ನಾನು ಜರ್ಮನಿಯ ಚಾನ್ಸೆಲರ್ ಗೌರವಾನ್ವಿತ ಶ್ರೀ ಓಲಾಫ್ ಸ್ಕೋಲ್ಜ್, ಅವರ ಆಹ್ವಾನದ ಮೇರೆಗೆ ಜರ್ಮನಿಯ ಶ್ಚೋಲೋಸ್ ಎಲ್ಮೋಗೆ ಭೇಟಿ ನೀಡಲಿದ್ದೇನೆ. ಜರ್ಮನ್ ಅಧ್ಯಕ್ಷತೆಯಲ್ಲಿ ನಡೆಯುವ ಜಿ 7 ಶೃಂಗಸಭೆಗಾಗಿ ಅಲ್ಲಿಗೆ ತೆರಳುತ್ತಿದ್ದೇನೆ. ಕಳೆದ ತಿಂಗಳು ಭಾರತ-ಜರ್ಮನಿ ಅಂತರ-ಸರ್ಕಾರಿ ಸಮಾಲೋಚನೆಗಳ (ಐ.ಜಿ.ಸಿ.) ಯಶಸ್ಸಿನ ನಂತರ ಮತ್ತೊಮ್ಮೆ ಚಾನ್ಸೆಲರ್ ಸ್ಕೋಲ್ಜ್ ಅವರನ್ನು ಭೇಟಿಯಾಗಲು ನನಗೆ ಬಹಳ ಸಂತೋಷವಿದೆ.

ಮಾನವೀಯತೆಯ ಮೇಲೆ ಪ್ರಭಾವ ಬೀರುವ ಪ್ರಮುಖ ಜಾಗತಿಕ ವಿಷಯಗಳ ಕುರಿತು ಅಂತರರಾಷ್ಟ್ರೀಯ ಸಹಯೋಗವನ್ನು ಬಲಪಡಿಸುವ ಪ್ರಯತ್ನದಲ್ಲಿ, ಜರ್ಮನಿಯು ಇತರ ಗಣರಾಜ್ಯಗಳಾದ ಅರ್ಜೆಂಟೀನಾ, ಇಂಡೋನೇಷ್ಯಾ, ಸೆನೆಗಲ್ ಮತ್ತು ದಕ್ಷಿಣ ಆಫ್ರಿಕಾಗಳನ್ನು ಜಿ7 ಶೃಂಗಸಭೆಗೆ ಆಹ್ವಾನಿಸಿದೆ. ಶೃಂಗಸಭೆಯ ಅಧಿವೇಶನಗಳಲ್ಲಿ, ನಾನು ಜಿ7 ದೇಶಗಳ ಜೊತೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತೇನೆ. ಜಿ 7 ಪಾಲುದಾರ ರಾಷ್ಟ್ರಗಳು ಮತ್ತು ಪರಿಸರ, ಇಂಧನ, ಹವಾಮಾನ, ಆಹಾರ ಭದ್ರತೆ, ಆರೋಗ್ಯ, ಭಯೋತ್ಪಾದನೆ ನಿಗ್ರಹ, ಲಿಂಗ ಸಮಾನತೆ ಮತ್ತು ಪ್ರಜಾಪ್ರಭುತ್ವದಂತಹ ವಿಷಯಗಳ ಕುರಿತ ಸಮಾಲೋಚನೆಗಳನ್ನು ನಡೆಸಲಿದ್ದೇನೆ. ಅಂತರರಾಷ್ಟ್ರೀಯ ಸಂಸ್ಥೆಗಳು. ಶೃಂಗಸಭೆಯ ನೇಪಥ್ಯದಲ್ಲಿ ಕೆಲವು ಜಿ 7 ಮತ್ತು ಅತಿಥಿ ರಾಷ್ಟ್ರಗಳ ನಾಯಕರನ್ನು ಭೇಟಿಯಾಗುವುದನ್ನೂ ನಾನು ಎದುರು ನೋಡುತ್ತಿದ್ದೇನೆ.

ಜರ್ಮನಿಯಲ್ಲಿರುವಾಗ, ಅವರ ಸ್ಥಳೀಯ ಆರ್ಥಿಕತೆಗಳಿಗೆ ಅಪಾರ ಕೊಡುಗೆ ನೀಡುತ್ತಿರುವ ಮತ್ತು ಯುರೋಪಿಯನ್ ರಾಷ್ಟ್ರಗಳೊಂದಿಗಿನ ನಮ್ಮ ಸಂಬಂಧಗಳನ್ನು ಶ್ರೀಮಂತಗೊಳಿಸುತ್ತಿರುವ ಯೂರೋಪಿನಾದ್ಯಂತದ ಭಾರತೀಯ ಜನಸಮೂಹದ ಸದಸ್ಯರನ್ನು ಭೇಟಿ ಮಾಡುವುದನ್ನೂ ನಾನು ಕಾಯುತ್ತಿರುತ್ತೇನೆ.

ನಾನು ಭಾರತಕ್ಕೆ ಹಿಂತಿರುಗುವ ಹಾದಿಯಲ್ಲಿ, ಯುಎಇಯ ಅಬುಧಾಬಿಯಲ್ಲಿ ಅಲ್ಪ ಕಾಲ ತಂಗಲಿದ್ದೇನೆ. ಯುಎಇಯ ಮಾಜಿ ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕೆ ನನ್ನ ವೈಯಕ್ತಿಕ ಸಂತಾಪವನ್ನು ತಿಳಿಸಲು 2022 ರ ಜೂನ್ 28ರಂದು ಯುಎಇ ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಲಿದ್ದೇನೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Boost for India! IMF raises GDP growth forecast to 6.5% for FY27 despite Middle East conflict; lower US tariffs to benefit economy

Media Coverage

Boost for India! IMF raises GDP growth forecast to 6.5% for FY27 despite Middle East conflict; lower US tariffs to benefit economy
NM on the go

Nm on the go

Always be the first to hear from the PM. Get the App Now!
...
Prime Minister expresses grief over mishap in Fatehgarh Sahib district, Punjab
April 15, 2026

The Prime Minister, Shri Narendra Modi, has expressed deep sorrow over the mishap in Fatehgarh Sahib district, Punjab.

The Prime Minister said he was pained to hear about the incident. He extended his condolences to those who have lost their loved ones and prayed for the speedy recovery of those injured.

The Prime Minister’s Office said in X post;

“Pained to hear about the mishap in Fatehgarh Sahib district, Punjab. I extend my condolences to those who have lost their loved ones. Praying for the speedy recovery of those injured: PM

@narendramodi”