ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ಜರುಗಿದ ಅಸಿಯಾನ್ / ಇ.ಎ.ಎಎಸ್ ಸಂಬಂಧಿತ ಸಭೆಗಳ ಸಂದರ್ಭದಲ್ಲಿ ಇಂಡೋನೇಷ್ಯಾ ಗಣತಂತ್ರದ ಅಧ್ಯಕ್ಷ ಘನತೆವೆತ್ತ ಜೊಕೊ ವಿಡೊಡೊ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 03,2019 ರಂದು ಭೇಟಿ ಮಾಡಿದರು

ಇಂಡೋನೇಷ್ಯಾ ಅಧ್ಯಕ್ಷರಾಗಿ ಎರಡನೇ ಅವಧಿಯನ್ನು ಪ್ರಾರಂಭಗೊಳಿಸಿದ್ದಕ್ಕಾಗಿ ಅಧ್ಯಕ್ಷ ಶ್ರೀ ಜೊಕೊ ವಿಡೊಡೊ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದರು. ವಿಶ್ವದ ಎರಡು ಬೃಹತ್ ಪ್ರಜಾಪ್ರಭುತ್ವ ಮತ್ತು ಬಹುಸಮಾಜಿಕ ವ್ಯವಸ್ಥೆಯ ದೇಶಗಳಾಗಿ, ರಕ್ಷಣಾ, ಸುರಕ್ಷಾ , ಸಂಪರ್ಕ, ವ್ಯಾಪಾರ ಮತ್ತು ಹೂಡಿಕೆ ಹಾಗೂ ಜನರಿಂದ ಜನರಿಗೆ ನೇರ ವಿನಿಮಯಗಳೇ ಮುಂತಾದ ಕ್ಷೇತ್ರಗಳಲ್ಲಿ ಇಂಡೋನೇಷ್ಯಾ ಜೊತೆ ಹೊಂದಿರುವ ಸಂಬಂಧವನ್ನು ಬಲಿಷ್ಟಗೊಳಿಸುವ ನಿಟ್ಟಿನಲ್ಲಿ ಭಾರತವು ಕಟಿಬದ್ಧವಾಗಿದೆ ಎಂದು ಪ್ರಧಾನಮಂತ್ರಿ ಅವರು ತಿಳಿಸಿದರು

ಭಾರತ ಮತ್ತು ಇಂಡೋನೇಷ್ಯಾ ಕಡಲ ಕಿನಾರೆಯ ಸಮೀಪದ ನೆರೆರಾಷ್ಟ್ರಗಳಾಗಿದ ಹಿನ್ನಲೆಯಲ್ಲಿ ಭಾರತ-ಫೆಸಿಫಿಕ್ ವಲಯದ ಸಾಮುದ್ರಿಕ ಸಹಕಾರಗಳಲ್ಲಿ ಪರಸ್ಪರ ಹಂಚಿಕೊಂಡ ಸಂಕಲ್ಪಯೋಜನೆಗಳು ಸಾಕಾರವಾಗುವ ನಿಟ್ಟಿನಲ್ಲಿ ಶಾಂತಿ, ಸುರಕ್ಷತೆ ಮತ್ತು ಸಮೃದ್ಧಿಗಾಗಿ ಕೆಲಸ ಮಾಡುವ ತಮ್ಮ ಬದ್ಧತೆಗಳನ್ನು ಎರಡೂ ನಾಯಕರು ಪುನರುಚ್ಛರಿಸಿದರು. ಅತಿಉಗ್ರತೆ ಮತ್ತು ಭಯೋತ್ಪಾದನೆಗಳ ಭಯವನ್ನು ಇಬ್ಬರೂ ನಾಯಕರು ಚರ್ಚಿಸಿದರು ಮತ್ತು ಈ ಸಮಸ್ಯೆಯನ್ನು ನಿಯಂತ್ರಿಸಿ ಪರಿಹರಿಸಲು ದ್ವಿಪಕ್ಷೀಯವಾಗಿ ಹಾಗೂ ಜಾಗತಿಕವಾಗಿ ಅತ್ಯಂತ ಸನಿಹದಿಂದ ಕೆಲಸ ಮಾಡಲು ಒಪ್ಪಿಕೊಂಡರು

ದ್ವಿಪಕ್ಷೀಯ ವ್ಯಾಪಾರ/ವಾಣಿಜ್ಯಗಳ ಉತ್ತಮ ಪಡಿಸುವಿಕೆ ಮತ್ತು ಕೃಷಿ ಉತ್ಪನ್ನಗಳು, ವಾಹನ, ಔಷಧಿಯ ಕ್ಷೇತ್ರಗಳೂ ಸೇರಿದಂತೆ ಭಾರತೀಯ ವಾಣಿಜ್ಯೋತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ಲಭ್ಯತೆಯ ಆವಶ್ಯಕತೆಗಳಿಗೆ ಹೆಚ್ಚಿನ ಮಹತ್ವ ನೀಡುವ ವಿಷಯಗಳ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಸಕ್ತಿ ವ್ಯಕ್ತಪಡಿಸಿದರು. ಭಾರತೀಯ ಸಂಸ್ಥೆಗಳು ಇಂಡೋನೇಷ್ಯಾದಲ್ಲಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಹೂಡಿಕೆ ಮಾಡಿರುವುದನ್ನು ಉಲ್ಲೇಖಿಸಿ, ಭಾರತದಲ್ಲಿ ಇರುವ ಅವಕಾಶಗಳನ್ನು ಹೂಡಿಕೆ ಮಾಡುವ ಮೂಲಕ ಸದುಪಯೋಗ ಮಾಡಿಕೊಳ್ಳಲು ಇಂಡೋನೇಷ್ಯಾದ ಸಂಸ್ಥೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಹ್ವಾನಿಸಿದರು

ಪರಸ್ಪರ ಅನುಕೂಲ ಸಮಯಕ್ಕೆ ಅನುಗುಣವಾಗಿ ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಅಧ್ಯಕ್ಷ ಶ್ರೀ ಜೊಕೊ ವಿಡೊಡೊ ಅವರನ್ನು ಆಮಂತ್ರಿಸಿದರು

ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯನ್ನು ಹೊಂದಿರುವ ಇಂಡೋನೇಷ್ಯಾ ಜೊತೆ ದ್ವಿಪಕ್ಷೀಯ ಸಂಬಂಧಗಳಿಗೆ ಭಾರತವು ಅತಿ ಮಹತ್ವದ ಪ್ರಾಮುಖ್ಯತೆಯನ್ನು ಭಾರತ ನೀಡುತ್ತದೆ. ಪರಸ್ಪರ ರಾಜತಾಂತ್ರಿಕ ಸಂಬಂಧ ಪ್ರಾರಂಭಿಸಿ, ಈ ವರ್ಷಕ್ಕೆ 70 ವರ್ಷಗಳಾಗಿದ ಸಂಭ್ರಮ ಭಾರತ ಮತ್ತು ಇಂಡೋನೇಷ್ಯಾ ಹೊಂದಿದೆ

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Have patience, there are no shortcuts in life: PM Modi’s advice for young people on Lex Fridman podcast

Media Coverage

Have patience, there are no shortcuts in life: PM Modi’s advice for young people on Lex Fridman podcast
NM on the go

Nm on the go

Always be the first to hear from the PM. Get the App Now!
...
Prime Minister condoles the demise of former Union Minister, Dr. Debendra Pradhan
March 17, 2025

The Prime Minister, Shri Narendra Modi has expressed deep grief over the demise of former Union Minister, Dr. Debendra Pradhan. Shri Modi said that Dr. Debendra Pradhan Ji’s contribution as MP and Minister is noteworthy for the emphasis on poverty alleviation and social empowerment.

Shri Modi wrote on X;

“Dr. Debendra Pradhan Ji made a mark as a hardworking and humble leader. He made numerous efforts to strengthen the BJP in Odisha. His contribution as MP and Minister is also noteworthy for the emphasis on poverty alleviation and social empowerment. Pained by his passing away. Went to pay my last respects and expressed condolences to his family. Om Shanti.

@dpradhanbjp”

"ଡକ୍ଟର ଦେବେନ୍ଦ୍ର ପ୍ରଧାନ ଜୀ ଜଣେ ପରିଶ୍ରମୀ ଏବଂ ନମ୍ର ନେତା ଭାବେ ନିଜର ସ୍ୱତନ୍ତ୍ର ପରିଚୟ ସୃଷ୍ଟି କରିଥିଲେ। ଓଡ଼ିଶାରେ ବିଜେପିକୁ ମଜବୁତ କରିବା ପାଇଁ ସେ ଅନେକ ପ୍ରୟାସ କରିଥିଲେ। ଦାରିଦ୍ର୍ୟ ଦୂରୀକରଣ ଏବଂ ସାମାଜିକ ସଶକ୍ତିକରଣ ଉପରେ ଗୁରୁତ୍ୱ ଦେଇ ଜଣେ ସାଂସଦ ଏବଂ ମନ୍ତ୍ରୀ ଭାବେ ତାଙ୍କର ଅବଦାନ ମଧ୍ୟ ଉଲ୍ଲେଖନୀୟ। ତାଙ୍କ ବିୟୋଗରେ ମୁଁ ଶୋକାଭିଭୂତ। ମୁଁ ତାଙ୍କର ଶେଷ ଦର୍ଶନ କରିବା ସହିତ ତାଙ୍କ ପରିବାର ପ୍ରତି ସମବେଦନା ଜଣାଇଲି। ଓଁ ଶାନ୍ତି।"