ಭಾರತ-ಯು.ಕೆ. ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (ಸಿ.ಇ.ಟಿ.ಎ.) ಮತ್ತು ಸಾಮಾಜಿಕ ಭದ್ರತೆ ಒಪ್ಪಂದದ ಕುರಿತು ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಬರೆದ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ. ಇದು ಭಾರತ-ಯು.ಕೆ. ಪಾಲುದಾರಿಕೆಯಲ್ಲಿ ಮಹತ್ವದ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಈ ಎರಡು ಒಪ್ಪಂದಗಳು ಭಾರತ ಮತ್ತು ಯುನೈಟೆಡ್ ಕಿಂಗ್ ಡಮ್ ನಡುವಿನ ಆರ್ಥಿಕ ಸಂಪರ್ಕಗಳನ್ನು ಮತ್ತಷ್ಟು ಗಾಢವಾಗಿಸುತ್ತದೆ ಮತ್ತು ಎರಡೂ ದೇಶಗಳ ಹಂಚಿಕೆಯ ಮಹತ್ವಾಕಾಂಕ್ಷೆಯನ್ನು ಅವರ ಜನರಿಗೆ ಸ್ಪಷ್ಟವಾದ ಅವಕಾಶಗಳಾಗಿ ಪರಿವರ್ತಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಹಲವಾರು ರೋಮಾಂಚಕ ವಲಯಗಳಲ್ಲಿ ಯು.ಕೆ. ಮಾರುಕಟ್ಟೆಗೆ ಪ್ರವೇಶವನ್ನು ವಿಸ್ತರಿಸುವ ಮೂಲಕ ಸಿ.ಇ.ಟಿ.ಎ. ಭಾರತದ ರೈತರು, ಉದ್ಯಮಿಗಳು ಮತ್ತು ಎಂ.ಎಸ್.ಎಂ.ಇ.ಗಳಿಗೆ ಹೊಸ ತೀವ್ರತೆಯನ್ನು ನೀಡುತ್ತದೆ ಎಂದು ಶ್ರೀ ಮೋದಿಯವರು ಗಮನಿಸಿದರು. ಸಾಮಾಜಿಕ ಭದ್ರತೆಯ ಕುರಿತಾದ ಒಪ್ಪಂದವು ಯುನೈಟೆಡ್ ಕಿಂಗ್ ಡಮ್ ನಲ್ಲಿ ತಾತ್ಕಾಲಿಕವಾಗಿ ಕೆಲಸ ಮಾಡುವ ಭಾರತೀಯ ವೃತ್ತಿಪರರಿಗೆ ಅಮೂಲ್ಯವಾದ ಬೆಂಬಲವನ್ನು ನೀಡುತ್ತದೆ ಮತ್ತು ಭಾರತೀಯ ಉದ್ಯಮಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು.

 ಶ್ರೀ ಮೋದಿ ಅವರು ಎಕ್ಸ್‌ ತಾಣದಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ ;

ಭಾರತ-ಯುಕೆ ಪಾಲುದಾರಿಕೆಯಲ್ಲಿ ಇದು ಮಹತ್ವದ ಕ್ಷಣ!

ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ ಮತ್ತು ಸಾಮಾಜಿಕ ಭದ್ರತೆಯ ಒಪ್ಪಂದ ಜಾರಿಗೆ ಬರುವುದರೊಂದಿಗೆ, ನಮ್ಮ ಆರ್ಥಿಕ ಸಂಪರ್ಕಗಳು ಇನ್ನಷ್ಟು ಆಳವಾಗಲಿವೆ. ಒಟ್ಟಾಗಿ, ಈ ಒಪ್ಪಂದಗಳು ನಮ್ಮ ಹಂಚಿಕೆಯ ಮಹತ್ವಾಕಾಂಕ್ಷೆಯನ್ನು ನಮ್ಮ ಜನರಿಗೆ ಸ್ಪಷ್ಟ ಅವಕಾಶಗಳಾಗಿ ಪರಿವರ್ತಿಸುತ್ತವೆ.

ನಮ್ಮ ರೈತರು, ಉದ್ಯಮಿಗಳು ಮತ್ತು ಎಂ.ಎಸ್.ಎಂ.ಇ.ಗಳಿಗೆ ಸಿ.ಇ.ಟಿ.ಎ.ಯು ಹೊಸ ತೀವ್ರತೆಯನ್ನು ನೀಡುತ್ತದೆ. ಹಲವಾರು ರೋಮಾಂಚಕ ವಲಯಗಳು ಯು.ಕೆ. ಮಾರುಕಟ್ಟೆಗೆ ಬಲವಾದ ಪ್ರವೇಶವನ್ನು ಪಡೆಯುತ್ತವೆ. ಇದು ತಂತ್ರಜ್ಞಾನ, ವೃತ್ತಿಪರ ಸೇವೆಗಳು ಮತ್ತು ನಾವೀನ್ಯತೆಯಲ್ಲಿ ಸಹಕಾರವನ್ನು ಇನ್ನಷ್ಟು ಆಳಗೊಳಿಸುತ್ತದೆ, ಅದೇ ಸಮಯದಲ್ಲಿ ಕೌಶಲ್ಯಪೂರ್ಣ ಭಾರತೀಯ ಪ್ರತಿಭೆಗಳಿಗೆ ಹೆಚ್ಚಿನ ಚಲನಶೀಲತೆಯನ್ನು ಬೆಂಬಲಿಸುತ್ತದೆ.

ಸಾಮಾಜಿಕ ಭದ್ರತಾ ಒಪ್ಪಂದವು ಯು.ಕೆ.ಯಲ್ಲಿ ತಾತ್ಕಾಲಿಕವಾಗಿ ಕೆಲಸ ಮಾಡುವ ಭಾರತೀಯ ವೃತ್ತಿಪರರಿಗೆ ಅಮೂಲ್ಯವಾದ ಬೆಂಬಲವನ್ನು ನೀಡುತ್ತದೆ ಮತ್ತು ಭಾರತೀಯ ಉದ್ಯಮಗಳ ಸ್ಪರ್ಧಾತ್ಮಕತೆಯನ್ನು ಬಲಪಡಿಸುತ್ತದೆ.

ಈ ಕ್ಷಣವು ನಮ್ಮ ಪ್ರಜಾಪ್ರಭುತ್ವಗಳ ನಡುವಿನ ನಂಬಿಕೆಯನ್ನು ಮತ್ತು ವ್ಯಾಪಾರ, ತಂತ್ರಜ್ಞಾನ, ಹೂಡಿಕೆ ಮತ್ತು ನಾವೀನ್ಯತೆಯಿಂದ ನಡೆಸಲ್ಪಡುವ ಭವಿಷ್ಯ-ದೃಷ್ಟಿಯ ಪಾಲುದಾರಿಕೆಯನ್ನು ನಿರ್ಮಿಸುವ ನಮ್ಮ ಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ. ಪರಸ್ಪರ ಹಂಚಿಕೆಯ ಸಮೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುವುದನ್ನು ಭಾರತ ಮತ್ತು ಯು.ಕೆ. ದೇಶಗಳು ಜಂಟಿಯಾಗಿ ಮುಂದುವರಿಸುತ್ತವೆ.

#IndiaUKFTA

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Nepal praises India's efforts in times of crisis; calls PM Modi 'exceptionally generous'

Media Coverage

Nepal praises India's efforts in times of crisis; calls PM Modi 'exceptionally generous'
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಆಗಸ್ಟ್ 2026
August 29, 2026

New India, New Speed, New Stage: Missiles, Medals, Multilateralism under PM Modi