‘ಟಾಯೊಕೋನಮಿ’ಯಲ್ಲಿ ಉತ್ತಮ ಸ್ಥಾನಕ್ಕೆ ಕರೆ
ಅಭಿವೃದ್ಧಿ ಮತ್ತು ಬೆಳವಣಿಗೆಯನ್ನು ಅಗತ್ಯ ಇರುವ ವಿಭಾಗಗಳಿಗೆ ತೆಗೆದುಕೊಂಡು ಹೋಗುವಲ್ಲಿ ಆಟಿಕೆ ಕ್ಷೇತ್ರದ ಮಹತ್ವದ ಪ್ರತಿಪಾದನೆ
ನಾವು ಸ್ಥಳೀಯ ಆಟಿಕೆಗಳಿಗೆ ಧ್ವನಿಯಾಗಬೇಕು: ಪ್ರಧಾನಮಂತ್ರಿ
ವಿಶ್ವ ಭಾರತದ ಸಾಮರ್ಥ್ಯ, ಕಲೆ, ಸಂಸ್ಕೃತಿ ಮತ್ತು ಸಮಾಜದ ಬಗ್ಗೆ ತಿಳಿಯಲು ಬಯಸುತ್ತದೆ ಇದರಲ್ಲಿ ಆಟಿಕೆಗಳು ದೊಡ್ಡ ಪಾತ್ರ ನಿರ್ವಹಿಸುತ್ತವೆ: ಪ್ರಧಾನಮಂತ್ರಿ
ಭಾರತವು ಡಿಜಿಟಲ್ ಗೇಮಿಂಗ್ ನಲ್ಲಿ ವಿಪುಲ ವಸ್ತುವಿಷಯ ಮತ್ತು ಸಾಮರ್ಥ್ಯವನ್ನು ಹೊಂದಿದೆ: ಪ್ರಧಾನಮಂತ್ರಿ
ಭಾರತದ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವವು ಆಟಿಕೆ ಉದ್ಯಮದ ನಾವಿನ್ಯದಾರರು ಮತ್ತು ಸೃಷ್ಟಿಕರ್ತರಿಗೆ ಬೃಹತ್ ಅವಕಾಶವಾಗಿದೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಾಯ್ಕಥಾನ್ -2021ರ ಸ್ಪರ್ಧಿಗಳೊಂದಿಗೆ ಇಂದು ವಿಡಿಯೋ ಸಂವಾದದ ಮೂಲಕ ಸಂವಾದ ನಡೆಸಿದರು. ಕೇಂದ್ರ ಸಚಿವ ಶ್ರೀ ಪೀಯೂಷ್ ಗೋಯೆಲ್ ಮತ್ತು ಶ್ರೀ ಸಂಜಯ್ ಧೋತ್ರೆ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಕಳೆದ 5-6 ವರ್ಷಗಳಲ್ಲಿ, ದೇಶದ ಯುವಜನರು ಹ್ಯಾಕಥಾನ್ ನಂತಹ ವೇದಿಕೆಗಳ ಮೂಲಕ ದೇಶದ ಪ್ರಮುಖ ಸವಾಲುಗಳೊಂದಿಗೆ ಸಂಪರ್ಕಿತರಾಗಿದ್ದಾರೆ.  ಇದರ ಹಿಂದಿನ ಉದ್ದೇಶ ದೇಶದ ಸಾಮರ್ಥ್ಯಗಳನ್ನು ಸಂಯೋಜಿಸುವುದು ಮತ್ತು ಅವರಿಗೆ ಒಂದು ಮಾಧ್ಯಮ ನೀಡುವುದಾಗಿದೆ ಎಂದರು.

ಮಕ್ಕಳಿಗೆ ಪ್ರಥಮ ಗೆಳೆಯನಾದ ಆಟಿಕೆಗಳ ಮಹತ್ವದ ಹೊರತಾಗಿ, ಆಟಿಕೆಗಳು ಮತ್ತು ಗೇಮಿಂಗ್‌ ನ ಆರ್ಥಿಕ ಅಂಶಗಳನ್ನು ಪ್ರಧಾನಮಂತ್ರಿ ಪ್ರತಿಪಾದಿಸಿದರು, ಅವರು ಇದನ್ನು ‘ಟಾಯೊಕೋನಮಿ’ ಎಂದು ಉಲ್ಲೇಖಿಸಿದರು. ಜಾಗತಿಕ ಆಟಿಕೆ ಮಾರುಕಟ್ಟೆ ಸುಮಾರು 100 ಶತಕೋಟಿ ಡಾಲರ್ ನದಾಗಿದ್ದು,  ಭಾರತವು ಈ ಮಾರುಕಟ್ಟೆಯ ಪಾಲು ಶೇಕಡಾ 1.5 ರಷ್ಟು ಮಾತ್ರ ಎಂದು ಪ್ರಧಾನಮಂತ್ರಿ ಹೇಳಿದರು. ಭಾರತ ತನ್ನ ಆಟಿಕೆಗಳಲ್ಲಿ ಸುಮಾರು ಶೇ.80ರಷ್ಟನ್ನು ಆಮದು ಮಾಡಿಕೊಳ್ಳುತ್ತದೆ. ಅಂದರೆ, ಕೋಟ್ಯಂತರ ರೂಪಾಯಿ ದೇಶದಿಂದ ಹೊರ ಹೋಗುತ್ತಿದೆ. ಇದು ಬದಲಾಗಬೇಕು ಎಂದು ಪ್ರಧಾನಮಂತ್ರಿ ಹೇಳಿದರು. ಸಂಖ್ಯೆಗಳನ್ನು ಮೀರಿ, ಈ ವಲಯವು ಸಮಾಜದ ಅಗತ್ಯವಿರುವ ಭಾಗಗಳಿಗೆ ಪ್ರಗತಿ ಮತ್ತು ಬೆಳವಣಿಗೆಯನ್ನು ತರುವ ಸಾಮರ್ಥ್ಯವನ್ನು ಹೊಂದಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.. ಆಟಿಕೆ ಉದ್ಯಮವು ತನ್ನದೇ ಆದ ಸಣ್ಣ-ಪ್ರಮಾಣದ ಉದ್ಯಮವನ್ನು ಹೊಂದಿದ್ದು ಇದರಲ್ಲಿನ ಕುಶಲಕರ್ಮಿಗಳು, ಗ್ರಾಮೀಣ ಜನರು, ದಲಿತರು, ಬಡ ಜನರು ಮತ್ತು ಬುಡಕಟ್ಟು ಜನರಾಗಿದ್ದಾರೆ ಎಂದರು. ಈ ಕ್ಷೇತ್ರದಲ್ಲಿ ಮಹಿಳೆಯರ ಕೊಡುಗೆಯನ್ನು ಪ್ರಧಾನಮಂತ್ರಿಯವರು ಗುರುತಿಸಿದರು. ಈ ವಿಭಾಗಗಳಿಗೆ ಪ್ರಯೋಜನಗಳನ್ನು ತೆಗೆದುಕೊಂದು ಹೋಗಲು, ನಾವು ಸ್ಥಳೀಯ ಆಟಿಕೆಗಳಿಗೆ ಧ್ವನಿ ನೀಡಬೇಕಾಗಿದೆ. ಭಾರತೀಯ ಆಟಿಕೆಗಳನ್ನು ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕಗೊಳಿಸಲು ಹೊಸ ಮಾದರಿ ಆವಿಷ್ಕಾರಗಳು ಮತ್ತು ಹಣ ಹೂಡಿಕೆಗೆ ಪ್ರಧಾನಮಂತ್ರಿ ಕರೆ ನೀಡಿದರು. ಹೊಸ ಆಲೋಚನೆಗಳಿಗೆ ಇಂಬು ನೀಡುವ ಅವಶ್ಯಕತೆಯಿದೆ, ಹೊಸ ನವೋದ್ಯಮಗಳನ್ನು ಉತ್ತೇಜಿಸುವುದು, ಸಾಂಪ್ರದಾಯಿಕ ಆಟಿಕೆ ತಯಾರಕರಿಗೆ ಹೊಸ ತಂತ್ರಜ್ಞಾನವನ್ನು ಒದಗಿಸುವುದು ಮತ್ತು ಹೊಸ ಮಾರುಕಟ್ಟೆ ಬೇಡಿಕೆಯನ್ನು ಸೃಷ್ಟಿಸುವುದು. ಟಾಯ್ಕಾಥಾನ್ ನಂತಹ ಕಾರ್ಯಕ್ರಮದ ಹಿಂದಿನ ಸ್ಫೂರ್ತಿಯಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.

 

ಅಗ್ಗ ದರದ ಇಂಟರ್ನೆಟ್ ಡೇಟಾ ಮತ್ತು ಅಂತರ್ಜಾಲದ ವೃದ್ಧಿ ಗ್ರಾಮೀಣ ಸಂಪರ್ಕಕ್ಕೆ ಕಾರಣವಾಗಿರುವುದನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಭಾರತದಲ್ಲಿ ವರ್ಚುವಲ್, ಡಿಜಿಟಲ್ ಮತ್ತು ನ್ ಲೈನ್ ಗೇಮಿಂಗ್ ಸಾಧ್ಯತೆಗಳನ್ನು ಅನ್ವೇಷಿಸುವಂತೆ ಕರೆ ನೀಡಿದರು. ಮಾರುಕಟ್ಟೆಯಲ್ಲಿ ಲಭ್ಯವಿರುವ ಹೆಚ್ಚಿನ ಆನ್‌ ಲೈನ್ ಮತ್ತು ಡಿಜಿಟಲ್ ಗೇಮ್ ಗಳು ಭಾರತೀಯ ಪರಿಕಲ್ಪನೆಗಳನ್ನು ಆಧರಿಸಿಲ್ಲ ಮತ್ತು ಅಂತಹ ಅನೇಕ ಆಟಗಳು ಹಿಂಸಾತ್ಮಕತೆಯನ್ನು ಉತ್ತೇಜಿಸುತ್ತವೆ ಮತ್ತು ಮಾನಸಿಕ ಒತ್ತಡವನ್ನು ಉಂಟುಮಾಡುತ್ತವೆ ಎಂಬುದನ್ನು ಪ್ರಧಾನಮಂತ್ರಿಯವರು ಖಂಡಿಸಿದರು. ಭಾರತದ ಸಾಮರ್ಥ್ಯ, ಕಲೆ ಮತ್ತು ಸಂಸ್ಕೃತಿ ಮತ್ತು ಸಮಾಜದ ಬಗ್ಗೆ ಜಗತ್ತು ತಿಳಿಯಲು ಬಯಸುತ್ತದೆ ಎಂದು ಪ್ರಧಾನಮಂತ್ರಿಯವರು ಪ್ರತಿಪಾದಿಸಿದರು. ಆಟಿಕೆ ಅದರಲ್ಲಿ ದೊಡ್ಡ ಪಾತ್ರವನ್ನು ನಿರ್ವಹಿಸುತ್ತದೆ. ಡಿಜಿಟಲ್ ಗೇಮಿಂಗ್ ಗಾಗಿ ಭಾರತವು ಸಾಕಷ್ಟು ವಿಷಯ ಮತ್ತು ಸಾಮರ್ಥ್ಯವನ್ನು ಹೊಂದಿದೆ. ಭಾರತದ ಸಾಮರ್ಥ್ಯ ಮತ್ತು ಕಲ್ಪನೆಗಳ ನೈಜ ಚಿತ್ರಣವನ್ನು ಜಗತ್ತಿಗೆ ತೋರಿಸುವ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಳ್ಳಬೇಕೆಂದು ಯುವ ನಾವಿನ್ಯದಾರರು ಮತ್ತು ನವೋದ್ಯಮಗಳಿಗೆ ಶ್ರೀ ಮೋದಿ ಕರೆ ನೀಡಿದರು.

 

ಆಟಿಕೆ ಕೈಗಾರಿಕೆಗಳ ಸೃಷ್ಟಿಕರ್ತರಿಗೆ ಮತ್ತು ನಾವಿನ್ಯದಾರರಿಗೆ ಭಾರತದ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವ ಒಂದು ದೊಡ್ಡ ಅವಕಾಶವಾಗಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಮತ್ತು ಅವರ ಶೌರ್ಯ ಹಾಗೂ ನಾಯಕತ್ವದ ಹಲವು ಘಟನಾವಳಿಗಳನ್ನು ಗೇಮಿಂಗ್ ನ ವಸ್ತು ವಿಷಯ ಮಾಡಿಕೊಳ್ಳಬಹುದು ಎಂದು ಹೇಳಿದರು. ಈ ನಾವೀನ್ಯದಾರರಿಗೆ ‘ಜಾನಪದವನ್ನು ಭವಿಷ್ಯದೊಂದಿಗೆ’ ಜೋಡಿಸುವಲ್ಲಿ ದೊಡ್ಡ ಪಾತ್ರವಿದೆ. ಆಸಕ್ತಿದಾಯಕ ಮತ್ತು ಸಂವಾದಾತ್ಮಕ ಆಟಗಳನ್ನು ರಚಿಸುವ ಅವಶ್ಯಕತೆಯಿದೆ, ಅದು ‘ತೊಡಗಿಸಿಕೊಂಡು, ಮನರಂಜನೆ ಮತ್ತು ಶಿಕ್ಷಣವನ್ನು ನೀಡುತ್ತದೆ’ ಎಂದು ಪ್ರಧಾನಮಂತ್ರಿ ಹೇಳಿದರು.

 

 

Click here to read PM's speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s jewellery exports rise 2.4% to $9.17 billion; studded gold emerges as bright spot

Media Coverage

India’s jewellery exports rise 2.4% to $9.17 billion; studded gold emerges as bright spot
NM on the go

Nm on the go

Always be the first to hear from the PM. Get the App Now!
...
ವಿಭಜನೆಯ ಕರಾಳತೆ ಸ್ಮರಣಾ ದಿನದಂದು ವಿಭಜನೆಯಿಂದ ಬಾಧಿತರಾದವರ ಧೈರ್ಯವನ್ನು ಸ್ಮರಿಸಿದ ಪ್ರಧಾನಮಂತ್ರಿ
August 14, 2026
ಕಠಿಣ ಪರಿಶ್ರಮ ಮತ್ತು ಮಾನವ ಪ್ರಯತ್ನದ ಶಕ್ತಿಯನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ

ವಿಭಜನೆಯ ಕರಾಳತೆಯ ಸ್ಮರಣಾ ದಿನವನ್ನು ನಾವು ಆಚರಿಸುತ್ತಿರುವ ಹೊತ್ತಿನಲ್ಲಿ, ವಿಭಜನೆಯಿಂದ ಬಾಧಿತರಾದ ಎಲ್ಲರ ಧೈರ್ಯವನ್ನು ನಾವು ಸ್ಮರಿಸುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಇದು ಇತಿಹಾಸದಲ್ಲಿ ಅನೇಕರ ಬದುಕುಗಳನ್ನು ಛಿದ್ರಗೊಳಿಸಿದ ಕ್ಷಣವಾಗಿದೆ, ಅಲ್ಲಿ ಕುಟುಂಬಗಳು ನೆಲೆ ಕಳೆದುಕೊಂಡವು, ಪ್ರೀತಿಪಾತ್ರರನ್ನು ಕಳೆದುಕೊಂಡರು ಮತ್ತು ಅಪಾರವಾದ ನೋವನ್ನು ಸಹಿಸಿಕೊಳ್ಳಬೇಕಾಯಿತು ಎಂದು ಅವರು ಉಲ್ಲೇಖಿಸಿದ್ದಾರೆ.

ಅದೇ ಸಮಯದಲ್ಲಿ, ಇದನ್ನು ಮೆಟ್ಟಿ ನಿಂತು, ಜನರು ಶೂನ್ಯದಿಂದ ತಮ್ಮ ಜೀವನವನ್ನು ಮರುನಿರ್ಮಾಣ ಮಾಡಿದರು, ಪ್ರತಿಕೂಲತೆಯನ್ನು ಸಾಧನೆಯಾಗಿ ಪರಿವರ್ತಿಸಿದರು ಮತ್ತು ನಮ್ಮ ರಾಷ್ಟ್ರದ ಪ್ರಗತಿಗೆ ಅಪಾರ ಕೊಡುಗೆ ನೀಡಿದರು ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದ್ದಾರೆ. ಅವರ ಜೀವನ ಪಯಣವು ಮಾನವನ ಅದಮ್ಯ ಚೇತನದ ಶಕ್ತಿಯನ್ನು ನಮಗೆ ನೆನಪಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ದಿನವು ನಮ್ಮ ದೇಶದಲ್ಲಿ ಸೌಹಾರ್ದತೆ ಮತ್ತು ಭ್ರಾತೃತ್ವವನ್ನು ಕಾಪಾಡುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಗಾಢವಾಗಿಸಲಿ ಮತ್ತು 'ವಿಕಸಿತ ಭಾರತ' ನಿರ್ಮಾಣಕ್ಕಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವಂತಾಗಲಿ ಎಂದು ಶ್ರೀ ಮೋದಿಯವರು ಆಶಿಸಿದ್ದಾರೆ.

ಆ ಭೀಕರ ಕಾಲಘಟ್ಟದಿಂದ ಹೊರಬಂದು, ದೇಶದ ಪ್ರಗತಿಗೆ ಅಮೂಲ್ಯವಾದ ಕೊಡುಗೆ ನೀಡಿದ ಎಲ್ಲಾ ದೇಶವಾಸಿಗಳಿಗೆ ಪ್ರಧಾನಮಂತ್ರಿಯವರು ತಮ್ಮ ಹೃತ್ಪೂರ್ವಕ ನಮನಗಳನ್ನು ಸಲ್ಲಿಸಿದ್ದಾರೆ. ಪ್ರತಿಕೂಲ ಪರಿಸ್ಥಿತಿಗಳಲ್ಲಿಯೂ ಸಂಕಲ್ಪಗಳನ್ನು ಹೇಗೆ ಈಡೇರಿಸಿಕೊಳ್ಳಬಹುದು ಎಂಬುದನ್ನು ಅವರು ತಮ್ಮ ಧೈರ್ಯ ಮತ್ತು ಸಾಮರ್ಥ್ಯದ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ. ಸದ್ಭಾವನೆ ಮತ್ತು ಒಗ್ಗಟ್ಟಿನ ರಾಷ್ಟ್ರೀಯ ಮನೋಭಾವವನ್ನು ಇನ್ನಷ್ಟು ಬಲಪಡಿಸುವಂತೆ ಶ್ರೀ ಮೋದಿಯವರು ಎಲ್ಲರಿಗೂ ಕರೆ ನೀಡಿದ್ದಾರೆ.

ಸುಭಾಷಿತವೊಂದನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು, ಕಠಿಣ ಪರಿಶ್ರಮ, ಉದ್ಯಮಶೀಲತೆ ಮತ್ತು ಸಮರ್ಪಿತ ಪ್ರಯತ್ನದಿಂದ ಮಾತ್ರ ವೈವಿಧ್ಯಮಯ ಕಲೆಗಳು, ವಿಜ್ಞಾನ, ತಾಂತ್ರಿಕ ಕೌಶಲ್ಯಗಳು, ಕರಕುಶಲತೆ ಮತ್ತು ನಾವೀನ್ಯತೆಗಳು ಪ್ರವರ್ಧಮಾನಕ್ಕೆ ಬರುತ್ತವೆ ಮತ್ತು ಯಶಸ್ಸಿಗೆ ದಾರಿ ಮಾಡಿಕೊಡುತ್ತವೆ ಎಂದು ಒತ್ತಿ ಹೇಳಿದ್ದಾರೆ. ಆದ್ದರಿಂದ, ಯಾರೂ ಕೇವಲ ಅದೃಷ್ಟವನ್ನು ನೆಚ್ಚಿ ಕೂರಬಾರದು; ಬದಲಾಗಿ, ಧೈರ್ಯ, ಶ್ರದ್ಧೆ ಮತ್ತು ನಿರಂತರ ಪ್ರಯತ್ನದೊಂದಿಗೆ ತಮ್ಮ ಗುರಿಗಳತ್ತ ದೃಢವಾಗಿ ಸಾಗಬೇಕು, ಏಕೆಂದರೆ ಮಾನವನ ಪ್ರಯತ್ನವೇ ಹಣೆಬರಹವನ್ನು ರೂಪಿಸುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ʻಎಕ್ಸ್‌ʼ ನಲ್ಲಿ ಸರಣಿ ಪೋಸ್ಟ್‌ ಮಾಡಿರುವ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ:

"ಇಂದು ನಾವು #PartitionHorrorsRemembranceDay ಆಚರಿಸುತ್ತಿದ್ದೇವೆ. ವಿಭಜನೆಯಿಂದ ಬಾಧಿತರಾದ ಎಲ್ಲರ ಧೈರ್ಯವನ್ನು ನಾವು ಸ್ಮರಿಸುತ್ತೇವೆ. ಇದು ಇತಿಹಾಸದಲ್ಲಿ ಅನೇಕರ ಬದುಕುಗಳನ್ನು ಛಿದ್ರಗೊಳಿಸಿದ ಕ್ಷಣವಾಗಿತ್ತು... ಕುಟುಂಬಗಳು ನೆಲೆ ಕಳೆದುಕೊಂಡವು, ಪ್ರೀತಿಪಾತ್ರರನ್ನು ಕಳೆದುಕೊಂಡರು ಮತ್ತು ಅಪಾರವಾದ ನೋವನ್ನು ಅನುಭವಿಸಬೇಕಾಯಿತು.

ಅದೇ ಸಮಯದಲ್ಲಿ, ಇದನ್ನು ಮೆಟ್ಟಿ ನಿಂತು, ಜನರು ಶೂನ್ಯದಿಂದ ತಮ್ಮ ಜೀವನವನ್ನು ಮರುನಿರ್ಮಾಣ ಮಾಡಿದರು, ಪ್ರತಿಕೂಲತೆಯನ್ನು ಸಾಧನೆಯಾಗಿ ಪರಿವರ್ತಿಸಿದರು ಮತ್ತು ನಮ್ಮ ರಾಷ್ಟ್ರದ ಪ್ರಗತಿಗೆ ಅಪಾರ ಕೊಡುಗೆ ನೀಡಿದರು. ಅವರ ಜೀವನ ಪಯಣವು ಮಾನವನ ಅದಮ್ಯ ಚೇತನದ ಶಕ್ತಿಯನ್ನು ನಮಗೆ ನೆನಪಿಸುತ್ತದೆ.

ಈ ದಿನವು ನಮ್ಮ ದೇಶದಲ್ಲಿ ಸೌಹಾರ್ದತೆ ಮತ್ತು ಭ್ರಾತೃತ್ವವನ್ನು ಕಾಪಾಡುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಗಾಢವಾಗಿಸಲಿ ಮತ್ತು 'ವಿಕಸಿತ ಭಾರತ' ನಿರ್ಮಾಣಕ್ಕಾಗಿ ಒಟ್ಟಾಗಿ ಕೆಲಸ ಮಾಡಲು ಪ್ರೇರೇಪಿಸಲಿ."

"विभाजन विभीषिका स्मृति दिवस पर उन सभी देशवासियों का हृदय से नमन, जिन्होंने उस वीभत्स दौर से निकलकर देश की प्रगति में अमूल्य योगदान दिया। उन्होंने अपने साहस और सामर्थ्य से दिखाया कि कैसे विपरीत परिस्थितियों में भी संकल्पों को सिद्ध किया जाता है। आइए, सद्भावना और एकजुटता की राष्ट्रीय भावना को और सशक्त करें।

उद्यमस्य प्रसादेन दृश्यन्ते विविधाः कलाः।
कातरा एव जल्पन्ति यद् भाव्यं तद् भविष्यति॥”

ಕಠಿಣ ಪರಿಶ್ರಮ, ಉದ್ಯಮಶೀಲತೆ ಮತ್ತು ಸಮರ್ಪಿತ ಪ್ರಯತ್ನದಿಂದ ಮಾತ್ರ ವೈವಿಧ್ಯಮಯ ಕಲೆಗಳು, ವಿಜ್ಞಾನ, ತಾಂತ್ರಿಕ ಕೌಶಲ್ಯಗಳು, ಕರಕುಶಲತೆ ಮತ್ತು ನಾವೀನ್ಯತೆಗಳು ಪ್ರವರ್ಧಮಾನಕ್ಕೆ ಬರುತ್ತವೆ ಮತ್ತು ಯಶಸ್ಸಿಗೆ ದಾರಿ ಮಾಡಿಕೊಡುತ್ತವೆ ಎಂದು ಒತ್ತಿ ಹೇಳಿದ್ದಾರೆ. ಆದ್ದರಿಂದ, ಯಾರೂ ಕೇವಲ ಅದೃಷ್ಟವನ್ನು ನೆಚ್ಚಿ ಕೂರಬಾರದು; ಬದಲಾಗಿ, ಧೈರ್ಯ, ಶ್ರದ್ಧೆ ಮತ್ತು ನಿರಂತರ ಪ್ರಯತ್ನದೊಂದಿಗೆ ತಮ್ಮ ಗುರಿಗಳತ್ತ ದೃಢವಾಗಿ ಸಾಗಬೇಕು.