ಪ್ರಧಾನಮಂತ್ರಿ ಅವರು 2024ರ ಅಕ್ಟೋಬರ್ 11ರಂದು ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ (ಇಎಎಸ್) ಭಾಗವಹಿಸಿದ್ದರು.

ಇಂಡೋ-ಪೆಸಿಫಿಕ್ ಪ್ರಾದೇಶಿಕ ವಾಸ್ತುಶಿಲ್ಪದಲ್ಲಿ, ಭಾರತದ ಇಂಡೋ-ಪೆಸಿಫಿಕ್ ದೃಷ್ಟಿಕೋನದಲ್ಲಿ ಮತ್ತು ಕ್ವಾಡ್ ಸಹಕಾರದಲ್ಲಿ ಆಸಿಯಾನ್ ನ ಕೇಂದ್ರ ಪಾತ್ರವನ್ನು ಪ್ರಧಾನಿ ತಮ್ಮ ಭಾಷಣದಲ್ಲಿ ಒತ್ತಿ ಹೇಳಿದರು. ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾರತದ ಭಾಗವಹಿಸುವಿಕೆಯು ಅದರ ಆಕ್ಟ್ ಈಸ್ಟ್ ನೀತಿಯ ಪ್ರಮುಖ ಆಧಾರಸ್ತಂಭವಾಗಿದೆ ಎಂದು ಅವರು ಪ್ರತಿಪಾದಿಸಿದರು. ಈ ಪ್ರದೇಶದಲ್ಲಿ ಶಾಂತಿ ಮತ್ತು ಅಭಿವೃದ್ಧಿಗೆ ಮುಕ್ತ, ಅಂತರ್ಗತ, ಸಮೃದ್ಧ ಮತ್ತು ನಿಯಮ ಆಧಾರಿತ ಇಂಡೋ-ಪೆಸಿಫಿಕ್ ಮುಖ್ಯವಾಗಿದೆ ಎಂದು ಹೇಳಿದ ಅವರು, ಭಾರತದ ಇಂಡೋ-ಪೆಸಿಫಿಕ್ ಸಾಗರದ ಉಪಕ್ರಮ ಮತ್ತು ಇಂಡೋ-ಪೆಸಿಫಿಕ್ ಕುರಿತ ಆಸಿಯಾನ್ ದೃಷ್ಟಿಕೋನದ ನಡುವಿನ ಹೋಲಿಕೆ ಮತ್ತು ಸಾಮಾನ್ಯ ವಿಧಾನದ ಬಗ್ಗೆ ಮಾತನಾಡಿದರು. ಈ ಪ್ರದೇಶವು ವಿಸ್ತರಣಾವಾದದ ಮೇಲೆ ಕೇಂದ್ರೀಕರಿಸುವ ಬದಲು ಅಭಿವೃದ್ಧಿ ಆಧಾರಿತ ವಿಧಾನವನ್ನು ಅನುಸರಿಸಬೇಕು ಎಂದು ಅವರು ಒತ್ತಿ ಹೇಳಿದರು.

ಇಎಎಸ್ ಕಾರ್ಯವಿಧಾನದ ಮಹತ್ವವನ್ನು ಪುನರುಚ್ಚರಿಸಿದ ಮತ್ತು ಅದನ್ನು ಮತ್ತಷ್ಟು ಬಲಪಡಿಸಲು ಭಾರತದ ಬೆಂಬಲವನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ ಅವರು, ನಳಂದ ವಿಶ್ವವಿದ್ಯಾಲಯದ ಪುನರುಜ್ಜೀವನಕ್ಕೆ ಇಎಎಸ್ ಭಾಗವಹಿಸುವ ದೇಶಗಳಿಂದ ಪಡೆದ ಬೆಂಬಲವನ್ನು ಸ್ಮರಿಸಿದರು. ನಳಂದ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಉನ್ನತ ಶಿಕ್ಷಣ ಮುಖ್ಯಸ್ಥರ ಸಮಾವೇಶಕ್ಕೆ ಇಎಎಸ್ ರಾಷ್ಟ್ರಗಳನ್ನು ಆಹ್ವಾನಿಸಲು ಪ್ರಧಾನಮಂತ್ರಿ ಈ ಅವಕಾಶವನ್ನು ಬಳಸಿಕೊಂಡರು.

ಇಂಡೋ-ಪೆಸಿಫಿಕ್ ನಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯ ಮೇಲೆ ಪರಿಣಾಮ ಬೀರುವ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಜಾಗತಿಕ ದಕ್ಷಿಣದ ಮೇಲೆ ಸಂಘರ್ಷಗಳ ತೀವ್ರ ಪರಿಣಾಮವನ್ನು ಒತ್ತಿಹೇಳಿದ ಪ್ರಧಾನಮಂತ್ರಿ ಅವರು, ವಿಶ್ವದ ಸಂಘರ್ಷಗಳನ್ನು ಶಾಂತಿಯುತವಾಗಿ ಪರಿಹರಿಸಲು ಮಾನವೀಯ ವಿಧಾನವನ್ನು ಆಧರಿಸಿದ ಮಾತುಕತೆ ಮತ್ತು ರಾಜತಾಂತ್ರಿಕತೆಯ ಮಾರ್ಗವನ್ನು ಅಳವಡಿಸಿಕೊಳ್ಳಬೇಕು ಎಂದು ಒತ್ತಿ ಹೇಳಿದರು. ಯುದ್ಧಭೂಮಿಯಲ್ಲಿ ಅವರಿಗೆ ಯಾವುದೇ ಪರಿಹಾರವನ್ನು ಕಂಡುಹಿಡಿಯಲಾಗುವುದಿಲ್ಲ ಎಂದು ಅವರು ಪುನರುಚ್ಚರಿಸಿದರು. ಸೈಬರ್ ಮತ್ತು ಕಡಲ ಸವಾಲುಗಳ ಜತೆಗೆ ಭಯೋತ್ಪಾದನೆ ಜಾಗತಿಕ ಶಾಂತಿ ಮತ್ತು ಭದ್ರತೆಗೆ ಗಂಭೀರ ಬೆದರಿಕೆಯಾಗಿದೆ, ಇದಕ್ಕಾಗಿ ಅವುಗಳನ್ನು ಎದುರಿಸಲು ದೇಶಗಳು ಒಗ್ಗೂಡಬೇಕು ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.

ಪೂರ್ವ ಏಷ್ಯಾ ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಲಾವೋಸ್ ಪ್ರಧಾನಮಂತ್ರಿ ಅವರಿಗೆ ಪ್ರಧಾನಮಂತ್ರಿ ಧನ್ಯವಾದ ಅರ್ಪಿಸಿದರು. ಆಸಿಯಾನ್ ನ ನೂತನ ಅಧ್ಯಕ್ಷರಾಗಿರುವ ಮಲೇಷ್ಯಾಕ್ಕೆ ಶುಭ ಕೋರಿದ ಅವರು, ಭಾರತದ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು.

 

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's crude supply secure, LPG production increased: Hardeep Puri

Media Coverage

India's crude supply secure, LPG production increased: Hardeep Puri
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಮಾರ್ಚ್ 2026
March 13, 2026

Resilient India Under PM Modi: Diplomatic Mastery, Youth Power, and Unstoppable Progress