ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ೧೯.೯.೨೦೧೬ರಂದು ಬಿಹಾರದ ಮಧುಬನಿ ಜಿಲ್ಲೆಯ ಬೆನ್ನಿಪಟ್ಟಿಯ ಬಳಿ ನಡೆದ ಬಸ್ ಅಪಘಾತ ಹಾಗೂ ೨೦.೯.೨೦೧೬ರಂದು ಪಂಜಾಬ್ನ ಅಮೃತಸರ ಜಿಲ್ಲೆ, ಅಠಾರಿಯ ಮುಹಾವಾ ಗ್ರಾಮದ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಸಾವು ಮತ್ತು ಗಾಯಗೊಂಡ ವ್ಯಕ್ತಿಗಳ ಬಗ್ಗೆ ಕೇಳಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ದುರ್ಘಟನೆಯಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ತಲಾ ೨ ಲಕ್ಷ ರೂಪಾಯಿಗಳ ಪರಿಹಾರವನ್ನು ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ ೫೦ ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮಂಜೂರು ಮಾಡಿದ್ದಾರೆ.


