಿಗಾಗಿ ಮೀಸಲಾಗಿತ್ತು"
“ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಪ್ರಯಾಣ ಮಾಡುವುದು ಪ್ರತಿಯೊಬ್ಬ ನಾಗರಿಕನಿಗೂ ಹೊಸ ಅನುಭವಗಳನ್ನು ಸೃಷ್ಟಿಸುತ್ತದೆ. ಇದು ಭಾರತದ ವಿಶೇಷತೆ"
"ನಾನು ಜೆನ್ ಝೀ ಯನ್ನು , ಅಮೃತ್ ಜನರೇಷನ್ ಎಂದು ಕರೆಯಲು ಬಯಸುತ್ತೇನೆ"
"ಇದೇ ಸಮಯ, ಸರಿಯಾದ ಸಮಯ, ಇದು ನಿಮ್ಮ ಸಮಯ "
"ಪ್ರೇರಣೆ ಕೆಲವೊಮ್ಮೆ ಕುಂಠಿತವಾಗಬಹುದು, ಆದರೆ ಶಿಸ್ತು ನಿಮ್ಮನ್ನು ಸರಿಯಾದ ಹಾದಿಯಲ್ಲಿ ಇರಿಸುತ್ತದೆ"
“ಯುವಕರು ‘ಮೈ ಯುವ ಭಾರತ್’ ವೇದಿಕೆಯಲ್ಲಿ ‘ಮೈ ಭಾರತ್’ ಸ್ವಯಂಸೇವಕರಾಗಿ ನೋಂದಾಯಿಸಿಕೊಳ್ಳಬೇಕು”
"ಇಂದಿನ ಯುವ ಪೀಳಿಗೆ ನಮೋ ಆ್ಯಪ್ ಮೂಲಕ ನಿರಂತರವಾಗಿ ನನ್ನೊಂದಿಗೆ ಸಂಪರ್ಕದಲ್ಲಿರಬಹುದು"

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎನ್ ಸಿಸಿ  ಕೆಡೆಟ್ ಗಳು ಮತ್ತು ಎನ್ ಎಸ್ ಎಸ್  ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಣಿ ಲಕ್ಷ್ಮಿ ಬಾಯಿಯವರ ಜೀವನವನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು ಮತ್ತು ಇದು ಇಂದು ಭಾರತದ ಇತಿಹಾಸವನ್ನು ಜೀವಂತಗೊಳಿಸಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ತಂಡದ ಶ್ರಮವನ್ನು ಶ್ಲಾಘಿಸಿದ ಅವರು ಈಗ ಗಣರಾಜ್ಯೋತ್ಸವ ಪರೇಡ್ ನ ಭಾಗವಾಗಲಿದ್ದಾರೆ ಎಂದು ಹೇಳಿದರು. "ಈ ಸಂದರ್ಭವು 75 ನೇ ಗಣರಾಜ್ಯೋತ್ಸವ ಆಚರಣೆ  ಮತ್ತು ಭಾರತದ ನಾರಿ ಶಕ್ತಿಗೆ ಇದು ಸಮರ್ಪಣೆ ಎನ್ನುವ ಎರಡು ಕಾರಣಗಳಿಂದ ವಿಶೇಷವಾಗಿದೆ" ಎಂದು ಪ್ರಧಾನಮಂತ್ರಿಯವರು ಹೇಳಿದರು. ಭಾರತದಾದ್ಯಂತದ ಭಾಗವಹಿಸುವ ಮಹಿಳೆಯರನ್ನು ಉಲ್ಲೇಖಿಸಿ, ಶ್ರೀ ಮೋದಿ ಅವರು ಇಲ್ಲಿ ಒಬ್ಬಂಟಿಯಾಗಿ ಬಂದಿಲ್ಲ ಜೊತೆಗೆ  ತಮ್ಮ ರಾಜ್ಯಗಳ ಸತ್ವ, ಅವರ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಅವರ ಸಮಾಜಗಳ ಮುಂದಾಲೋಚನೆಯನ್ನು ತಂದಿದ್ದಾರೆ ಎಂದು ಹೇಳಿದರು. ಇಂದಿನ ಮತ್ತೊಂದು ವಿಶೇಷ ಸಂದರ್ಭವನ್ನು ಗಮನಿಸಿದ ಪ್ರಧಾನಮಂತ್ರಿಯವರು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ (ರಾಷ್ಟ್ರೀಯ ಬಾಲಿಕಾ ದಿವಸ್)  ಬಗ್ಗೆ  ಪ್ರಸ್ತಾಪಿಸಿದರು, ಇದು ಅವರ ಧೈರ್ಯ, ದೃಢತೆ ಮತ್ತು ಸಾಧನೆಗಳ ಆಚರಣೆಯಾಗಿದೆ. "ಭಾರತದ ಹೆಣ್ಣುಮಕ್ಕಳು ಒಳ್ಳೆಯದಕ್ಕಾಗಿ ಸಮಾಜವನ್ನು ಸುಧಾರಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ" ಎಂದ ಪ್ರಧಾನಮಂತ್ರಿಯವರು ಇಂದಿನ ಸಾಂಸ್ಕೃತಿಕ ಪ್ರದರ್ಶನದಲ್ಲಿ  ಕಂಡಂತೆ ವಿವಿಧ ಐತಿಹಾಸಿಕ ಕಾಲಘಟ್ಟಗಳಲ್ಲಿ ಸಮಾಜಕ್ಕೆ ಅಡಿಪಾಯವನ್ನು ಹಾಕುವಲ್ಲಿ ಮಹಿಳೆಯರ ಕೊಡುಗೆಗಳನ್ನು ಎತ್ತಿ ತೋರಿಸಿದರು.

 

ಜನ ನಾಯಕ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡುವ ಸರ್ಕಾರದ ನಿರ್ಧಾರವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ ಮೋದಿ, ಇದು ಸರ್ಕಾರದ ಸೌಭಾಗ್ಯ ಎಂದು ಬಣ್ಣಿಸಿದರು  ಮತ್ತು ಇಂದಿನ ಯುವ ಪೀಳಿಗೆ ಮಹಾನ್ ವ್ಯಕ್ತಿತ್ವದ ಬಗ್ಗೆ ತಿಳಿದುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅವರು ಮುಖ್ಯಮಂತ್ರಿಯಾದರು ಮತ್ತು ಯಾವಾಗಲೂ ತಮ್ಮ ವಿನಮ್ರತೆಯನ್ನು ಕಾಯ್ದುಕೊಂಡರು ಎಂದು ಪ್ರಧಾನ ಮಂತ್ರಿಯವರು ಅವರ  ಬೆಳವಣಿಗೆಯನ್ನು ಸ್ಮರಿಸಿದರು. "ಅವರ ಸಂಪೂರ್ಣ ಜೀವನವು ಸಾಮಾಜಿಕ ನ್ಯಾಯ ಮತ್ತು ಹಿಂದುಳಿದ  ವರ್ಗಗಳ ಉನ್ನತಿಗಾಗಿ ಸಮರ್ಪಿತವಾಗಿತ್ತು" ಎಂದು ಪ್ರಧಾನಮಂತ್ರಿಯವರು ಹೇಳಿದರು. ಬಡವರ ಮೇಲೆ ಕೇಂದ್ರೀಕರಿಸುವುದು ಮತ್ತು ಕಟ್ಟಕಡೆಯ ಫಲಾನುಭವಿಯನ್ನು ತಲುಪಲು ವಿಕಸಿತ ಭಾರತ ಸಂಕಲ್ಪ ಯಾತ್ರೆಯಂತಹ ಸರ್ಕಾರದ ಉಪಕ್ರಮಗಳು ಕರ್ಪೂರ್ ಠಾಕೂರ್ ಅವರ ಸ್ಫೂರ್ತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಶ್ರೀ ಮೋದಿ ಹೇಳಿದರು.

ಅನೇಕರು ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡುತ್ತಿದ್ದಾರೆ ಮತ್ತು ಗಣರಾಜ್ಯೋತ್ಸವ ಆಚರಣೆಗಳಿಗಾಗಿ ತಮ್ಮ ಉತ್ಸಾಹ ಮತ್ತು ಉಲ್ಲಾಸವನ್ನು ಹಂಚಿಕೊಂಡಿದ್ದಾರೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ದೆಹಲಿಯಲ್ಲಿನ ತೀವ್ರ ಚಳಿಗಾಲದ ಪರಿಸ್ಥಿತಿಗಳ ಬಗ್ಗೆ ಮಾತನಾಡಿದ   ಪ್ರಧಾನಮಂತ್ರಿಯವರು ಪಾಲ್ಗೊಂಡಿರುವ ಅನೇಕರು  ಮೊದಲ ಬಾರಿಗೆ ಇಂತಹ ಹವಾಮಾನವನ್ನು ಅನುಭವಿಸುತ್ತಿದ್ದಾರೆ ಎಂದರು ಮತ್ತು ವಿವಿಧ ಪ್ರದೇಶಗಳಲ್ಲಿನ ಭಾರತದ ವೈವಿಧ್ಯಮಯ ಹವಾಮಾನ ಪರಿಸ್ಥಿತಿಗಳ ಬಗ್ಗೆ   ಹೇಳಿದರು. ಅಂತಹ ಕಠಿಣ ಹವಾಮಾನ ಪರಿಸ್ಥಿತಿಗಳಲ್ಲೂ ಅಭ್ಯಾಸ ಮಾಡುವ ಅವರ ಬದ್ಧತೆಯನ್ನು ಮತ್ತು ಅವರ ಇಂದಿನ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಅವರು ಮನೆಗೆ ಹಿಂದಿರುಗುವಾಗ  ಗಣರಾಜ್ಯೋತ್ಸವದ ಒಂದು ಭಾಗವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುತ್ತಾರೆ ಎಂದು ಪ್ರಧಾನಮಂತ್ರಿ ಮೋದಿ ವಿಶ್ವಾಸ ವ್ಯಕ್ತಪಡಿಸಿದರು. "ಇದು ಭಾರತದ ವಿಶೇಷತೆ", "ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಪ್ರಯಾಣ ಮಾಡುವುದು ಪ್ರತಿಯೊಬ್ಬ ನಾಗರಿಕರಿಗೂ ಹೊಸ ಅನುಭವಗಳನ್ನು ಸೃಷ್ಟಿಸುತ್ತದೆ" ಎಂದು ಪ್ರಧಾನಮಂತ್ರಿಯವರು ಹೇಳಿದರು.

 

"ಈಗಿನ ಪೀಳಿಗೆಯನ್ನು ಜೆನ್ ಝೀ  ಎಂದು ಉಲ್ಲೇಖಿಸಲಾಗಿದ್ದರೂ ಸಹ, ನಾನು ನಿಮ್ಮನ್ನು ಅಮೃತ್ ಜನರೇಷನ್ ಎಂದು ಕರೆಯಲು ಬಯಸುತ್ತೇನೆ" ಎಂದು ಪ್ರಧಾನಮಂತ್ರಿಯವರು ಹೇಳಿದರು. ಇಂದಿನ ಪೀಳಿಗೆಯ ಶಕ್ತಿಯೇ ಅಮೃತ ಕಾಲದಲ್ಲಿ ರಾಷ್ಟ್ರದ ಪ್ರಗತಿಗೆ ಉತ್ತೇಜನ ನೀಡಲಿದೆ ಎಂದು ಅವರು ಒತ್ತಿ ಹೇಳಿದರು. 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕೆನ್ನುವ ಭಾರತದ ಸಂಕಲ್ಪವನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿಯವರು, ಭಾರತ ಮತ್ತು ಇಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಮುಂದಿನ 25 ವರ್ಷಗಳ ಮಹತ್ವವನ್ನು ಒತ್ತಿ ಹೇಳಿದರು. "ಅಮೃತ ಪೀಳಿಗೆಯ ಎಲ್ಲಾ ಕನಸುಗಳನ್ನು ಈಡೇರಿಸುವುದು, ಲೆಕ್ಕವಿಲ್ಲದಷ್ಟು ಅವಕಾಶಗಳನ್ನು ಸೃಷ್ಟಿಸುವುದು ಮತ್ತು ಅವರ ಹಾದಿಯಲ್ಲಿರುವ ಎಲ್ಲಾ ಅಡೆತಡೆಗಳನ್ನು ತೆಗೆದುಹಾಕುವುದು ಸರ್ಕಾರದ ಸಂಕಲ್ಪವಾಗಿದೆ" ಎಂದು ಪ್ರಧಾನಮಂತ್ರಿ ಹೇಳಿದರು. ಇಂದಿನ ಪ್ರದರ್ಶನದಲ್ಲಿ ಕಂಡುಬರುವ ಶಿಸ್ತು, ಕೇಂದ್ರೀಕೃತ ಮನಸ್ಥಿತಿ ಮತ್ತು ಸಮನ್ವಯತೆಯು ಅಮೃತ ಕಾಲದ ಕನಸುಗಳನ್ನು ನನಸಾಗಿಸಲು ಬುನಾದಿಯಾಗಿದೆ ಎಂದು ಅವರು ಹೇಳಿದರು.

‘Nation First’ ‘ದೇಶ ಮೊದಲು’ ಎನ್ನುವುದು ಅಮೃತ ಪೀಳಿಗೆಯ ಮಾರ್ಗದರ್ಶಿ ಸೂತ್ರವಾಗಬೇಕು ಎಂದು ಪ್ರಧಾನಮಂತ್ರಿಯವರು ಪುನರುಚ್ಚರಿಸಿದರು. ಯುವ ಸಭಿಕರಿಗೆ ತಮ್ಮ ಜೀವನದಲ್ಲಿ ಹತಾಶೆಗೆ ಅವಕಾಶ ಎಂದಿಗೂ ಕೊಡಬೇಡಿ ಎಂದು ಪ್ರಧಾನಮಂತ್ರಿಯವರು ಹೇಳಿದರು. ಜೀವನದ ಪ್ರತಿ ಸಣ್ಣ ಕೊಡುಗೆಯ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ ಮೋದಿ, " ಇದೇ ಸಮಯ ಇದೇ ಸರಿಯಾದ ಸಮಯ, ಇದು ನಿಮ್ಮ ಸಮಯ" ಎಂದು ಒತ್ತಿ ಹೇಳಿದರು. ಪ್ರಸ್ತುತ ಕ್ಷಣದ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ವಿಕಸಿತ ಭಾರತ ಗುರಿಯನ್ನು ಸಾಧಿಸುವ ತಮ್ಮ ಸಂಕಲ್ಪಕ್ಕೆ ಶಕ್ತಿಯನ್ನು ನೀಡುವಂತೆ ಯುವಕರನ್ನು ಕೇಳಿಕೊಂಡರು. ಜ್ಞಾನದ ವ್ಯಾಪ್ತಿಯನ್ನು ವಿಸ್ತರಿಸಲು ಹೇಳಿದರು ಇದರಿಂದ ಭಾರತೀಯ ಪ್ರತಿಭೆಗಳು ಜಗತ್ತಿಗೆ ಹೊಸ ದಿಕ್ಕನ್ನು ನೀಡಬಹುದು ಮತ್ತು ಹೊಸ ಸಾಮರ್ಥ್ಯಗಳನ್ನು ಗಳಿಸಬಹುದು ಇದರಿಂದ ಭಾರತವು ಪ್ರಪಂಚದ ಸಮಸ್ಯೆಗಳನ್ನು ಪರಿಹರಿಸಬಹುದು. ಯುವಕರು ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಹೊಸ ಮಾರ್ಗಗಳನ್ನು ಸೃಷ್ಟಿಸುವ ಹಂತಗಳನ್ನು ಅವರು ವಿವರಿಸಿದರು ಮತ್ತು ಹೊಸದಾಗಿ ತೆರೆದ ವಲಯಗಳಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸುವ ಬಗ್ಗೆ ಪ್ರಸ್ತಾಪಿಸಿದರು. ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸುವುದು, ವ್ಯಾಪಾರ ಮತ್ತು ವಾಣಿಜ್ಯವನ್ನು ಸುಗಮಗೊಳಿಸುವುದು, ರಕ್ಷಣಾ ಉದ್ಯಮದಲ್ಲಿ ಖಾಸಗಿ ವಲಯವನ್ನು ರಚಿಸುವುದು, ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನವನ್ನು ಸ್ಥಾಪಿಸುವುದು ಮತ್ತು 21 ನೇ ಶತಮಾನವನ್ನು ಪೂರೈಸಲು ಆಧುನಿಕ ಶೈಕ್ಷಣಿಕ ಸೌಲಭ್ಯಗಳನ್ನು ನಿರ್ಮಿಸುವ ಉದಾಹರಣೆಗಳನ್ನು ಶ್ರೀ ಮೋದಿ ಉಲ್ಲೇಖಿಸಿದರು. ಮಾತೃಭಾಷೆಯಲ್ಲಿ ಉನ್ನತ ಶಿಕ್ಷಣವನ್ನು ಪಡೆಯಲು ಮತ್ತು ನಿರ್ದಿಷ್ಟ ಸ್ಟ್ರೀಮ್ ಅಥವಾ ವಿಷಯಕ್ಕೆ ಸೀಮಿತರಾಗದೇ ಇರಲು ಅನುಮತಿಸುವ ಭಾರತದಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವ ಬಗ್ಗೆಯೂ ಪ್ರಧಾನಮಂತ್ರಿಯವರು ತಿಳಿಸಿದರು. ಸಂಶೋಧನೆ ಮತ್ತು ಆವಿಷ್ಕಾರದಲ್ಲಿ ತೊಡಗಿಸಿಕೊಳ್ಳಲು ಯುವಜನರನ್ನು ಉತ್ತೇಜಿಸಿದ ಪ್ರಧಾನಮಂತ್ರಿಯವರು ಸೃಜನಶೀಲತೆ ಮತ್ತು ನಾವೀನ್ಯತೆಗೆ ಪ್ರೇರಣೆ ನೀಡುವ ಅಟಲ್ ಟಿಂಕರಿಂಗ್ ಲ್ಯಾಬ್ ಗಳ ಬಗ್ಗೆ ಹೇಳಿದರು . ಸೇನೆಗೆ ಸೇರುವ ಮೂಲಕ ವೃತ್ತಿಜೀವನವನ್ನು ಪ್ರಾರಂಭಿಸಲು ಬಯಸುವ ವಿದ್ಯಾರ್ಥಿನಿಯರಿಗೆ ಸರ್ಕಾರ ಹೊಸ ಅವಕಾಶಗಳನ್ನು ಸೃಷ್ಟಿಸಿದೆ ಎಂದು ಅವರು ಒತ್ತಿ ಹೇಳಿದರು. "ಈಗ, ವಿದ್ಯಾರ್ಥಿನಿಯರನ್ನು ವಿವಿಧ ಸೈನಿಕ ಶಾಲೆಗಳಿಗೆ ಸೇರಿಸಬಹುದು" ಎಂದು ಹೇಳಿ ಪೂರ್ಣ ಆತ್ಮವಿಶ್ವಾಸದಿಂದ ಮುಂದುವರಿಯುವಂತೆ ಪ್ರಧಾನಮಂತ್ರಿಯವರು ಅವರಿಗೆ ತಿಳಿಸಿದರು. "ನಿಮ್ಮ ಪ್ರಯತ್ನಗಳು, ನಿಮ್ಮಗುರಿ, ನಿಮ್ಮ ಸಾಮರ್ಥ್ಯವು ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ" ಎಂದು ಅವರು ಹೇಳಿದರು.

 

ಎಲ್ಲಾ ಸ್ವಯಂಸೇವಕರು ತಮ್ಮ ಶಕ್ತಿಯನ್ನು  ಸರಿಯಾದ ಸ್ಥಳದಲ್ಲಿ ಕೊಂಡೊಯ್ಯುತ್ತಿದ್ದಾರೆ  ಎಂದು ಪ್ರಧಾನಮಂತ್ರಿಯವರು ಹರ್ಷ ವ್ಯಕ್ತಪಡಿಸಿದರು. ಶಿಸ್ತಿನ ಪ್ರಜ್ಞೆಯುಳ್ಳ, ದೇಶದಲ್ಲಿ ಸಾಕಷ್ಟು ಪ್ರವಾಸ ಮಾಡುವ ಮತ್ತು ವಿವಿಧ ಭಾಷೆಗಳನ್ನು ಮಾತನಾಡುವ ವಿವಿಧ ಪ್ರದೇಶಗಳ ಸ್ನೇಹಿತರನ್ನು ಹೊಂದಿರುವ ವ್ಯಕ್ತಿಗೆ ವ್ಯಕ್ತಿತ್ವ ವಿಕಸನವಾಗುವುದ ಸಹಜ ಎಂದು ಅವರು ಹೇಳಿದರು.

"ಇದನ್ನು ಕಡಿಮೆ ಅಂದಾಜು ಮಾಡಬಾರದು" ಇದು ಜೀವನದ ಒಂದು ಪ್ರಮುಖ ಭಾಗವಾಗಿದೆ ಎಂದು ಪ್ರಧಾನಮಂತ್ರಿ ಮೋದಿ ಪ್ರತಿಪಾದಿಸಿದರು.  ಸದೃಢವಾಗಿರುವುದಕ್ಕೆ ಮೊದಲ ಆದ್ಯತೆ ನೀಡುವಂತೆಯೂ ಅವರು ಒತ್ತಾಯಿಸಿದರು. ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಶಿಸ್ತಿನ ಅಗತ್ಯದ ಬಗ್ಗೆ ಒತ್ತಿ ಹೇಳಿದರು . "ಪ್ರೇರಣೆಯು ಕೆಲವೊಮ್ಮೆ ಕುಂಠಿತವಾಗಬಹುದು, ಆದರೆ ಶಿಸ್ತು ನಿಮ್ಮನ್ನು ಸರಿಯಾದ ಹಾದಿಯಲ್ಲಿ ಇರಿಸುತ್ತದೆ." ಶಿಸ್ತೇ ಪ್ರೇರಣೆಯಾದರೆ ಪ್ರತಿಯೊಂದು ಕ್ಷೇತ್ರದಲ್ಲೂ ಗೆಲುವು ಖಚಿತ ಎಂದು ಶ್ರೀ ಮೋದಿ ಒತ್ತಿ ಹೇಳಿದರು.

ಎನ್ ಸಿಸಿಯೊಂದಿಗಿನ ತಮ್ಮ ಸಂಬಂಧದ ಬಗ್ಗೆ ಮಾತನಾಡತ್ತಾ ಪ್ರಧಾನಮಂತ್ರಿಯವರು, ಎನ್ ಸಿಸಿ, ಎನ್ಎಸ್ಎಸ್ ಅಥವಾ ಸಾಂಸ್ಕೃತಿಕ ಶಿಬಿರಗಳಂತಹ ಸಂಸ್ಥೆಗಳು ಯುವಜನರಿಗೆ ಸಮಾಜ ಮತ್ತು ನಾಗರಿಕ ಕರ್ತವ್ಯಗಳ ಬಗ್ಗೆ ಶಿಕ್ಷಣ ನೀಡುತ್ತವೆ ಎಂದು ಹೇಳಿದರು. ‘ಮೈ ಯುವ ಭಾರತ್’ಎನ್ನುವ ಸಂಸ್ಥೆಯನ್ನು ರಚಿಸಿರುವ ಕುರಿತು ಮಾಹಿತಿ ನೀಡಿದ ಅವರು, ಯುವಕರು ‘ಮೈ ಭಾರತ್ʼನಲ್ಲಿ ಸ್ವಯಂಸೇವಕರಾಗಿ ನೋಂದಾಯಿಸಿಕೊಳ್ಳುವಂತೆ ಒತ್ತಾಯಿಸಿದರು.

ಈ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ, ವಿವಿಧ ಕಾರ್ಯಕ್ರಮಗಳನ್ನು ನೋಡಲು, ವಿವಿಧ ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಲು ಮತ್ತು ತಜ್ಞರನ್ನು ಭೇಟಿ ಮಾಡಲು  ಇರುವ ಹಲವಾರು ಅವಕಾಶಗಳ ಬಗ್ಗೆ ಪ್ರಧಾನಮಂತ್ರಿಯವರು ಎತ್ತಿ ತೋರಿಸಿದರು. “ಇದು ನಿಮ್ಮ ಜೀವನದುದ್ದಕ್ಕೂ ನೀವು ನೆನಪಿನಲ್ಲಿಟ್ಟುಕೊಳ್ಳುವ ಅನುಭವವಾಗಿರುತ್ತದೆ. ಪ್ರತಿ ವರ್ಷ ನೀವು ಗಣರಾಜ್ಯೋತ್ಸವದ ಪರೇಡ್ ಅನ್ನು ವೀಕ್ಷಿಸಿದಾಗ, ನೀವು ಈ ದಿನಗಳನ್ನು ನೆನಪಿಸಿಕೊಳ್ಳುತ್ತೀರಿ ಮತ್ತು ನಾನು ಇದನ್ನು ನಿಮಗೆ ಹೇಳಿದ್ದೆ ಎನ್ನುವುದನ್ನು ಎಂದು ನೀವು ನೆನೆಯುತ್ತೀರಿ” ಎಂದು ಶ್ರೀ ಮೋದಿ ಹೇಳಿದರು.  ಗಣರಾಜ್ಯೋತ್ಸವದ ಆಚರಣೆಯಿಂದಾಗುವ ಅನುಭವಗಳು ಮತ್ತು ಕಲಿಕೆಗಳನ್ನು ದಾಖಲಿಸಲು ಅವರು ಒತ್ತಾಯಿಸಿದರು, ಅದನ್ನು ನಮೋ ಅಪ್ಲಿಕೇಶನ್ ನಲ್ಲಿ ಲಿಖಿತರೂಪದಲ್ಲಿ ಅಥವಾ ವೀಡಿಯೊ ರೆಕಾರ್ಡಿಂಗ್ ನಲ್ಲಿ ತಮ್ಮೊಡನೆ  ಹಂಚಿಕೊಳ್ಳಬಹುದು. "ಇಂದಿನ ಯುವ ಪೀಳಿಗೆಯು ನಮೋ ಆ್ಯಪ್ ಮೂಲಕ ನಿರಂತರವಾಗಿ ನನ್ನೊಂದಿಗೆ ಸಂಪರ್ಕದಲ್ಲಿರಬಹುದು" ಎಂದು ಪ್ರಧಾನಮಂತ್ರಿ ಮೋದಿ ಹೇಳಿದರು.

 

ಭಾಷಣದ ಕೊನೆಯಲ್ಲಿ, ಪ್ರಧಾನಮಂತ್ರಿಯವರು ಯುವಕರ ಶಕ್ತಿಯಲ್ಲಿ ವಿಶ್ವಾಸ ಮತ್ತು ನಂಬಿಕೆಯನ್ನು ವ್ಯಕ್ತಪಡಿಸಿದರು. ಶ್ರಮವಹಿಸಿ ಅಧ್ಯಯನ ಮಾಡಿ, ಪ್ರಜ್ಞಾವಂತ ನಾಗರೀಕರಾಗಿ, ಪರಿಸರ ಸಂರಕ್ಷಿಸಿ, ದುಶ್ಚಟಗಳಿಂದ ದೂರವಿದ್ದು, ದೇಶದ ಪರಂಪರೆ ಮತ್ತು ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡಬೇಕು ಎಂದು ಮನವಿ ಮಾಡಿದರು. ""ನಿಮಗೆ ನನ್ನ ಆಶೀರ್ವಾದಗಳು,  ನನ್ನ ಶುಭ ಹಾರೈಕೆಗಳು" ಎಂದು ಹೇಳುವ ಮೂಲಕ ಶ್ರೀ ಮೋದಿಯವರು ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್, ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಶ್ರೀ ಅರ್ಜುನ್ ಮುಂಡಾ ಮತ್ತಿತರರು ಉಪಸ್ಥಿತರಿದ್ದರು.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi Launches SVANidhi Card In Kerala: What Is This 'Credit Scheme' For Street Vendors?

Media Coverage

PM Modi Launches SVANidhi Card In Kerala: What Is This 'Credit Scheme' For Street Vendors?
NM on the go

Nm on the go

Always be the first to hear from the PM. Get the App Now!
...
Today, India has embarked on the Reform Express, aimed at making both life and business easier: PM Modi at the 18th Rozgar Mela
January 24, 2026
In recent years, the Rozgar Mela has evolved into an institution and through it, lakhs of young people have received appointment letters in various government departments: PM
Today, India stands among the youngest nations in the world; Our government is consistently striving to create new opportunities for the youth of India, both within the country and across the globe: PM
Today, the Government of India is entering into trade and mobility agreements with numerous countries which will open up countless new opportunities for the youth of India: PM
Today, the nation has embarked on the Reform Express, with the purpose to make both life and business easier across the country: PM

सभी युवा साथियों, आप सबको मेरा नमस्कार! साल 2026 का आरंभ, आपके जीवन में नई खुशियों का आरंभ कर रहा है। इसके साथ ही जब वसंत पंचमी कल ही गई है, तो आपके जीवन में भी ये नई वसंत का आरंभ हो रहा है। आपको ये समय, संविधान के प्रति अपने दायित्वों से भी जोड़ रहा है। संयोग से इस समय देश में गणतंत्र का महापर्व चल रहा है। कल 23 जनवरी को हमने नेताजी सुभाष की जयंती पर पराक्रम दिवस मनाया, और अब कल 25 जनवरी को राष्ट्रीय मतदाता दिवस है, फिर उसके बाद 26 जनवरी को गणतंत्र दिवस है। आज का दिन भी विशेष है। आज के ही दिन हमारे संविधान ने ‘जन गण मन’ को राष्ट्रीय गान और ‘वंदे मातरम’ को राष्ट्रीय गीत के रूप में अपनाया था। आज के इस महत्वपूर्ण दिन, देश के इकसठ हज़ार से ज्यादा नौजवान जीवन की नई शुरुआत कर रहे हैं। आज आप सबको सरकारी सेवाओं के नियुक्ति पत्र मिल रहे हैं, ये एक तरह से Nation Building का Invitation Letter है। ये विकसित भारत के निर्माण को गति देने का संकल्प पत्र है। आप में बहुत सारे साथी, देश की सुरक्षा को मज़बूत करेंगे, हमारे एजुकेशन और हेल्थकेयर इकोसिस्टम को और सशक्त करेंगे, कई साथी वित्तीय सेवाओं और एनर्जी सिक्योरिटी को मज़बूती देंगे, तो कई युवा हमारी सरकारी कंपनियों की ग्रोथ में महत्वपूर्ण भूमिका निभाएंगे। मैं आप सभी युवाओं को बहुत-बहुत बधाई और शुभकामनाएं देता हूं।

साथियों,

युवाओं को कौशल से जोड़ना और उन्हें रोजगार-स्वरोजगार के अवसर देना, ये हमारी सरकार की प्राथमिकता रही है। सरकारी भर्तियों को भी कैसे मिशन मोड पर किया जाए, इसके लिए रोज़गार मेले की शुरुआत की गई थी। बीते वर्षों में रोज़गार मेला एक इंस्टीट्यूशन बन गया है। इसके जरिए लाखों युवाओं को सरकार के अलग-अलग विभागों में नियुक्ति पत्र मिल चुके हैं। इसी मिशन का और विस्तार करते हुए, आज देश के चालीस से अधिक स्थानों पर ये रोजगार मेला चल रहा है। इन सभी स्थानों पर मौजूद युवाओं का मैं विशेष तौर पर अभिनंदन करता हूं।

साथियों,

आज भारत, दुनिया के सबसे युवा देशों में से एक है। हमारी सरकार का निरंतर प्रयास है कि भारत की युवाशक्ति के लिए देश-दुनिया में नए-नए अवसर बनें। आज भारत सरकार, अनेक देशों से ट्रेड और मोबिलिटी एग्रीमेंट कर रही है। ये ट्रेड एग्रीमेंट भारत के युवाओं के लिए अनेकों नए अवसर लेकर आ रहे हैं।

साथियों,

बीते समय में भारत ने आधुनिक इंफ्रास्ट्रक्चर के लिए अभूतपूर्व निवेश किया है। इससे कंस्ट्रक्शन से जुड़े हर सेक्टर में रोजगार बहुत बढ़े हैं। भारत के स्टार्ट-अप इकोसिस्टम का दायरा भी तेज़ गति से आगे बढ़ रहा है। आज देश में करीब दो लाख रजिस्टर्ड स्टार्ट-अप हैं। इनमें इक्कीस लाख से ज्यादा युवा काम कर रहे हैं। इसी प्रकार, डिजिटल इंडिया ने, एक नई इकॉनॉमी को विस्तार दिया है। एनिमेशन, डिजिटल मीडिया, ऐसे अनेक क्षेत्रों में भारत एक ग्लोबल हब बनता जा रहा है। भारत की क्रिएटर इकॉनॉमी बहुत तेज़ गति से ग्रो कर रही है, इसमें भी युवाओं को नई-नई अपॉरचुनिटीज मिल रही हैं।

मेरे युवा साथियों,

आज भारत पर जिस तरह दुनिया का भरोसा बढ़ रहा है, वो भी युवाओं के लिए अनेक नई संभावनाएं बना रहा है। भारत दुनिया की एकमात्र बड़ी इकॉनॉमी है, जिसने एक दशक में GDP को डबल किया है। आज दुनिया के सौ से अधिक देश, भारत में FDI के जरिए निवेश कर रहे हैं। वर्ष 2014 से पहले के दस वर्षों की तुलना में भारत में ढाई गुना से अधिक FDI आया है। और ज्यादा विदेशी निवेश का अर्थ है, भारत के युवाओं के लिए रोजगार के अनगिनत अवसर।

साथियों,

आज भारत एक बड़ी मैन्युफेक्चरिंग पावर बनता जा रहा है। Electronics, दवाएं और वैक्सीन, डिफेंस, ऑटो, ऐसे अनेक सेक्टर्स में भारत के प्रोडक्शन और एक्सपोर्ट, दोनों में अभूतपूर्व वृद्धि हो रही है। 2014 के बाद से भारत की electronics manufacturing में छह गुना वृद्धि हुई है, छह गुना। आज ये 11 लाख करोड़ रुपए से अधिक की इंडस्ट्री है। हमारा इलेक्ट्रॉनिक्स एक्सपोर्ट भी चार लाख करोड़ रुपए को पार कर चुका है। भारत की ऑटो इंडस्ट्री भी सबसे तेजी से ग्रो करने वाले सेक्टर्स में से एक बन गई है। वर्ष 2025 में टू-व्हीलर की बिक्री दो करोड़ के पार पहुंच चुकी है। ये दिखाता है कि देश के लोगों की खरीद शक्ति बढ़ी है, इनकम टैक्स और GST कम होने से उन्हें अनेक लाभ हुए हैं, ऐसे अनेक उदाहरण हैं, जो बताते हैं कि देश में बड़ी संख्या में रोजगार का निर्माण हो रहा है।

साथियों,

आज के इस आयोजन में 8 हजार से ज्यादा बेटियों को भी नियुक्ति पत्र मिले हैं। बीते 11 वर्षों में, देश की वर्कफोर्स में वीमेन पार्टिसिपेशन में करीब-करीब दोगुनी बढ़ोतरी हुई है। सरकार की मुद्रा और स्टार्ट अप इंडिया जैसी योजनाओं का, बहुत बड़ा फायदा हमारी बेटियों को हुआ है। महिला स्व-रोजगार की दर में करीब 15 परसेंट की बढ़ोतरी हुई है। अगर मैं स्टार्ट अप्स और MSMEs की बात करूं, तो आज बहुत बड़ी संख्या में वीमेन डायरेक्टर, वीमेन फाउंडर्स हैं। हमारा जो को-ऑपरेटिव सेक्टर है, जो हमारे सेल्फ हेल्प ग्रुप्स गांवों में काम कर रहे हैं, उनमें बहुत बड़ी संख्या में महिलाएं नेतृत्व कर रही हैं।

साथियों,

आज देश रिफॉर्म एक्सप्रेस पर चल पड़ा है। इसका उद्देश्य, देश में जीवन और कारोबार, दोनों को आसान बनाने का है। GST में नेक्स्ट जेनरेशन रिफॉर्म्स का सभी को फायदा हुआ है। इससे, हमारे युवा आंत्रप्रन्योर्स को लाभ हो रहा है, हमारे MSMEs को फायदा हो रहा है। हाल में देश ने ऐतिहासिक लेबर रिफॉर्म्स लागू किए हैं। इससे, श्रमिकों, कर्मचारियों और बिजनेस, सबको फायदा होगा। नए लेबर कोड्स ने, श्रमिकों के लिए, कर्मचारियों के लिए, सामाजिक सुरक्षा का दायरा और सशक्त किया है।

साथियों,

आज जब रिफॉर्म एक्सप्रेस की चर्चा हर तरफ हो रही है, तो मैं आपको भी इसी विषय में एक काम सौंपना चाहता हूं। आप याद कीजिए, बीते पांच-सात साल में कब-कब आपका सरकार से किसी न किसी रूप में संपर्क हुआ है? कहीं किसी सरकारी दफ्तर में काम पड़ा हो, किसी और माध्यम से संवाद हुआ हो और आपको इसमें परेशानी हुई हो, कुछ कमी महसूस हुई हो, आपको कुछ न कुछ खटका हो, जरा ऐसी बातों को याद करिए। अब आपको तय करना है, कि जिन बातों ने आपको परेशान किया, कभी आपके माता पिता को परेशान किया, कभी आपके यार दोस्तों को परेशान किया, और वो जो आपको अखरता था, बुरा लगता था, गुस्सा आता था, अब वो कठिनाइयां, आपके अपने कार्यकाल में आप दूसरे नागरिकों को नहीं होने देंगे। आपको भी सरकार का हिस्सा होने के नाते, अपने स्तर पर छोटे-छोटे रिफॉर्म करने होंगे। इस अप्रोच को लेकर के आपको आगे बढ़ना है, ताकि ज्यादा से ज्यादा लोगों का भला हो। Ease of living, Ease of doing business, इसको ताकत देने का काम, जितनी नीति से होता है, उससे ज्यादा स्थानीय स्तर पर काम करने वाले सरकारी कर्मचारी की नीयत से होता है। आपको एक और बात याद रखनी है। तेज़ी से बदलती टेक्नॉलॉजी के इस दौर में, देश की ज़रूरतें और प्राथमिकताएं भी तेज़ी से बदल रही हैं। इस तेज़ बदलाव के साथ आपको खुद को भी अपग्रेड करते रहना है। आप iGOT कर्मयोगी जैसे प्लेटफॉर्म का जरूर सदुपयोग करें। मुझे खुशी है कि इतने कम समय में, करीब डेढ़ करोड़ सरकारी कर्मचारी iGOT के इस प्लेटफॉर्म से जुड़कर खुद को नए सिरे से ट्रेन कर रहे हैं, Empower कर रहे हैं।

साथियों,

चाहे प्रधानमंत्री हो, या सरकार का छोटा सा सेवक, हम सब सेवक हैं और हम सबका एक मंत्र समान है, उसमें न कोई ऊपर है, न कोई दाएं बाएं है, और हम सबके लिए, मेरे लिए भी और आपके लिए भी मंत्र कौन सा है- ‘’नागरिक देवो भव’’ ‘’नागरिक देवो भव’’ के मंत्र के साथ हमें काम करना है, आप भी करते रहिए, एक बार फिर आपके जीवन में ये जो नई वसंत आई है, ये नया जीवन का युग शुरू हो रहा है और आप ही के माध्यम से 2047 में विकसित भारत बनने वाला है। आपको मेरी तरफ से बहुत-बहुत शुभकामनाएं। बहुत-बहुत धन्यवाद।