ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ, ಸಂವಿಧಾನ ರಚನಾ ಸಭೆಯ ಅಧ್ಯಕ್ಷತೆ ವಹಿಸಿದ್ದರಿಂದ ಹಿಡಿದು ನಮ್ಮ ಮೊದಲ ರಾಷ್ಟ್ರಪತಿಯಾಗುವವರೆಗೆ, ಅವರು ಸಾಟಿಯಿಲ್ಲದ ಘನತೆ, ಸಮರ್ಪಣೆ ಮತ್ತು ಸ್ಪಷ್ಟ ಉದ್ದೇಶದಿಂದ ನಮ್ಮ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು. "ಸಾರ್ವಜನಿಕ ಜೀವನದಲ್ಲಿ ಅವರ ಸುದೀರ್ಘ ವರ್ಷಗಳು ಸರಳತೆ, ಧೈರ್ಯ ಮತ್ತು ರಾಷ್ಟ್ರೀಯ ಏಕತೆಯ ಬಗೆಗಿನ ಶ್ರದ್ಧೆಯಿಂದ ಗುರುತಿಸಲ್ಪಟ್ಟಿವೆ. ಅವರ ಅನುಕರಣೀಯ ಸೇವೆ ಮತ್ತು ದೂರದೃಷ್ಟಿ ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ", ಎಂದು ಶ್ರೀ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ಈ ಕುರಿತು ಎಕ್ಸ್ ಖಾತೆಯಲ್ಲಿ ಹೀಗೆ ಪೊಸ್ಟ್‌ ಮಾಡಿದ್ದಾರೆ:

"ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ, ಸಂವಿಧಾನ ರಚನಾ ಸಭೆಯ ಅಧ್ಯಕ್ಷತೆ ವಹಿಸಿದ್ದರಿಂದ ಹಿಡಿದು ನಮ್ಮ ಮೊದಲ ರಾಷ್ಟ್ರಪತಿಯಾಗುವವರೆಗೆ, ಅವರು ಸಾಟಿಯಿಲ್ಲದ ಘನತೆ, ಸಮರ್ಪಣೆ ಮತ್ತು ಉದ್ದೇಶದ ಸ್ಪಷ್ಟತೆಯೊಂದಿಗೆ ನಮ್ಮ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದರು. ಸಾರ್ವಜನಿಕ ಜೀವನದಲ್ಲಿ ಅವರ ಸುದೀರ್ಘ ವರ್ಷಗಳು ಸರಳತೆ, ಧೈರ್ಯ ಮತ್ತು ರಾಷ್ಟ್ರೀಯ ಏಕತೆಯ ಬಗೆಗಿನ ಭಕ್ತಿಯಿಂದ ಗುರುತಿಸಲ್ಪಟ್ಟಿವೆ. ಅವರ ಅನುಕರಣೀಯ ಸೇವೆ ಮತ್ತು ದೂರದೃಷ್ಟಿ ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇದೆ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India remains fastest-growing major economy, domestic investors power market resilience

Media Coverage

India remains fastest-growing major economy, domestic investors power market resilience
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಮಾರ್ಚ್ 2026
March 14, 2026

Heartening Resolve Meets Bold Action: PM Modi's Transformative Push for a Developed Assam.