ಲಸಿಕೆ ತಯಾರಕರಿಗೆ ಹೆಚ್ಚಿನ ಉತ್ಪಾದನಾ ಘಟಕಗಳಿಗೆ ಅನುಕೂಲವಾಗುವುದು, ಹಣಕಾಸು ಮತ್ತು ಕಚ್ಚಾ ವಸ್ತುಗಳ ಪೂರೈಕೆ ವಿಷಯದಲ್ಲಿ ಭಾರತ ಸರ್ಕಾರ ಸಹಾಯ ಮಾಡುತ್ತಿದೆ.
ಲಸಿಕೆ ವ್ಯರ್ಥವಾಗಲು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ಸೂಚನೆ ನೀಡಿದರು
ಆರೋಗ್ಯ ರಕ್ಷಣಾ ಕಾರ್ಯಕರ್ತರು, ಮುಂಚೂಣಿಯ ಕೆಲಸಗಾರರು, 45+ ಮತ್ತು 18-44 ವಯೋಮಾನದವರಲ್ಲಿ ವ್ಯಾಕ್ಸಿನೇಷನ್ ವ್ಯಾಪ್ತಿಯ ಸ್ಥಿತಿಯನ್ನು ಪ್ರಧಾನಿ ಪರಿಶೀಲಿಸಿದರು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ಉನ್ನತ ಮಟ್ಟದ ಸಭೆಯಲ್ಲಿ ಭಾರತದ ಲಸಿಕಾ ಅಭಿಯಾನದ ಪ್ರಗತಿಯ ಪರಾಮರ್ಶೆ ನಡೆಸಿದರು. ಅಧಿಕಾರಿಗಳು ಲಸಿಕಾ ಅಭಿಯಾನದ ವಿವಿಧ ಆಯಾಮಗಳ ಬಗ್ಗೆ ಸವಿವರವಾದ ಪ್ರಾತ್ಯಕ್ಷಿಕೆ ನೀಡಿದರು. 

ಪ್ರಧಾನಮಂತ್ರಿಯವರಿಗೆ, ಲಸಿಕೆಗಳ ಪ್ರಸ್ತುತ ಲಭ್ಯತೆ ಮತ್ತು ಅದನ್ನು ಹೆಚ್ಚಿಸುವ ಮಾರ್ಗಸೂಚಿಗಳ ಕುರಿತಂತೆ ವಿವರಿಸಲಾಯಿತು. ವಿವಿಧ ಲಸಿಕೆ ತಯಾರಕರು ತಮ್ಮ ಲಸಿಕೆಗಳ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡಲು ಕೈಗೊಂಡ ಪ್ರಯತ್ನಗಳ ಬಗ್ಗೆಯೂ ಪ್ರಧಾನಮಂತ್ರಿಯರಿಗೆ ವಿವರಿಸಲಾಯಿತು. ಹೆಚ್ಚಿನ ಉತ್ಪಾದನಾ ಘಟಕ, ಹಣಕಾಸು ಮತ್ತು ಕಚ್ಚಾ ಸಾಮಗ್ರಿಗಳನ್ನು ಒದಗಿಸುವ ಮೂಲಕ ಲಸಿಕಾ ಉತ್ಪಾದಕರೊಂದಿಗೆ ಭಾರತ ಸರ್ಕಾರ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. 

ಪ್ರಧಾನಮಂತ್ರಿಯವರು ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿಯ ಕಾರ್ಯಕರ್ತರ ಲಸಿಕಾ ವ್ಯಾಪ್ತಿಯ ಸ್ಥಿತಿಗತಿಯ ಪರಾಮರ್ಶೆ ನಡೆಸಿದರು. ಅದೇ ರೀತಿ ಅವರು, 45 ವರ್ಷ ಮೇಲ್ಪಟ್ಟವರು ಮತ್ತು 18ರಿಂದ 44ವರ್ಷದ ವಯೋಮಾನದವರ ಲಸಿಕಾ ವ್ಯಾಪ್ತಿಯ ಕುರಿತೂ ಪರಾಮರ್ಶಿಸಿದರು. ಪ್ರಧಾನಮಂತ್ರಿಯವರು ವಿವಿಧ ರಾಜ್ಯಗಳಲ್ಲಿ ಲಸಿಕೆ ವ್ಯರ್ಥವಾಗುತ್ತಿರುವುದರ ಸ್ಥಿತಿಯ ಕುರಿತೂ ಪರಿಶೀಲನೆ ನಡೆಸಿದರು. ಲಸಿಕೆ ವ್ಯರ್ಥವಾಗುತ್ತಿರುವ ಸಂಖ್ಯೆ ಇನ್ನೂ ಹೆಚ್ಚಿದ್ದು, ಇದನ್ನು ತಗ್ಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಲಸಿಕೆ ಪ್ರಕ್ರಿಯೆಯನ್ನು ಹೆಚ್ಚು ಜನ ಸ್ನೇಹಿಗೊಳಿಸಲು ತಂತ್ರಜ್ಞಾನ ರಂಗದಲ್ಲಿ ಕೈಗೊಂಡಿರುವ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳು ಪ್ರಧಾನಮಂತ್ರಿಯವರಿಗೆ ವಿವರಿಸಿದರು. 

ಲಸಿಕೆ ಲಭ್ಯತೆಯ ಕುರಿತಂತೆ ಮುಂಚಿತವಾಗಿಯೇ ರಾಜ್ಯಗಳಿಗೆ ಮಾಹಿತಿ ಒದಗಿಸುತ್ತಿರುವ ಬಗ್ಗೆಯೂ ಅಧಿಕಾರಿಗಳು ಪ್ರಧಾನಮಂತ್ರಿಯವರಿಗೆ ವಿವಿರಿಸಿದರು. ಈ ಮಾಹಿತಿಯನ್ನು ಜಿಲ್ಲಾ ಮಟ್ಟಕ್ಕೂ ವರ್ಗಾಯಿಸುವಂತೆ ರಾಜ್ಯಗಳಿಗೆ ತಿಳಿಸಲಾಗಿದೆ, ಇದರಿಂದ ಜನರಿಗೆ ಅನಾನುಕೂಲತೆ ತಪ್ಪುತ್ತದೆ ಎಂದೂ ಪ್ರಧಾನಮಂತ್ರಿಯವರಿಗೆ ವಿವರಣೆ ನೀಡಲಾಯಿತು. ರಕ್ಷಣಾ ಸಚಿವರು, ಗೃಹ ಸಚಿವರು, ಹಣಕಾಸು ಸಚಿವರು, ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು, ವಾರ್ತಾ ಮತ್ತು ಪ್ರಸಾರ ಸಚಿವರು, ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿಯವರು, ಸಂಪುಟ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿಯವರು ಮತ್ತು ಇತರ ಪ್ರಮುಖ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Vikas Bhi, Virasat Bhi: How JATAN, AI and Digital Archives are revolutionising India’s cultural heritage preservation

Media Coverage

Vikas Bhi, Virasat Bhi: How JATAN, AI and Digital Archives are revolutionising India’s cultural heritage preservation
NM on the go

Nm on the go

Always be the first to hear from the PM. Get the App Now!
...
ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಶೂರರಿಗೆ ಪ್ರಧಾನಮಂತ್ರಿ ಗೌರವ ನಮನ
August 09, 2026

ಭಾರತ ಬಿಟ್ಟು ತೊಲಗಿ ಐತಿಹಾಸಿಕ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರನ್ನೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಶೌರ್ಯ ಮತ್ತು ದೃಢಸಂಕಲ್ಪಕ್ಕೆ ಗೌರವ ಸಮರ್ಪಿಸಿದ್ದಾರೆ. ಮಹಾತ್ಮಾ ಗಾಂಧಿಯವರ ನಾಯಕತ್ವದಿಂದ ಪ್ರೇರಿತವಾದ ಭಾರತ ಬಿಟ್ಟು ತೊಲಗಿ ಚಳವಳಿಯ ಕರೆಯು ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಚೈತನ್ಯ ತುಂಬಿತು ಮತ್ತು ವಸಾಹತುಶಾಹಿ ಆಳ್ವಿಕೆಯನ್ನು ತೊಡೆದು ಹಾಕಲು ಭಾರತದ ಜನರ ಅಚಲ ಸಂಕಲ್ಪವನ್ನು ಪ್ರತಿಬಿಂಬಿಸಿತ್ತು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಐತಿಹಾಸಿಕ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರನ್ನು ಸ್ಮರಿಸುತ್ತಿದ್ದೇನೆ. ಅವರ ಸ್ಥೈರ್ಯ ಪ್ರತಿಯೊಬ್ಬ ಭಾರತೀಯನಿಗೂ ಸದಾ ಸ್ಫೂರ್ತಿಯ ಸೆಲೆಯಾಗಿರಲಿದೆ. ಮಹಾತ್ಮಾ ಗಾಂಧಿಯವರ ನಾಯಕತ್ವದಿಂದ ಪ್ರೇರಿತವಾದ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆಯು ನಮ್ಮ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಚೈತನ್ಯವನ್ನು ತುಂಬಿತು ಮತ್ತು ವಸಾಹತುಶಾಹಿ ಆಳ್ವಿಕೆಯಿಂದ ಮುಕ್ತರಾಗಲು ನಮ್ಮ ಜನರ ಅಚಲ ದೃಢಸಂಕಲ್ಪವನ್ನು ಪ್ರತಿಬಿಂಬಿಸಿತು.