ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ನಾನು ಇಂದು ಕಜಾನ್ ಗೆ ಎರಡು ದಿನಗಳ ಭೇಟಿಗಾಗಿ ಹೊರಡುತ್ತಿದ್ದೇನೆ.

ಜಾಗತಿಕ ಅಭಿವೃದ್ಧಿ ಕಾರ್ಯಸೂಚಿ, ಸುಧಾರಿತ ಬಹುಪಕ್ಷೀಯತೆ, ಹವಾಮಾನ ಬದಲಾವಣೆ, ಆರ್ಥಿಕ ಸಹಕಾರ, ಸ್ಥಿತಿಸ್ಥಾಪಕ ಪೂರೈಕೆ ಸರಪಳಿಗಳನ್ನು ನಿರ್ಮಿಸುವುದು, ಸಾಂಸ್ಕೃತಿಕ ಮತ್ತು ಜನರ ನಡುವಿನ ಸಂಪರ್ಕವನ್ನು ಉತ್ತೇಜಿಸುವುದು ಮುಂತಾದ ವಿಷಯಗಳ ಬಗ್ಗೆ ಸಂವಾದ ಮತ್ತು ಚರ್ಚೆಗೆ ಪ್ರಮುಖ ವೇದಿಕೆಯಾಗಿ ಹೊರಹೊಮ್ಮಿರುವ ಬ್ರಿಕ್ಸ್ ನೊಳಗಿನ ನಿಕಟ ಸಹಕಾರವನ್ನು ಭಾರತ ಗೌರವಿಸುತ್ತದೆ. ಕಳೆದ ವರ್ಷ ಹೊಸ ಸದಸ್ಯರ ಸೇರ್ಪಡೆಯೊಂದಿಗೆ ಬ್ರಿಕ್ಸ್ ನ ವಿಸ್ತರಣೆಯು ಜಾಗತಿಕ ಒಳಿತಿಗಾಗಿ ಅದರ ಒಳಗೊಳ್ಳುವಿಕೆ ಮತ್ತು ಕಾರ್ಯಸೂಚಿಯನ್ನು ಹೆಚ್ಚಿಸಿದೆ.

2024ರ ಜುಲೈನಲ್ಲಿ ಮಾಸ್ಕೋದಲ್ಲಿ ನಡೆದ ವಾರ್ಷಿಕ ಶೃಂಗಸಭೆಯ ಆಧಾರದ ಮೇಲೆ, ನನ್ನ ಕಜಾನ್ ಭೇಟಿಯು ಭಾರತ ಮತ್ತು ರಷ್ಯಾ ನಡುವಿನ ವಿಶೇಷ ಮತ್ತು ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುತ್ತದೆ.

ಇದೇ ಸಂದರ್ಭದಲ್ಲಿ ಬ್ರಿಕ್ಸ್ ನ ಇತರ ನಾಯಕರನ್ನು ಭೇಟಿಯಾಗಲು ಸಹ ನಾನು ಎದುರು ನೋಡುತ್ತಿದ್ದೇನೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
What will be India's 3 reform priorities for next decade? Here's what PM Modi said

Media Coverage

What will be India's 3 reform priorities for next decade? Here's what PM Modi said
NM on the go

Nm on the go

Always be the first to hear from the PM. Get the App Now!
...
Prime Minister condoles the loss of lives in fire mishap in Bhiwadi, Rajasthan
February 16, 2026

Prime Minister Shri Narendra Modi today condoled the loss of lives fire mishap in Bhiwadi, Rajasthan.

The PMO India handle in post on X said:

“The fire mishap in Bhiwadi, Rajasthan, is tragic and deeply saddening. My condolences to those who have lost their loved ones. I pray for the speedy recovery of those injured: PM @narendramodi”