ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಜುಲೈ 25ರಂದು ಸಂಜೆ 4.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ದಿವಂಗತ ಶ್ರೀ ಹರ್ ಮೋಹನ್ ಸಿಂಗ್ ಯಾದವ್ ಅವರ 10ನೇ ಪುಣ್ಯತಿಥಿಯ ಅಂಗವಾಗಿ ನಡೆಯುವ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಶ್ರೀ ಹರ್ ಮೋಹನ್ ಸಿಂಗ್ ಯಾದವ್ (1921ರ  ಅಕ್ಟೋಬರ್ 18  - 2012 ಜುಲೈ 25) ಯಾದವ ಸಮುದಾಯದ ಅತ್ಯುನ್ನತ ವ್ಯಕ್ತಿ ಮತ್ತು ನಾಯಕರಾಗಿದ್ದರು. ರೈತರು, ಹಿಂದುಳಿದ ವರ್ಗಗಳು ಮತ್ತು ಸಮಾಜದ ಇತರ ವರ್ಗಗಳಿಗೆ ದಿವಂಗತ ನಾಯಕನ ಕೊಡುಗೆಯನ್ನು ಗುರುತಿಸಿ ಈ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯ ಅವರ ಭಾಗವಹಿಸುವಿಕೆಯಾಗಿದೆ.

ಶ್ರೀ ಹರ್ ಮೋಹನ್ ಸಿಂಗ್ ಯಾದವ್ ಅವರು ದೀರ್ಘಕಾಲದವರೆಗೆ ರಾಜಕೀಯದಲ್ಲಿ ಸಕ್ರಿಯರಾಗಿದ್ದರು ಮತ್ತು ವಿಧಾನ ಪರಿಷತ್ ಸದಸ್ಯ, ಶಾಸಕ, ರಾಜ್ಯಸಭಾ ಸದಸ್ಯರಾಗಿ ಮತ್ತು 'ಅಖಿಲ ಭಾರತೀಯ ಯಾದವ ಮಹಾಸಭಾ'ದ ಅಧ್ಯಕ್ಷರಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದರು. ಅವರು ತಮ್ಮ ಮಗ ಶ್ರೀ ಸುಖರಾಮ್ ಸಿಂಗ್ ಅವರ ಸಹಾಯದಿಂದ ಕಾನ್ಪುರ ಮತ್ತು ಸುತ್ತಮುತ್ತಲಿನಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

1984 ರ ಸಿಖ್ ವಿರೋಧಿ ದಂಗೆಗಳ ಸಮಯದಲ್ಲಿ ಹಲವಾರು ಸಿಖ್ ರ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯವನ್ನು ಪ್ರದರ್ಶಿಸಿದ್ದಕ್ಕಾಗಿ ಶ್ರೀ ಹರ್ ಮೋಹನ್ ಸಿಂಗ್ ಯಾದವ್ ಅವರಿಗೆ 1991 ರಲ್ಲಿ ಶೌರ್ಯ ಚಕ್ರವನ್ನು ನೀಡಲಾಯಿತು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India Exports 3.15 lakh Tonnes Sugar in Oct-Feb of 2025-26 Marketing Year: AISTA

Media Coverage

India Exports 3.15 lakh Tonnes Sugar in Oct-Feb of 2025-26 Marketing Year: AISTA
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಮಾರ್ಚ್ 2026
March 17, 2026

Resilient Bharat Rising: From Safe LPG Deliveries to UPI Dominance and Women's Empowerment Achievements Under PM Modi's Leadership