“Budget this year has come with a new confidence of development amidst the once-in-a-century calamity”
“This Budget will create new opportunities for the common people along with providing strength to the economy”
“Budget is full of opportunities for more Infrastructure, more Investment, more growth, and more jobs.”
“Welfare of the poor is one of the most important aspect of this budget”
“Budget’s provisions aim to make agriculture lucrative and full of new opportunities”

ಈ ಬಜೆಟ್, 100 ವರ್ಷಗಳಲ್ಲೇ ಭಯಾನಕವಾದಂತಹ ವಿಕೋಪದ ನಡುವೆಯೂ ಅಭಿವೃದ್ಧಿಯ ಬಗ್ಗೆ ಹೊಸ ವಿಶ್ವಾಸವನ್ನು ಮೂಡಿಸಿದೆ. ಆರ್ಥಿಕತೆಯನ್ನು ಬಲಗೊಳಿಸುವುದರ ಜೊತೆಗೆ ಈ ಬಜೆಟ್ ಜನಸಾಮಾನ್ಯರಿಗೆ ಅನೇಕ ಹೊಸ ಅವಕಾಶಗಳನ್ನು ರೂಪಿಸಲಿದೆ. ಮೂಲಸೌಕರ್ಯಗಳು, ಹೂಡಿಕೆ, ಬೆಳವಣಿಗೆ ಮತ್ತು ಉದ್ಯೋಗಗಳಿಗೆ ಪೂರ್ಣ ಹೊಸ ಸಾಧ್ಯತೆಗಳನ್ನು ಈ ಬಜೆಟ್ ಒಳಗೊಂಡಿದೆ. ಹೊಸ ವಲಯವನ್ನು ತೆರೆಯಲಾಗಿದೆ ಮತ್ತು ಅದು ಹಸಿರು ಉದ್ಯೋಗಗಳದ್ದು. ಈ ಬಜೆಟ್ ತಕ್ಷಣದ ಆವಶ್ಯಕತೆಗಳಿಗೆ ಗಮನ ಹರಿಸಿದೆ ಮತ್ತು ದೇಶದ ಯುವಜನತೆಯ ಭವ್ಯ ಭವಿತವ್ಯವನ್ನು ಖಾತ್ರಿಗೊಳಿಸಿದೆ.

ಕಳೆದ ಕೆಲವು ಗಂಟೆಗಳಿಂದ ಈ ಬಜೆಟನ್ನು ಪ್ರತಿಯೊಬ್ಬರೂ ಸ್ವಾಗತಿಸಿದ ಪರಿಯನ್ನು ಮತ್ತು ಜನಸಾಮಾನ್ಯರಿಂದ ಬಂದಿರುವ ಧನಾತ್ಮಕ ಪ್ರತಿಕ್ರಿಯೆಯನ್ನು ನಾನು ಗಮನಿಸಿದ್ದೇನೆ. ಇದು ಜನಸೇವೆ ಮಾಡುವ ನಮ್ಮ ಉತ್ಸಾಹವನ್ನು ಹಲವು ಪಟ್ಟು ಬಲಪಡಿಸಿದೆ.

ಜೀವನದ ಪ್ರತೀ ರಂಗದಲ್ಲಿಯೂ ನಾವಿನ್ಯತೆ ಕಾಲಿಟ್ಟಿರುವಂತೆ, ಅದು ತಂತ್ರಜ್ಞಾನ ಇರಲಿ, ರೈತರ ಡ್ರೋನ್ ಗಳು, ವಂದೇ ಭಾರತ್ ರೈಲುಗಳು, ಡಿಜಿಟಲ್ ಕರೆನ್ಸಿ, ಬ್ಯಾಂಕಿಂಗ್ ನಲ್ಲಿ ಡಿಜಿಟಲ್ ಘಟಕಗಳು,5-ಜಿ ಸೇವೆಗಳ ಲಭ್ಯತೆ, ರಾಷ್ಟ್ರೀಯ ಆರೋಗ್ಯಕ್ಕಾಗಿ ಡಿಜಿಟಲ್ ಪರಿಸರ ವ್ಯವಸ್ಥೆ ಇತ್ಯಾದಿಗಳಿರಲಿ, ಅದರಿಂದಾಗಿ ನಮ್ಮ ಯುವಜನತೆ, ಮಧ್ಯಮ ವರ್ಗ, ಬಡ ದಲಿತರು, ಹಿಂದುಳಿದವರು ಮತ್ತು ಎಲ್ಲಾ ವರ್ಗದವರಿಗೂ ಪ್ರಯೋಜನವಾಗಲಿದೆ.

ಈ ಬಜೆಟ್ಟಿನ ಬಹಳ ಮುಖ್ಯವಾದ ಅಂಶ ಎಂದರೆ, ಅದು ಬಡವರ ಕಲ್ಯಾಣಕ್ಕೆ ಸಂಬಂಧಪಟ್ಟದ್ದು. ಪ್ರತಿಯೊಬ್ಬ ಬಡವರೂ ಪಕ್ಕಾ ಮನೆ, ನಲ್ಲಿ ನೀರು, ಶೌಚಾಲಯ, ಅನಿಲ ಸಂಪರ್ಕ ಇತ್ಯಾದಿಗಳನ್ನು ಹೊಂದುವುದಕ್ಕೆ ಇದರಲ್ಲಿ ವಿಶೇಷ ಗಮನವನ್ನು ಕೊಡಲಾಗಿದೆ. ಅದೇ ವೇಳೆ, ಆಧುನಿಕ ಅಂತರ್ಜಾಲ ಸಂಪರ್ಕಕ್ಕೂ ಅಷ್ಟೇ ಆದ್ಯತೆಯನ್ನು ನೀಡಲಾಗಿದೆ.

ಬದುಕು ಸುಲಭಗೊಳಿಸಲು ಮತ್ತು ಭಾರತದ ಇಡೀ ಹಿಮಾಲಯ ಪ್ರದೇಶದ ಗಿರಿ ವಲಯಗಳಿಂದ ವಲಸೆಯನ್ನು ಕಡಿಮೆ ಮಾಡಲು ಹೊಸ ಘೋಷಣೆಯನ್ನು ಮಾಡಲಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ಹಾಗು ಈಶಾನ್ಯ ಪ್ರದೇಶಗಳಲ್ಲಿ “ಪರ್ವತಮಾಲಾ ಯೋಜನೆ”ಯನ್ನು ಆರಂಭಿಸಲಾಗುತ್ತಿದೆ.ಈ ಯೋಜನೆಯು ಪರ್ವತ ಪ್ರದೇಶಗಳಲ್ಲಿ ಸಾರಿಗೆ ಮತ್ತು ಸಂಪರ್ಕದ ಆಧುನಿಕ ವ್ಯವಸ್ಥೆಯನ್ನು ರೂಪಿಸಲಿದೆ. ಅದು ನಮ್ಮ ದೇಶದ ಗಡಿ ಗ್ರಾಮಗಳನ್ನೂ ಬಲಪಡಿಸಲಿದೆ. ದೇಶದ ಗಡಿ ಗ್ರಾಮಗಳು ಬಲಿಷ್ಟವಾಗಬೇಕಾಗಿದೆ ಮತ್ತು ಅದು ದೇಶದ ಭದ್ರತೆಗೂ ಅವಶ್ಯವಾಗಿದೆ.

ಭಾರತದ ಜನತೆಯ ನಂಬಿಕೆಯಾಗಿರುವ ಗಂಗಾ ಮಾತೆಯನ್ನು ಸ್ವಚ್ಛಗೊಳಿಸುವುದರ ಜೊತೆಗೆ ರೈತರ ಕಲ್ಯಾಣಕ್ಕೆ ಬಹಳ ಮುಖ್ಯವಾದ ಕ್ರಮವೊಂದನ್ನು ಕೈಗೊಳ್ಳಲಾಗಿದೆ. ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಗಂಗಾ ನದಿ ದಂಡೆಗಳಲ್ಲಿ ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲಾಗುವುದು. ಗಂಗಾ ಮಾತೆಯ ಶುದ್ದೀಕರಣ ಆಂದೋಲನ ಗಂಗಾ ಮಾತೆಯನ್ನು ರಾಸಾಯನಿಕ ತ್ಯಾಜ್ಯದಿಂದ ಮುಕ್ತಗೊಳಿಸುವುದರಲ್ಲಿ ಬಹಳ ದೂರಗಾಮೀ ಪರಿಣಾಮವನ್ನು ಉಂಟು ಮಾಡಲಿದೆ.

ಬಜೆಟ್ ನಲ್ಲಿ ಒದಗಿಸಿರುವ ಪ್ರಸ್ತಾವನೆಗಳು, ಅವಕಾಶಗಳು ಕೃಷಿಯನ್ನು ಲಾಭದಾಯಕ ಮಾಡುವ ಮತ್ತು ಅಲ್ಲಿ ಹೊಸ ಅವಕಾಶಗಳನ್ನು ಖಾತ್ರಿಪಡಿಸಿವೆ. ಹೊಸ ಕೃಷಿ ನವೋದ್ಯಮಗಳನ್ನು ಉತ್ತೇಜಿಸಲು ವಿಶೇಷ ನಿಧಿ ಇರಲಿ, ಅಥವಾ ಆಹಾರ ಸಂಸ್ಕ್ರರಣಾ ಉದ್ಯಮಕ್ಕೆ ಹೊಸ ಪ್ಯಾಕೇಜ್ ಇರಲಿ, ಬಜೆಟ್ ಮಂಜೂರಾತಿಗಳು ರೈತರ ಆದಾಯ ಹೆಚ್ಚಳದಲ್ಲಿ ಬಹಳ ದೂರವ್ಯಾಪ್ತಿ ಪರಿಣಾಮ ಬೀರಬಲ್ಲಂತಹವು. ಎಂ.ಎಸ್.ಪಿ. ಖರೀದಿ ಮೂಲಕ 2.25 ಲಕ್ಷ ಕೋ.ರೂ.ಗಳಿಗೂ ಅಧಿಕ ಮೊತ್ತವನ್ನು ನೇರವಾಗಿ ರೈತರ ಖಾತೆಗಳಿಗೆ ವರ್ಗಾಯಿಸಲಾಗುತ್ತಿದೆ.

ಎಂ.ಎಸ್.ಎಂ.ಇ.ಗಳನ್ನು ರಕ್ಷಿಸಲು, ಅವುಗಳಿಗೆ ಸಹಾಯ ಮಾಡಲು ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅಂದರೆ, ಕೊರೊನಾ ಅವಧಿಯಲ್ಲಿ ನಮ್ಮ ಸಣ್ಣ ಕೈಗಾರಿಕೆಗಳಿಗೆ ಸಹಾಯ ಮಾಡುವುದಕ್ಕಾಗಿ. ಸಾಲ ಖಾತ್ರಿ/ಭದ್ರತೆಯಲ್ಲಿ ದಾಖಲೆ ಹೆಚ್ಚಳದ ಜೊತೆ, ಈ ಬಜೆಟಿನಲ್ಲಿ ಇತರ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ರಕ್ಷಣಾ ಬಂಡವಾಳ ಬಜೆಟಿನಲ್ಲಿ 68 ಪ್ರತಿಶತದಷ್ಟನ್ನು ದೇಶೀಯ ಕೈಗಾರಿಕೆಗಳಿಗೆ ಮೀಸಲಾಗಿಟ್ಟಿರುವ ನಿರ್ಧಾರದಿಂದ ಭಾರತದ ಎಂ.ಎಸ್.ಎಂ.ಇ. ವಲಯಕ್ಕೆ ಬಹಳ ಸಹಾಯವಾಗಲಿದೆ. ಸ್ವಾವಲಂಬನೆಯ ನಿಟ್ಟಿನಲ್ಲಿ ಇದೊಂದು ದೊಡ್ಡ ಹೆಜ್ಜೆ. 7.50 ಲಕ್ಷ ಕೋ.ರೂ.ಗಳವರೆಗಿನ ಸಾರ್ವಜನಿಕ ಹೂಡಿಕೆ ಆರ್ಥಿಕತೆಗೆ ಹೊಸ ವೇಗವನ್ನು ಕೊಡಲಿದೆ ಮತ್ತು ಸಣ್ಣ ಹಾಗು ಇತರ ವಲಯಗಳ ಕೈಗಾರಿಕೆಗಳಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ.

ನಾನು ಹಣಕಾಸು ಸಚಿವರಾದ ನಿರ್ಮಲಾ ಜೀ ಮತ್ತು ಅವರ ಇಡೀ ತಂಡವನ್ನು ಈ ಜನ ಸ್ನೇಹಿ ಮತ್ತು ಪ್ರಗತಿಪರ ಬಜೆಟಿಗಾಗಿ ಅಭಿನಂದಿಸುತ್ತೇನೆ.

ಭಾರತೀಯ ಜನತಾ ಪಾರ್ಟಿ ನಾಳೆ ಬೆಳಗ್ಗೆ 11 ಗಂಟೆಗೆ “ಬಜೆಟ್ ಮತ್ತು ಆತ್ಮನಿರ್ಭರ ಭಾರತ್” ಬಗ್ಗೆ ಮಾತನಾಡಲು ನನಗೆ ಆಹ್ವಾನ ನೀಡಿದೆ. ಈ ವಿಷಯದ ಬಗ್ಗೆ ನಾನು ನಾಳೆ ವಿವರವಾಗಿ ಮಾತನಾಡಲಿದ್ದೇನೆ. ಇದು ಇಂದಿಗೆ ಸಾಕು, ನಿಮಗೆಲ್ಲ ಬಹಳ ಧನ್ಯವಾದಗಳು!

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Strengthening India’s path to power leadership: How India is energising a new growth story - By Shri Manohar Lal, Union Minister of Power

Media Coverage

Strengthening India’s path to power leadership: How India is energising a new growth story - By Shri Manohar Lal, Union Minister of Power
NM on the go

Nm on the go

Always be the first to hear from the PM. Get the App Now!
...
Governor of Madhya Pradesh meets Prime Minister
March 18, 2026

Governor of Madhya Pradesh, Shri Mangubhai Patel met Prime Minister, Shri Narendra Modi in New Delhi today.

The Prime Minister’s Office posted on X;

“Governor of Madhya Pradesh, Shri Mangubhai Patel met Prime Minister @narendramodi.

@GovernorMP”