Sushma Ji was a multifaceted personality; Karyakartas of the BJP have seen very closely what a great personality she was: PM
Sushma Ji’s speeches were both impactful as well as inspiring: PM Modi
In any ministerial duty she held, Sushma Ji brought about a marked change in the work culture there: PM
One would conventionally associate the MEA with protocol but Sushma Ji went a step ahead and made MEA people-friendly: PM
Sushma Ji never hesitated to speak her mind; she spoke with firmness: PM
Sushma Ji Sushma Ji could even tell the PM what to do: Shri Modi

ಮಾಜಿ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಮತ್ತು ಭಾರತದ ಅತ್ಯಂತ ಗೌರವಾನ್ವಿತ ನಾಯಕರಲ್ಲಿ ಒಬ್ಬರಾಗಿದ್ದ ಶ್ರೀಮತಿ ಸುಷ್ಮಾ ಸ್ವರಾಜ್ ಅವರ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ, ಪ್ರಾರ್ಥನಾ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗಿಯಾಗಿದ್ದರು. ಶ್ರೀಮತಿ ಸುಷ್ಮಾ ಸ್ವರಾಜ್ ಅವರು ದೇಶಕ್ಕೆ ಶ್ರದ್ಧೆಯಿಂದ ಮಾಡಿದ ಸೇವೆಯನ್ನು ಬಣ್ಣಿಸಿದ ಅವರು, ಅವರ ಸಾರ್ವಜನಿಕ ಜೀವನದ ಹಲವು ವಿಚಾರಗಳನ್ನು ಒತ್ತಿ ಹೇಳಿದರು.

 

ಅವರೊಂದಿಗೆ ಕಾರ್ಯ ನಿರ್ವಹಿಸಿದ ಎಲ್ಲರೂ ಶ್ರೀಮತಿ ಸುಷ್ಮಾ ಸ್ವರಾಜ್ ಅವರೊಂದಿಗೆ ಆಪ್ತವಾಗಿ ಸಂವಾದ ನಡೆಸಲು ಹರಸಲ್ಪಟ್ಟಿದ್ದರು.

 

ಅವರ ಕೊಡುಗೆ ಸ್ಮರಿಸಿದ ಪ್ರಧಾನಮಂತ್ರಿಯವರು, ನಾವು ಸುಷ್ಮಾ ಸ್ವರಾಜ್ ಅವರೊಂದಿಗೆ ಆಪ್ತವಾಗಿ ಮಾತುಕತೆ ನಡೆಸಲು ಹರಸಲ್ಪಟ್ಟಿದ್ದೆವು ಎಂದರು. ಸುಷ್ಮಾ ಅವರದು ಬಹುಮುಖಿ ವ್ಯಕ್ತಿತ್ವ ಮತ್ತು ಅವರೊಂದಿಗೆ ಕೆಲಸ ಮಾಡಿದ ಎಲ್ಲರೂ ಅವರದು ಎಂಥ ಶ್ರೇಷ್ಠ ವ್ಯಕ್ತಿತ್ವ ಎಂಬುದನ್ನು ಕಂಡಿದ್ದಾರೆ ಎಂದರು.

ಶ್ರೀಮತಿ ಸುಷ್ಮಾ ಸ್ವರಾಜ್ ಅವರು ಸವಾಲು ಸ್ವೀಕರಿಸಲು ಎಂದೂ ಹಿಂಜರಿಯಲಿಲ್ಲ

 

ಶ್ರೀಮತಿ ಸುಷ್ಮಾ ಸ್ವರಾಜ್ ಅವರು, ಸವಾಲು ಸ್ವೀಕರಿಸಲು ಎಂದೂ ಹಿಂಜರಿದವರಲ್ಲ ಎಂದು ಪ್ರಧಾನಮಂತ್ರಿ ಹೇಳಿದರು. 1999ರಲ್ಲಿ ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅವರ ನಿರ್ಧಾರ ಉಲ್ಲೇಖಿಸಿದ ಪ್ರಧಾನಮಂತ್ರಿ, “ನಾನು ಮತ್ತು ವೆಂಕಯ್ಯನಾಯ್ಡು ಅವರು ಸುಷ್ಮಾ ಅವರ ಬಳಿ ಹೋಗಿ, ಕರ್ನಾಟಕದಲ್ಲಿ ಚುನಾವಣೆ ಎದುರಿಸುವಂತೆ ಕೇಳಿದ್ದೆವು”. ಫಲಿತಾಂಶ ಏನು ಎಂಬುದು ನಿಶ್ಚಿತವಾಗಿತ್ತು ಆದರೆ, ಅವರು ಸವಾಲು ಸ್ವೀಕರಿಸಲು ಸದಾ ಸಿದ್ಧರಿದ್ದರು” ಎಂದರು. ಶ್ರೀಮತಿ ಸುಷ್ಮಾ ಸ್ವರಾಜ್ ಅವರು ಪ್ರಭಾವಿ ವಾಗ್ಮಿಯಾಗಿದ್ದರು ಮತ್ತು ಅವರ ಭಾಷಣಗಳು ಪರಿಣಾಮಕಾರಿ ಮತ್ತು ಪ್ರೇರಣಾತ್ಮಕವಾಗಿರುತ್ತಿದ್ದವು ಎಂದು ಪ್ರಧಾನಮಂತ್ರಿ ತಿಳಿಸಿದರು.

 

ಶ್ರೀಮತಿ ಸುಷ್ಮಾ ಸ್ವರಾಜ್ ಅವರು ಎಂ.ಇ.ಎ.ಯನ್ನು ಶಿಷ್ಟಾಚಾರಕ್ಕಿಂತ ಹೆಚ್ಚಾಗಿ ಜನರ ಪರ ಮಾಡಿದ್ದರು.

 

ಸುಷ್ಮಾ ಸ್ವರಾಜ್ ಅವರು ತಾವು ನಿರ್ವಹಿಸುತ್ತಿದ್ದ ಸಚಿವರ ಕರ್ತವ್ಯದಲ್ಲಿ, ಅಲ್ಲಿ ಗಮನಾರ್ಹ ಕಾರ್ಯ ಸಂಸ್ಕೃತಿಯನ್ನು ತರುತ್ತಿದ್ದರು ಎಂದು ಪ್ರಧಾನಮಂತ್ರಿ ತಿಳಿಸಿದರು. “ಯಾರೇ ಆದರೂ ಸಾಂಪ್ರದಾಯಿಕವಾಗಿ ಎಂ.ಇ.ಎ.ಯಲ್ಲಿ ಶಿಷ್ಟಾಚಾರಕ್ಕೆ ಅಂಟಿಕೊಳ್ಳುತ್ತಾರೆ, ಆದರೆ ಸುಷ್ಮಾ ಅವರು ಒಂದು ಹೆಜ್ಜೆ ಮುಂದೆ ಹೋಗಿ, ಜನರ ಕರೆಗೆ ಓಗೊಟ್ಟರು, ಸಚಿವಾಲಯವನ್ನು ಜನ ಸ್ನೇಹಿಗೊಳಿಸಿದರು”, ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು.

 

ಶ್ರೀಮತಿ ಸುಷ್ಮಾ ಸ್ವರಾಜ್ ಅವರು ವಿದೇಶಾಂಗ ವ್ಯವಹಾರಗಳ ಸಚಿವರಾಗಿದ್ದ ಅವಧಿಯಲ್ಲಿ ಪಾಸ್ ಪೋರ್ಟ್ ಕಚೇರಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳ

 

ಶ್ರೀಮತಿ ಸುಷ್ಮಾ ಸ್ವರಾಜ್ ಅವರು ವಿದೇಶಾಂಗ ವ್ಯವಹಾರಗಳ ಸಚಿವರಾಗಿದ್ದ ಅವಧಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಪಾಸ್ ಪೋರ್ಟ್ ಕಚೇರಿಗಳ ಸಂಖ್ಯೆ ಹೇಗೆ ಗಣನೀಯವಾಗಿ ಏರಿಕೆಯಾಯಿತು ಎಂಬುದನ್ನು ಪ್ರಧಾನಮಂತ್ರಿ ಸ್ಮರಿಸಿದರು.

ಹರ್ಯಾನ್ವಿ ಸ್ಪರ್ಶ

 

ಸುಷ್ಮಾ ಸ್ವರಾಜ್ ಅವರ ಬಗ್ಗೆ ಹೆಚ್ಚು ತಿಳಿಯದ ಅಂಶಗಳ ಪೈಕಿ ಒಂದಾದ ಹರ್ಯಾನ್ವಿ ಉಚ್ಚಾರಣೆಯ ಬಗ್ಗೆ ಪ್ರಧಾನಮಂತ್ರಿ ಒತ್ತಿ ಹೇಳಿದರು. “ರಾಜಕೀಯವಾಗಿ ಸಂಗತಿಗಳನ್ನು ಸರಿಪಡಿಸಿಕೊಳ್ಳಿ ಎಂದು ಜನರು ನಮಗೆ ಹೇಳುವುದು ಸಾಮಾನ್ಯ, ಆದರೆ ಸುಷ್ಮಾ ಅವರು ವಿಭಿನ್ನವಾಗಿದ್ದರು. ಅವರು ತಮ್ಮ ಮನದಾಳದ ಮಾತು ಹೇಳಲು ಹಿಂಜರಿಯುತ್ತಿರಲಿಲ್ಲ ಮತ್ತು ಅವರು ದೃಢವಾಗಿ ಮಾತನಾಡುತ್ತಿದ್ದರು. ಇದು ಅವರ ವಿಶೇಷವಾಗಿತ್ತು” ಎಂದು ಪ್ರಧಾನಮಂತ್ರಿ ಹೇಳಿದರು.

 

ಶ್ರೀಮತಿ ಸುಷ್ಮಾ ಸ್ವರಾಜ್ ಅವರು ಪಿಎಂಗೂ ಏನು ಮಾಡಬೇಕು ಎಂದು ಹೇಳುತ್ತಿದ್ದರು

 

ವಿಶ್ವಸಂಸ್ಥೆಯ ಮಹಾಧಿವೇಶನ ಉದ್ದೇಶಿಸಿ ತಾವು ಮೊದಲ ಬಾರಿಗೆ ಭಾಷಣ ಮಾಡಲು ಮುಂದಾಗಿದ್ದಾಗ ನಡೆದ ಘಟನೆಯನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಶ್ರೀಮತಿ ಸುಷ್ಮಾ ಸ್ವರಾಜ್ ಅವರು ಏನು ಮಾಡಬೇಕು ಎಂಬ ಬಗ್ಗೆ ಹೇಗೆ ಮಾರ್ಗದರ್ಶನ ಮಾಡಿದರು ಎಂಬುದನ್ನು ನೆನಪಿಸಿಕೊಂಡರು. ವಿಶ್ವ ಸಂಸ್ಥೆಯಲ್ಲಿ ಮಾಡಬೇಕಾದ ಭಾಷಣ ತಯಾರಿಗೆ ರಾತ್ರಿಯಿಡೀ ಹೇಗೆ ಸುಷ್ಮಾ ಸ್ವರಾಜ್ ನೆರವಾದರು ಎಂಬುದನ್ನು ಅವರು ಸ್ಮರಿಸಿದರು.

ಬಾನ್ಸುರಿಯಲ್ಲಿ ಶ್ರೀಮತಿ ಸುಷ್ಮಾ ಸ್ವರಾಜ್ ಅವರ ಹೆಗ್ಗುರುತುಗಳನ್ನು ನೋಡಿ: ಪಿ.ಎಂ.

 

ಶ್ರೀಮತಿ ಸುಷ್ಮಾ ಸ್ವರಾಜ್ ಅವರು ಬಾನ್ಸುರಿಯಲ್ಲಿ ಮೂಡಿಸಿರುವ ಹೆಗ್ಗುರುತುಗಳನ್ನು ತಾವು ಗಮನಿಸಿರುವುದಾಗಿ ಹೇಳಿದ ಪ್ರಧಾನಮಂತ್ರಿ ಅವರ ಆ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

 

ದಿವಂಗತ ಸುಷ್ಮಾ ಸ್ವರಾಜ್ ಅವರ ಪತಿ ಸ್ವರಾಜ್ ಕೌಶಲ್ ಮತ್ತು ಪುತ್ರಿ ಬಾನ್ಸುರಿ ಅವರಿಗೆ ಪ್ರಧಾನಮಂತ್ರಿಯವರು ಸಾಂತ್ವನ ಹೇಳಿದರು.

 

ಈ ಪ್ರಾರ್ಥನಾ ಸಭೆಯಲ್ಲಿ ಭಾಗಿಯಾಗಿದ್ದ ಗಣ್ಯರಲ್ಲಿ ಅವದೇಶಾನಂದ ಗಿರಿ ಮಹಾರಾಜ್, ಮಾಜಿ ಮಂತ್ರಿ ದಿನೇಶ್ ತ್ರಿವೇದಿ, ಸಂಸತ್ ಸದಸ್ಯ ಪಿನಾಕಿ ಮಿಶ್ರಾ, ಸಚಿವರಾದ ಶ್ರೀ ರಾಮ್ ವಿಲಾಸ್ ಪಾಸ್ವಾನ್, ಸಂಸದ ಸತೀಶ್ ಚಂದ್ರ ಮಿಶ್ರಾ, ಸಚಿವ ರಾಜೀವ್ ರಂಜನ್, ಸಂಸದ ತಿರುಚಿ ಶಿವ, ಸಂಸದ ಎ. ನವನೀತ ಕೃಷ್ಣನ್, ಸಂಸದ ನಮ್ಮ ನಾಗೇಶ್ವರ ರಾವ್, ಮಾಜಿ ಸಂಸದ ಶರದ್ ಯಾದವ್, ಸಚಿವ ಅರವಿಂದ್ ಸಾವಂತ್, ಸಂಸದ ಪ್ರೇಮ್ ಚಂದ್ ಗುಪ್ತಾ, ಸಂಸದ ಸುಖ್ಬೀರ್ ಸಿಂಗ್ ಬಾದಲ್, ಸಂಸದೆ ಅನುಪ್ರಿಯಾ ಪಟೇಲ್, ಸಂಸದ ಆನಂದ್ ಶರ್ಮಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್ ಮತ್ತು ಮುಖಂಡರಾದ ಡಾ. ಕೃಷ್ಣ ಗೋಪಾಲ್ ಮತ್ತು ಶ್ರೀ ಜೆ.ಪಿ. ನಡ್ಡಾ ಸೇರಿದ್ದರು.

पूरा भाषण पढ़ने के लिए यहां क्लिक कीजिए

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Big Relief For Flyers: Centre Mandates 60% Seats On Flights To Be Free Of Selection Fee

Media Coverage

Big Relief For Flyers: Centre Mandates 60% Seats On Flights To Be Free Of Selection Fee
NM on the go

Nm on the go

Always be the first to hear from the PM. Get the App Now!
...
Prime Minister greets everyone on occasion of Navratri
March 19, 2026
PM shares a Sanskrit Subhashitam and a Hymn on this occasion

Prime Minister Shri Narendra Modi has extended his warmest greetings to everyone on the auspicious occasion of Navratri, praying for prosperity, health, and the fulfillment of the resolve for a Viksit Bharat.

The Prime Minister shared a Sanskrit Subhashitam on this occasion, highlighting the divine and benevolent grace of Goddess Shailaputri as the holy festival of Navratri commences. PM Modi also shared a devotional hymn dedicated to the Goddess on this occasion, noting that through the boundless mercy of the Goddess, the welfare of all citizens would be ensured, providing a powerful impetus to the collective goal of a developed India.

In a series of posts, the Prime Minister wrote on X:

"देशभर के मेरे परिवारजनों को नवरात्रि की हार्दिक मंगलकामनाएं। शक्ति की आराधना का यह दिव्य अवसर आप सभी के लिए सुख, सौभाग्य, समृद्धि और उत्तम स्वास्थ्य लेकर आए। शक्तिस्वरूपा मां दुर्गा की असीम कृपा से सबका कल्याण हो, जिससे विकसित भारत के हमारे संकल्प को भी नई ऊर्जा मिले। जय अंबे जगदंबे मां!"

"नवरात्रि के पहले दिन मां दुर्गा के प्रथम स्वरूप देवी शैलपुत्री की पूजा का विधान है। उनके आशीर्वाद से हर किसी के जीवन में संयम, शांति और सकारात्मक ऊर्जा का संचार हो, यही कामना है।

वन्दे वाञ्छितलाभाय चन्द्रार्धकृतशेखराम्।
वृषारूढां शूलधरां शैलपुत्रीं यशस्विनीम्॥"

I bow to Goddess Shailaputri, who fulfills all the wishes of her devotees, who is adorned with a crescent moon on her forehead, who rides a bull and who holds a trident in her hand. She is a glorious and revered goddess.

"जगतजननी मां दुर्गा के चरणों में कोटि-कोटि देशवासियों की ओर से मेरा नमन और वंदन! नवरात्रि के पावन पर्व पर देवी मां से विनती है कि वे हर किसी को अपने स्नेह और अनुकंपा का आशीर्वाद प्रदान करें। जय माता दी!"