ಡಾ. ಮನಮೋಹನ್ ಸಿಂಗ್ ಅವರ ಜೀವನವು ಭವಿಷ್ಯದ ಪೀಳಿಗೆಗೆ ಪ್ರತಿಕೂಲತೆಯಿಂದ ಹೇಗೆ ಮೇಲೇರಬೇಕು ಮತ್ತು ದೊಡ್ಡ ಎತ್ತರವನ್ನು ಹೇಗೆ ಸಾಧಿಸಬೇಕು ಎಂಬುದನ್ನು ಕಲಿಸುತ್ತದೆ: ಪ್ರಧಾನಮಂತ್ರಿ
ಡಾ. ಮನಮೋಹನ್ ಸಿಂಗ್ ಅವರನ್ನು ದಯಾಪರ ವ್ಯಕ್ತಿಯಾಗಿ, ವಿದ್ವಾಂಸ ಅರ್ಥಶಾಸ್ತ್ರಜ್ಞರಾಗಿ ಮತ್ತು ಸುಧಾರಣೆಗಳಿಗೆ ಸಮರ್ಪಿತ ನಾಯಕರಾಗಿ ಯಾವಾಗಲೂ ನೆನಪಿಸಿಕೊಳ್ಳಲಾಗುತ್ತದೆ: ಪ್ರಧಾನಮಂತ್ರಿ
ಡಾ. ಮನಮೋಹನ್ ಸಿಂಗ್ ಅವರ ವಿಶಿಷ್ಟ ಸಂಸದೀಯ ವೃತ್ತಿಜೀವನವು ಅವರ ನಮ್ರತೆ, ಸೌಮ್ಯತೆ ಮತ್ತು ಬುದ್ಧಿವಂತಿಕೆಯಿಂದ ಗುರುತಿಸಲ್ಪಟ್ಟಿದೆ: ಪ್ರಧಾನಮಂತ್ರಿ
ಡಾ. ಮನಮೋಹನ್ ಸಿಂಗ್ ಯಾವಾಗಲೂ ಪಕ್ಷ ರಾಜಕಾರಣವನ್ನು ಮೀರಿ, ಎಲ್ಲಾ ಪಕ್ಷಗಳ ವ್ಯಕ್ತಿಗಳೊಂದಿಗೆ ಸಂಪರ್ಕವನ್ನು ಕಾಯ್ದುಕೊಂಡರು ಮತ್ತು ಎಲ್ಲರಿಗೂ ಸುಲಭವಾಗಿ ಲಭ್ಯರಿದ್ದರು: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಿಂದ ವಿಡಿಯೊ ಸಂದೇಶದ ಮೂಲಕ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರ ನಿಧನವು ರಾಷ್ಟ್ರಕ್ಕೆ ಮಹತ್ವದ ನಷ್ಟವಾಗಿದೆ ಎಂದು ಅವರು ಹೇಳಿದರು. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ಸಾಧಿಸುವುದು ಸಾಮಾನ್ಯ ಸಾಧನೆಯಲ್ಲ ಮತ್ತು ಡಾ. ಮನಮೋಹನ್ ಸಿಂಗ್ ಅವರು ವಿಭಜನೆಯ ಸಮಯದಲ್ಲಿ ಭಾರತಕ್ಕೆ ಬಂದ ನಂತರ ಬಹಳಷ್ಟು ಕಳೆದುಕೊಂಡಿದ್ದರೂ ಅವರು ಸಾಧಕರಾಗಿದ್ದರು ಎಂದು ಪ್ರಧಾನಿ ಹೇಳಿದರು. ಡಾ. ಮನಮೋಹನ್ ಸಿಂಗ್ ಅವರ ಜೀವನವು ಭವಿಷ್ಯದ ಪೀಳಿಗೆಗೆ ಪ್ರತಿಕೂಲತೆಯಿಂದ ಹೇಗೆ ಮೇಲೇರಬೇಕು ಮತ್ತು ದೊಡ್ಡ ಎತ್ತರವನ್ನು ಹೇಗೆ ಸಾಧಿಸಬೇಕು ಎಂಬುದನ್ನು ಕಲಿಸುತ್ತದೆ ಎಂದು ಅವರು ಹೇಳಿದರು.

ಡಾ. ಮನಮೋಹನ್ ಸಿಂಗ್ ಅವರನ್ನು ದಯಾಪರ ವ್ಯಕ್ತಿಯಾಗಿ, ವಿದ್ವಾಂಸ ಅರ್ಥಶಾಸ್ತ್ರಜ್ಞರಾಗಿ ಮತ್ತು ಸುಧಾರಣೆಗಳಿಗೆ ಸಮರ್ಪಿತ ನಾಯಕರಾಗಿ ಯಾವಾಗಲೂ ನೆನಪಿಸಿಕೊಳ್ಳಲಾಗುವುದು ಎಂದು ಒತ್ತಿ ಹೇಳಿದ ಶ್ರೀ ಪ್ರಧಾನಿ ನರೇಂದ್ರ ಮೋದಿ ಅವರು, ಅರ್ಥಶಾಸ್ತ್ರಜ್ಞರಾಗಿ ವಿವಿಧ ಹಂತಗಳಲ್ಲಿ ಭಾರತ ಸರ್ಕಾರಕ್ಕೆ ಡಾ. ಮನಮೋಹನ್ ಸಿಂಗ್ ಅವರ ಹಲವಾರು ಕೊಡುಗೆಗಳನ್ನು ಬಿಂಬಿಸಿದರು. ಸವಾಲಿನ ಸಮಯದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ನ ಗವರ್ನರ್ ಆಗಿ ಡಾ. ಸಿಂಗ್ ಅವರ ಪಾತ್ರವನ್ನು ಪ್ರಧಾನಿ ಶ್ಲಾಘಿಸಿದರು.

ಮಾಜಿ ಪ್ರಧಾನಿ ಮತ್ತು ಭಾರತ ರತ್ನ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಡಾ. ಮನಮೋಹನ್ ಸಿಂಗ್ ಅವರು ದೇಶವನ್ನು ಆರ್ಥಿಕ ಬಿಕ್ಕಟ್ಟಿನಿಂದ ಹೊರಬಂದು ಹೊಸ ಆರ್ಥಿಕ ಪಥದತ್ತ ಮುನ್ನಡೆಸಿದರು ಎಂದು ಪ್ರಧಾನಿ ಹೇಳಿದರು. ಪ್ರಧಾನಮಂತ್ರಿಯಾಗಿ ರಾಷ್ಟ್ರದ ಅಭಿವೃದ್ಧಿ ಮತ್ತು ಪ್ರಗತಿಗೆ ಡಾ. ಸಿಂಗ್ ಅವರ ಕೊಡುಗೆಗಳನ್ನು ಯಾವಾಗಲೂ ಸ್ಮರಿಸಲಾಗುವುದು ಎಂದು ಅವರು ಒತ್ತಿ ಹೇಳಿದರು. ಜನರಿಗೆ ಮತ್ತು ದೇಶದ ಅಭಿವೃದ್ಧಿಗೆ ಡಾ. ಮನಮೋಹನ್ ಸಿಂಗ್ ಅವರ ಬದ್ಧತೆಯನ್ನು ಯಾವಾಗಲೂ ಉನ್ನತ ಗೌರವದಿಂದ ಕಾಣಲಾಗುತ್ತಿತ್ತು ಎಂದು ಅವರು ಹೇಳಿದರು.

ಡಾ. ಮನಮೋಹನ್ ಸಿಂಗ್ ಅವರ ಜೀವನವು ಅವರ ಪ್ರಾಮಾಣಿಕತೆ ಮತ್ತು ಸರಳತೆಯ ಪ್ರತಿಬಿಂಬವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಒತ್ತಿ ಹೇಳಿದರು. ಡಾ. ಸಿಂಗ್ ಅವರ ವಿಶಿಷ್ಟ ಸಂಸದೀಯ ವೃತ್ತಿಜೀವನವು ಅವರ ನಮ್ರತೆ, ಸೌಮ್ಯತೆ ಮತ್ತು ಬುದ್ಧಿವಂತಿಕೆಯಿಂದ ಗುರುತಿಸಲ್ಪಟ್ಟಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು. ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಲ್ಲಿ ಡಾ. ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯ ಕೊನೆಯಲ್ಲಿಯೂ, ಡಾ. ಸಿಂಗ್ ಅವರ ಸಮರ್ಪಣೆ ಎಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಶ್ಲಾಘಿಸಿದ್ದನ್ನು ಪ್ರಧಾನಿ ಸ್ಮರಿಸಿದರು. ದೈಹಿಕ ಸವಾಲುಗಳ ಹೊರತಾಗಿಯೂ, ಡಾ. ಸಿಂಗ್ ಅವರು ಗಾಲಿಕುರ್ಚಿಯಲ್ಲಿ ಪ್ರಮುಖ ಅಧಿವೇಶನಗಳಿಗೆ ಹಾಜರಾಗಿ, ತಮ್ಮ ಸಂಸದೀಯ ಕರ್ತವ್ಯಗಳನ್ನು ಪೂರೈಸಿದರು.

ಡಾ. ಮನಮೋಹನ್ ಸಿಂಗ್ ಅವರು ಪ್ರತಿಷ್ಠಿತ ಜಾಗತಿಕ ಸಂಸ್ಥೆಗಳಿಂದ ಶಿಕ್ಷಣ ಪಡೆದಿದ್ದರೂ ಮತ್ತು ಸರ್ಕಾರದ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದರೂ ತಮ್ಮ ವಿನಮ್ರ ಹಿನ್ನೆಲೆಯ ಮೌಲ್ಯಗಳನ್ನು ಎಂದಿಗೂ ಮರೆಯಲಿಲ್ಲ ಎಂದು ಪ್ರಧಾನಿ ಹೇಳಿದರು. ಡಾ. ಮನಮೋಹನ್ ಸಿಂಗ್ ಅವರು ಯಾವಾಗಲೂ ಪಕ್ಷ ರಾಜಕಾರಣವನ್ನು ಮೀರಿ ಬೆಳೆದರು, ಎಲ್ಲಾ ಪಕ್ಷಗಳ ವ್ಯಕ್ತಿಗಳೊಂದಿಗೆ ಸಂಪರ್ಕವನ್ನು ಉಳಿಸಿಕೊಂಡರು ಮತ್ತು ಎಲ್ಲರಿಗೂ ಸುಲಭವಾಗಿ ಲಭ್ಯರಿದ್ದರು ಎಂದು ಅವರು ಹೇಳಿದರು. ಡಾ. ಸಿಂಗ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮತ್ತು ನಂತರ ದೆಹಲಿಯಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆ ತಾವು ನಡೆಸಿದ ಮುಕ್ತ ಚರ್ಚೆಗಳನ್ನು ಪ್ರಧಾನಮಂತ್ರಿ ಅವರು ಪ್ರೀತಿಯಿಂದ ಸ್ಮರಿಸಿದರು. ಅವರು ಡಾ. ಮನಮೋಹನ್ ಸಿಂಗ್ ಅವರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದರು ಮತ್ತು ಎಲ್ಲಾ ನಾಗರಿಕರ ಪರವಾಗಿ ಅವರಿಗೆ ಗೌರವ ಸಲ್ಲಿಸಿದರು.

 

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Why The SHANTI Bill Makes Modi Government’s Nuclear Energy Push Truly Futuristic

Media Coverage

Why The SHANTI Bill Makes Modi Government’s Nuclear Energy Push Truly Futuristic
NM on the go

Nm on the go

Always be the first to hear from the PM. Get the App Now!
...
Chief Minister of Gujarat meets Prime Minister
December 19, 2025

The Chief Minister of Gujarat, Shri Bhupendra Patel met Prime Minister, Shri Narendra Modi today in New Delhi.

The Prime Minister’s Office posted on X;

“Chief Minister of Gujarat, Shri @Bhupendrapbjp met Prime Minister @narendramodi.

@CMOGuj”