ಜೀನೋಮ್ಇಂಡಿಯಾ ಯೋಜನೆಯು ದೇಶದ ಜೈವಿಕ ತಂತ್ರಜ್ಞಾನ ವಲಯದಲ್ಲಿ ಒಂದು ನಿರ್ಣಾಯಕ ಕ್ಷಣವಾಗಿದೆ, ಈ ಯೋಜನೆಯೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ ನನ್ನ ಶುಭಾಶಯಗಳು: ಪ್ರಧಾನಮಂತ್ರಿ
21ನೇ ಶತಮಾನದಲ್ಲಿ ಜೈವಿಕ ತಂತ್ರಜ್ಞಾನ ಮತ್ತು ಜೀವರಾಶಿಗಳ ಸಂಯೋಜನೆಯು ಜೈವಿಕ ಆರ್ಥಿಕತೆಯಾಗಿ ವಿಕಸಿತ ಭಾರತಕ್ಕೆ ಬುನಾದಿ ಹಾಕುವ ಪ್ರಮುಖ ಭಾಗವಾಗಿದೆ: ಪ್ರಧಾನಮಂತ್ರಿ
ಜೈವಿಕ ಆರ್ಥಿಕತೆಯು ಸುಸ್ಥಿರ ಅಭಿವೃದ್ಧಿ ಮತ್ತು ನಾವೀನ್ಯತೆಯನ್ನು ವೇಗಗೊಳಿಸುತ್ತದೆ: ಪ್ರಧಾನಮಂತ್ರಿ
ಇಂದು ಭಾರತವು ವಿಶ್ವದ ಪ್ರಮುಖ ಔಷಧ ತಾಣವಾಗಿ ಸೃಷ್ಟಿಸಿರುವ ಗುರುತಿಗೆ ದೇಶವು ಹೊಸ ಆಯಾಮ ನೀಡುತ್ತಿದೆ: ಪ್ರಧಾನಮಂತ್ರಿ
ಜಾಗತಿಕ ಸಮಸ್ಯೆಗಳ ಪರಿಹಾರಗಳಿಗಾಗಿ ಜಗತ್ತು ಇಂದು ನಮ್ಮ ಕಡೆಗೆ ನೋಡುತ್ತಿದೆ, ಇದು ನಮ್ಮ ಮುಂಬರುವ ಪೀಳಿಗೆಗೆ ಜವಾಬ್ದಾರಿ ಮತ್ತು ಅವಕಾಶ ಎರಡೂ ಆಗಿದೆ: ಪ್ರಧಾನಮಂತ್ರಿ
ನಮ್ಮ ಜನಪರ ಆಡಳಿತ, ನಮ್ಮ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವು ಜಗತ್ತಿಗೆ ಹೊಸ ಮಾದರಿ ನೀಡಿದಂತೆಯೇ, ಜೀನೋಮ್ಇಂಡಿಯಾ ಯೋಜನೆಯು ಜೆನೆಟಿಕ್ ಸಂಶೋಧನಾ ಕ್ಷೇತ್ರದಲ್ಲಿ ಭಾರತದ ವರ್ಚಸ್ಸನ್ನು ಮತ್ತಷ್ಟು ಬಲಪಡಿಸುತ್ತದೆ: ಪ್ರಧಾನಮಂತ್ರಿ

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್, ದೇಶದ ವಿವಿಧೆಡೆಯಿಂದ ಇಲ್ಲಿಗೆ ಬಂದಿರುವ ಎಲ್ಲಾ ವಿಜ್ಞಾನಿಗಳೆ, ಇಲ್ಲಿರುವ ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಇಂದು ಭಾರತವು ಸಂಶೋಧನಾ ಜಗತ್ತಿನಲ್ಲಿ ಐತಿಹಾಸಿಕ ಹೆಜ್ಜೆ ಇಟ್ಟಿದೆ. 5 ವರ್ಷಗಳ ಹಿಂದೆ, ಜೀನೋಮ್ಇಂಡಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು. ಕೋವಿಡ್ ನಿಂದ ಉಂಟಾದ ಸವಾಲುಗಳ ಹೊರತಾಗಿಯೂ, ನಮ್ಮ ವಿಜ್ಞಾನಿಗಳು ಈ ಯೋಜನೆಯನ್ನು ಪೂರ್ಣಗೊಳಿಸಲು ಶ್ರದ್ಧೆಯಿಂದ ಕೆಲಸ ಮಾಡಿದ್ದಾರೆ. ಐಐಎಸ್ಸಿ, ಐಐಟಿಗಳು, ಸಿಎಸ್ಐಆರ್ ಮತ್ತು ಬ್ರಿಕ್ ನಂತಹ ದೇಶದ 20ಕ್ಕೂ ಹೆಚ್ಚು ಪ್ರಮುಖ ಸಂಶೋಧನಾ ಸಂಸ್ಥೆಗಳು ಈ ಸಂಶೋಧನೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂಬುದನ್ನು ತಿಳಿದು ನನಗೆ ಅಪಾರ ಸಂತೋಷವಾಗಿದೆ. 10,000 ಭಾರತೀಯರ ಜಿನೋಮ್ ಅನುಕ್ರಮ ಕಲೆಹಾಕಿರುವ ಈ ಯೋಜನೆಯ ದತ್ತಾಂಶವು, ಈಗ ಭಾರತೀಯ ಜೈವಿಕ ದತ್ತಾಂಶ ಕೇಂದ್ರದಲ್ಲಿ ಲಭ್ಯವಿದೆ. ಈ ಯೋಜನೆಯು ಜೈವಿಕ ತಂತ್ರಜ್ಞಾನ ಸಂಶೋಧನಾ ಕ್ಷೇತ್ರದಲ್ಲಿ ಒಂದು ಮೈಲಿಗಲ್ಲು ಎಂದು ಸಾಬೀತುಪಡಿಸುತ್ತದೆ ಎಂಬ ವಿಶ್ವಾಸ ನನಗಿದೆ. ಈ ಯೋಜನೆಯೊಂದಿಗೆ ಸಂಬಂಧಿಸಿದ ಎಲ್ಲಾ ಸಹೋದ್ಯೋಗಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಸ್ನೇಹಿತರೆ,

ಜಿನೋಮ್ಇಂಡಿಯಾ ಯೋಜನೆಯು ಭಾರತದ ಜೈವಿಕ ತಂತ್ರಜ್ಞಾನ ಕ್ರಾಂತಿಯಲ್ಲಿ ಒಂದು ಪ್ರಮುಖ ಮೈಲಿಗಲ್ಲು. ಈ ಯೋಜನೆಯ ಸಹಾಯದಿಂದ, ನಾವು ದೇಶದಲ್ಲಿ ವೈವಿಧ್ಯಮಯ ಜೆನೆಟಿಕ್ ಸಂಪನ್ಮೂಲವನ್ನು ಯಶಸ್ವಿಯಾಗಿ ರೂಪಿಸಿದ್ದೇವೆ ಎಂಬುದು ನನಗೆ ತಿಳಿದುಬಂದಿದೆ. ಈ ಯೋಜನೆಯಡಿ, ದೇಶಾದ್ಯಂತ ವಿವಿಧ 10,000 ವ್ಯಕ್ತಿಗಳ ಜಿನೋಮ್ ಅನುಕ್ರಮವನ್ನು ಪೂರ್ಣಗೊಳಿಸಲಾಗಿದೆ. ಈಗ, ಈ ಡೇಟಾವನ್ನು ನಮ್ಮ ವಿಜ್ಞಾನಿಗಳು ಮತ್ತು ಸಂಶೋಧಕರಿಗೆ ಲಭ್ಯವಾಗುವಂತೆ ಮಾಡಲಾಗುವುದು. ಇದು ನಮ್ಮ ವಿದ್ವಾಂಸರು ಮತ್ತು ವಿಜ್ಞಾನಿಗಳಿಗೆ ಭಾರತದ ಜೆನೆಟಿಕ್ ವಲಯವನ್ನು ಅರ್ಥ ಮಾಡಿಕೊಳ್ಳುವಲ್ಲಿ ಹೆಚ್ಚು ಸಹಾಯ ಮಾಡುತ್ತದೆ. ಈ ಮಾಹಿತಿಯು ದೇಶದ ನೀತಿ ನಿರೂಪಣೆ ಮತ್ತು ಯೋಜನೆಯನ್ನು ಸಹ ಸುಲಭಗೊಳಿಸುತ್ತದೆ.

ನೀವೆಲ್ಲರೂ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಪರಿಣಿತರು, ಪ್ರತಿಷ್ಠಿತ ವಿಜ್ಞಾನಿಗಳಾಗಿದ್ದೀರಿ. ಭಾರತದ ವಿಶಾಲತೆ ಮತ್ತು ವೈವಿಧ್ಯತೆಯು ಕೇವಲ ಆಹಾರ, ಭಾಷೆ ಮತ್ತು ಭೌಗೋಳಿಕತೆಗೆ ಸೀಮಿತವಾಗಿಲ್ಲ ಎಂಬುದು ನಿಮಗೆ ತಿಳಿದಿದೆ. ಭಾರತದಲ್ಲಿ ವಾಸಿಸುವ ಜನರ ಜೀನ್‌ಗಳಲ್ಲಿಯೂ ಗಮನಾರ್ಹ ವೈವಿಧ್ಯತೆಯಿದೆ. ಸ್ವಾಭಾವಿಕವಾಗಿ, ರೋಗಗಳ ಸ್ವರೂಪವು ವೈವಿಧ್ಯತೆಯಿಂದ ತುಂಬಿದೆ. ಆದ್ದರಿಂದ, ಯಾವ ರೀತಿಯ ಔಷಧವು ಯಾವ ವ್ಯಕ್ತಿಗೆ ಪ್ರಯೋಜನ ನೀಡುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳುವುದು ಬಹಳ ಮುಖ್ಯ. ಇದಕ್ಕಾಗಿ, ದೇಶದ ನಾಗರಿಕರ ಜೆನೆಟಿಕ್ ಗುರುತು ತಿಳಿದುಕೊಳ್ಳುವುದು ಅತ್ಯಗತ್ಯ.

ಉದಾಹರಣೆಗೆ, ಕುಡಗೋಲು ಕೋಶ ರಕ್ತಹೀನತೆ ನಮ್ಮ ಬುಡಕಟ್ಟು ಸಮಾಜದಲ್ಲಿ ಒಂದು ಪ್ರಮುಖ ಅನಾರೋಗ್ಯ ಬಿಕ್ಕಟ್ಟಾಗಿದೆ. ಇದನ್ನು ಪರಿಹರಿಸಲು, ನಾವು ಒಂದು ರಾಷ್ಟ್ರೀಯ ಧ್ಯೇಯವನ್ನು ಪ್ರಾರಂಭಿಸಿದ್ದೇವೆ. ಆದಾಗ್ಯೂ, ಇಲ್ಲಿಯೂ ಸಹ ಹಲವು ಸವಾಲುಗಳಿವೆ. ನಮ್ಮ ಬುಡಕಟ್ಟು ಸಮಾಜದ ಒಂದು ಪ್ರದೇಶದಲ್ಲಿ ಕುಡಗೋಲು ಕಣ ರಕ್ತಹೀನತೆಯ ಸಮಸ್ಯೆ ಮತ್ತೊಂದು ಪ್ರದೇಶದಲ್ಲಿ ಇಲ್ಲದಿರಬಹುದು ಮತ್ತು ಅಲ್ಲಿ ಬೇರೆಯೇ ಸಮಸ್ಯೆ ಇರಬಹುದು. ನಾವು ಸಂಪೂರ್ಣ ಆನುವಂಶಿಕ ಅಧ್ಯಯನ ಮಾಡಿದಾಗ ಮಾತ್ರ ಈ ಎಲ್ಲಾ ವಿವರಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಇದು ಭಾರತೀಯ ಜನರ ವಿಶಿಷ್ಟ ಜೀನೋಮಿಕ್ ಮಾದರಿಗಳನ್ನು ಅರ್ಥ ಮಾಡಿಕೊಳ್ಳಲು ನಮಗೆ ಸಹಾಯ ಮಾಡುತ್ತದೆ. ಆಗ ಮಾತ್ರ ನಾವು ನಿರ್ದಿಷ್ಟ ಗುಂಪಿನ ನಿರ್ದಿಷ್ಟ ಸಮಸ್ಯೆಗಳಿಗೆ ನಿರ್ದಿಷ್ಟ ಪರಿಹಾರಗಳನ್ನು ಅಥವಾ ಪರಿಣಾಮಕಾರಿ ಔಷಧಿಗಳನ್ನು ಸಿದ್ಧಪಡಿಸಬಹುದು.

ನಾನು ಕುಡಗೋಲು ಕಣ ರಕ್ತಹೀನತೆಯನ್ನು ಉದಾಹರಣೆಯಾಗಿ ಉಲ್ಲೇಖಿಸಿದ್ದೇನೆ, ಆದರೆ ಇದು ಅದಕ್ಕೆ ಸೀಮಿತವಾಗಿಲ್ಲ. ನಾನು ಅದನ್ನು ಕೇವಲ ವಿವರಣೆಯಾಗಿ ಬಳಸಿದ್ದೇನೆ. ಭಾರತವು ಇನ್ನೂ ಹೆಚ್ಚಿನ ಆನುವಂಶಿಕ ಕಾಯಿಲೆಗಳ ಬಗ್ಗೆ ತಿಳಿದಿಲ್ಲ, ಅಂದರೆ, ಒಂದು ಪೀಳಿಗೆಯಿಂದ ಮುಂದಿನ ಪೀಳಿಗೆಗೆ ವರ್ಗಾವಣೆಯಾಗುವ ರೋಗಗಳು. ಜೀನೋಮ್ಇಂಡಿಯಾ ಯೋಜನೆಯು ಭಾರತದಲ್ಲಿ ಅಂತಹ ಎಲ್ಲಾ ಕಾಯಿಲೆಗಳಿಗೆ ಪರಿಣಾಮಕಾರಿ ಚಿಕಿತ್ಸೆಗಳ ಅಭಿವೃದ್ಧಿಯಲ್ಲಿ ಸಹಾಯ ಮಾಡುತ್ತದೆ.

ಸ್ನೇಹಿತರೆ,

21ನೇ ಶತಮಾನದಲ್ಲಿ ಜೈವಿಕ ತಂತ್ರಜ್ಞಾನ ಮತ್ತು ಜೀವರಾಶಿಯ ಸಂಯೋಜನೆಯು ಭಾರತದ ಭದ್ರ ಬುನಾದಿಗೆ ನಿರ್ಣಾಯಕ ಭಾಗವಾಗಿದ್ದು, ಅದು ತನ್ನ ಜೈವಿಕ ಆರ್ಥಿಕತೆಯನ್ನು ಅಭಿವೃದ್ಧಿಪಡಿಸುತ್ತಿದೆ. ಜೈವಿಕ ಆರ್ಥಿಕತೆಯ ಗುರಿ ನೈಸರ್ಗಿಕ ಸಂಪನ್ಮೂಲಗಳ ಸರಿಯಾದ ಬಳಕೆಯನ್ನು ಮಾಡುವುದು, ಜೈವಿಕ ಆಧಾರಿತ ಉತ್ಪನ್ನಗಳು ಮತ್ತು ಸೇವೆಗಳನ್ನು ಉತ್ತೇಜಿಸುವುದು ಮತ್ತು ಈ ವಲಯದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದಾಗಿದೆ. ಜೈವಿಕ ಆರ್ಥಿಕತೆಯು ಸುಸ್ಥಿರ ಅಭಿವೃದ್ಧಿಯನ್ನು ನಡೆಸುತ್ತದೆ ಮತ್ತು ನಾವೀನ್ಯತೆಗೆ ಅವಕಾಶಗಳನ್ನು ನೀಡುತ್ತದೆ. ಕಳೆದ 10 ವರ್ಷಗಳಲ್ಲಿ, ದೇಶದ ಜೈವಿಕ ಆರ್ಥಿಕತೆಯು ವೇಗವಾಗಿ ಮುಂದುವರೆದಿದೆ ಎಂಬ ವಿಷಯ ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. 2014ರಲ್ಲಿ ಇದ್ದ 10 ಶತಕೋಟಿ ಡಾಲರ್ ಮೌಲ್ಯದ ಜೈವಿಕ ಆರ್ಥಿಕತೆಯು ಈಗ 150 ಶತಕೋಟಿ ಡಾಲರ್‌ಗಿಂಚ ಹೆಚ್ಚಿಗೆ ಬೆಳೆದಿದೆ. ಭಾರತವು ತನ್ನ ಜೈವಿಕ ಆರ್ಥಿಕತೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವತ್ತ ಕೆಲಸ ಮಾಡುತ್ತಿದೆ. ಇತ್ತೀಚೆಗೆ ಭಾರತವು ಬಯೋ ಇ3 ನೀತಿಯನ್ನು ಜಾರಿ ಮಾಡಿದೆ. ಐಟಿ ಕ್ರಾಂತಿಯಂತೆಯೇ ಜಾಗತಿಕ ಜೈವಿಕ ತಂತ್ರಜ್ಞಾನ ವಲಯದಲ್ಲಿ ಭಾರತವು ಸರದಾರನಾಗಿ ಹೊರಹೊಮ್ಮುವುದು ಈ ನೀತಿಯ ದೃಷ್ಟಿಕೋನವಾಗಿದೆ. ವಿಜ್ಞಾನಿಗಳಾದ ನೀವೆಲ್ಲರೂ ಇದರಲ್ಲಿ ಮಹತ್ವದ ಪಾತ್ರ ವಹಿಸುತ್ತೀರಿ ಮತ್ತು ಈ ಪ್ರಯತ್ನದಲ್ಲಿ ನಿಮ್ಮೆಲ್ಲರಿಗೂ ನಾನು ಶುಭಾಶಯಗಳನ್ನು ಕೋರುತ್ತೇನೆ.

ಸ್ನೇಹಿತರೆ,

ವಿಶ್ವದ ಪ್ರಮುಖ ಔಷಧೀಯ ತಾಣವಾಗಿ, ಭಾರತ ಈಗ ಗುರುತಿಸಿಕೊಂಡು, ಹೊಸ ಆಯಾಮ ನೀಡುತ್ತಿದೆ. ಕಳೆದ ದಶಕದಲ್ಲಿ, ಭಾರತವು ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಹಲವಾರು ಕ್ರಾಂತಿಕಾರಿ ಕ್ರಮಗಳನ್ನು ತೆಗೆದುಕೊಂಡಿದೆ. ಲಕ್ಷಾಂತರ ಭಾರತೀಯರಿಗೆ ಉಚಿತ ಚಿಕಿತ್ಸೆ ಒದಗಿಸುವುದು, ಜನೌಷಧಿ ಕೇಂದ್ರಗಳಲ್ಲಿ 80% ರಿಯಾಯಿತಿಯಲ್ಲಿ ಔಷಧಿಗಳನ್ನು ನೀಡುವುದು ಮತ್ತು ಆಧುನಿಕ ವೈದ್ಯಕೀಯ ಮೂಲಸೌಕರ್ಯಗಳನ್ನು ನಿರ್ಮಿಸಿದೆ. ಇವು ಕಳೆದ 10 ವರ್ಷಗಳ ಗಮನಾರ್ಹ ಸಾಧನೆಗಳಾಗಿವೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ಭಾರತವು ನಮ್ಮ ಔಷಧ ಪರಿಸರ ವ್ಯವಸ್ಥೆಯ ನೈಜ ಬಲವನ್ನು ಸಾಬೀತುಪಡಿಸಿತು. ಭಾರತದೊಳಗೆ ಔಷಧ ಉತ್ಪಾದನೆಗೆ ಬಲವಾದ ಪೂರೈಕೆ ಮತ್ತು ಮೌಲ್ಯ ಸರಪಳಿ ಸ್ಥಾಪಿಸುವುದು ನಮ್ಮ ಗುರಿಯಾಗಿದೆ. ಜಿನೋಮ್‌ಇಂಡಿಯಾ ಯೋಜನೆಯು ಈಗ ಈ ದಿಕ್ಕಿನಲ್ಲಿ ಭಾರತದ ಪ್ರಯತ್ನಗಳಿಗೆ ಹೊಸ ಆವೇಗ ನೀಡುತ್ತದೆ, ಅವುಗಳಿಗೆ ಹೊಸ ಶಕ್ತಿ ತುಂಬುತ್ತದೆ.

ಸ್ನೇಹಿತರೆ,

ಇಂದು, ಜಾಗತಿಕ ಸಮಸ್ಯೆಗಳ ಪರಿಹಾರಕ್ಕಾಗಿ ಇಡೀ ಜಗತ್ತು ಭಾರತದತ್ತ ನೋಡುತ್ತಿದೆ. ನಮ್ಮ ಭವಿಷ್ಯದ ಪೀಳಿಗೆಗೆ, ಇದು ಒಂದು ಜವಾಬ್ದಾರಿ ಮತ್ತು ಅವಕಾಶ ಎರಡೂ ಆಗಿದೆ. ಅದಕ್ಕಾಗಿಯೇ ಇಂದು ಭಾರತದಲ್ಲಿ ಬಹು ದೊಡ್ಡ ಸಂಶೋಧನಾ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕಳೆದ 10 ವರ್ಷಗಳಲ್ಲಿ, ಶಿಕ್ಷಣದ ಪ್ರತಿಯೊಂದು ಹಂತದಲ್ಲೂ ಸಂಶೋಧನೆ ಮತ್ತು ನಾವೀನ್ಯತೆ ಮೇಲೆ ಅಗಾಧ ಒತ್ತು ನೀಡಲಾಗಿದೆ. ಇಂದು, 10,000ಕ್ಕೂ ಹೆಚ್ಚು ಅಟಲ್ ಟಿಂಕರಿಂಗ್ ಲ್ಯಾಬ್‌ಗಳಲ್ಲಿ, ನಮ್ಮ ವಿದ್ಯಾರ್ಥಿಗಳು ಪ್ರತಿದಿನ ಹೊಸ ಪ್ರಯೋಗಗಳನ್ನು ನಡೆಸುತ್ತಿದ್ದಾರೆ. ಯುವಜನರ ನವೀನ ವಿಚಾರಗಳನ್ನು ಉತ್ತೇಜಿಸಲು, ದೇಶಾದ್ಯಂತ ನೂರಾರು ಅಟಲ್ ಇನ್ ಕ್ಯುಬೇಷನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪಿಎಚ್‌ಡಿ ಅಧ್ಯಯನ ಸಮಯದಲ್ಲಿ ಸಂಶೋಧನೆ ಬೆಂಬಲಿಸಲು ಪ್ರಧಾನಮಂತ್ರಿ ಸಂಶೋಧನಾ ಫೆಲೋಶಿಪ್ ಯೋಜನೆಯನ್ನು ಸಹ ನಡೆಸಲಾಗುತ್ತಿದೆ. ಬಹು-ಶಿಸ್ತೀಯ ಮತ್ತು ಅಂತಾರಾಷ್ಟ್ರೀಯ ಸಂಶೋಧನೆ ಉತ್ತೇಜಿಸಲು, ರಾಷ್ಟ್ರೀಯ ಸಂಶೋಧನಾ ನಿಧಿ ಸ್ಥಾಪಿಸಲಾಗಿದೆ.  ಅನುಸಂಧಾನ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಮೂಲಕ, ವಿಜ್ಞಾನ, ಎಂಜಿನಿಯರಿಂಗ್, ಪರಿಸರ ಮತ್ತು ಆರೋಗ್ಯದಂತಹ ಪ್ರತಿಯೊಂದು ವಲಯದಲ್ಲಿ ಹೊಸ ಪ್ರಗತಿಯನ್ನು ನಿರೀಕ್ಷಿಸಲಾಗಿದೆ. ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಹೆಚ್ಚಿನ ಸಂಶೋಧನೆ ಮತ್ತು ಹೂಡಿಕೆಗಾಗಿ, ಸರ್ಕಾರವು 1 ಲಕ್ಷ ಕೋಟಿ ರೂಪಾಯಿ ಮೊತ್ತದ ನಿಧಿ ಸ್ಥಾಪಿಸಲು ನಿರ್ಧರಿಸಿದೆ. ಇದು ಜೈವಿಕ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೂ ಸಹ ಕೊಡುಗೆ ನೀಡುತ್ತದೆ, ಜತೆಗೆ ಯುವ ವಿಜ್ಞಾನಿಗಳಿಗೆ ಹೆಚ್ಚಿನ ಸಹಾಯ ಮಾಡುತ್ತದೆ.

ಸ್ನೇಹಿತರೆ,

ಇತ್ತೀಚೆಗೆ, ಸರ್ಕಾರವು ಒಂದು ರಾಷ್ಟ್ರ, ಒಂದು ಚಂದಾದಾರಿಕೆಗೆ ಸಂಬಂಧಿಸಿದಂತೆ ಮತ್ತೊಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಭಾರತದ ವಿದ್ಯಾರ್ಥಿಗಳು ಮತ್ತು ಸಂಶೋಧಕರು ಯಾವುದೇ ವೆಚ್ಚ ಭರಿಸದೆ ವಿಶ್ವಪ್ರಸಿದ್ಧ ನಿಯತಕಾಲಿಕೆಗಳನ್ನು ಸುಲಭವಾಗಿ ಪ್ರವೇಶಿಸಬಹುದು ಎಂದು ಸರ್ಕಾರ ಖಚಿತಪಡಿಸುತ್ತದೆ. ಈ ಪ್ರಯತ್ನಗಳು ಭಾರತವನ್ನು 21ನೇ ಶತಮಾನದ ಜ್ಞಾನ ಮತ್ತು ನಾವೀನ್ಯತೆ ಕೇಂದ್ರವನ್ನಾಗಿ ಮಾಡಲು ಹೆಚ್ಚಿನ ಕೊಡುಗೆ ನೀಡುತ್ತವೆ.

ಸ್ನೇಹಿತರೆ,

ನಮ್ಮ ಜನಪರ ಆಡಳಿತ ಮತ್ತು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವು ಜಗತ್ತಿಗೆ ಹೊಸ ಮಾದರಿ ನೀಡಿದಂತೆಯೇ, ಜಿನೋಮ್‌ಇಂಡಿಯಾ ಯೋಜನೆಯು ಆನುವಂಶಿಕ ಸಂಶೋಧನಾ ಕ್ಷೇತ್ರದಲ್ಲಿ ಭಾರತದ ವರ್ಚಸ್ಸನ್ನು ಬಲಪಡಿಸುತ್ತದೆ ಎಂಬ ವಿಶ್ವಾಸ ನನಗಿದೆ. ಮತ್ತೊಮ್ಮೆ, ಜಿನೋಮ್‌ಇಂಡಿಯಾ ಯೋಜನೆಯ ಯಶಸ್ಸಿಗೆ ನಾನು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಧನ್ಯವಾದಗಳು, ನಮಸ್ಕಾರ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Jo khelega woh khilega, always cheer for Bharat: PM Modi meets India's CWG medallists

Media Coverage

Jo khelega woh khilega, always cheer for Bharat: PM Modi meets India's CWG medallists
NM on the go

Nm on the go

Always be the first to hear from the PM. Get the App Now!
...
You have not just increased the number of medals, you have prepared an entire generation: PM Modi to CWG Champions
August 10, 2026

प्रधानमंत्री – मेरे यहां, मुझे यहां लगभग 12-13 साल हो गए इसी मकान में, अगर मैंने regularly और हर बार किसी को रिसिव किया है, किसी को मैं मिला हूं, तो खिलाड़ी हैं। पिछले 10-12 साल हो गए, आप लोगों के पुरुषार्थ के कारण, भारत को लगातार विजय दिलाने के आपके प्रयासों के कारण और उत्तरोत्तर सफलता में नई ऊंचाईयां पार करने की परंपरा के कारण, जो काम शायद हम स्कूलों में जाकर कहें कि नहीं नहीं भई खेलना चाहिए, ये करना चाहिए, वो काम स्कूलों में जाकर के हम कर सकते थे, उससे ज्यादा आपका मेडल उनको inspire करता है।

प्रधानमंत्री – तुमने मुझे वादा किया था पिछली बार कि तुम्हारी दोनों बेटियां खिलाड़ी बन जाएंगी?

खिलाड़ी - हाँ जी अभी वे उमर की छोटी हैं, अगले कॉमनवेल्थ में एक घर में तीन मेडल लाकर दिखाएंगी।

प्रधानमंत्री – पक्का।

खिलाड़ी – हाँ जी।

खिलाड़ी – जब मैं दौड़ रहा था, जब मेरा इवेंट था 29 को, तो उस दिन गुरुपूर्णिमा थी, तो उस दिन मेरे गुरू को मैंने एक गिफ्ट दे दिया।

प्रधानमंत्री – बड़ी शान बढ़ाई आपने। इतनी आंसू टपक रहे थे, मुझे लगता है कि आंसू के हर बूंद से जैसे गोल्ड मेडल टपक रहा है।

खिलाड़ी – मैं बहुत ज्यादा खुशी थी, इमोशनल भी थे उसी दिन, खुशी ज्यादा था और मैं इसलिए रोई थी कि मेरा पेरिस आलंपिक में मेरा 1 Kg में मेडल रह गई थी और एक प्लेयर्स की लाइफ में क्या क्या हमको फेस करना पड़ता है। तो ये 4 साल के अंदर में कितना क्या क्या कुछ मैंने फेस किया था, हर टाइम injury ही चल रहे थे और family problem, वो सब हो रहा था। तो बहुत मुश्किल से मैं ये 4 साल फेस किया था। तो वो सब जब पोडियम में जब मैं खड़ी थी सर और हमारी जो फ्लैग ऊपर जाते हैं और हमारे नेशनल एंथम जब बजते हैं तो सर हम रुक नहीं सकते सर, अपना आप आंसू निकलते हैं।

प्रधानमंत्री – बहुत बहुत बढ़िया

प्रधानमंत्री – आपके इस अचीवमेंट को सिर्फ आपका अचीवमेंट मानता हूं, ऐसा नहीं है, ये आपका विजय आने वाली पीढ़ियों के लिए बहुत बड़ी प्रेरणा बन जाता है।

खिलाड़ी – सब डर रहे थे हमसे कि इंडिया के साथ फाइट आ गई, अब तो हम पहली फाइट ही हार जायेंगे, हमारा मेडल भी नहीं आयेगा।

प्रधानमंत्री – यानी मान के चलते हैं।

खिलाड़ी – हाँ सर।

प्रधानमंत्री – क्या हुआ, वो restaurant वालों से झगड़ा कर रही थी?

खिलाड़ी – हम लोगों का जो इतना अच्छा परफॉर्मेंस था, लास्ट डे था और सब जीत के गए थे और पूरा इंडिया के लोग थे। तो थोड़ा सा मुझे बुरा लग रहा। तो मैंने उनको अच्छे से बोला रिक्वेस्ट किया था सर, फिर उन्होंने मान भी लिया, अभी चेंज भी हो गया सर।

प्रधानमंत्री – इस विजय की परिस्थिति खुशी, आनंद, अपने साथियों के साथ और गेम पूरे हो चुके हैं। तो हसी मजाक मस्ती का मूड ऐसे समय उस मैप पर नजर जाना और उसको रजिस्टर करना और तुरंत सिर्फ मेडल लेते समय देश खड़ा हो जाता है ऐसा नहीं, भीतर से देश का भाव मैं सच बताता हूँ ये वीडियो सामान्य नहीं है आपका, लंबे समय तक लोगों को याद रहेगा। ये बॉक्सिंग वालों से भी दुनिया के खिलाड़ी अब डरने लगे हैं।

खिलाड़ी – जरूर सर, पुरे सभी डरे हुए थे। एक के बाद एक गोल्ड मेडल गोल्ड मेडल आ रहे थे और मतलब पूरा लास्ट में ऐसे धमाका जैसा हो गया बिल्कुल। जिस तरीके से हम लोगों को सपोर्ट मिल रहा है, हमें बैक टू बैक कंपटीशन मिल रहा है वो एक बहुत बड़ी बात है और हमारे जितने भी यंग एथलीट है वो लोग सभी जैसे खेलो इंडिया स्कीम से आए हुए हैं और ये एक बहुत बड़ा changes ला रहा है पूरे स्पोर्ट्स में ही।

प्रधानमंत्री – अगर आप लोग खेलो इंडिया की प्रतिष्ठा बढ़ाते हैं और प्रतिष्ठा सिर्फ वहां जाकर के रिबिन काटने से नहीं होगी। आप वैसे ही खेलेंगे जैसे एक छोटा विद्यार्थी, एक छोटा नौजवान, छोटा खिलाड़ी खेलता है। यह बहुत बड़ा कंट्रीब्यूशन करेगा। क्योंकि अभी तो हमें बहुत आगे जाना है, बहुत मेडल लाना है। कारगिल विजय दिवस पर किसकी विजय हुई थी?

खिलाड़ी – उस दिन कारगिल डे था वैसे और जिस दिन मैंने पाकिस्तान के साथ फाइट किया था सर, वो उसी दिन का था। तो मैं एक इंडियन आर्मी से हूं, तो मैंने उस दिन मैं पहले से बहुत वो था कि सर पाकिस्तान को हराना है। तो मैंने वो पाकिस्तान एक तरफ मैंने 5-0 से हराया, तो मैंने हमारा इंडियन आर्मी का कारगिल हीरोज़ को मैंने डेडिकेट किया किया था सर।

प्रधानमंत्री – आपको यह याद रहना और आप स्वयं फौज से हैं तो, मैं जरूर मानता हूं कि देश के वीर जवानों को आपने जो भाव प्रकट किया ना कि, मैं कारगिल के विजेताओं को मेरा मेडल समर्पित करता हूं। उसने उस विजय पर चार चांद लगा दिए और जिसको पराजित करना था उसी को किया आपने।

खिलाड़ी – वो पाकिस्तान की बात चल रही है, मुझे किस्सा याद आ गया सर। 2015 वर्ल्ड मिलिट्री गेम थे और मेरी पाकिस्तान के साथ पहली फाइट आ गई थी और वर्ल्ड मिलिट्री गेम थे तो मिलिट्री वाले के फोन आए कि भई पाकिस्तान से नहीं हारना है। तो फिर मैं फर्स्ट राउंड 4-1 से जीत गया। सेकंड राउंड 3-2 से जीत गया, पर दोनों के सर लग गए आपस में, तो दोनों के लग गए कट और फाइट तो मैं जीत गया।

प्रधानमंत्री – हाँ

खिलाड़ी – उसके बाद फिर दोनों चले गए हॉस्पिटल में टांके लगवाने के लिए। फिर 2014 में आप फर्स्ट टाइम प्रधानमंत्री जी बने थे और जो हमारे साथ आर्मी का कोच गया हुआ था उसका नाम नरेंद्र राणा था और फिर वो कई देर तक सोच के मेरे को बोला कि भाईजान एक बात बोलूं, मैं हां बोलो, बोला भाईजान आपका नाम नरेंद्र है। आपके कोच का नाम नरेंद्र है, आपके प्रधानमंत्री का नाम नरेंद्र है, तो मुझे नरेंद्र नाम से नफरत हो गई है।

प्रधानमंत्री – सिर्फ आपने मेडल की संख्या बढ़ाई ऐसा नहीं है। आपने एक पीढ़ी को तैयार किया।

खिलाड़ी – मेरे मन में भी धक-धक धक-धक हो रहा है सर।

प्रधानमंत्री – आप चिंता मत कीजिए।

खिलाड़ी – पर..

प्रधानमंत्री – आप चाहें तो आपको बोलने में भी मेडल मिलने वाला है।

खिलाड़ी – मेरे फ्रेंड सर्कल में किसी ने बोला था कि मैं उनको कुछ बोलती थी भई तुम्हारे अच्छे के लिए तुम करो। तो अक्सर मुझे वो बोलते थे कि तू के मोदी ते मिल रही है?

प्रधानमंत्री – हाँ

खिलाड़ी – हरियाणवी में बोल देते हैं सर कि क्या तू मोदी से मिली हुई है, कि तेरी बात माने। तो आज मैं आपसे मिली हूं सर। मैं उनको बोल पाऊंगी कि हां मैं मोदी जी से मिली हूं।

खिलाड़ी – कॉमनवेंल्थ गेम्स में मैंने सिल्वर मेडल जीता, फिर मैंने क्रेडिट साहब को दिया, सपना तो था एक बार मेडल जीत के लेके आने के लिए, बट ट्रेनिंग का सेंटर नहीं था, मैंने SAI आने के बाद मैं बहुत ट्रेनिंग करके मेडल जीत पा रहा, इसलिए बहुत खुशी से मैंने सर को क्रेडिट दिया था क्योंकि बहुत इंप्रूव हुआ।

प्रधानमंत्री – मेरे लिए बहुत बड़ा सम्मान का विषय है, मेहनत आपने की और मुझे याद किया, मैं आपका बहुत आभारी हूं दोस्त।

प्रधानमंत्री – वाराणसी में खेल तुम प्रैक्टिस कर रही थी ना?

खिलाड़ी – जी सर।

प्रधानमंत्री – कैसा बना है स्टेडियम?

खिलाड़ी – सर अच्छा बना है, वहां पर मैं 10-12 दिन के लिए ट्रेनिंग करने गई थी, क्योंकि मैं मंदिर गई थी तो वहां पर ही ट्रेनिंग करके आई थी। और मैं वहां पे मतलब सेटल भी होना चाहती हूं क्योंकि मुझे काशी विश्वनाथ बहुत अच्छा लगता है सर।

प्रधानमंत्री – भोपाल में ट्रेनिंग कर रही थी ना?

खिलाड़ी – जी सर।

प्रधानमंत्री – तो उज्जैन जाते थे कि नहीं?

खिलाड़ी – जी सर उज्जैन भी गई थी सर।

प्रधानमंत्री – अच्छा महाकाल के पास भी गई।

खिलाड़ी – जी सर।

प्रधानमंत्री – काशी विश्वनाथ के पास हो आई एक बार।

खिलाड़ी – जी सर।

प्रधानमंत्री – सावन महीना तो अभी है।

खिलाड़ी – वहां घर जाके फिर उसके बाद जाऊंगी सर।

प्रधानमंत्री – ठीक है।

खिलाड़ी – साई ने भी सर बहुत सपोर्ट किया है मुझे। इसके कारण ही मैं यहां तक पहुंची हूं सर। और मैं खेलो इंडिया स्कीम में भी थी 2018 में जो फर्स्ट खेलो इंडिया हुआ था, उसमें मेरा सिल्वर मेडल था, वहां पे भी मैंने आपको देखा था ओपनिंग सेरेमनी में, तो उसमें मेरा मेडल था, तो मेरे को स्कीम भी मिल गया और मैं यहां तक पहुंची हूं सर।

प्रधानमंत्री – स्पोर्ट्स व्यवस्था एक बात है, लेकिन देश मेडल तब प्राप्त करता है जब देश में स्पोर्ट्स कल्चर बनता है। दोस्तों आपने बहुत बड़ा काम किया है। देश का नाम रोशन किया है। आपको मैं बहुत बधाई देता हूं और आप विश्वास कीजिए आगे भी आप विजयी होंगे और फिर से एक बार यहीं पर हम मिलेंगे। बहुत-बहुत धन्यवाद। बहुत-बहुत शुभकामनाएं।

प्रधानमंत्री – ये लगातार तीसरी बार देश को मेडल दिलवाया है।

खिलाड़ी – थैंक यू सर।

प्रधानमंत्री – बहुत आशीर्वाद बेटा।

खिलाड़ी – और थैंक यू सो मच मैं सर के हाथ से लड्डू खा रही मेरा कल बर्थडे था तो आज सर के हाथ से…

प्रधानमंत्री – बहुत बधाई वाह।

प्रधानमंत्री – मुस्कुराओ यार ।

प्रधानमंत्री – जो खेलेगा वो खिलेगा।