ತಮ್ಮ ನಿವಾಸದಲ್ಲಿ ಕೃತಿಗಳ ಸಂಕಲವನ್ನು ಬಿಡುಗಡೆ ಮಾಡಿದ ಶ್ರೀ ಮೋದಿ

ಕವಿ ಮತ್ತು ಬರಹಗಾರ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.

ಮಧ್ಯಾಹ್ನ 1 ಗಂಟೆಗೆ 7, ಲೋಕ ಕಲ್ಯಾಣ ಮಾರ್ಗದಲ್ಲಿಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಕೃತಿಗಳ ಸಂಕಲವನ್ನು ಬಿಡುಗಡೆ ಮಾಡಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ ಪೋಸ್ಟ್ X ನಲ್ಲಿ ಹೀಗೆ ಬರೆದಿದ್ದಾರೆ. 

“ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ನಾನು ಇಂದು ಅವರಿಗೆ ಗೌರವ ನಮನ ಸಲ್ಲಿಸಿದೆನು. ದಾರ್ಶನಿಕ ಕವಿ, ಬರಹಗಾರ, ಚಿಂತಕ, ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಮಾಜ ಸುಧಾರಕರಾಗಿದ್ದ ಅವರ ಮಾತುಗಳು ಅಸಂಖ್ಯಾತ ಜನರಲ್ಲಿ ದೇಶಭಕ್ತಿ ಮತ್ತು ಕ್ರಾಂತಿಯ ಕಿಡಿಯನ್ನು ಹೊತ್ತಿಸಿದವು. ಸಮಾನತೆ ಮತ್ತು ಮಹಿಳಾ ಸಬಲೀಕರಣದ ಕುರಿತು ಅವರ ಪ್ರಗತಿಪರ ಆದರ್ಶಗಳು ಸಮಾನ ಸ್ಪೂರ್ತಿದಾಯಕವಾಗಿವೆ.

ಇಂದು ಮಧ್ಯಾಹ್ನ 1 ಗಂಟೆಗೆ ಲೋಕ ಕಲ್ಯಾಣ ಮಾರ್ಗದ 7ರಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರ ಕೃತಿಗಳ ಸಂಕಲನವನ್ನು ಬಿಡುಗಡೆ ಮಾಡುತ್ತೇನೆ. ಈ ಪ್ರಯತ್ನವನ್ನು ಕೈಗೊಂಡಿದ್ದಕ್ಕಾಗಿ ನಾನು ಶ್ರೀ ಸೀನಿ ವಿಶ್ವನಾಥನ್ ಜೀ ಅವರನ್ನು ಅಭಿನಂದಿಸುತ್ತೇನೆ’’.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Wed in India’ Initiative Fuels The Rise Of NRI And Expat Destination Weddings In India

Media Coverage

'Wed in India’ Initiative Fuels The Rise Of NRI And Expat Destination Weddings In India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಡಿಸೆಂಬರ್ 2025
December 15, 2025

Visionary Leadership: PM Modi's Era of Railways, AI, and Cultural Renaissance