ಘನತೆವೆತ್ತರೆ,

ನನ್ನ ಸ್ನೇಹಿತರಾದ ಬೋರಿಸ್ ಅವರೇ, ಅಳವಡಿಕೆಯಂತಹ ಪ್ರಮುಖ ವಿಷಯದ ಕುರಿತಂತೆ ನನ್ನ ಅಭಿಪ್ರಾಯಗಳನ್ನು ಮಂಡಿಸಲು ನನಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು!

ಜಾಗತಿಕ ಹವಾಮಾನ ಕುರಿತ ಚರ್ಚೆಯಲ್ಲಿ ತಗ್ಗಿಸುವಿಕೆ ಪಡೆದಷ್ಟು ಪ್ರಾಮುಖ್ಯತೆಯನ್ನು ಅಳವಡಿಕೆ ಪಡೆಯಲಿಲ್ಲ. ಇದು ಹವಾಮಾನ ಬದಲಾವಣೆಯಿಂದ ಹೆಚ್ಚು ಬಾಧಿತವಾಗಿರುವ ಅಭಿವೃದ್ಧಿಶೀಲ ದೇಶಗಳಿಗೆ ಆದ ಅನ್ಯಾಯ.

ಭಾರತ ಸೇರಿದಂತೆ ಬಹುತೇಕ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ರೈತರಿಗೆ ಹವಾಮಾನವು ಒಂದು ಪ್ರಮುಖ ಸವಾಲಾಗಿದೆ - ಬೆಳೆ ಪದ್ಧತಿ ಬದಲಾಗುತ್ತಿದೆ, ಅಕಾಲಿಕ ಮಳೆ ಮತ್ತು ಪ್ರವಾಹ ಅಥವಾ ಆಗಾಗ್ಗೆ ಬಿರುಗಾಳಿಯಿಂದ ಬೆಳೆಗಳು ನಾಶವಾಗುತ್ತಿವೆ. ಕುಡಿಯುವ ನೀರಿನ ಮೂಲಗಳಿಂದ ಹಿಡಿದು ಕೈಗೆಟುಕುವ ಮನೆಗಳವರೆಗೆ, ಇವೆಲ್ಲವೂ ಹವಾಮಾನ ಬದಲಾವಣೆಯ ವಿರುದ್ಧ ತಾಳಿಕೊಳ್ಳುವ ಅಗತ್ಯವಿದೆ.

ಘನತೆವೆತ್ತರೆ,

ಈ ನಿಟ್ಟಿನಲ್ಲಿ ನನ್ನ ಮೂರು ನಿಲುವುಗಳಿವೆ. ಮೊದನೆಯದು, ನಾವು ನಮ್ಮ ಅಭಿವೃದ್ಧಿ ನೀತಿಗಳು ಮತ್ತು ಯೋಜನೆಗಳಲ್ಲಿ ಅಳವಡಿಕೆಯನ್ನು ಪ್ರಮುಖ ಭಾಗವನ್ನಾಗಿ ಮಾಡಿಕೊಳ್ಳಬೇಕು. ‘ನಳ್ ಸೆ ಜಲ್’ – ಎಲ್ಲರಿಗೂ ನಳದಿಂದ ನೀರು, ‘ಸ್ವಚ್ಛಭಾರತ’ – ಭಾರತವನ್ನು ಸ್ವಚ್ಛವಾಗಿಡುವುದು ಮತ್ತು ‘ಉಜ್ವಲಾ’ – ಭಾರತದಲ್ಲಿಎಲ್ಲರಿಗೂ ಶುದ್ಧ ಅಡುಗೆ ಇಂಧನ, ಇವು ನಮ್ಮ ಅಗತ್ಯ ಇರುವ ನಾಗರಿಕರಿಗೆ ಅಳವಡಿಕೆಯ ಸೌಲಭ್ಯವನ್ನು ಮಾತ್ರವೇ ಒದಗಿಸಲಿಲ್ಲ, ಜೊತೆಗೆ ಅವು ಅವರ ಜೀವನ ಮಟ್ಟವನ್ನೂ ಸುಧಾರಿಸಿವೆ. ಎರಡನೆಯದಾಗಿ ಹಲವು ಸಾಂಪ್ರದಾಯಿಕ ಸಮುದಾಯಗಳು ಪ್ರಕೃತಿಯೊಂದಿಗೆ ಸೌಹಾರ್ದತೆಯಿಂದ ಬಾಳುವ ಅರಿವನ್ನು ಗಳಿಸಿಕೊಂಡಿವೆ.

ನಮ್ಮ ಅಳವಡಿಕೆ ನೀತಿಗಳಲ್ಲಿ ಈ ಸಾಂಪ್ರದಾಯಿಕ ಆಚರಣೆಗಳಿಗೆ ಸೂಕ್ತವಾದ ಪ್ರಾಮುಖ್ಯತೆ ನೀಡಲೇಬೇಕಾಗಿದೆ. ಈ ಜ್ಞಾನದ ಹರಿವು ಹೊಸ ಪೀಳಿಗೆಗೆ ತಲುಪುವಂತೆ ಶಾಲಾ ಪಠ್ಯಕ್ರಮದಲ್ಲಿಯೂ ಸೇರಿಸಬೇಕಿದೆ. ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಜೀವನಶೈಲಿಯನ್ನು ಸಂರಕ್ಷಿಸುವುದು ಸಹ ಅಳವಡಿಕೆಯ ಪ್ರಮುಖ ಸ್ತಂಭವಾಗಿದೆ. ಮೂರನೆಯದಾಗಿ, ಅಳವಡಿಕೆಯ ವಿಧಾನಗಳು ಸ್ಥಳೀಯವಾಗಿರಬಹುದು, ಆದರೆ ಹಿಂದುಳಿದ ದೇಶಗಳು ಅವುಗಳಿಗೆ ಜಾಗತಿಕ ಬೆಂಬಲವನ್ನು ಪಡೆಯಬೇಕು.

ಸ್ಥಳೀಯ ಅಳವಡಿಕೆಗೆ ಜಾಗತಿಕ ಬೆಂಬಲದ ಕಲ್ಪನೆಯೊಂದಿಗೆ ಭಾರತವು ವಿಪತ್ತು ತಾಳಿಕೊಳ್ಳುವ ಮೂಲಸೌಕರ್ಯ ಮೈತ್ರಿ ಸಿಡಿಆರ್.ಐ ಉಪಕ್ರಮವನ್ನು ಕೈಗೊಂಡಿದೆ. ಎಲ್ಲ ರಾಷ್ಟ್ರಗಳು ಈ ಉಪಕ್ರಮದಲ್ಲಿ ಸೇರುವಂತೆ ನಾನು ಮನವಿ ಮಾಡುತ್ತೇನೆ. 

ಧನ್ಯವಾದಗಳು.

 

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's sugar output rises 10.5% to 26.21 MT in 2025-26 season: ISMA

Media Coverage

India's sugar output rises 10.5% to 26.21 MT in 2025-26 season: ISMA
NM on the go

Nm on the go

Always be the first to hear from the PM. Get the App Now!
...
Prime Minister Narendra Modi shares a Sanskrit Subhashitam highlights the significance of bravery and courage in influencing the world
March 18, 2026

Prime Minister Shri Narendra Modi shared a Sanskrit Subhashitam today, highlighting the importance of valor and the profound impact a brave individual can have on the entire world.

The Prime Minister remarked that bravery and prowess are the capital through which every difficulty can be faced. Shri Modi affirmed that the courage and self-confidence of India's youth serve as an inspiration in this regard.

The Prime Minister wrote on X;

"वीरता और पराक्रम वो पूंजी है, जिससे हर कठिनाई का सामना किया जा सकता है। भारत के युवाओं का साहस और आत्मविश्वास इसी की प्रेरणा देता है।

एकेनापि हि शूरेण पादाक्रान्तं महीतलम्।
क्रियते भास्करेणेव स्फारस्फुरिततेजसा ॥"

Just as the sun lights the whole earth with its bright rays, in the same way a brave person can influence the whole world with his courage.