ಭಾರತ-ಡೆನ್ಮಾರ್ಕ್ ಹಸಿರು ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಬದ್ಧತೆ ನಾಯಕರಿಂದ ಪುನರುಚ್ಚಾರ
ಉಕ್ರೇನ್‌ನಲ್ಲಿನ ಸಂಘರ್ಷದ ಶಾಂತಿಯುತ ಮತ್ತು ಆರಂಭಿಕ ಪರಿಹಾರದ ಕುರಿತು ನಾಯಕರಿಂದ ಅಭಿಪ್ರಾಯ ವಿನಿಮಯ
ಭಾರತ-ಇಯು ಮುಕ್ತ ವ್ಯಾಪಾರ ಒಪ್ಪಂದದ (ಎಫ್‌.ಟಿ.ಎ) ಶೀಘ್ರ ಇತ್ಯರ್ಥಕ್ಕೆ ಪ್ರಧಾನಮಂತ್ರಿ ಫ್ರೆಡೆರಿಕ್ಸೆನ್ ಬೆಂಬಲ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ವ್ಯಾಪಾರ, ಹೂಡಿಕೆ, ನಾವಿನ್ಯತೆ, ಇಂಧನ, ನೀರು ನಿರ್ವಹಣೆ, ಆಹಾರ ಸಂಸ್ಕರಣೆ ಮತ್ತು ಸುಸ್ಥಿರ ಅಭಿವೃದ್ಧಿಯಂತಹ ಕ್ಷೇತ್ರಗಳಲ್ಲಿ ಭಾರತ-ಡೆನ್ಮಾರ್ಕ್ ಹಸಿರು ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸುವ ಬದ್ಧತೆಯನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದರು.

ಡೆನ್ಮಾರ್ಕ್‌ನ ಪ್ರಸ್ತುತದ ಯುರೋಪಿಯನ್ ಒಕ್ಕೂಟದ ಮಂಡಳಿಯ ಅಧ್ಯಕ್ಷತೆಯ ಯಶಸ್ಸಿಗೆ ಮತ್ತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯತ್ವಕ್ಕಾಗಿ ಪ್ರಧಾನಮಂತ್ರಿ ಮೋದಿ ಅವರು ಶುಭ ಹಾರೈಸಿದರು.

ಪ್ರಾದೇಶಿಕ ಮತ್ತು ಜಾಗತಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದರು. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಹಾಗೂ ಶಾಂತಿ ಮತ್ತು ಸ್ಥಿರತೆಯ ಶೀಘ್ರ ಪುನಃಸ್ಥಾಪನೆಗೆ ಭಾರತದ ಸ್ಥಿರ ಬೆಂಬಲವನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು. 

ಪರಸ್ಪರ ಅನುಕೂಲಕರ ಭಾರತ-ಇಯು ಮುಕ್ತ ವ್ಯಾಪಾರ ಒಪ್ಪಂದ (ಎಫ್.ಟಿ.ಎ) ದ ಶೀಘ್ರ ಇತ್ಯರ್ಥಕ್ಕೆ ಹಾಗೂ 2026 ರಲ್ಲಿ ಭಾರತ ಆಯೋಜಿಸಲಿರುವ ಎ.ಐ. ಇಂಪ್ಯಾಕ್ಟ್ ಶೃಂಗಸಭೆಯ ಯಶಸ್ಸಿಗೆ ಡೆನ್ಮಾರ್ಕ್‌ನ ದೃಢ ಬೆಂಬಲವನ್ನು ಪ್ರಧಾನಮಂತ್ರಿ ಫ್ರೆಡೆರಿಕ್ಸೆನ್ ಪುನರುಚ್ಚರಿಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Deloitte projects 6.5–6.8% GDP expansion in FY27, growth to strengthen in second half

Media Coverage

Deloitte projects 6.5–6.8% GDP expansion in FY27, growth to strengthen in second half
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam applauding the courage and perseverance of India's Youth
July 20, 2026

The Prime Minister, Shri Narendra Modi, shared a Sanskrit Subhashitam applauding the courage and perseverance of India's Youth:

"प्राप्यापदं न व्यथते कदाचिदुद्योगमन्विच्छति चाप्रमत्तः।

दुःखं च काले सहते महात्मा धुरन्धरस्तस्य जिताः सपत्नाः॥"

Shri Modi said that our youth is achieving historic success through their courage, self-confidence, and relentless hard work, and this is the greatest strength of a rapidly developing India.

The Prime Minister posted on X:

आज हमारे युवा साथी धैर्य, आत्मविश्वास और अथक परिश्रम से ऐतिहासिक सफलता हासिल कर रहे हैं। यही विकसित हो रहे भारत की सबसे बड़ी ताकत है।

प्राप्यापदं न व्यथते कदाचिदुद्योगमन्विच्छति चाप्रमत्तः।

दुःखं च काले सहते महात्मा धुरन्धरस्तस्य जिताः सपत्नाः॥