ಯುವ ಸ್ನೇಹಿತರ ಅದ್ಭುತ ಪ್ರತಿಭೆಯು ನನ್ನಲ್ಲಿ ಹೊಸ ಚೈತನ್ಯ ತುಂಬಿದೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನಮೋ ಭಾರತ್ ರೈಲಿನಲ್ಲಿ ಸಹಿಬಾಬಾದ್ ಆರ್ ಆರ್ ಟಿ ಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್ ಆರ್ ಟಿ ಎಸ್ ನಿಲ್ದಾಣದವರೆಗೆ ಸಂಚರಿಸಿದರು. ಪ್ರಯಾಣದ ಸಂದರ್ಭದಲ್ಲಿ ಅವರು ಯುವ ಸ್ನೇಹಿತರೊಂದಿಗೆ ಆತ್ಮೀಯ ಸಂವಾದ ನಡೆಸಿದರು. ಈ ಯುವಸಮೂಹ ಪ್ರಧಾನಿ ಅವರಿಗೆ ಹಲವು ವರ್ಣಚಿತ್ರಗಳು ಮತ್ತು ಕಲಾಕೃತಿಗಳನ್ನು ಉಡುಗೊರೆಯಾಗಿ ನೀಡಿದರು. 

ಪ್ರಧಾನಮಂತ್ರಿಗಳ ಬಗ್ಗೆ ಮತ್ತು ನವ, ಉದಯೋನ್ಮುಖ ಭಾರತದ ಬಗ್ಗೆ ಕವನ ವಾಚಿಸಿದ ಯುವತಿಯೊಂದಿಗೆ ಶ್ರೀ ಮೋದಿ ಅವರು ಸಂವಾದ ನಡೆಸಿ ಅವರನ್ನು ಶ್ಲಾಘಿಸಿದರು. ಶ್ರೀ ಮೋದಿ ಅವರಿಗೆ ಪೇಂಟಿಂಗ್ ಅನ್ನು ನೀಡಿದ ಮನೆಯ ಫಲಾನುಭವಿ ಹುಡುಗನೊಂದಿಗೆ ಸಂವಾದ ನಡೆಸಿದರು. ಹೊಸ ಮನೆಯ ಪ್ರಗತಿಯ ಬಗ್ಗೆ ಬಾಲಕನನ್ನು ವಿಚಾರಿಸಿದರು ಮತ್ತು ಶುಭ ಹಾರೈಸಿದರು. ಇನ್ನೋರ್ವ ಬಾಲಕಿ ಕೂಡ ಪ್ರಧಾನಮಂತ್ರಿಯವರ ಬಗ್ಗೆ ಕವನ ವಾಚಿಸಿದರು, ಪ್ರಧಾನಮಂತ್ರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. 

ನಂತರ ಪ್ರಧಾನಮಂತ್ರಿಯವರು ಮಹಿಳಾ ಲೋಕೋ ಪೈಲಟ್‌ಗಳೊಂದಿಗೆ ಸಂವಾದ ನಡೆಸಿದರು. ಲೋಕೋ ಪೈಲೆಟ್ ಗಳು ತಮ್ಮ ಕೆಲಸದ ಬಗ್ಗೆ ಸಂತೋಷ ಮತ್ತು ಹೆಮ್ಮೆ ವ್ಯಕ್ತಪಡಿಸಿದರು. ಅತ್ಯಂತ ಏಕಾಗ್ರತೆಯಿಂದ ಕೆಲಸ ಮಾಡುವಂತೆ ಮನವಿ ಮಾಡಿದ ಪ್ರಧಾನಮಂತ್ರಿ ಅವರು, ಹೊಸ ಕೆಲಸಕ್ಕೆ ಶುಭ ಹಾರೈಸಿದರು.

 

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
In Photos: PM Narendra Modi Prays At Kashi Vishwanath, Holds Trishul-Damru

Media Coverage

In Photos: PM Narendra Modi Prays At Kashi Vishwanath, Holds Trishul-Damru
NM on the go

Nm on the go

Always be the first to hear from the PM. Get the App Now!
...
ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ಯಶಸ್ಸಿಗೆ ಹೇಗೆ ಕಾರಣವಾಗುತ್ತದೆ ಎಂಬುದನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
April 30, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದು, ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ವ್ಯಕ್ತಿಯು ತಮ್ಮ ಕಾರ್ಯಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

ಈ ಅಚಲ ಉತ್ಸಾಹವು ಒಬ್ಬ ವ್ಯಕ್ತಿಯು ಸಾಧಿಸಲು ನಿರ್ಧರಿಸುವ ಎಲ್ಲಾ ಪ್ರಯತ್ನಗಳನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ ಎಂದು ಪ್ರಧಾನಿ ಹೇಳಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ;

"कर्मशील और ऊर्जावान देशवासी ही राष्ट्र की सबसे बड़ी शक्ति हैं, जिनके परिश्रम से विकास की नई राहें तय होती हैं। इनके प्रयासों से देश समृद्धि, आत्मनिर्भरता और उन्नति के शिखर को छूता है।

अनिर्वेदो हि सततं सर्वार्थेषु प्रवर्तकः।

करोति सफलं जन्तोः कर्म यच्च करोति सः॥"

ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ವ್ಯಕ್ತಿಯನ್ನು ತಮ್ಮ ಕ್ರಿಯೆಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರಲು ಪ್ರೇರೇಪಿಸುತ್ತದೆ. ಈ ಅಚಲ ಉತ್ಸಾಹವು ಒಬ್ಬ ವ್ಯಕ್ತಿಯು ಸಾಧಿಸಲು ನಿರ್ಧರಿಸುವ ಎಲ್ಲಾ ಪ್ರಯತ್ನಗಳನ್ನು ಯಶಸ್ಸಿನತ್ತ ಕರೆದೊಯ್ಯುತ್ತದೆ.