ಲಸಿಕೆ ತಯಾರಕರಿಗೆ ಹೆಚ್ಚಿನ ಉತ್ಪಾದನಾ ಘಟಕಗಳಿಗೆ ಅನುಕೂಲವಾಗುವುದು, ಹಣಕಾಸು ಮತ್ತು ಕಚ್ಚಾ ವಸ್ತುಗಳ ಪೂರೈಕೆ ವಿಷಯದಲ್ಲಿ ಭಾರತ ಸರ್ಕಾರ ಸಹಾಯ ಮಾಡುತ್ತಿದೆ.
ಲಸಿಕೆ ವ್ಯರ್ಥವಾಗಲು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ಸೂಚನೆ ನೀಡಿದರು
ಆರೋಗ್ಯ ರಕ್ಷಣಾ ಕಾರ್ಯಕರ್ತರು, ಮುಂಚೂಣಿಯ ಕೆಲಸಗಾರರು, 45+ ಮತ್ತು 18-44 ವಯೋಮಾನದವರಲ್ಲಿ ವ್ಯಾಕ್ಸಿನೇಷನ್ ವ್ಯಾಪ್ತಿಯ ಸ್ಥಿತಿಯನ್ನು ಪ್ರಧಾನಿ ಪರಿಶೀಲಿಸಿದರು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ಉನ್ನತ ಮಟ್ಟದ ಸಭೆಯಲ್ಲಿ ಭಾರತದ ಲಸಿಕಾ ಅಭಿಯಾನದ ಪ್ರಗತಿಯ ಪರಾಮರ್ಶೆ ನಡೆಸಿದರು. ಅಧಿಕಾರಿಗಳು ಲಸಿಕಾ ಅಭಿಯಾನದ ವಿವಿಧ ಆಯಾಮಗಳ ಬಗ್ಗೆ ಸವಿವರವಾದ ಪ್ರಾತ್ಯಕ್ಷಿಕೆ ನೀಡಿದರು. 

ಪ್ರಧಾನಮಂತ್ರಿಯವರಿಗೆ, ಲಸಿಕೆಗಳ ಪ್ರಸ್ತುತ ಲಭ್ಯತೆ ಮತ್ತು ಅದನ್ನು ಹೆಚ್ಚಿಸುವ ಮಾರ್ಗಸೂಚಿಗಳ ಕುರಿತಂತೆ ವಿವರಿಸಲಾಯಿತು. ವಿವಿಧ ಲಸಿಕೆ ತಯಾರಕರು ತಮ್ಮ ಲಸಿಕೆಗಳ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡಲು ಕೈಗೊಂಡ ಪ್ರಯತ್ನಗಳ ಬಗ್ಗೆಯೂ ಪ್ರಧಾನಮಂತ್ರಿಯರಿಗೆ ವಿವರಿಸಲಾಯಿತು. ಹೆಚ್ಚಿನ ಉತ್ಪಾದನಾ ಘಟಕ, ಹಣಕಾಸು ಮತ್ತು ಕಚ್ಚಾ ಸಾಮಗ್ರಿಗಳನ್ನು ಒದಗಿಸುವ ಮೂಲಕ ಲಸಿಕಾ ಉತ್ಪಾದಕರೊಂದಿಗೆ ಭಾರತ ಸರ್ಕಾರ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. 

ಪ್ರಧಾನಮಂತ್ರಿಯವರು ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿಯ ಕಾರ್ಯಕರ್ತರ ಲಸಿಕಾ ವ್ಯಾಪ್ತಿಯ ಸ್ಥಿತಿಗತಿಯ ಪರಾಮರ್ಶೆ ನಡೆಸಿದರು. ಅದೇ ರೀತಿ ಅವರು, 45 ವರ್ಷ ಮೇಲ್ಪಟ್ಟವರು ಮತ್ತು 18ರಿಂದ 44ವರ್ಷದ ವಯೋಮಾನದವರ ಲಸಿಕಾ ವ್ಯಾಪ್ತಿಯ ಕುರಿತೂ ಪರಾಮರ್ಶಿಸಿದರು. ಪ್ರಧಾನಮಂತ್ರಿಯವರು ವಿವಿಧ ರಾಜ್ಯಗಳಲ್ಲಿ ಲಸಿಕೆ ವ್ಯರ್ಥವಾಗುತ್ತಿರುವುದರ ಸ್ಥಿತಿಯ ಕುರಿತೂ ಪರಿಶೀಲನೆ ನಡೆಸಿದರು. ಲಸಿಕೆ ವ್ಯರ್ಥವಾಗುತ್ತಿರುವ ಸಂಖ್ಯೆ ಇನ್ನೂ ಹೆಚ್ಚಿದ್ದು, ಇದನ್ನು ತಗ್ಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಲಸಿಕೆ ಪ್ರಕ್ರಿಯೆಯನ್ನು ಹೆಚ್ಚು ಜನ ಸ್ನೇಹಿಗೊಳಿಸಲು ತಂತ್ರಜ್ಞಾನ ರಂಗದಲ್ಲಿ ಕೈಗೊಂಡಿರುವ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳು ಪ್ರಧಾನಮಂತ್ರಿಯವರಿಗೆ ವಿವರಿಸಿದರು. 

ಲಸಿಕೆ ಲಭ್ಯತೆಯ ಕುರಿತಂತೆ ಮುಂಚಿತವಾಗಿಯೇ ರಾಜ್ಯಗಳಿಗೆ ಮಾಹಿತಿ ಒದಗಿಸುತ್ತಿರುವ ಬಗ್ಗೆಯೂ ಅಧಿಕಾರಿಗಳು ಪ್ರಧಾನಮಂತ್ರಿಯವರಿಗೆ ವಿವಿರಿಸಿದರು. ಈ ಮಾಹಿತಿಯನ್ನು ಜಿಲ್ಲಾ ಮಟ್ಟಕ್ಕೂ ವರ್ಗಾಯಿಸುವಂತೆ ರಾಜ್ಯಗಳಿಗೆ ತಿಳಿಸಲಾಗಿದೆ, ಇದರಿಂದ ಜನರಿಗೆ ಅನಾನುಕೂಲತೆ ತಪ್ಪುತ್ತದೆ ಎಂದೂ ಪ್ರಧಾನಮಂತ್ರಿಯವರಿಗೆ ವಿವರಣೆ ನೀಡಲಾಯಿತು. ರಕ್ಷಣಾ ಸಚಿವರು, ಗೃಹ ಸಚಿವರು, ಹಣಕಾಸು ಸಚಿವರು, ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು, ವಾರ್ತಾ ಮತ್ತು ಪ್ರಸಾರ ಸಚಿವರು, ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿಯವರು, ಸಂಪುಟ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿಯವರು ಮತ್ತು ಇತರ ಪ್ರಮುಖ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India Semiconductor Mission 2.0 to boost domestic chip manufacturing

Media Coverage

India Semiconductor Mission 2.0 to boost domestic chip manufacturing
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam highlighting the limitless potential of students and the spirit of ‘Pariksha Pe Charcha’
February 09, 2026

The Prime Minister, Shri Narendra Modi said that our students are endowed with extraordinary talent and possess the complete potential to turn their dreams into reality. He noted that the objective of Pariksha Pe Charcha is to guide students on how to meaningfully use their abilities and skills for personal growth and success.

The Prime Minister shared a Sanskrit Subhashitam on the occasion-

“विद्या वितर्को विज्ञानं स्मृतिस्तत्परता क्रिया। यस्यैते षड्गुणास्तस्य नासाध्यमतिवर्तते॥”

The Subhashitam conveys that a person who possesses knowledge, logic, science, memory, promptness and activity can overcome any challenge, and nothing is impossible for such an individual.

The Prime Minister wrote on X;

“अद्भुत प्रतिभा के धनी हमारे विद्यार्थियों में अपने सपनों को सच करने की पूरी क्षमता है। 'परीक्षा पे चर्चा' का उद्देश्य भी यही है कि कैसे वे अपनी प्रतिभा और कौशल का सार्थक इस्तेमाल कर सकते हैं।

विद्या वितर्को विज्ञानं स्मृतिस्तत्परता क्रिया।

यस्यैते षड्गुणास्तस्य नासाध्यमतिवर्तते॥”