ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಂಗಾಪುರದಲ್ಲಿಂದು ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಥರ್ಮನ್ ಷಣ್ಮುಗರತ್ನಂ ಅವರನ್ನು ಭೇಟಿ ಮಾಡಿದ್ದರು.

 

ಪ್ರಧಾನಮಂತ್ರಿ ಅವರು ಭಾರತ-ಸಿಂಗಾಪುರ ಪಾಲುದಾರಿಕೆಗೆ ಅಧ್ಯಕ್ಷ ಥರ್ಮನ್ ಅವರ ಆಸಕ್ತಿಕರ ಬೆಂಬಲವನ್ನು ಶ್ಲಾಘಿಸಿದರು. ಉಭಯ ನಾಯಕರು ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸಿದರು. ಎರಡು ದೇಶಗಳ ನಡುವೆ ನಂಬಿಕೆ, ಪರಸ್ಪರ ಗೌರವ ಮತ್ತು ಪೂರಕ ಅಂಶಗಳನ್ನು ಆಧರಿಸಿದ ದೀರ್ಘಕಾಲದ ಸ್ನೇಹ ಮತ್ತು ಸಹಕಾರವನ್ನು ಅವರು ಅವರು ಪ್ರಮುಖವಾಗಿ ಪಸ್ತಾಪಿಸಿದರು. ಆ ನಿಟ್ಟಿನಲ್ಲಿ, ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಗೆ ಸಂಬಂಧಗಳನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಜಂಟಿ ಸಹಯೋಗಕ್ಕಾಗಿ ಉತ್ಕೃಷ್ಟ ಮಾರ್ಗವನ್ನು ರೂಪಿಸುತ್ತದೆ ಎಂದು ಅವರು ಉಲ್ಲೇಖಿಸಿದರು. ಭಾರತ ಮತ್ತು ಸಿಂಗಾಪುರವು ಸುಧಾರಿತ ಉತ್ಪಾದನೆ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಂತಹ ಹೊಸ ಕ್ಷೇತ್ರಗಳಲ್ಲಿ ತಮ್ಮ ಸಹಕಾರವನ್ನು ಹೇಗೆ ವಿಸ್ತರಿಸಬಹುದು ಎಂಬುದರ ಕುರಿತು ಅವರು ತಮ್ಮ ಆಲೋಚನೆಗಳನ್ನು ಹಂಚಿಕೊಂಡರು. ಭಾರತಕ್ಕೆ ಮುಂದಿನ ವರ್ಷ ಅಧ್ಯಕ್ಷ ಥರ್ಮನ್ ಅವರನ್ನು ಸ್ವಾಗತಿಸಲು ತಾವು ಎದುರು ನೋಡುತ್ತಿರುವುದಾಗಿ ಪ್ರಧಾನಮಂತ್ರಿ ತಿಳಿಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian economy navigated well external uncertainties: RBI Bulletin

Media Coverage

Indian economy navigated well external uncertainties: RBI Bulletin
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 23 ಜುಲೈ 2026
July 23, 2026

Digital Rails, PLI Jobs & Swift Justice: How PM Modi’s Governance is Rewiring India’s Future