ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಸಮಾಲೊಚನೆ ನಡೆಸಿದರು.

ಭಾರತಕ್ಕೆ ಇತ್ತೀಚಿನ ಭೇಟಿ ಸಂದರ್ಭದಲ್ಲಿ ಚರ್ಚಿಸಿದ ಕೆಲವು ವಿಷಯಗಳ ಕುರಿತ ನಂತರದ ಬೆಳವಣಿಗೆಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು. ವಿಶೇಷವಾಗಿ ರಕ್ಷಣಾ ಸಹಕಾರ ಹೆಚ್ಚಿಸುವ, ರಸಗೊಬ್ಬರ ಪೂರೈಕೆಯಲ್ಲಿ ಸಹಕಾರ, ಪೂರ್ವದತ್ತ ಭಾರತ ಕಾರ್ಯೋನ್ಮುಖವಾಗಿರುವ ಕುರಿತು ನಡೆದ ಸಮಾಲೋಚನೆಯಲ್ಲಿ ಭವಿಷ್ಯದ ಕ್ರಮಗಳನ್ನು ದೃಢಪಡಿಸಲು ಈ ಸಮಾಲೋಚನೆ ನೆರವಾಗಿದೆ. ಈ ನಾಯಕರ ಸಮಾಲೊಚನೆಯು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳ ವಿನಿಯಮಕ್ಕೆ ಅವಕಾಶ ಮಾಡಿಕೊಟ್ಟಿದೆ.

ಭಾರತ-ರಷ್ಯಾ ವಿಶೇಷ ಮತ್ತು ವಿಶೇಷವಾದ ಕಾರ್ಯತಂತ್ರದ ಪಾಲುದಾರಿಕೆಯಡಿ ಒಳಗೊಂಡಿರುವ ಎಲ್ಲಾ ಅಂಶಗಳ ಬಗ್ಗೆ ನಿಯಮಿತವಾಗಿ ಸಂಪರ್ಕದಲ್ಲಿರಲು ಉಭಯ ನಾಯಕರು ಸಮ್ಮತಿಸಿದ್ದಾರೆ ಮತ್ತು ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಗಾಢವಾಗಿಸುವ ಹಾಗೂ ಬಹುಪಕ್ಷೀಯ ವೇದಿಕೆಗಳಲ್ಲಿ ಸಮಾಲೋಚನೆ, ಸಮನ್ವಯತೆ ಸಾಧಿಸಲು ಈ ನಾಯಕರು ಸಮ್ಮತಿಸಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Odisha’s Dhenkanal farmers export 3 tonne of mango to London

Media Coverage

Odisha’s Dhenkanal farmers export 3 tonne of mango to London
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಮೇ 2026
May 14, 2026

Kisan Kalyan to Viksit Bharat: PM Modi Delivers Jobs, Markets & Dignity Across Rural and Industrial India