NCC provides a platform to strengthen the spirit of discipline, determination and devotion towards the nation: PM Modi
India has decided that it will confront the challenges ahead and deal with them: PM Modi
A young India will play key role in fourth industrial revolution: PM

ದೆಹಲಿಯಲ್ಲಿ ಇಂದು ನಡೆದ ಎನ್ ಸಿ ಸಿ ರ‍್ಯಾಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾಗವಹಿಸಿದ್ದರು.

ರ‍್ಯಾಲಿಯಲ್ಲಿ ಪ್ರಧಾನ ಮಂತ್ರಿಯವರು ಗೌರವವನ್ನು ಸ್ವೀಕರಿಸಿ ವಿವಿಧ ಎನ್‌ಸಿಸಿ ತುಕಡಿಗಳು ಮತ್ತು ನೆರೆಯ ರಾಷ್ಟ್ರಗಳ ಕೆಡೆಟ್‌ಗಳ ಪಥ ಸಂಚಲನವನ್ನು ವೀಕ್ಷಿಸಿದರು.

ಎನ್‌ಸಿಸಿ ಕೆಡೆಟ್‌ಗಳು ಸಾಂಸ್ಕೃತಿಕ ಪ್ರದರ್ಶನದ ಜೊತೆಗೆ, ಸಾಹಸ ಕ್ರೀಡೆ, ಸಂಗೀತ ಮತ್ತು ಪ್ರದರ್ಶನ ಕಲೆಗಳಂತಹ ಕ್ಷೇತ್ರಗಳಲ್ಲಿನ ತಮ್ಮ ಸಾಮರ್ಥ್ಯಗಳನ್ನು ಪ್ರಧಾನ ಮಂತ್ರಿಯವರ ಸಮ್ಮುಖದಲ್ಲಿ ಪ್ರದರ್ಶಿಸಿದರು. ಅರ್ಹ ಎನ್‌ಸಿಸಿ ಕೆಡೆಟ್‌ಗಳಿಗೆ ಪ್ರಧಾನಮಂತ್ರಿಯವರು ಪ್ರಶಸ್ತಿಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು , ಯುವಕರಿಗೆ ಶಿಸ್ತು, ದೃಡತೆ ಮತ್ತು ದೇಶಭಕ್ತಿಯ ಮನೋಭಾವವನ್ನು ಬಲಪಡಿಸಲು ಎನ್‌ಸಿಸಿ ಉತ್ತಮ ವೇದಿಕೆಯನ್ನು ಒದಗಿಸುತ್ತದೆ. ಇಂತಹ ಮೌಲ್ಯಗಳು ದೇಶದ ಅಭಿವೃದ್ಧಿಗೆ ಸಹಾಯ ಮಾಡುತ್ತವೆ ಎಂದು ಹೇಳಿದರು.

ಭಾರತವು ವಿಶ್ವದ ಯುವ ರಾಷ್ಟ್ರಗಳಲ್ಲಿ ಒಂದು ಏಕೆಂದರೆ ಇದರ ಜನಸಂಖ್ಯೆಯ 65% ಕ್ಕಿಂತ ಹೆಚ್ಚು ಜನರು 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ ಎಂದು ಪ್ರಧಾನ ಮಂತ್ರಿಯವರು ಹೇಳಿದರು. “ಈ ವಿಷಯದ ಬಗ್ಗೆ ನಮಗೆ ಹೆಮ್ಮೆ ಇದೆ, ಆದರೆ ಯುವ ಚಿಂತನೆ ನಮ್ಮ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದರು. ಯಾವುದೇ ಸಮಸ್ಯೆಗೆ ತಕ್ಷಣ ಪರಿಹಾರಗಳನ್ನು ಕಂಡುಕೊಳ್ಳಬೇಕು ಎಂದು ಪ್ರಧಾನಮಂತ್ರಿಯವರು ಹೇಳಿದರು. “ಯುವ ಮನಸ್ಸು ಇದಕ್ಕಾಗಿ ಹಂಬಲಿಸುತ್ತದೆ ಮತ್ತು ಇದುವೇ ಯುವ ಭಾರತ ” ಎಂದು ಅವರು ಹೇಳಿದರು.

“ನಾವು ಹಿಂದಿನ ಸವಾಲುಗಳನ್ನು ಎದುರಿಸುತ್ತಿರುವಾಗ, ವರ್ತಮಾನದ ಅಗತ್ಯತೆಗಳ ಬಗ್ಗೆ ಎಚ್ಚರ ವಹಿಸಿ, ಭವಿಷ್ಯದ ಆಕಾಂಕ್ಷೆಗಳ ಕಡೆಗೆ ಗಮನ ಹರಿಸಬೇಕು” ಎಂದು ಅವರು ಹೇಳಿದರು. ಭಾರತವು ಇಂದು ಯುವ ಹುರುಪು ಮತ್ತು ಮನಸ್ಸಿನೊಂದಿಗೆ ಮುಂದುವರಿಯುತ್ತಿದೆ ಎಂದು ಅವರು ಹೇಳಿದರು. “ಇಂದು ಭಾರತದ ಯುವ ಮನಸ್ಥಿತಿ ಮತ್ತು ಹುರುಪು, ಸರ್ಜಿಕಲ್ ಸ್ಟ್ರೈಕ್ ಮತ್ತು ಭಯೋತ್ಪಾದಕ ಶಿಬಿರಗಳ ಮೇಲೆ ನೇರ ಆಕ್ರಮಣ ಮಾಡಲು ಕಾರಣವಾಗಿದೆ”. ಯುವ ಮನಸ್ಥಿತಿಯು ಎಲ್ಲರನ್ನೂ ತನ್ನ ಜೊತೆಯಲ್ಲಿ ಕೊಂಡೊಯ್ದು ಪ್ರಗತಿಯತ್ತ ದಾಪುಗಾಲು ಹಾಕಲು ಬಯಸಿದೆ” ಎಂದರು. “ಈ ಮನೋಭಾವದಿಂದಲೇ ಸಂಬಂಧಪಟ್ಟವರನ್ನು ಸಂಪರ್ಕಿಸಿ ನಾವು ಬೋಡೋ ಒಪ್ಪಂದಕ್ಕೆ ಸಹಿ ಹಾಕಿದ್ದೇವೆ.”

ಈಶಾನ್ಯ ಪ್ರದೇಶದ ಅಭಿವೃದ್ಧಿಯ ಪ್ರಯತ್ನಗಳ ಕುರಿತು ಮಾತನಾಡಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಅಭಿವೃದ್ಧಿಯ ಜೊತೆಗೆ, ಎಲ್ಲಾ ಸಂಬಂಧಪಟ್ಟವರೊಂದಿಗೆ ಅತ್ಯಂತ ಮುಕ್ತ ಮನಸ್ಸಿನಿಂದ ಮತ್ತು ಮುಕ್ತ ಹೃದಯದಿಂದ ಮಾತುಕತೆಯನ್ನು ಆರಂಭಿಸಲಾಗಿದೆ. ಇಂದು ಬೋಡೋ ಒಪ್ಪಂದವು ಇದರ ಫಲಿತಾಂಶವಾಗಿದೆ. “ಇದು ಯುವ ಭಾರತದ ಚಿಂತನೆ. ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು, ಎಲ್ಲರನ್ನೂ ಅಭಿವೃದ್ಧಿಪಡಿಸುವ ಮೂಲಕ, ಸಕಲರ ವಿಶ್ವಾಸವನ್ನು ಗಳಿಸುವ ಮೂಲಕ ನಾವು ದೇಶವನ್ನು ಮುಂದೆ ಸಾಗಿಸುತ್ತಿದ್ದೇವೆ ” ಎಂದು ಪ್ರಧಾನಿ ಹೇಳಿದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s data centre boom: Mumbai cracks global top 15, Hyderabad pipeline set to surge 15x

Media Coverage

India’s data centre boom: Mumbai cracks global top 15, Hyderabad pipeline set to surge 15x
NM on the go

Nm on the go

Always be the first to hear from the PM. Get the App Now!
...
ಆಗಸ್ಟ್ 27ರಂದು 'ಖೇಲೋ ಇಂಡಿಯಾ' ಸಂವಾದದಲ್ಲಿ ಯುವಜನರನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ
August 26, 2026
'ಖೇಲೋ ಇಂಡಿಯಾ' ಸಂವಾದವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂಸೇವೆ, ಫಿಟ್‌ನೆಸ್‌ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ
'ಖೇಲೋ ಇಂಡಿಯಾ' ಸಂವಾದದ ಅಡಿಯಲ್ಲಿ ನಡೆಯುವ 'ಯುವ ಸಂವಾದ'ವು ಐದು ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸಲಿದೆ: ಕ್ರೀಡೆ, ಒಲಿಂಪಿಕ್ ಆಕಾಂಕ್ಷೆಗಳು, ಯುವ ನಾಯಕತ್ವ, 'ವಿಕಸಿತ ಭಾರತ' ಮತ್ತು 'ನಶಾ ಮುಕ್ತ ಯುವ' ಅಭಿಯಾನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 27ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಖೇಲೋ ಇಂಡಿಯಾ' ಸಂವಾದವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಯುವಕರಿಗೆ ಭಾರತದ ಕ್ರೀಡಾ ಪ್ರಯಾಣದಲ್ಲಿ ತೊಡಗಿಸಿಕೊಳ್ಳಲು, ಅವರ ಆಕಾಂಕ್ಷೆಗಳನ್ನು ಹಂಚಿಕೊಳ್ಳಲು ಮತ್ತು ಬಲವಾದ ಯುವಕರ ನೇತೃತ್ವದ 'ವಿಕಸಿತ ಭಾರತ'ಕ್ಕಾಗಿ ತಮ್ಮ ವಿಚಾರಗಳನ್ನು ನೀಡಲು ಸಹಾಯ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ.

2026ರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ 'ಮೇರಾ ಯುವ ಭಾರತ್' (ಮೈ ಭಾರತ್‌) ಆಯೋಜಿಸಿರುವ ಈ ಕಾರ್ಯಕ್ರಮವು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಪ್ರತಿಯೊಂದು ಜಿಲ್ಲೆಯ ಎರಡು ಕಾಲೇಜುಗಳಲ್ಲಿ ಯುವಕರ ಭಾಗವಹಿಸುವಿಕೆಯೊಂದಿಗೆ ದೇಶಾದ್ಯಂತ ನಡೆಯಲಿದೆ. ಯುವಕರ ಆಕಾಂಕ್ಷೆಗಳನ್ನು ರಾಷ್ಟ್ರೀಯ ಅಭಿವೃದ್ಧಿ ಕಾರ್ಯಸೂಚಿಯ ಕೇಂದ್ರಭಾಗದಲ್ಲಿ ಇರಿಸಿಕೊಂಡು ಸದೃಢ, ಶಿಸ್ತುಬದ್ಧ ಮತ್ತು ಕ್ರೀಡಾ ರಾಷ್ಟ್ರವನ್ನು ನಿರ್ಮಿಸುವ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ರಾಷ್ಟ್ರವ್ಯಾಪಿ ನಡೆಯುವ 'ಖೇಲೋ ಇಂಡಿಯಾ ಸಂವಾದ'ವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂ ಸೇವೆ, ಫಿಟ್ನೆಸ್ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ. ಭಾರತದ ಯುವ ಮತ್ತು ಕ್ರೀಡಾ ಪರಿಸರ ವ್ಯವಸ್ಥೆಯ ಕುರಿತಾದ ನಿರಂತರ ಸಂವಾದದಲ್ಲಿ ಯುವಕರ ಆಲೋಚನೆಗಳು ಮತ್ತು ದೃಷ್ಟಿಕೋನಗಳಿಗೆ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಜೊತೆಗೆ, ದೇಶದ ಕ್ರೀಡಾ ಮಹತ್ವಾಕಾಂಕ್ಷೆಗಳೊಂದಿಗೆ ಯುವಕರು ತೊಡಗಿಸಿಕೊಳ್ಳಲು ಇದು ನೇರ ಮಾರ್ಗವನ್ನು ಒದಗಿಸುತ್ತದೆ.

ರಾಷ್ಟ್ರೀಯ ಕಾರ್ಯಕ್ರಮದ ನಂತರ ಯುವ ಭಾಗಿದಾರರು, 'ಮೈ ಭಾರತ್' ಸ್ವಯಂಸೇವಕರು, ಸ್ಥಳೀಯ ಕ್ರೀಡಾಪಟುಗಳು ಮತ್ತು ಜನಪ್ರತಿನಿಧಿಗಳನ್ನು ಒಳಗೊಂಡ ಸ್ಥಳೀಯ ಸಂವಾದಗಳು ನಡೆಯಲಿವೆ. ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಯುವಕರು ಮತ್ತು ಪ್ರಮುಖ ಭಾರತೀಯ ಅಥ್ಲೀಟ್‌ಗಳು ಹಾಗೂ ಪದಕ ವಿಜೇತರ ನಡುವಿನ ನೇರ ಸಂವಾದವು ಈ ಉಪಕ್ರಮದ ಪ್ರಮುಖ ಲಕ್ಷಣವಾಗಿದೆ. 'ಯುವ ಸಂವಾದ'ವು ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದು, ಇದರಲ್ಲಿ ಯುವ ಭಾಗಿದಾರರನ್ನು ತಮ್ಮ ಸ್ವಂತ ಆಲೋಚನೆಗಳು, ದೃಷ್ಟಿಕೋನಗಳು ಮತ್ತು ಆಕಾಂಕ್ಷೆಗಳನ್ನು ವ್ಯಕ್ತಪಡಿಸಲು ಆಹ್ವಾನಿಸಲಾಗುತ್ತದೆ. ಈ ಸಂವಾದವನ್ನು ಐದು ವಿಷಯಗಳ ಸುತ್ತ ರಚಿಸಲಾಗಿದೆ:

  • ಉತ್ತಮ ಸೌಲಭ್ಯಗಳು, ತರಬೇತಿ, ಕ್ರೀಡಾ ವಿಜ್ಞಾನ ಮತ್ತು ಎಲ್ಲರನ್ನೂ ಒಳಗೊಂ ಭಾಗವಹಿಸುವಿಕೆಯ ಮೂಲಕ ಭಾರತದ ಕ್ರೀಡಾ ಪರಿಸರ ವ್ಯವಸ್ಥೆಯನ್ನು ಸುಧಾರಿಸುವುದು;
  • ವೈಜ್ಞಾನಿಕ ಪ್ರತಿಭಾ ಶೋಧನೆ, ಪಾರದರ್ಶಕ ಆಯ್ಕೆ ಮತ್ತು ದೀರ್ಘಕಾಲೀನ ಕ್ರೀಡಾಪಟು ಅಭಿವೃದ್ಧಿಯ ಮೂಲಕ 2036ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಗೆ ಪ್ರತಿಭೆಗಳನ್ನು ಪೋಷಿಸುವುದು;
  • ಆಡಳಿತ ವೇದಿಕೆಗಳು ಮತ್ತು 'ಮೈ ಭಾರತ್' ನೇತೃತ್ವದ ಸ್ವಯಂಸೇವಕ ಸೇವೆಯ ಮೂಲಕ ಯುವ ನಾಯಕರನ್ನು ಸೃಷ್ಟಿಸುವುದು;
  • ನಾಗರಿಕ ಪ್ರಜ್ಞೆ, ಭವಿಷ್ಯಕ್ಕೆ ಸಿದ್ಧವಾದ ಕೌಶಲ್ಯಗಳು ಮತ್ತು ರಚನಾತ್ಮಕ ಸ್ವಯಂಸೇವಕ ಸೇವೆಯನ್ನು ಬೆಳೆಸುವ ಮೂಲಕ ವಿಕಸಿತ ಭಾರತಕ್ಕಾಗಿ ಯುವಕರನ್ನು ಸಬಲೀಕರಣಗೊಳಿಸುವುದು;
  • ಮಾದಕ ವ್ಯಸನದ ವಿರುದ್ಧ ಹೋರಾಡಲು ಕ್ರೀಡೆ ಮತ್ತು ಸಮಾನಮನಸ್ಕ ಜಾಲಗಳನ್ನು ಬಳಸಿಕೊಳ್ಳುವ 'ನಶಾ ಮುಕ್ತ ಯುವ ಆಂದೋಲ'ನವನ್ನು ಉತ್ತೇಜಿಸುವುದು. ಇದು 2026ರ ಆಗಸ್ಟ್ 2ರಂದು ಪ್ರಾರಂಭಿಸಲಾದ ಪ್ರಧಾನಮಂತ್ರಿಯವರ 100 ವಾರಗಳ ರಾಷ್ಟ್ರವ್ಯಾಪಿ ಅಭಿಯಾನದ ಅಡಿಯಲ್ಲಿ ಸಾಪ್ತಾಹಿಕ 'ಜನ ಭಾಗೀದಾರಿ' ಚಟುವಟಿಕೆಗಳಿಂದ ಬೆಂಬಲಿತವಾಗಿದೆ.