ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಎಲ್ಲ ಜನರಿಗೆ ಮನವಿ ಮಾಡಿದ್ದಾರೆ. ಮಾರ್ಚ್ 22ರ ಭಾನುವಾರದಂದು ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ ‘ಜನತಾ ಕರ್ಫ್ಯೂ’ ಆಚರಣೆಗೆ ಅವರು ದೇಶವಾಸಿಗಳಿಗೆ ಕರೆ ನೀಡಿದ್ದಾರೆ.
ಪ್ರಧಾನಮಂತ್ರಿ ಅವರು, ಮಾರ್ಚ್ 22ರಂದು ಜನರು ಮನೆಯಿಂದ ಹೊರ ಬರಬಾರದು ಎಂದು ಕರೆ ನೀಡಿದ್ದಾರೆ. ಅಲ್ಲದೆ ಅವರು ರಾಜ್ಯ ಸರ್ಕಾರಗಳು, ಸಂಘ ಸಂಸ್ಥೆಗಳು ಮತ್ತು ಯುವ ಜನಾಂಗ ನೇತೃತ ವಹಿಸಿರುವ ಎನ್ ಸಿಸಿ ಮತ್ತು ಎನ್ ಎಸ್ ಎಸ್ ಸಂಘಟನೆಗಳು, ನಾಗರಿಕ ಸಮಾಜ ಮತ್ತು ಇತರೆ ಸಂಸ್ಥೆಗಳು ‘ಜನತಾ ಕರ್ಫ್ಯೂ’ ಆಚರಣೆಗೆ ಜನರಿಗೆ ಉತ್ತೇಜನ ನೀಡಬೇಕು ಮತ್ತು ಮನೆಯಿಂದ ಹೊರಗೆ ಬಾರದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೊರೋನಾ ಸೋಂಕಿನ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಹಾಗೂ ‘ಜನತಾ ಕರ್ಫ್ಯೂ’ ಬಗ್ಗೆ ಪ್ರತಿ ದಿನ ಕನಿಷ್ಠ ಹತ್ತು ಮಂದಿಗೆ ಕರೆ ಮಾಡಿ ವಿಷಯ ತಿಳಿಸುವಂತೆ ಅವರು ಪ್ರತಿಯೊಬ್ಬರಿಗೂ ಕರೆ ನೀಡಿದರು. ಅಲ್ಲದೆ ‘ಜನತಾ ಕರ್ಫ್ಯೂ’ ಆಚರಣೆಯ ವಿಶೇಷ ಮನವಿ ಮಾಡುವಂತೆಯೂ ಪ್ರಧಾನಿ ಅವರು ಕೋರಿದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Fresh data centre capacity sees 59% annual growth in Jan-Jun: Report

Media Coverage

Fresh data centre capacity sees 59% annual growth in Jan-Jun: Report
NM on the go

Nm on the go

Always be the first to hear from the PM. Get the App Now!
...
Chief Minister of Andhra Pradesh meets the Prime Minister
July 22, 2026

The Chief Minister of Andhra Pradesh, Shri N. Chandrababu Naidu, today met Prime Minister Shri Narendra Modi.

In a post on X, the Prime Minister shared:

"Chief Minister of Andhra Pradesh, Shri @ncbn met Prime Minister @narendramodi.

@AndhraPradeshCM"