"ಭಾರತದ ಚಂದ್ರಯಾನ ಕಾರ್ಯಕ್ರಮವು ವಿಜ್ಞಾನ ಮತ್ತು ಉದ್ಯಮ ಎರಡರ ಯಶಸ್ಸಾಗಿದೆ"
"ಬಿ-20ರ ಘೋಷವಾಕ್ಯ - RAISE ನಲ್ಲಿ, 'ಐ-ಇನೋವೇಷನ್' ಹೊಸತನ ಪ್ರತಿನಿಧಿಸುತ್ತದೆ. ಆದರೆ ನಾವೀನ್ಯತೆಯ ಜತೆಗೆ, ನಾನು ಅದರಲ್ಲಿ ಇನ್ನೊಂದು ‘ಐ’ ಅನ್ನು ಸಹ ನೋಡುತ್ತೇನೆ – ಎಲ್ಲರನ್ನೂ ಒಳಗೊಂಡ ಪ್ರಗತಿ-ಅಂತರ್ಗತತೆ”
“ನಮ್ಮ ಹೂಡಿಕೆಯ ಬಹುಪಾಲು ಅಗತ್ಯವಿರುವ ವಿಷಯವೆಂದರೆ 'ಪರಸ್ಪರ ನಂಬಿಕೆ”
"ಜಾಗತಿಕ ಬೆಳವಣಿಗೆಯ ಭವಿಷ್ಯವು ವ್ಯಾಪಾರ ಭವಿಷ್ಯವನ್ನು ಅವಲಂಬಿಸಿದೆ"
"ದಕ್ಷ ಮತ್ತು ವಿಶ್ವಾಸಾರ್ಹ ಜಾಗತಿಕ ಪೂರೈಕೆ ಸರಪಳಿ ನಿರ್ಮಿಸುವಲ್ಲಿ ಭಾರತವು ಪ್ರಮುಖ ಸ್ಥಾನ ಹೊಂದಿದೆ"
"ಸುಸ್ಥಿರತೆಯು ಒಂದು ಅವಕಾಶ ಮತ್ತು ವ್ಯವಹಾರ ಮಾದರಿಯಾಗಿದೆ"
"ಭಾರತವು ವ್ಯಾಪಾರಕ್ಕಾಗಿ ಹಸಿರು ಸಾಲದ ಮಾರ್ಗಸೂಚಿ ಸಿದ್ಧಪಡಿಸಿದೆ, ಇದು 'ಪೃಥ್ವಿ ಸಕಾರಾತ್ಮಕ' ಕ್ರಿಯೆಗಳ ಮೇಲೆ ಕೇಂದ್ರೀಕೃತವಾಗಿದೆ"
"ಉದ್ಯಮಗಳು ಹೆಚ್ಚು ಹೆಚ್ಚು ಜನರ ಖರೀದಿ ಸಾಮರ್ಥ್ಯವನ್ನು ಸುಧಾರಿಸುವತ್ತ ಗಮನ ಹರಿಸಬೇಕು. ಏಕೆಂದರೆ ಸ್ವಯಂ ಕೇಂದ್ರಿತ ವಿಧಾನವು ಎಲ್ಲರಿಗೂ ಹಾನಿ ಮಾಡುತ್ತದೆ"
"ನಾವು ಖಂಡಿತವಾಗಿ 'ಅಂತಾರಾಷ್ಟ್ರೀಯ ಗ್ರಾಹಕ ಆರೈಕೆ ದಿನದ' ವ್ಯವಸ್ಥೆಯ ಬಗ್ಗೆ ಯೋಚಿಸಬೇಕು. ಇದು ವ್ಯವಹಾರಗಳು ಮತ್ತು ಗ್ರಾಹಕರ ನಡುವೆ ನಂಬಿಕೆ ಬಲಪಡಿಸಲು ಸಹಾಯ ಮಾಡುತ್ತದೆ"
"ಕ್ರಿಪ್ಟೋಕರೆನ್ಸಿಗಳ ಬಗ್ಗೆ ಹೆಚ್ಚು ಸಂಯೋಜಿತ ವಿಧಾನದ ಅವಶ್ಯಕತೆಯಿದೆ"
"ಜಾಗತಿಕ ವ್ಯಾಪಾರ ಸಮುದಾಯಗಳು ಮತ್ತು ಸರ್ಕಾರಗಳು ನೈತಿಕ ಕೃತಕ ಬುದ್ಧಿಮತ್ತೆ ಉತ್ತೇಜಿಸುವುದನ್ನು ಖಚಿತಪಡಿಸಿಕೊಳ್ಳಲು ಒಟ್ಟಾಗಿ ಕೆಲಸ ಮಾಡಬೇಕು"
"ಸಂಪರ್ಕಿತ ಪ್ರಪಂಚವು ಹಂಚಿಕೆಯ ಉದ್ದೇಶ, ಹಂಚಿಕೆಯ ಪೃಥ್ವಿ, ಹಂಚಿಕೆಯ ಸಮೃದ್ಧಿ ಮತ್ತು ಹಂಚಿಕೆಯ ಭವಿಷ್ಯದ ಬಗ್ಗೆ ಗಮನ ನೀಡಬೇಕು"

ಮಹಿಳೆಯರೇ ಮತ್ತು ಮಹನೀಯರೇ

ಗೌರವಾನ್ವಿತ ಪ್ರತಿನಿಧಿಗಳೇ,

ನಮಸ್ಕಾರ!

ಭಾರತಕ್ಕೆ ಸ್ವಾಗತ.

ಸ್ನೇಹಿತರೇ,

ಇಡೀ ದೇಶದಾದ್ಯಂತ ನಮ್ಮಲ್ಲಿ ಹಬ್ಬದ ವಾತಾವರಣವಿರುವ ಸಮಯದಲ್ಲಿ ಉದ್ಯಮಿಗಳಾದ ನೀವೆಲ್ಲರೂ ಭಾರತಕ್ಕೆ ಬಂದಿದ್ದೀರಿ. ಭಾರತದಲ್ಲಿ ಸುದೀರ್ಘ ವಾರ್ಷಿಕ ಹಬ್ಬದ ಋತುವನ್ನು ಒಂದು ರೀತಿಯಲ್ಲಿ ಮುಂದೂಡಲಾಗಿದೆ. ಈ ಹಬ್ಬದ ಋತುವೆಂದರೆ, ಅದು ನಮ್ಮ ಸಮಾಜ ಹಾಗೂ ನಮ್ಮ ವ್ಯಾಪಾರಿಗಳು ಸಂಭ್ರಮಾಚರಣೆ ಮಾಡುವ ಸಮಯ. ಈ ಬಾರಿ, ಅದು ಆಗಸ್ಟ್ 23ರಿಂದಲೇ ಪ್ರಾರಂಭವಾಗಿದೆ. ಈ ಆಚರಣೆಯು ಚಂದ್ರನ ಮೇಲೆ ʻಚಂದ್ರಯಾನ-3’ದ ಆಗಮನದ ಪ್ರಯುಕ್ತವಾಗಿದೆ. ನಮ್ಮ ಬಾಹ್ಯಾಕಾಶ ಸಂಸ್ಥೆ ʻಇಸ್ರೋʼ ಭಾರತದ ಚಂದ್ರಯಾನದ ಯಶಸ್ಸಿನಲ್ಲಿ ಮಹತ್ವದ ಪಾತ್ರ ವಹಿಸಿದೆ. ಆದರೆ ಇದೇ ವೇಳೆ, ಭಾರತೀಯ ಉದ್ಯಮವು ಅಪಾರ ಬೆಂಬಲವನ್ನು ನೀಡಿದೆ. ಚಂದ್ರಯಾನದಲ್ಲಿ ಬಳಸಲಾದ ಅನೇಕ ಉಪಕರಣಗಳನ್ನು ನಮ್ಮ ಉದ್ಯಮ, ಖಾಸಗಿ ಕಂಪನಿಗಳು ಮತ್ತು ʻಎಂಎಸ್ಎಂಇʼಗಳು ಅಭಿವೃದ್ಧಿಪಡಿಸಿವೆ ಮತ್ತು ಅಗತ್ಯ ಸಮಯದೊಳಗೆ ಅವು ಇಸ್ರೋಗೆ ಲಭ್ಯವಾಗುವಂತೆ ಮಾಡಿವೆ. ಒಂದು ರೀತಿಯಲ್ಲಿ, ಈ ಯಶಸ್ಸು ವಿಜ್ಞಾನ ಮತ್ತು ಉದ್ಯಮ ಎರಡಕ್ಕೂ ಸೇರಿದೆ. ಈ ಬಾರಿ ಇಡೀ ಜಗತ್ತು ಭಾರತದೊಂದಿಗೆ ಈ ಸಾಧನೆಯನ್ನು ಸಂಭ್ರಮಿಸುತ್ತಿದೆ. ಎಂಬುದು ಸಹ ಮುಖ್ಯವಾಗಿದೆ. ಈ ಸಂಭ್ರಮಾಚರಣೆಯು ʻಜವಾಬ್ದಾರಿಯುತ ಬಾಹ್ಯಾಕಾಶ ಕಾರ್ಯಕ್ರಮʼವನ್ನು ನಡೆಸುವ ಕುರಿತದ್ದಾಗಿದೆ. ಈ ಆಚರಣೆಯು ದೇಶದ ಅಭಿವೃದ್ಧಿಯನ್ನು ವೇಗಗೊಳಿಸುವ ಕುರಿತದ್ದಾಗಿದೆ. ಈ ಆಚರಣೆಯು ನಾವೀನ್ಯತೆ ಕುರಿತದ್ದಾಗಿದೆ. ಈ ಆಚರಣೆಯು ಬಾಹ್ಯಾಕಾಶ ತಂತ್ರಜ್ಞಾನದ ಮೂಲಕ ಸುಸ್ಥಿರತೆ ಮತ್ತು ಸಮಾನತೆಯನ್ನು ತರುವ ಕುರಿತದ್ದಾಗಿದೆ. ಇದು ʻಬಿ-20 ಶೃಂಗಸಭೆ - ರೈಸ್ʼನ ವಿಷಯವೂ ಆಗಿದೆ. ಇದು ಜವಾಬ್ದಾರಿ, ವೇಗವರ್ಧನೆ, ನಾವೀನ್ಯತೆ, ಸುಸ್ಥಿರತೆ ಮತ್ತು ಸಮಾನತೆಯ ಕುರಿತಾದದ್ದು. ಇದು ಮಾನವೀಯತೆಯ ಕುರಿತಾದದ್ದು. ಇದು ʻಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯʼವನ್ನು ಕುರಿತಾದದ್ದು.

 ಸ್ನೇಹಿತರೇ,

ʻಬಿ-20 ಶೃಂಗಸಭೆಯ ವಿಷಯವಾದ "ರೈಸ್"(RISE) ನಾವೀನ್ಯತೆಯನ್ನು(Innovation) ಪ್ರತಿನಿಧಿಸುವ 'ಐ' ಅಕ್ಷರವನ್ನು ಒಳಗೊಂಡಿದೆ. ಆದಾಗ್ಯೂ, ನಾನು ʻಇನ್ನೋವೇಶನ್ʼ ಜೊತೆಗೆ ಮತ್ತೊಂದು 'ಐ' ಅನ್ನು ಸಹ  ಇದರಲ್ಲಿ ನೋಡುತ್ತೇನೆ. ಆ 'ಐ' ಎಂದರೆ ಒಳಗೊಳ್ಳುವಿಕೆ(Inclusiveness). ʻಜಿ -20’ ಒಕ್ಕೂಟದ ಖಾಯಂ ಸದಸ್ಯರಾಗಲು ನಾವು ಅದೇ ದೃಷ್ಟಿಕೋನದೊಂದಿಗೆ ಆಫ್ರಿಕನ್ ಒಕ್ಕೂಟವನ್ನು ಆಹ್ವಾನಿಸಿದ್ದೇವೆ. ʻಬಿ-20ʼ ನಲ್ಲಿಯೂ ಆಫ್ರಿಕಾದ ಆರ್ಥಿಕ ಅಭಿವೃದ್ಧಿಗೆ ಮೀಸಲಾಗಿರುವ ಕೇಂದ್ರೀಕೃತ ಪ್ರದೇಶವಿದೆ. ಈ ವೇದಿಕೆಯು ತನ್ನ ವಿಧಾನದಲ್ಲಿ ಹೆಚ್ಚು ಅಂತರ್ಗತವಾಗಿದ್ದರೆ, ಅದು ಹೆಚ್ಚಿನ ಪರಿಣಾಮ ಬೀರುತ್ತದೆ ಎಂದು ಭಾರತ ನಂಬಿದೆ. ಈ ವಿಧಾನವು ಜಾಗತಿಕ ಆರ್ಥಿಕ ಸವಾಲುಗಳನ್ನು ನಿಭಾಯಿಸಲು, ಬೆಳವಣಿಗೆಯನ್ನು ಸುಸ್ಥಿರವಾಗಿಸಲು ಮತ್ತು ಇಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಕಾರ್ಯಗತಗೊಳಿಸುವಲ್ಲಿ ಹೆಚ್ಚಿನ ಯಶಸ್ಸನ್ನು ಖಾತರಿಪಡಿಸಲು ಸಹಾಯ ಮಾಡುತ್ತದೆ.

 

ಸ್ನೇಹಿತರೇ,

ಯಾವುದೇ ಬಿಕ್ಕಟ್ಟು ಅಥವಾ ಪ್ರತಿಕೂಲತೆ ಪರಿಸ್ಥಿತಿಯು ಅದರೊಂದಿಗೆ ಕೆಲವು ಪಾಠಗಳನ್ನು ನಮಗೆ ಹೊತ್ತು ತರುತ್ತದೆ, ನಮಗೆ ಅಮೂಲ್ಯವಾದದ್ದನ್ನು ಕಲಿಸುತ್ತದೆ ಎಂಬ ಮಾತನ್ನು ಆಗಾಗ್ಗೆ ನಾವು ಕೇಳುತ್ತಿರುತ್ತೇವೆ. ಕೇವಲ ಎರಡು ಅಥವಾ ಮೂರು ವರ್ಷಗಳ ಹಿಂದೆ, ಜಗತ್ತು ಅತಿದೊಡ್ಡ ಸಾಂಕ್ರಾಮಿಕ ರೋಗವನ್ನು ಎದುರಿಸಿತು, ಶತಮಾನದ ಅತಿದೊಡ್ಡ ಬಿಕ್ಕಟ್ಟನ್ನು ಎದುರಿಸಿತು. ಈ ಬಿಕ್ಕಟ್ಟು ಪ್ರತಿ ದೇಶ, ಪ್ರತಿ ಸಮಾಜ, ಪ್ರತಿ ವ್ಯಾಪಾರ ಸಂಸ್ಥೆ ಮತ್ತು ಪ್ರತಿ ಕಾರ್ಪೊರೇಟ್ ಸಂಸ್ಥೆಗೆ ಪಾಠ ಕಲಿಸಿದೆ. ಆ ಪಾಠ ಏನೆಂದರೆ ನಾವು ಈಗ ಹೆಚ್ಚು ಹೂಡಿಕೆ ಮಾಡಬೇಕಾಗಿರುವುದು ಪರಸ್ಪರ ನಂಬಿಕೆಯಲ್ಲಿ. ಕರೋನಾ ಸಾಂಕ್ರಾಮಿಕವು ವಿಶ್ವದಾದ್ಯಂತ ಈ ಪರಸ್ಪರ ನಂಬಿಕೆಯನ್ನು ಛಿದ್ರಗೊಳಿಸಿದೆ. ಮತ್ತು ಈ ಅಪನಂಬಿಕೆಯ ವಾತಾವರಣದಲ್ಲಿ, ಅತ್ಯಂತ ಸೂಕ್ಷ್ಮತೆ, ನಮ್ರತೆ ಮತ್ತು ನಂಬಿಕೆಯ ವಿಶ್ವಾಸದೊಂದಿಗೆ ನಿಮ್ಮ ಮುಂದೆ ನಿಂತಿರುವ ದೇಶವೆಂದರೆ ಅದು ಭಾರತ. 100 ವರ್ಷಗಳ ಅತಿದೊಡ್ಡ ಬಿಕ್ಕಟ್ಟಿನ ನಡುವೆ, ಭಾರತವು ಜಗತ್ತಿಗೆ ಅಮೂಲ್ಯವಾದದ್ದನ್ನು -  ನಂಬಿಕೆಯನ್ನು, ಪರಸ್ಪರ ವಿಶ್ವಾಸವನ್ನು ನೀಡಿದೆ.

ಕರೋನಾ ಅವಧಿಯಲ್ಲಿ ಜಗತ್ತಿಗೆ ಅಗತ್ಯವಿದ್ದಾಗ, ಭಾರತವು ವಿಶ್ವದ ಔಷಧಾಲಯವಾಗಿ 150ಕ್ಕೂ ಹೆಚ್ಚು ದೇಶಗಳಿಗೆ ಔಷಧಗಳನ್ನು ಒದಗಿಸಿತು. ಜಗತ್ತಿಗೆ ಕೋವಿಡ್‌ ಲಸಿಕೆಗಳು ಅಗತ್ಯವಿದ್ದಾಗ, ಭಾರತವು ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಿತು ಮತ್ತು ಲಕ್ಷಾಂತರ ಜನರ ಜೀವವನ್ನು ಉಳಿಸಿತು. ಭಾರತದ ಪ್ರಜಾಪ್ರಭುತ್ವದ ಮೌಲ್ಯಗಳು ಅದರ ಕಾರ್ಯಗಳು ಮತ್ತು ಪ್ರತಿಕ್ರಿಯೆಗಳಲ್ಲಿ ಅತ್ಯಂತ ಸ್ಪಷ್ಟವಾಗಿವೆ. ದೇಶಾದ್ಯಂತ 50 ಕ್ಕೂ ಹೆಚ್ಚು ನಗರಗಳಲ್ಲಿ ನಡೆದ
ಜಿ-20 ಸಭೆಗಳಲ್ಲಿ ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಗೋಚರಿಸುತ್ತವೆ. ಅದಕ್ಕಾಗಿಯೇ ಭಾರತದೊಂದಿಗಿನ ನಿಮ್ಮ ಪಾಲುದಾರಿಕೆಯು ಬಹಳ ಮಹತ್ವದ್ದಾಗಿದೆ. ಇಂದು, ಭಾರತವು ವಿಶ್ವದ ಅತ್ಯಂತ ಕಿರಿಯ ಪ್ರತಿಭೆಗಳಿಗೆ ನೆಲೆಯಾಗಿದೆ. ಇಂದು, ಭಾರತವು 'ಇಂಡಸ್ಟ್ರಿ 4.0' ಯುಗದಲ್ಲಿ ಡಿಜಿಟಲ್ ಕ್ರಾಂತಿಯ ಮುಖವಾಗಿ ತಲೆ ಎತ್ತಿ ನಿಂತಿದೆ. ಭಾರತದೊಂದಿಗಿನ ನಿಮ್ಮ ಸ್ನೇಹವು ಬಲವಾದಷ್ಟೂ ಇಬ್ಬರಿಗೂ ಹೆಚ್ಚಿನ ಸಮೃದ್ಧಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ವ್ಯವಹಾರಗಳು ಸಾಮರ್ಥ್ಯವನ್ನು ಸಮೃದ್ಧಿಯಾಗಿ, ಅಡೆತಡೆಗಳನ್ನು ಅವಕಾಶಗಳಾಗಿ ಮತ್ತು ಆಕಾಂಕ್ಷೆಗಳನ್ನು ಸಾಧನೆಗಳಾಗಿ ಪರಿವರ್ತಿಸಬಹುದು ಎಂದು ನಿಮಗೆಲ್ಲರಿಗೂ ತಿಳಿದಿದೆ. ಅವು ಸಣ್ಣದಾಗಿರಲಿ ಅಥವಾ ದೊಡ್ಡದಾಗಿರಲಿ, ಜಾಗತಿಕ ಅಥವಾ ಸ್ಥಳೀಯವಾಗಿರಲಿ, ವ್ಯವಹಾರಗಳು ಎಲ್ಲರಿಗೂ ಪ್ರಗತಿಯನ್ನು ಖಾತರಿಪಡಿಸಬಹುದು. ಆದ್ದರಿಂದ, ಜಾಗತಿಕ ಬೆಳವಣಿಗೆಯ ಭವಿಷ್ಯವು ವ್ಯವಹಾರದ ಭವಿಷ್ಯವನ್ನು ಅವಲಂಬಿಸಿರುತ್ತದೆ.

ಸ್ನೇಹಿತರೇ,

ಕೋವಿಡ್-19ರ ಮೊದಲು ಮತ್ತು ನಂತರ ಜಗತ್ತು ಗಮನಾರ್ಹ ಬದಲಾವಣೆಗಳಿಗೆ ಸಾಕ್ಷಿಯಾಗಿದೆ. ನಾವು ಅನೇಕ ವಿಚಾರಗಳಲ್ಲಿ ಇನ್ನೆಂದೂ ಮರಳಿ ಹಳೆಯ ಸ್ಥಿತಿಗೆ ಮರಳದಂತಹ ಬದಲಾವಣೆಗಳಿಗೆ ಸಾಕ್ಷಿಯಾಗುತ್ತಿದ್ದೇವೆ. ಈಗ, ಜಾಗತಿಕ ಪೂರೈಕೆ ಸರಪಳಿಗಳ ಬಗೆಗಿನ ದೃಷ್ಟಿಕೋನ ಮೊದಲಿನಂತಿಲ್ಲ. ಜಾಗತಿಕ ಪೂರೈಕೆ ಸರಪಳಿ ದಕ್ಷವಾಗಿರುವವರೆಗೆ, ಚಿಂತಿಸುವ ಅಗತ್ಯವೇ ಇಲ್ಲ ಎಂದು ಹೇಳಲಾಗುತ್ತಿತ್ತು. ಆದರೆ, ಜಗತ್ತಿಗೆ ಅತ್ಯಂತ ಅಗತ್ಯವಿರುವ ಸಂದರ್ಭದಲ್ಲೇ  ಅಂತಹ ಪೂರೈಕೆ ಸರಪಳಿ ತುಂಡರಿಸಬಹುದು. ಆದ್ದರಿಂದ, ಇಂದು ಜಗತ್ತು ಈ ಪ್ರಶ್ನೆಯೊಂದಿಗೆ ಹೋರಾಡುತ್ತಿರುವ ಸಂದರ್ಭದಲ್ಲಿ, ನನ್ನ ಸ್ನೇಹಿತರೇ, ಭಾರತವು ಈ ಸಮಸ್ಯೆಗೆ ಪರಿಹಾರವಾಗಿದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ದಕ್ಷ ಮತ್ತು ವಿಶ್ವಾಸಾರ್ಹ ಜಾಗತಿಕ ಪೂರೈಕೆ ಸರಪಳಿಯನ್ನು ನಿರ್ಮಿಸುವಲ್ಲಿ ಭಾರತವು ನಿರ್ಣಾಯಕ ಸ್ಥಾನವನ್ನು ಹೊಂದಿದೆ. ಆದ್ದರಿಂದ, ಇದನ್ನು ಸಾಧಿಸಲು ಜಾಗತಿಕ ವ್ಯವಹಾರಗಳು ತಮ್ಮ ಜವಾಬ್ದಾರಿಯನ್ನು ಹೆಚ್ಚಿಸಬೇಕಾಗಿದೆ, ಮತ್ತು ಇದನ್ನು ನಾವು ಒಟ್ಟಾಗಿ ಮಾಡಬೇಕು.

 

ಸ್ನೇಹಿತರೇ,

ಜಿ-20 ರಾಷ್ಟ್ರಗಳ ನಡುವೆ ಚರ್ಚೆಗಳು ಮತ್ತು ಸಂವಾದಗಳಿಗೆ ʻಬಿಸಿನೆಸ್-20ʼ ಒಂದು ಬಲಿಷ್ಠ ವೇದಿಕೆಯಾಗಿ ಹೊರಹೊಮ್ಮಿದೆ ಎಂಬುದು ನನಗೆ ಸಂತೋಷ ತಂದಿದೆ. ಆದ್ದರಿಂದ, ಈ ವೇದಿಕೆಯಲ್ಲಿ ಜಾಗತಿಕ ಸವಾಲುಗಳಿಗೆ ಪರಿಹಾರಗಳನ್ನು ನಾವು ಚರ್ಚಿಸುವಾಗ, ಸುಸ್ಥಿರತೆಯು ಅತ್ಯಂತ ನಿರ್ಣಾಯಕ ವಿಷಯವಾಗಿದೆ. ಸುಸ್ಥಿರತೆಯು ಕೇವಲ ನಿಯಮಗಳು ಮತ್ತು ನಿಬಂಧನೆಗಳಿಗೆ ಸೀಮಿತವಾಗಬಾರದು ಎಂಬುದನ್ನು ನಾವೆಲ್ಲರೂ ನೆನಪಿನಲ್ಲಿಡಬೇಕು; ಇದು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಬೇಕು. ಜಾಗತಿಕ ಉದ್ಯಮಗಳು ಈ ದಿಕ್ಕಿನಲ್ಲಿ ಮತ್ತಷ್ಟು ಮುಂದುವರಿದು ಹೆಜ್ಜೆ ಇಡಬೇಕು ಎಂಬುದು ನನ್ನ ಮನವಿ. ಸುಸ್ಥಿರತೆಯು ಸ್ವತಃ ಒಂದು ಅವಕಾಶ ಮತ್ತು ವ್ಯವಹಾರ ಮಾದರಿಯಾಗಿದೆ. ಇದನ್ನು ವಿವರಿಸಲು, ನಾನು ನಿಮಗೆ ಒಂದು ಸಣ್ಣ ಉದಾಹರಣೆಯನ್ನು ನೀಡುತ್ತೇನೆ ಅದೆಂದರೆ ಸಿರಿಧಾನ್ಯಗಳು. ಈ ವರ್ಷವನ್ನು ವಿಶ್ವಸಂಸ್ಥೆಯು ʻಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷʼವೆಂದು ಆಚರಿಸುತ್ತಿದೆ. ಸಿರಿಧಾನ್ಯಗಳು ಸಮೃದ್ಧ ಪೌಷ್ಠಕತೆಯುಳ್ಳ ಆಹಾರ ಮಾತ್ರವಲ್ಲ, ಪರಿಸರ ಸ್ನೇಹಿ ಮತ್ತು ಸಣ್ಣ ರೈತರಿಗೆ ಬೆಂಬಲ ನೀಡುತ್ತವೆ. ಹೆಚ್ಚುವರಿಯಾಗಿ, ಆಹಾರ ಸಂಸ್ಕರಣಾ ವ್ಯವಹಾರದಲ್ಲಿ ಅಪಾರ ಸಾಮರ್ಥ್ಯವಿದೆ. ಬೇರೆ ರೀತಿಯಲ್ಲಿ ಹೇಳುವುದಾದರೆ, ಇದು ಜೀವನಶೈಲಿ ಮತ್ತು ಆರ್ಥಿಕತೆ ಎರಡಕ್ಕೂ ಗೆಲುವು-ಗೆಲುವಿನ ಮಾದರಿಯಾಗಿದೆ. ಅಂತೆಯೇ, ನಾವು ಈ ಪರಿಕಲ್ಪನೆಯನ್ನು ಆವರ್ತಕ ಆರ್ಥಿಕತೆಯಲ್ಲಿ ನೋಡುತ್ತೇವೆ. ಇದು ವ್ಯವಹಾರಗಳಿಗೆ ಅಪಾರ ಅವಕಾಶಗಳನ್ನು ಒದಗಿಸುತ್ತದೆ. ಭಾರತದಲ್ಲಿ, ನಾವು ಹಸಿರು ಇಂಧನದ ಮೇಲೆ ಸಾಕಷ್ಟು ಗಮನ ಹರಿಸುತ್ತಿದ್ದೇವೆ. ಹಸಿರು ಹೈಡ್ರೋಜನ್ ಕ್ಷೇತ್ರದಲ್ಲಿ, ಸೌರ ಶಕ್ತಿ ಸಾಮರ್ಥ್ಯದಲ್ಲಿ ನಾವು ಸಾಧಿಸಿದ ಯಶಸ್ಸನ್ನು ಪುನರಾವರ್ತಿಸುವುದು ನಮ್ಮ ಗುರಿಯಾಗಿದೆ. ಜಗತ್ತನ್ನು ತನ್ನೊಂದಿಗೆ ಕರೆದೊಯ್ಯುವುದು ಭಾರತದ ಪ್ರಯತ್ನವಾಗಿದೆ.  ಈ ಪ್ರಯತ್ನವು ಅಂತರರಾಷ್ಟ್ರೀಯ ಸೌರ ಮೈತ್ರಿಯ ರೂಪದಲ್ಲಿಯೂ ನೋಡಬಹುದಾಗಿದೆ.

ಸ್ನೇಹಿತರೇ,

ಕೊರೊನಾ ನಂತರದ ಜಗತ್ತಿನಲ್ಲಿ, ಜನರು ತಮ್ಮ ಆರೋಗ್ಯದ ಬಗ್ಗೆ ಬಹಳ ಜಾಗೃತರಾಗಿರುವುದನ್ನು ನಾವು ಗಮನಿಸಬಹುದು. ಆರೋಗ್ಯ ಪ್ರಜ್ಞೆಯು ಕೇವಲ ಊಟದ ಮೇಜಿನ ಬಳಿ ಮಾತ್ರವಲ್ಲ, ನಾವು ಖರೀದಿಗಳನ್ನು ಮಾಡಿದಾಗ, ನಮ್ಮ ಊಟವನ್ನು ಆಯ್ಕೆ ಮಾಡಿದಾಗ ಮತ್ತು ವಿವಿಧ ಚಟುವಟಿಕೆಗಳಲ್ಲಿ ತೊಡಗಿದಾಗ ಸಹ ಗೋಚರಿಸುತ್ತದೆ. ಪ್ರತಿಯೊಂದು ಆಯ್ಕೆಯು ನಮ್ಮ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ನಾವು ಎಚ್ಚರಿಕೆಯಿಂದ ಪರಿಗಣಿಸುತ್ತೇವೆ. ದೀರ್ಘಾವಧಿಯಲ್ಲಿ ಅಸ್ವಸ್ಥತೆ ಮತ್ತು ಸಂಭಾವ್ಯ ತೊಂದರೆಗಳನ್ನು ತಪ್ಪಿಸುವ ಬಗ್ಗೆ ಪ್ರತಿಯೊಬ್ಬರೂ ಚಿಂತಿಸುತ್ತಾರೆ. ಇದು ಕೇವಲ ವರ್ತಮಾನದ ಬಗ್ಗೆ ಅಲ್ಲ; ನಾವು ಅದರ ಭವಿಷ್ಯದ ಪರಿಣಾಮಗಳನ್ನು ಸಹ ಪರಿಗಣಿಸುತ್ತೇವೆ. ಭೂಗ್ರಹದ ವಿಚಾರದಲ್ಲಿ ನಮ್ಮ ಕಾರ್ಯವಿಧಾನದ ಬಗ್ಗೆ ಉದ್ಯಮಗಳು ಮತ್ತು ಸಮಾಜ ಎರಡೂ ಸಹ ಒಂದೇ ಮನಸ್ಥಿತಿಯನ್ನು ಹೊಂದಿರಬೇಕು ಎಂಬುದು ನನ್ನ ನಂಬಿಕೆ. ನನ್ನ ಆರೋಗ್ಯದ ಬಗ್ಗೆ ಮತ್ತು ಅದು ನನ್ನ ದೈನಂದಿನ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದರ ಬಗ್ಗೆ ನಾನು ಕಾಳಜಿ ವಹಿಸುವಂತೆಯೇ, ನಮ್ಮ ಕ್ರಿಯೆಗಳು ಭೂಗ್ರಹದ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದನ್ನು ಪರಿಗಣಿಸುವುದು ನಮ್ಮ ಜವಾಬ್ದಾರಿಯಾಗಿದೆ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು, ನಮ್ಮ ಭೂಮಿಯ ಮೇಲೆ ಅದರ ಪರಿಣಾಮದ ಬಗ್ಗೆ ನಾವು ಯೋಚಿಸಬೇಕು. ʻಲೈಫ್‌ಸ್ಟೈಲ್‌ ಫಾರ್‌ ಎನ್ವಿರಾನ್ಮೆಂಟ್ʼ(LiFE) ಅನ್ನು ಪ್ರತಿನಿಧಿಸುವ `ಮಿಷನ್ ಲೈಫ್’, ಈ ತತ್ವದಿಂದ ಪ್ರೇರಿತವಾಗಿದೆ. ಪ್ರಪಂಚದಾದ್ಯಂತ ಭೂಗ್ರಹ-ಪರ ವ್ಯಕ್ತಿಗಳ ಸಮುದಾಯವನ್ನು ರಚಿಸುವುದು, ಆಂದೋಲನವನ್ನು ಪ್ರಾರಂಭಿಸುವುದು ಇದರ ಉದ್ದೇಶವಾಗಿದೆ. ಪ್ರತಿಯೊಂದು ಜೀವನಶೈಲಿ ನಿರ್ಧಾರವು, ಔದ್ಯಮಿಕ ಪ್ರಪಂಚದ ಮೇಲೆ ಸ್ವಲ್ಪ ಪರಿಣಾಮ ಬೀರುತ್ತದೆ. ಜೀವನಶೈಲಿ ಮತ್ತು ವ್ಯವಹಾರಗಳೆರಡೂ ಭೂಗ್ರಹದ ಪರವಾಗಿದ್ದಾಗ, ಅನೇಕ ಸಮಸ್ಯೆಗಳು ಸಹಜವಾಗಿಯೇ ಕಡಿಮೆಯಾಗುತ್ತವೆ. ನಾವು ನಮ್ಮ ಜೀವನ ಮತ್ತು ವ್ಯವಹಾರಗಳನ್ನು ಪರಿಸರ ಪರಿಗಣನೆಗಳೊಂದಿಗೆ ಹೊಂದಿಸುವತ್ತ ಗಮನ ಹರಿಸಬೇಕು. ಭಾರತವು ವ್ಯಾಪಾರ ವಲಯದಲ್ಲಿ ʻಹಸಿರು ಸಾಲʼಕ್ಕಾಗಿ (ಗ್ರೀನ್‌ ಕ್ರೆಡಿಟ್‌) ಒಂದು ನೀತಿಯನ್ನು ಅಭಿವೃದ್ಧಿಪಡಿಸಿದೆ. ನಾವು ದೀರ್ಘಕಾಲದಿಂದ ʻಕಾರ್ಬನ್ ಕ್ರೆಡಿಟ್ಸ್ʼ ಪರಿಕಲ್ಪನೆಯಲ್ಲಿ ಸಿಲುಕಿಕೊಂಡಿದ್ದೇವೆ. ಇದೇ ವೇಳೆ, ʻಕಾರ್ಬನ್ ಕ್ರೆಡಿಟ್‌ʼನ ಪ್ರಯೋಜನಗಳನ್ನು ಆನಂದಿಸುತ್ತಿರುವವರೂ  ಇದ್ದಾರೆ. ನಾನು ʻಹಸಿರು ಸಾಲʼದ ವಿಷಯವನ್ನು ವಿಶ್ವದ ಮುಂದೆ ತಂದಿದ್ದೇನೆ. 'ಭೂಗ್ರಹ ಪರ' ಕ್ರಿಯೆಗಳಿಗೆ ʻಗ್ರೀನ್ ಕ್ರೆಡಿಟ್ʼ ಒತ್ತು ನೀಡುತ್ತದೆ. ಜಾಗತಿಕ ಉದ್ಯಮದ ಎಲ್ಲ ಘಟಾನುಘಟಿಗಳು ಇದರಲ್ಲಿ ಸೇರಬೇಕು ಮತ್ತು ಇದನ್ನು ಜಾಗತಿಕ ಆಂದೋಲನವನ್ನಾಗಿ ಮಾಡಬೇಕು ಎಂದು ನಾನು ಒತ್ತಾಯಿಸುತ್ತೇನೆ.

ಸ್ನೇಹಿತರೇ,

ನಾವು ಸಾಂಪ್ರದಾಯಿಕ ವ್ಯಾಪಾರ ವಿಧಾನವನ್ನು ಸಹ ಪರಿಗಣಿಸಬೇಕಾಗಿದೆ. ನಾವು ಕೇವಲ ನಮ್ಮ ಉತ್ಪನ್ನಗಳು, ಬ್ರಾಂಡ್‌ಗಳು ಮತ್ತು ಮಾರಾಟಕ್ಕೆ ನಮ್ಮನ್ನು ಸೀಮಿತಗೊಳಿಸಬಾರದು; ಅದು ಸಾಕಾಗುವುದಿಲ್ಲ. ವ್ಯವಹಾರವಾಗಿ, ದೀರ್ಘಾವಧಿಯಲ್ಲಿ ಪ್ರಯೋಜನಗಳನ್ನು ಒದಗಿಸುವ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವತ್ತ ನಾವು ಗಮನ ಹರಿಸಬೇಕಾಗಿದೆ. ಉದಾಹರಣೆಗೆ, ಇತ್ತೀಚಿನ ದಿನಗಳಲ್ಲಿ ಭಾರತವು ಜಾರಿಗೆ ತಂದ ನೀತಿಗಳಿಂದಾಗಿ, ಕೇವಲ 5 ವರ್ಷಗಳ ಅವಧಿಯಲ್ಲಿ 13 ಕೋಟಿಗೂ ಹೆಚ್ಚು ಜನರನ್ನು ಬಡತನದಿಂದ ಮೇಲೆತ್ತಲಾಗಿದೆ. ಬಡತನ ರೇಖೆಗಿಂತ ಮೇಲಿರುವವರು, ʻನವ ಮಧ್ಯಮ ವರ್ಗʼದವರು ದೊಡ್ಡ ಗ್ರಾಹಕರಾಗಿದ್ದಾರೆ. ಏಕೆಂದರೆ ಅವರು ಹೊಸ ಆಕಾಂಕ್ಷೆಗಳೊಂದಿಗೆ ಬರುತ್ತಾರೆ. ಈ ʻನವ ಮಧ್ಯಮ ವರ್ಗʼವು ಭಾರತದ ಬೆಳವಣಿಗೆಯ ವೇಗಕ್ಕೆ ಕೊಡುಗೆ ನೀಡುತ್ತಿದೆ. ಒಟ್ಟಾರೆಯಾಗಿ, ಸರ್ಕಾರದ ಬಡವರ ಪರ ಆಡಳಿತವು ಬಡವರಿಗೆ ಮಾತ್ರವಲ್ಲದೆ ಮಧ್ಯಮ ವರ್ಗ ಮತ್ತು ನಮ್ಮ ʻಎಂಎಸ್ಎಂಇʼಗಳಿಗೆ (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು) ಪ್ರಯೋಜನವನ್ನು ನೀಡಿದೆ. ಬಡವರ ಪರವಾಗಿ ಗಮನ ಕೇಂದ್ರೀಕರಿಸಿ ನಡೆಸುವ ಆಡಳಿತದಿಂದ ಮುಂದಿನ 5-7 ವರ್ಷಗಳಲ್ಲಿ ಮಧ್ಯಮ ವರ್ಗದ ಬೆಳವಣಿಗೆ ಎಷ್ಟು ಮಹತ್ವದ್ದಾಗಿರಬಹುದು ಎಂದು ಊಹಿಸಿ. ಮಧ್ಯಮ ವರ್ಗದ ಖರೀದಿ ಶಕ್ತಿ ಹೆಚ್ಚುತ್ತಲೇ ಇರುತ್ತದೆ. ಆದ್ದರಿಂದ, ಪ್ರತಿಯೊಂದು ವ್ಯಾಪಾರ ಉದ್ದಮವೂ ಹೆಚ್ಚು ಹೆಚ್ಚು ಜನರ ಬೇಡಿಕೆಯನ್ನು  ಪೂರೈಸುವತ್ತ ಗಮನ ಹರಿಸಬೇಕು. ಈ ಖರೀದಿ ಶಕ್ತಿ ಬೆಳೆದಂತೆ, ಇದು ನೇರವಾಗಿ ವ್ಯವಹಾರಗಳ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಈ ಎರಡೂ ಅಂಶಗಳ ಮೇಲೆ ನಮ್ಮ ಗಮನವನ್ನು ಸಮಾನವಾಗಿ ಸಮತೋಲನಗೊಳಿಸುವುದು ಹೇಗೆ ಎಂದು ನಾವು ಕಲಿಯಬೇಕು. ನಮ್ಮ ಗಮನವು ಸ್ವ-ಕೇಂದ್ರಿತವಾಗಿದ್ದರೆ, ನಾವು ನಮಗೆ ಅಥವಾ ಜಗತ್ತಿಗೆ ಪ್ರಯೋಜನ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ನಾನು ನಂಬುತ್ತೇನೆ. ನಿರ್ಣಾಯಕ ವಸ್ತುಗಳು, ಅಪರೂಪದ ಮಣ್ಣಿನ ವಸ್ತುಗಳು ಮತ್ತು ಹಲವಾರು ಇತರ ಲೋಹಗಳಲ್ಲಿ ನಾವು ಈ ಸವಾಲನ್ನು ಅನುಭವಿಸುತ್ತಿದ್ದೇವೆ. ಈ ವಸ್ತುಗಳು ಕೆಲವು ಸ್ಥಳಗಳಲ್ಲಿ ಹೇರಳವಾಗಿವೆ ಮತ್ತು ಕೆಲವು ಸ್ಥಳಗಳಲ್ಲಿ ಇಲ್ಲ, ಆದರೆ ಇಡೀ ಮಾನವ ಜನಾಂಗಕ್ಕೆ ಅವುಗಳ ಅಗತ್ಯವಿದೆ. ಅದನ್ನು ಯಾರೇ ಹೊಂದಿದ್ದರೂ, ಅವರು ಅದನ್ನು ಜಾಗತಿಕ ಜವಾಬ್ದಾರಿ ಎಂದು ಪರಿಗಣಿಸದಿದ್ದರೆ, ಅದು ವಸಾಹತುಶಾಹಿಯ ಹೊಸ ಮಾದರಿಯನ್ನು ಉತ್ತೇಜಿಸುತ್ತದೆ. ಇದು ನಾನು ನೀಡುತ್ತಿರುವ ಗಂಭೀರ ಎಚ್ಚರಿಕೆ.

 

ಸ್ನೇಹಿತರೇ,

ಉತ್ಪಾದಕರು ಮತ್ತು ಗ್ರಾಹಕರ ಹಿತಾಸಕ್ತಿಗಳಲ್ಲಿ ಸಮತೋಲನವಿದ್ದಾಗ ಲಾಭದಾಯಕ ಮಾರುಕಟ್ಟೆಯನ್ನು ಉಳಿಸಿಕೊಳ್ಳಬಹುದು. ಇದು ರಾಷ್ಟ್ರಗಳಿಗೂ ಅನ್ವಯಿಸುತ್ತದೆ. ಇತರ ದೇಶಗಳನ್ನು ಕೇವಲ ಮಾರುಕಟ್ಟೆಯಾಗಿ ಪರಿಗಣಿಸುವುದರಿಂದ ಈ ನಿಟ್ಟಿನಲ್ಲಿ ಯಾವುದೇ ಪ್ರಯೋಜನವಿಲ್ಲ. ಇದರಿಂದ ಶೀಘ್ರದಲ್ಲೇ ಅಥವಾ ನಿಧಾನವಾಗಿ ಉತ್ಪಾದಕ ದೇಶಗಳಿಗೆ ಸಹ ಹಾನಿಯಾಗುತ್ತದೆ. ಪ್ರಗತಿಯಲ್ಲಿ ಎಲ್ಲರನ್ನೂ ಸಮಾನ ಪಾಲುದಾರರನ್ನಾಗಿ ಮಾಡುವುದು ಮುಂದಿನ ಮಾರ್ಗವಾಗಿದೆ. ಇಲ್ಲಿ ಅನೇಕ ಜಾಗತಿಕ ವ್ಯಾಪಾರ ನಾಯಕರು ಇದ್ದಾರೆ. ವ್ಯವಹಾರಗಳನ್ನು ಹೆಚ್ಚು ಗ್ರಾಹಕ ಕೇಂದ್ರಿತವಾಗಿಸುವುದು ಹೇಗೆ ಎಂಬುದರ ಬಗ್ಗೆ ನಾವೆಲ್ಲರೂ ಹೆಚ್ಚು ಯೋಚಿಸಬಾರದೇಕೆ? ಈ ಗ್ರಾಹಕರು ವ್ಯಕ್ತಿಗಳಾಗಿರಬಹದು ಅಥವಾ ದೇಶಗಳಾಗಿರಬಹುದು. ಅವರ ಹಿತಾಸಕ್ತಿಗಳನ್ನು ಸಹ ನೋಡಿಕೊಳ್ಳಬೇಕು. ಇದಕ್ಕಾಗಿ ನಾವು ಒಂದು ರೀತಿಯ ವಾರ್ಷಿಕ ಅಭಿಯಾನದ ಬಗ್ಗೆ ಯೋಚಿಸಬಹುದೇ? ಜಾಗತಿಕ ಉದ್ಯಮಗಳು ಪ್ರತಿವರ್ಷ ಗ್ರಾಹಕರ ಮತ್ತು ಅವರ ಮಾರುಕಟ್ಟೆಗಳ ಒಳಿತಿಗಾಗಿ ಸಂಕಲ್ಪ ಮಾಡಲು ಒಗ್ಗೂಡಬಹುದೇ?

ಸ್ನೇಹಿತರೇ,

ಗ್ರಾಹಕರಿಗಾಗಿ ವರ್ಷದಲ್ಲಿ ದಿನವೊಂದನ್ನು ಮೀಸಲಾಗಿರಿಸಲು ವಿಶ್ವಾದ್ಯಂತದ ವ್ಯವಹಾರಗಳು ಒಗ್ಗೂಡಬಹುದೇ? ದುರದೃಷ್ಟವಶಾತ್, ನಾವು ಗ್ರಾಹಕರ ಹಕ್ಕುಗಳ ಬಗ್ಗೆ ಮಾತನಾಡುತ್ತೇವೆ ಮತ್ತು ಜಗತ್ತು ಗ್ರಾಹಕ ಹಕ್ಕುಗಳ ದಿನವನ್ನು ಸಹ ಆಚರಿಸುತ್ತದೆ. ʻಕಾರ್ಬನ್ ಕ್ರೆಡಿಟ್ʼನಿಂದ ʻಗ್ರೀನ್ ಕ್ರೆಡಿಟ್ʼಗೆ ಚಲಿಸುವ ಮೂಲಕ ನಾವು ಈ ಚಕ್ರವನ್ನು ಬದಲಾಯಿಸಬಹುದೇ? ಗ್ರಾಹಕ ಹಕ್ಕುಗಳ ದಿನದ ಬದಲು, ʻಗ್ರಾಹಕ ಆರೈಕೆʼಯ ಬಗ್ಗೆ ಮಾತನಾಡಲು ನಾವು ಮುಂದಾಳತ್ವ ವಹಿಸಬಹುದು. ʻಗ್ರಾಹಕ ಆರೈಕೆ ದಿನʼವನ್ನು ಪ್ರಾರಂಭಿಸುವುದನ್ನು ಮತ್ತು ಅದು ಪರಿಸರದ ಮೇಲೆ ಬೀರಬಹುದಾದ ಗಮನಾರ್ಹ ಸಕಾರಾತ್ಮಕ ಪರಿಣಾಮವನ್ನು ಕಲ್ಪಿಸಿಕೊಳ್ಳಿ. ಗ್ರಾಹಕರ ಆರೈಕೆಯತ್ತ ಗಮನ ಹರಿಸಿದರೆ, ಹಕ್ಕುಗಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ತಾವಾಗಿಯೇ ಪರಿಹಾರವಾಗುತ್ತವೆ. ಆದ್ದರಿಂದ, ʻಅಂತರರಾಷ್ಟ್ರೀಯ ಗ್ರಾಹಕ ಆರೈಕೆ ದಿನʼದ ವಿಚಾರವಾಗಿ ಏನನ್ನಾದರೂ ಯೋಚಿಸುವಂತೆ ನಾನು ನಿಮ್ಮೆಲ್ಲರನ್ನೂ ಒತ್ತಾಯಿಸುತ್ತೇನೆ. ಇಂತಹ ಉಪಕ್ರಮವು ವ್ಯವಹಾರಗಳು ಮತ್ತು ಗ್ರಾಹಕರ ನಡುವಿನ ವಿಶ್ವಾಸವನ್ನು ಬಲಪಡಿಸುತ್ತದೆ. ಗ್ರಾಹಕರು ಒಂದು ನಿರ್ದಿಷ್ಟ ಭೌಗೋಳಿಕ ಪ್ರದೇಶಕ್ಕೆ ಸೀಮಿತವಾಗಿಲ್ಲ ಎಂಬುದನ್ನು ನಾವು ನೆನಪಿನಲ್ಲಿಡಬೇಕು; ಅವರು ಜಾಗತಿಕ ವ್ಯಾಪಾರದಲ್ಲಿ ತೊಡಗಿರುವ ವಿವಿಧ ದೇಶಗಳನ್ನು ಪ್ರತಿನಿಧಿಸುತ್ತಾರೆ, ಜಾಗತಿಕ ಸರಕು ಮತ್ತು ಸೇವೆಗಳನ್ನು ಬಳಸುತ್ತಾರೆ.

 

ಸ್ನೇಹಿತರೇ,

ಇಂದು, ವಿಶ್ವದ ಪ್ರಮುಖ ವ್ಯಾಪಾರ ದಿಗ್ಗಜರು ಇಲ್ಲಿ ಸೇರುತ್ತಿದ್ದಂತೆ, ವ್ಯಾಪಾರ ಮತ್ತು ಮಾನವೀಯತೆಯ ಭವಿಷ್ಯವನ್ನು ನಿರ್ಧರಿಸುವ ಹೆಚ್ಚು ಮಹತ್ವದ ಪ್ರಶ್ನೆಗಳನ್ನು ನಾವು ಎದುರಿಸುತ್ತಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಹಿಡಿಯಲು ಸಹಯೋಗದ ಪ್ರಯತ್ನಗಳು ಅತ್ಯಗತ್ಯ. ಹವಾಮಾನ ಬದಲಾವಣೆ, ಇಂಧನ ಕ್ಷೇತ್ರದ ಬಿಕ್ಕಟ್ಟು, ಆಹಾರ ಪೂರೈಕೆ ಸರಪಳಿಯಲ್ಲಿನ ಅಸಮತೋಲನ, ನೀರಿನ ಭದ್ರತೆ ಅಥವಾ ಸೈಬರ್ ಭದ್ರತೆ ಇವೆಲ್ಲವೂ ವ್ಯವಹಾರಗಳ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವ ವಿಷಯಗಳಾಗಿವೆ. ಈ ಸವಾಲುಗಳನ್ನು ಎದುರಿಸಲು, ನಾವು ನಮ್ಮ ಜಂಟಿ ಪ್ರಯತ್ನಗಳನ್ನು ಹೆಚ್ಚಿಸಬೇಕು. ಕಾಲಾನಂತರದಲ್ಲಿ, 10-15 ವರ್ಷಗಳ ಹಿಂದೆ ಊಹಿಸಲಾಗದ ಹೊಸ ಸಮಸ್ಯೆಗಳು ಹೊರಹೊಮ್ಮುತ್ತಿವೆ. ಉದಾಹರಣೆಗೆ, ʻಕ್ರಿಪ್ಟೋಕರೆನ್ಸಿʼಒಡ್ಡುವ ಸವಾಲು. ಇದಕ್ಕೆ ಹೆಚ್ಚು ಸಂಯೋಜಿತ ಕಾರ್ಯವಿಧಾನದ ಅಗತ್ಯವಿದೆ. ಎಲ್ಲಾ ಮಧ್ಯಸ್ಥಗಾರರ ಕಾಳಜಿಗಳನ್ನು ಪರಿಗಣಿಸಿ ಜಾಗತಿಕ ನೀತಿಗಳನ್ನು ರೂಪಿಸುವ ಅಗತ್ಯವಿದೆ ಎಂದು ನಾನು ನಂಬುತ್ತೇನೆ.

ಕೃತಕ ಬುದ್ಧಿಮತ್ತೆಗೆ (ಎಐ) ಇದೇ ರೀತಿಯ ಕಾರ್ಯವಿಧಾನದ ಅಗತ್ಯವಿದೆ. ಜಗತ್ತು ಪ್ರಸ್ತುತ ʻಎಐʼ ಬಗ್ಗೆ ಬಹಳ ಉತ್ಸಾಹ ತೋರುತ್ತಿದೆ. ಆದರೆ ಈ ಉತ್ಸಾಹದಲ್ಲಿ, ನೈತಿಕ ಪರಿಗಣನೆಗಳೂ ಇವೆ. ಕೌಶಲ್ಯ ಮತ್ತು ಮರು-ಕೌಶಲ್ಯ, ಅಲ್ಗಾರಿದಮಿಕ್ ಪಕ್ಷಪಾತ ಮತ್ತು ʻಎಐʼನ ಸಾಮಾಜಿಕ ಪರಿಣಾಮದ ಬಗ್ಗೆ ಕಳವಳಗಳನ್ನು ಎತ್ತಲಾಗುತ್ತಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ನಾವೆಲ್ಲರೂ ಒಗ್ಗೂಡಬೇಕಾಗಿದೆ. ʻನೈತಿಕ ಎಐʼ ವಿಸ್ತರಣೆಯನ್ನು ಖಚಿತಪಡಿಸಿಕೊಳ್ಳಲು ಜಾಗತಿಕ ವ್ಯಾಪಾರ ಸಮುದಾಯಗಳು ಮತ್ತು ಸರ್ಕಾರಗಳು ಸಹಕರಿಸಬೇಕು. ವಿವಿಧ ಕ್ಷೇತ್ರಗಳಲ್ಲಿನ ಸಂಭಾವ್ಯ ಅಡೆತಡೆಗಳನ್ನು ನಾವು ವಿಶ್ಲೇಷಿಸಬೇಕು. ಪ್ರತಿ ಸಂದರ್ಭದಲ್ಲೂ ವಿಘಟನೆಯು ಹೆಚ್ಚು ಆಳವಾದ, ವ್ಯಾಪಕವಾದ ಮತ್ತು ಮಹತ್ವದ್ದಾಗುತ್ತಿದೆ. ಈ ಸವಾಲಿಗೆ ಜಾಗತಿಕ ಚೌಕಟ್ಟಿನ ಅಡಿಯಲ್ಲಿ ಪರಿಹಾರದ ಅಗತ್ಯವಿದೆ. ಸ್ನೇಹಿತರೇ, ಈ ಸವಾಲುಗಳನ್ನು ನಾವು ಎದುರಿಸುತ್ತಿರುವುದು ಇದೇ ಮೊದಲ ಬಾರಿ ಏನಲ್ಲ. ವಾಯುಯಾನ ಕ್ಷೇತ್ರವು ಬೆಳೆಯುತ್ತಿದ್ದಾಗ, ಹಣಕಾಸು ಕ್ಷೇತ್ರವು ಪ್ರಗತಿ ಹೊಂದುತ್ತಿದ್ದಾಗ, ಜಗತ್ತು ಅಂತಹ ಸವಾಲುಗಳನ್ನು ಎದುರಿಸಲು ನಿಯಮಗಳನ್ನು ರೂಪಿಸಿತು. ಆದ್ದರಿಂದ, ಇಂದು, ಈ ಉದಯೋನ್ಮುಖ ವಿಷಯಗಳ ಬಗ್ಗೆ ಚರ್ಚೆಗಳು ಮತ್ತು ಚಿಂತನೆಯಲ್ಲಿ ತೊಡಗಿಸಿಕೊಳ್ಳಲು ನಾನು ʻಬಿ-20ʼಗೆ ಕರೆ ನೀಡುತ್ತೇನೆ.

ಸ್ನೇಹಿತರೇ,

ವ್ಯವಹಾರಗಳು ಯಶಸ್ವಿಯಾಗಿ ಗಡಿಗಳು ಮತ್ತು ಎಲ್ಲೆಗಳನ್ನು ಮೀರಿ ಬೆಳೆದಿವೆ. ಈಗ ವ್ಯವಹಾರಗಳನ್ನು ಕೇವಲ ತಳಮಟ್ಟದಿಂದಾಚೆಗೆ ಕೊಂಡೊಯ್ಯುವ ಸಮಯ. ಪೂರೈಕೆ ಸರಪಳಿ ಸ್ಥಿತಿಸ್ಥಾಪಕತ್ವ ಮತ್ತು ಸುಸ್ಥಿರತೆಯ ಮೇಲೆ ಗಮನ ಕೇಂದ್ರೀಕರಿಸುವ ಮೂಲಕ ಮಾತ್ರ ಇದನ್ನು ಮಾಡಬಹುದು. ʻಬಿ 20 ಶೃಂಗಸಭೆʼ ಸಾಮೂಹಿಕ ಪರಿವರ್ತನೆಗೆ ದಾರಿ ಮಾಡಿಕೊಟ್ಟಿದೆ ಎಂದು ನನಗೆ ಖಾತ್ರಿಯಿದೆ. ಸಂಪರ್ಕಿತ ಜಗತ್ತು ಎಂದರೆ, ಅದು ಕೇವಲ ತಂತ್ರಜ್ಞಾನದ ಮೂಲಕ ಸಂಪರ್ಕವಲ್ಲ ಎಂಬುದನ್ನು ನಾವು ನೆನಪಿನಲ್ಲಿಡೋಣ. ಪರಸ್ಪರ ಹಂಚಿಕೊಳ್ಳುವಿಕೆ ಕೇವಲ ಸಾಮಾಜಿಕ ವೇದಿಕೆಗಳಲ್ಲಿ ಮಾತ್ರವಲ್ಲದೆ; ಉದ್ದೇಶ, ಭೂಗ್ರಹದ ಕಾಳಜಿ, ಸಮೃದ್ಧಿ ಮತ್ತು ಭವಿಷ್ಯವನ್ನು ಹಂಚಿಕೊಳ್ಳುವ ಬಗ್ಗೆಯೂ ಯೋಚಿಸಬೇಕಾಗಿದೆ.

ಧನ್ಯವಾದಗಳು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Great To See How He Supports Art': 'Fauda' Star Lior Raz On Meeting PM Modi In Israel

Media Coverage

Great To See How He Supports Art': 'Fauda' Star Lior Raz On Meeting PM Modi In Israel
NM on the go

Nm on the go

Always be the first to hear from the PM. Get the App Now!
...
The HPV vaccination campaign, launched from Ajmer, marks a significant step towards empowering the nation’s Nari Shakti: PM Modi in Rajasthan
February 28, 2026
Our government is committed to all-round development: PM
Today, I had the privilege of launching the nationwide HPV vaccination campaign from Ajmer, inaugurating and laying foundation stones for multiple projects and distributing appointment letters to the youth: PM
The HPV vaccination campaign has commenced from Ajmer, this campaign is a significant step towards empowering the Nari Shakti of the country: PM
The double-engine government is moving forward by taking both Rajasthan’s heritage and development together: PM
The campaign to link rivers started by our government will significantly benefit Rajasthan: PM
There is no shortage of sunlight in Rajasthan, this very sunshine is becoming a source of savings and income for the common man: PM
A very significant role is being played by the PM Surya Ghar Free Electricity Scheme, this scheme has the power to change Rajasthan's destiny: PM

भारत माता की जय।

भारत माता की जय।

भारत माता की जय।

तीर्थराज पुष्कर और माता सावित्री की इस पावन भूमि पर, आज मुझे आप सबके बीच आने का, आपके आशीर्वाद प्राप्त करने का अवसर मिला है। इस मंच से मैं सुरसुरा के तेजाजी धाम को, पृथ्वीराज की भूमि अजमेर को प्रणाम करता हूं।

मेरे साथ बोलिए –

तीर्थराज पुष्कर की जय।

तीर्थराज पुष्कर की जय।

वीर तेजाजी महाराज की जय।

वीर तेजाजी महाराज की जय।

भगवान देव नारायण की जय।

भगवान देव नारायण की जय।

वरूण अवतार भगवान झूलेलाल जी की जय।

भगवान झूलेलाल जी की जय।

मंच पर विराजमान राजस्थान के राज्यपाल हरिभाउ बागडे जी, राज्य के लोकप्रिय मुख्यमंत्री श्री भजनलाल शर्मा जी, पूर्व मुख्यमंत्री बहन वसुंधरा जी, केंद्रीय मंत्रिमंडल में मेरे साथी भगीरथ चौधरी जी, उपमुख्यमंत्री प्रेमचंद भैरवा जी, दिया कुमारी जी, संसद में मेरे साथी, भाजपा के प्रदेश अध्यक्ष मदन राठौर जी, उपस्थित अन्य मंत्रिगण, अन्य महानुभाव और राजस्थान के मेरे प्यारे भाई और बहनों। मैं पूज्य संतों का बहुत आभारी हूं, कि हमें आशीर्वाद देने के लिए इतनी बड़ी संख्या में पूज्य संतगण यहां मौजूद हैं।

साथियों,

अजमेर आस्था और शौर्य की धरती है। यहां तीर्थ भी है और क्रांतिवीरों के पदचिन्ह भी हैं। अभी कल ही मैं इजराइल की यात्रा को पूरा करके भारत लौटा हूं। राजस्थान के सपूत मेजर दलपत सिंह के शौर्य को इजराइल के लोग आज भी गौरव से याद करते हैं। मुझे भी इजराइल की संसद में, मेजर दलपत सिंह जी के शौर्य को नमन करने का सौभाग्य मिला। राजस्थान के वीर बाकुरों की, इजराइल के हाइफा शहर को आजाद कराने में जो भूमिका थी, मुझे उसका गौरवगान करने का अवसर मिला है।

साथियों,

कुछ समय पहले ही, राजस्थान में भाजपा की डबल इंजर सरकार को दो साल पूरे हुए हैं, मुझे संतोष है कि आज राजस्थान विकास के नए पथ पर अग्रसर है। विकास के जिन वायदों के साथ भाजपा सरकार आपकी सेवा में आई थी, उन्हें तेजी के साथ पूरा कर रही है। और आज का दिन, विकास के इसी अभियान को तेज करने का दिवस है। थोड़ी देर पहले यहां राजस्थान के विकास से जुड़ी करबी 17 हजार करोड़ रूपयों की परियोजनाओं का शिलान्यास और लोकार्पण हुआ है। सड़क, बिजली, पानी, स्वास्थ्य, शिक्षा, हर क्षेत्र में नई शक्ति जुड़ रही है। ये सारे प्रोजेक्टस राजस्थान की जनता की सुविधा बढ़ाएंगे और राजस्थान के युवाओं के लिए, रोजगार के भी अवसर पैदा करेंगे।

साथियों,

भाजपा की डबल इंजर सरकार लगातार युवा शक्ति को सशक्त कर रही है। दो साल पहले तक राजस्थान से भर्तियों में भ्रष्टाचार और पेपर लीक की ही खबरें चमकती रहती थीं, आती रहती थीं। अब राजस्थान में पेपर लीक पर लगाम लगी है, दोषियों पर सख्त कार्रवाई हो रही है। आज यहां इसी मंच से राजस्थान के 21 हजार से अधिक युवाओं को नियुक्ति पत्र भी सौंपे गए हैं। ये बहुत बड़ा बदलाव आया है। मैं इस बदलाव के लिए, नई नौकरियों के लिए, विकास के सभी कामों के लिए, राजस्थान के आप सभी लोगों को बहुत-बहुत बधाई देता हूं।

साथियों,

आज वीरांगनाओं की इस धरती से, मुझे देशभर की बेटियों के लिए एक अहम अभियान शुरू करने का अवसर मिला है। यहां अजमेर से HPV वैक्सीनेशन अभियान शुरू हुआ है। ये अभियान, देश की नारीशक्ति को सशक्त करने की दिशा में अहम कदम है।

साथियों,

हम सब जानते हैं कि परिवार में जब मां बीमार होती है, तो घर बिखर सा जाता है। अगर मां स्वस्थ है, तो परिवार हर संकट का सामना करने में सक्षम रहता है। इसी भाव से, भाजपा सरकार ने महिलाओं को संबल देने वाली अनेक योजनाएं चलाई हैं।

साथियों,

हमने 2014 से पहले का वो दौर देखा है, जिसमें शौचालय के अभाव में बहनों-बेटियों को कितनी पीड़ा, कितना अपमान झेलना पड़ता था। बच्चियां स्कूल छोड़ देती थीं, क्योंकि वहां अलग टॉयलेट की सुविधा नहीं होती थी। गरीब बेटियां सेनिटरी पैड्स नहीं ले पाती थीं। पहले जो सत्ता में रहे, उनके लिए ये छोटी बातें थीं। इसलिए इन समस्याओं की चर्चा तक नहीं होती थी। लेकिन हमारे लिए ये बहनों-बेटियों को बीमार करने वाला, उनके अपमान से जुड़ा संवेदनशील मसला था। इसलिए, हमने इनका मिशन मोड पर समाधान किया।

साथियों,

गर्भावस्था के दौरान कुपोषण माताओं के जीवन के लिए बहुत बड़ा खतरा होता था। हमने सुरक्षित मातृत्व के लिए योजना चलाई, मां को पोषक आहार मिले, इसके लिए पांच हज़ार रुपए बहनों के खाते में जमा करने की योजना शुरु की। मां धुएं में खांसती रहती थी, लेकिन उफ्फ तक नहीं करती थी। हमने कहा ये नहीं चलेगा। और इसलिए उज्जवला गैस योजना बनाई गई। ये सब इसलिए संभव हुआ, क्योंकि भाजपा सरकार, सत्ता भाव से नहीं, संवेदनशीलता के साथ काम करती है।

साथियों,

21वीं सदी का एक चौथाई हिस्सा बीत चुका है। आज का समय राजस्थान के विकास के लिए बड़ा महत्वपूर्ण है। भाजपा की डबल इंजन सरकार, राजस्थान की विरासत और विकास, दोनों को साथ लेकर चल रही है। हम सब जानते हैं, अच्छी सड़क, अच्छी रेल और हवाई सुविधा सिर्फ सफर आसान नहीं करती, वो पूरे इलाके की किस्मत बदल देती है। जब गांव-गांव तक अच्छी सड़क पहुँचती है, तो किसान अपनी फसल सही दाम पर बेच पाता है। व्यापारी आसानी से अपना सामान बाहर भेज पाते हैं। और हमारा अजमेर-पुष्कर तो, उसकी पर्यटन की ताकत कौन नहीं जानता। अच्छी कनेक्टिविटी का पर्यटन पर सबसे अच्छा असर पड़ता है। जब सफर आसान होता है, तो ज्यादा लोग घूमने आते हैं।

और साथियों,

जब पर्यटक आते हैं तो स्वाभाविक है होटल चलते हैं, ढाबे चलते हैं, कचौड़ी और दाल बाटी ज्यादा बिकती है, यहां राजस्थान के कारीगरों का बनाया सामान बिकता है, टैक्सी चलती है, गाइड को काम मिलता है। यानी एक पर्यटक कई परिवारों की रोज़ी-रोटी बन जाता है। इसी सोच के साथ हमारी सरकार, राजस्थान में आधुनिक कनेक्टिविटी पर बहुत बल दे रही है।

साथियों,

जैसे-जैसे राजस्थान में कनेक्टिविटी का विस्तार हो रहा है, वैसे-वैसे यहां निवेश के लिए भी अवसर लगातार बढ़ते जा रहे हैं। दिल्ली-मुंबई इंडस्ट्रियल कॉरिडोर के इर्द-गिर्द उद्योगों के लिए एक बहुत ही शानदार इंफ्रास्ट्रक्चर बनाया जा रहा है। यानी राजस्थान को अवसरों की भूमि बनाने के लिए, डबल इंजन सरकार हर संभव, अनेक विध काम कर रही है।

साथियों,

राजस्थान की माताएं अपने बच्चों को पालने में ही, राष्ट्र भक्ति का संस्कार देती हैं। राजस्थान की ये धरा जानती है कि देश का सम्मान क्या होता है, और इसीलिए आज राजस्थान की इस धरा पर, मैं आप लोगों से एक और बात कहने आया हूं।

साथियों,

हाल में ही, दिल्ली में, दुनिया का सबसे बड़ा AI सम्मेलन हुआ, Artificial Intelligence इसमें दुनिया के अनेक देशों के प्रधानमंत्री, अनेक देशों के राष्ट्रपति, अनेक देशों के मंत्रि, उस कार्यक्रम में आए थे। दुनिया की बड़ी-बड़ी कंपनियां, उन कंपनियों के कर्ता-धर्ता वो भी एक छत के नीचे इकट्ठे हुए थे। सबने भारत की खुले मन से प्रशंसा की। मैं जरा राजस्थान के मेरे भाई-बहनों से पूछना चाहता हूं। जब दुनिया के इतने सारे लोग, भारत की प्रशंसा करते हैं, ये सुनकर के आपको गर्व होता है की नहीं होता है? आपको गर्व होता है कि नहीं होता है? आपको अभिमान होता है कि नहीं होता है? आपका माथा ऊंचा हुआ या नहीं हुआ? आपका सीना चौड़ा हुआ कि नहीं हुआ?

साथियों,

आपको गर्व हुआ, लेकिन हताशा निराशा में डूबी, लगातार पराजय के कारण थक चुकी कांग्रेस ने क्या किया, ये आपने देखा है। दुनियाभर के मेहमानों के सामने, कांग्रेस ने देश को बदनाम करने की कोशिश की। इन्होंने विदेशी मेहमानों के सामने देश को बेइज्जत करने के लिए पूरा ड्रामा किया।

साथियों,

कांग्रेस, पूरे देश में ल्रगातार हार रही है, और गुस्से में वो इसका बदला, वो भारत को बदनाम करके ले रही है। कभी कांग्रेस, INC यानी इंडियन नेशनल कांग्रेस थी, लेकिन अब INC नहीं बची है, इंडियन नेशनल कांग्रेस नहीं बची है, आज वो INC के बजाय MMC, MMC बन गई है। MMC यानी मुस्लिम लीगी माओवादी कांग्रेस हो चुकी है।

राजस्थान के मेरे वीरों,

इतिहास गवाह है, मुस्लिम लीग भारत से नफरत करती थी, और इसलिए मुस्लिम लीग ने देश बांट दिया। आज कांग्रेस भी वही कर रही है। माओवादी भी, भारत की समृद्धि, हमारे संविधान और हमारे सफल लोकतंत्र से नफरत करते हैं, ये घात लगाकर हमला करते हैं, कांग्रेस भी घात लगाकर, देश को बदनाम करने के लिए कहीं भी घुस जाती है। कांग्रेस के ऐसे कुकर्मों को देश कभी माफ नहीं करेगा।

साथियों,

देश को बदनाम करना, देश की सेनाओं को कमजोर करना, ये कांग्रेस की पुरानी आदत रही है। आप याद कीजिए, यही कांग्रेस है, जिसने हमारी सेना के जवानों को हथियारों और वर्दी तक के लिए तरसा कर रखा था। ये वही कांग्रेस है, जिसने सालों तक हमारे सैनिक परिवारों को वन रैंक वन पेंशन से वंचित रखा था। ये वही कांग्रेस है, जिसके जमाने में विदेशों से होने वाले रक्षा सौदों में बड़े-बड़े घोटाले होते थे।

साथियों,

बीते 11 वर्षों में भारत की सेना ने हर मोर्चे पर आतंकियों पर, देश के दुश्मनों पर करारा प्रहार किया। हमारी सेना, हर मिशन, हर मोर्चे में विजयी रही। सर्जिकल स्ट्राइक से लेकर ऑपरेशन सिंदूर तक, वीरता का लोहा मनवाया, लेकिन कांग्रेस के नेताओं ने इसमें भी दुश्मनों के झूठ को ही आगे बढ़ाया। देश के लिए जो भी शुभ है, जो भी अच्छा है, जो भी देशवासियों का भला करने वाला है, कांग्रेस उस सबका विरोध करती है। इसलिए, देश आज कांग्रेस को सबक सिखा रहा है।

साथियों,

राजस्थान में तो आपने कांग्रेस के कुशासन को करीब से अनुभव किया है। यहां जितने दिन कांग्रेस की सरकार रही, वो भ्रष्टाचार करने और आपसी लड़ाई-झगड़े में ही उलझी रही। कांग्रेस ने हमारे किसानों को भी हमेशा धोखा दिया है। आप याद कीजिए, कांग्रेस ने दशकों तक सिंचाई की परियोजनाओं को कैसे लटकाए रखा। इसका राजस्थान के किसानों को बहुत अधिक नुकसान हुआ है। ERCP परियोजना को कांग्रेस की सरकारों ने केवल फाइलों और घोषणाओं में उलझाकर रखा। हमारी सरकार ने आते ही इस स्कीम को फाइलों से निकालकर धरातल पर उतारने का प्रयास किया है।

साथियों,

हमारी सरकार ने नदियों को जोड़ने का जो अभियान शुरु किया है, उसका बहुत अधिक फायदा राजस्थान को मिलना तय है। संशोधित पार्वती-कालीसिंध-चंबल लिंक परियोजना हो, यमुना-राजस्थान लिंक प्रोजेक्ट हो, डबल इंजन सरकार ऐसी अनेक सिंचाई परियोजनाओं का लाभ किसानों तक पहुंचाने के लिए प्रतिबद्ध है। आज भी झालावाड़, बारां, कोटा और बूंदी जिले के लिए पानी की अनेक परियोजनाओं पर काम शुरु हुआ है। हमारा प्रयास है, कि राजस्थान में भूजल का स्तर भी ऊपर उठे।

साथियों,

भाजपा सरकार, राजस्थान के सामर्थ्य को समझते हुए, योजनाएं बना रही है, उन्हें लागू कर रही है। मुझे खुशी है कि राजस्थान अब, सूरज की ताकत से समृद्धि कमाने वाली धरती बन गया है। हम सब जानते हैं, हमारे राजस्थान में धूप की कोई कमी नहीं। अब यही धूप, सामान्य मानवी के घर की बचत और कमाई का साधन बन रही है। और इसमें बहुत बड़ी भूमिका है, प्रधानमंत्री सूर्यघर मुफ्त बिजली योजना की। इस योजना में राजस्थान का भाग्य बदलने की ताकत है। इस योजना में भाजपा सरकार लोगों को अपनी छत पर सोलर पैनल लगाने के लिए 78 हजार रुपए की सहायता देती है। सरकार सीधे आपके बैंक खाते में पैसे भेजती है। आजादी के बाज सब बजट, सब योजनाएं देख लीजिए, जिसमें मध्यम वर्ग को सबसे ज्यादा लाभ होने वाला है, ऐेसी योजना कभी नजर नहीं आएगी, आज इन परिवारों को सोलर पैनल लगाने के लिए 78 हजार रुपए सीधा सरकार देती है। सबसे अधिक लाभ मध्यम वर्ग के लोग ले रहे हैं। और जिससे घर पर एक छोटा सा बिजली घर तैयार हो जाता है। दिन में सूरज की रोशनी से बिजली बनती है, घर में वही बिजली काम आती है और जो ज्यादा बिजली बनती है, वो बिजली ग्रिड में जाती है। और जिस घर में बिजली बनी होती है, उसे भी इसका लाभ मिलता है।

साथियों,

आज राजस्थान में सवा लाख से अधिक परिवार इस योजना से जुड़ चुके हैं। और इस योजना की वजह से, कई घरों का बिजली बिल लगभग जीरो आ रहा है। यानी खर्च कम हुआ है, बचत ज़्यादा हुई है।

साथियों,

विकसित राजस्थान से विकसित भारत के मंत्र पर हम लगातार काम कर रहे हैं। आज जिन योजनाओं पर काम शुरू हुआ है, वो विकसित राजस्थान की नींव को और अधिक मजबूत करेंगे। जब राजस्थान विकसित होगा, तो यहां के हर परिवार का जीवन समृद्ध होगा। आप सभी को एक बार फिर, विकास परियोजनाओं के लिए बहुत-बहुत शुभकामनाएं। मेरे साथ बोलिये-

भारत माता की जय!

भारत माता की जय!

वंदे मातरम के 150 साल देश मना रहा है। मेरे साथ बोलिये-

वंदे मातरम।

वंदे मातरम।

वंदे मातरम।

वंदे मातरम।

वंदे मातरम।

वंदे मातरम।

वंदे मातरम।

वंदे मातरम।

वंदे मातरम।

वंदे मातरम।

बहुत-बहुत धन्यवाद।