ಗಣರಾಜ್ಯೋತ್ಸವದ ಮುನ್ನಾದಿನ ದೇಶದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನೀಡಿದ ಪ್ರೇರಣಾದಾಯಕ ಭಾಷಣವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಶಂಸಿಸಿದ್ದಾರೆ.
ರಾಷ್ಟ್ರಪತಿಗಳು ಭಾರತದ ಸಂವಿಧಾನದ ವಿಶಿಷ್ಟತೆಯನ್ನು ಸೂಕ್ತವಾಗಿ ಉಲ್ಲೇಖಿದ್ದಾರೆ. ರಾಷ್ಟ್ರವನ್ನು ಮುನ್ನಡೆಸುತ್ತಿರುವ ಸಾಮೂಹಿಕ ಮನೋಭಾವವನ್ನು ಶ್ಲಾಘಿಸಿದ್ದಾರೆ. ಅವರ ಭಾಷಣವು ಪ್ರತಿಯೊಬ್ಬ ನಾಗರಿಕರು ಪ್ರಜಾಪ್ರಭುತ್ವವನ್ನು ಬಲಪಡಿಸಲು, ಸಾಂವಿಧಾನಿಕ ಆದರ್ಶಗಳನ್ನು ಎತ್ತಿಹಿಡಿಯಲು ಮತ್ತು ವಿಕಸಿತ ಭಾರತವನ್ನು ನಿರ್ಮಿಸಲು ತಮ್ಮ ಬದ್ಧತೆಯನ್ನು ಪುನರುಚ್ಚರಿಸಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ;
“ಗಣರಾಜ್ಯೋತ್ಸವದ ಮುನ್ನಾದಿನ ರಾಷ್ಟ್ರಪತಿಯವರು ಅತ್ಯಂತ ಪ್ರೇರಣಾದಾಯಕ ಭಾಷಣವನ್ನು ನೀಡಿದರು. ಅವರು ನಮ್ಮ ಸಂವಿಧಾನದ ವೈಶಿಷ್ಟ್ಯತೆಯನ್ನು ಸರಿಯಾಗಿ ಉಲ್ಲೇಖಿಸಿದ್ದು, ನಮ್ಮ ರಾಷ್ಟ್ರವನ್ನು ಮುಂದಕ್ಕೆ ಕೊಂಡೊಯ್ದ ಸಮೂಹಾತ್ಮಕ ಮನೋಭಾವವನ್ನು ಮೆಚ್ಚಿಕೊಂಡಿದ್ದಾರೆ. ಅವರ ಭಾಷಣವು ಪ್ರಜಾಪ್ರಭುತ್ವವನ್ನು ಬಲಪಡಿಸಲು, ಸಂವಿಧಾನಾತ್ಮಕ ಆದರ್ಶಗಳನ್ನು ಕಾಪಾಡಲು ಮತ್ತು ವಿಕಸಿತ ಭಾರತವನ್ನು ನಿರ್ಮಿಸಲು ಪ್ರತಿಯೊಬ್ಬ ನಾಗರಿಕರೂ ತಮ್ಮ ಬದ್ಧತೆಯನ್ನು ಪುನಃ ದೃಢಪಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ.
@rashtrapatibhvn”
On the eve of Republic Day, Rashtrapati Ji gave a very inspiring address. She has correctly emphasised the uniqueness of our Constitution and appreciated the collective spirit that has taken our nation forward. Her address motivates every citizen to reaffirm their commitment to… https://t.co/eZkhkOZHdk
— Narendra Modi (@narendramodi) January 25, 2026
गणतंत्र दिवस की पूर्व संध्या पर राष्ट्रपति जी ने देश के नाम एक अत्यंत प्रेरणादायी संबोधन दिया है। उन्होंने हमारे संविधान की विशेषता को रेखांकित करते हुए उस सामूहिक भावना की सराहना की, जिसने हमारे राष्ट्र को निरंतर आगे बढ़ाया है। उनका यह संबोधन हर देशवासी को लोकतंत्र को सशक्त… https://t.co/eZkhkOZHdk
— Narendra Modi (@narendramodi) January 25, 2026


